Thursday, March 10, 2016

ಚುಟುಕ - ರಘು ವಿ,

ವರುಷವಿಡೀ ನಡೆವಂಗೆ
ಎಡವುದೇಂ ಹೊಸದೆ?
ರಘು ವಿ
ಉರಿವ ದೀಪಕ್ಕೆ ಕಿಟ್ಟ
ಕಟ್ಟುವುದೇಂ ಹೊಸದೆ?
ಜನುಮವಿಡೀ ಉರಿವ
ನಿರಂತರದ ದಿನಕರಗೆ 
ಗ್ರಹಣವಿದು ಹೊಸದೆ?
ನೆರಳಾಟಕ್ಕೆ ಅಂಜುವೊಡೆ
ಬಾಳನಂಜುಗಳ ಹೇಗೆ
ಅರಗಿಪೆಯೊ ಮನುಜ?
ಮನದ ಗ್ರಹಣವ ಕಳೆದು
ನಡೆ ಬೆಳಕಿನೆಡೆಗೆ!
[ ಕಿಟ್ಟ ಕಟ್ಟುವುದು = ಬತ್ತಿ ಉರಿದು ಕಪ್ಪಾಗುವುದು. Carbonization]




No comments:

Post a Comment

"RSS ಮತ್ತು DSS - ಒಂದು ತೌಲನಿಕ ಅಧ್ಯಯನ"- ಪ್ರವೀಣಕುಮಾರ M

RSS (ರಾಷ್ಟ್ರೀಯ ಸ್ವಯಂಸೇವಕ ಸಂಘ) ತನ್ನ 100 ನೇ ವರ್ಷದ ಸಂಭ್ರಮವನ್ನು ದೇಶದಾದ್ಯಂತ ಆಚರಿಸುತ್ತಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಆ ಪಕ್ಷವನ್ನು  ಬೆಂಬಲಿಸುವ ...