Wednesday, November 18, 2015

ಹಗಲಲ್ಲದ ಇರುಳಲ್ಲದ ನಡುಗಾಲದ - ರಾಜೇಂದ್ರ ಪ್ರಸಾದ್

ಹಗಲಲ್ಲದ ಇರುಳಲ್ಲದ ನಡುಗಾಲದ
ನೆತ್ತಿಯ ಮೇಲೆ ಎಷ್ಟೊಂದು ಉರಿದೀಪ
ಎದೆಯ ಮೇಲೆ ತೇಲಿ ಬಿಟ್ಟಂತೆ!
ಎತ್ತ ನೋಡಿದರತ್ತ ಸಾವಿನ ದೋಣಿಗಳು
ನನ್ನನೇ ಅಟ್ಟಿಸಿಕೊಂಡು ಬಂದಂತೆ
ಬಿಡಿದೆ ಬಾಗಿಲವರೆಗೆ ಬಂದು ಅಲ್ಲಿಯೇ ಕಾಯ್ದಂತೆ
ರುಂಡವಿಲ್ಲದ ಹಾರುಪಕ್ಷಿಗಳು ಯಮಪಾಶವ
ಹಿಡಿದು ಮನೆಯ ಮೇಲಣ ಮುಗಿಲೆಲ್ಲಾ ಸುತ್ತಿದಂತೆ.
ದೇಹ ಬೆವರುತ್ತಿದೆ ಬಿಸಿಹಬೆಯಂತೆ.
ಹನುಮಾss ಇಟ್ಟು ಮರೆತ ಸಂಜೀವಿನಿ ಎಲ್ಲೋ ?
ಮರೆತದ್ದು ಮಣ್ಣಾಗಲಿ ಚಮ್ಮಾರನ ಮನೆಯ
ಗಲ್ಲೇಬಾನಿಯನಾದರೂ ಮೊಗೆದು ತಾರೋ ಸಂಜೀವರಾಯ
ನಿನ್ನ ಮನೆಕಾಯ, ಉಸಿರು ಸಿಕ್ಕಿಕೊಂಡಿದೆ.
ಬಾಗಿಲಲ್ಲಿ ದೋಣಿ
ಮುಗಿಲಲ್ಲಿ ಪಕ್ಷಿ
ಎದೆಯಲ್ಲಿ ದೀಪ
ನನ್ನ ಕಾಯುತ್ತಿವೆ. ~

                                                -    ರಾಜೇಂದ್ರ ಪ್ರಸಾದ್

No comments:

Post a Comment

"RSS ಮತ್ತು DSS - ಒಂದು ತೌಲನಿಕ ಅಧ್ಯಯನ"- ಪ್ರವೀಣಕುಮಾರ M

RSS (ರಾಷ್ಟ್ರೀಯ ಸ್ವಯಂಸೇವಕ ಸಂಘ) ತನ್ನ 100 ನೇ ವರ್ಷದ ಸಂಭ್ರಮವನ್ನು ದೇಶದಾದ್ಯಂತ ಆಚರಿಸುತ್ತಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಆ ಪಕ್ಷವನ್ನು  ಬೆಂಬಲಿಸುವ ...