ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Monday, January 25, 2016
Friday, January 22, 2016
Tuesday, January 12, 2016
ಮೂಡುವನು ರವಿ ಮೂಡುವನು - ಪಂಜೆ ಮಂಗೇಶ ರಾಯರು
ಮೂಡುವನು ರವಿ ಮೂಡುವನು
ಕತ್ತಲೊಡನೆ ಜಗಳಾಡುವನು
ಮೂಡಣ ರಂಗಸ್ಥಳದಲಿ ನೆತ್ತರ
ಮಾಡುವನು ಕುಣಿದಾಡುವನು
ಬೆಳಕಿನ ಕಣ್ಣುಗಳಿ೦ದಾ ಸೂರ್ಯನು
ನೋಡುವನು ಬಿಸಿಲೂಡುವನು
ಚಿಲಿಪಿಲಿ ಹಾಡನು ಹಾಡಿಸಿ ಹಕ್ಕಿಯ
ಗೂಡಿನ ಹೊರ ಹೊರ ದೂಡುವನು
ಬಂಗಾರದ ಚೆಲು ಬಿಸಿಲ ಕಿರೀಟದ
ಶೃಂಗಾರದ ತಲೆ ಎತ್ತುವನು
ತೆಂಗಿನ ಕಂಗಿನ ತಾಳೆಯ ಬಾಳೆಯ
ಅಂಗಕೆ ರಂಗನು ಮೆತ್ತುವನು
ಮಾಡಿನ ಹುಲ್ಲಲಿ ಚಿನ್ನದ ಗೆರೆಯನು
ಎಳೆಯುವನು ರವಿ ಹೊಳೆಯುವನು
ಕೂಡಲ ಕೋಣೆಯ ಕತ್ತಲೆ ಕೊಳೆಯನು
ತೊಳೆಯುವನು ರವಿ ಹೊಳೆಯುವನು
ಮಲಗಿದ ಕೂಸಿನ ನಿದ್ದೆಯ ಕಸವನು
ಗುಡಿಸುವನು ಕಣ್ ಬಿಡಿಸುವನು
ಹುಲುಗಿಡ ಹೂವಿಗೆ ಪರಿ ಪರಿ ಬಣ್ಣವ
ತೊಡಿಸುವನು ಹನಿ ತೊಡೆಸುವನು
ಏರುವನು ರವಿ ಏರುವನು
ಬಾನೊಳು ಸಣ್ಣಗೆ ತೋರುವನು
ಏರಿದವನು ಚಿಕ್ಕವನಿರಬೇಕೆಲೆ
ಎಂಬಾ ಮಾತನು ಸಾರುವನು
ಕವಿ : ಪಂಜೆ ಮಂಗೇಶ ರಾಯರು
ಕತ್ತಲೊಡನೆ ಜಗಳಾಡುವನು
![]() |
ಪಂಜೆ ಮಂಗೇಶ ರಾಯರು |
ಮಾಡುವನು ಕುಣಿದಾಡುವನು
ಬೆಳಕಿನ ಕಣ್ಣುಗಳಿ೦ದಾ ಸೂರ್ಯನು
ನೋಡುವನು ಬಿಸಿಲೂಡುವನು
ಚಿಲಿಪಿಲಿ ಹಾಡನು ಹಾಡಿಸಿ ಹಕ್ಕಿಯ
ಗೂಡಿನ ಹೊರ ಹೊರ ದೂಡುವನು
ಬಂಗಾರದ ಚೆಲು ಬಿಸಿಲ ಕಿರೀಟದ
ಶೃಂಗಾರದ ತಲೆ ಎತ್ತುವನು
ತೆಂಗಿನ ಕಂಗಿನ ತಾಳೆಯ ಬಾಳೆಯ
ಅಂಗಕೆ ರಂಗನು ಮೆತ್ತುವನು
ಮಾಡಿನ ಹುಲ್ಲಲಿ ಚಿನ್ನದ ಗೆರೆಯನು
ಎಳೆಯುವನು ರವಿ ಹೊಳೆಯುವನು
ಕೂಡಲ ಕೋಣೆಯ ಕತ್ತಲೆ ಕೊಳೆಯನು
ತೊಳೆಯುವನು ರವಿ ಹೊಳೆಯುವನು
ಮಲಗಿದ ಕೂಸಿನ ನಿದ್ದೆಯ ಕಸವನು
ಗುಡಿಸುವನು ಕಣ್ ಬಿಡಿಸುವನು
ಹುಲುಗಿಡ ಹೂವಿಗೆ ಪರಿ ಪರಿ ಬಣ್ಣವ
ತೊಡಿಸುವನು ಹನಿ ತೊಡೆಸುವನು
ಏರುವನು ರವಿ ಏರುವನು
ಬಾನೊಳು ಸಣ್ಣಗೆ ತೋರುವನು
ಏರಿದವನು ಚಿಕ್ಕವನಿರಬೇಕೆಲೆ
ಎಂಬಾ ಮಾತನು ಸಾರುವನು
ಕವಿ : ಪಂಜೆ ಮಂಗೇಶ ರಾಯರು
Subscribe to:
Posts (Atom)
ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.
"ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......

-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರ, ಕೋರಿಕೆಗೆ ಕೋರಿಕೆ! ಅಂದರೆ, ಈಶ್ವರ ಸಣಕಲ್ಲ ಅವರ ಪ್ರಖ್ಯಾತ ಕವಿತೆ "ಕೋರಿಕೆ" ಪ್ರಕ...
-
ಮೂಡುವನು ರವಿ ಮೂಡುವನು ಕತ್ತಲೊಡನೆ ಜಗಳಾಡುವನು ಪಂಜೆ ಮಂಗೇಶ ರಾಯರು ಮೂಡಣ ರಂಗಸ್ಥಳದಲಿ ನೆತ್ತರ ಮಾಡುವನು ಕುಣಿದಾಡುವನು ಬೆಳಕಿನ ಕಣ್ಣುಗಳಿ೦ದಾ ಸೂರ್ಯನು ನೋಡ...