Thursday, March 10, 2016

ಚುಟುಕ - ರಘು ವಿ,

ವರುಷವಿಡೀ ನಡೆವಂಗೆ
ಎಡವುದೇಂ ಹೊಸದೆ?
ರಘು ವಿ
ಉರಿವ ದೀಪಕ್ಕೆ ಕಿಟ್ಟ
ಕಟ್ಟುವುದೇಂ ಹೊಸದೆ?
ಜನುಮವಿಡೀ ಉರಿವ
ನಿರಂತರದ ದಿನಕರಗೆ 
ಗ್ರಹಣವಿದು ಹೊಸದೆ?
ನೆರಳಾಟಕ್ಕೆ ಅಂಜುವೊಡೆ
ಬಾಳನಂಜುಗಳ ಹೇಗೆ
ಅರಗಿಪೆಯೊ ಮನುಜ?
ಮನದ ಗ್ರಹಣವ ಕಳೆದು
ನಡೆ ಬೆಳಕಿನೆಡೆಗೆ!
[ ಕಿಟ್ಟ ಕಟ್ಟುವುದು = ಬತ್ತಿ ಉರಿದು ಕಪ್ಪಾಗುವುದು. Carbonization]




No comments:

Post a Comment

ನುಡಿಮುತ್ತು

 ಕಲ್ಪನೆಗೆ ಹೂ ವಾದರೇನು.., ಮುಳ್ಳಾದರೇನು ? ಕಲ್ಪಿಸುವವರ ಹೃದಯ ಮೃದುವಾಗಿದ್ದರೆ ಮುಳ್ಳು ಕೂಡ ಮೃದುವಾಗಿ ಹೂವಾಗ ಬಲ್ಲದು