Thursday, March 10, 2016

ಚುಟುಕ - ರಘು ವಿ,

ವರುಷವಿಡೀ ನಡೆವಂಗೆ
ಎಡವುದೇಂ ಹೊಸದೆ?
ರಘು ವಿ
ಉರಿವ ದೀಪಕ್ಕೆ ಕಿಟ್ಟ
ಕಟ್ಟುವುದೇಂ ಹೊಸದೆ?
ಜನುಮವಿಡೀ ಉರಿವ
ನಿರಂತರದ ದಿನಕರಗೆ 
ಗ್ರಹಣವಿದು ಹೊಸದೆ?
ನೆರಳಾಟಕ್ಕೆ ಅಂಜುವೊಡೆ
ಬಾಳನಂಜುಗಳ ಹೇಗೆ
ಅರಗಿಪೆಯೊ ಮನುಜ?
ಮನದ ಗ್ರಹಣವ ಕಳೆದು
ನಡೆ ಬೆಳಕಿನೆಡೆಗೆ!
[ ಕಿಟ್ಟ ಕಟ್ಟುವುದು = ಬತ್ತಿ ಉರಿದು ಕಪ್ಪಾಗುವುದು. Carbonization]




No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...