Thursday, March 3, 2016

ಪ್ರೀತಿನೇ ಆ ದ್ಯಾವ್ರು ತಂದ ಆಸ್ತಿ ನಮ್ಮ ಬಾಳ್ವೆಗೆ - ಚಿತ್ರ: ದೂರದ ಬೆಟ್ಟ

ಪ್ರೀತಿನೇ ಆ ದ್ಯಾವ್ರು ತಂದ ಆಸ್ತಿ ನಮ್ಮ ಬಾಳ್ವೆಗೆ
ಪ್ರೀತಿನೇ ಆ ದ್ಯಾವ್ರು ತಂದ ಆಸ್ತಿ ನಮ್ಮ ಬಾಳ್ವೆಗೆ
ಹಸಿವಿನಲ್ಲೂ ಹಬ್ಬಾನೇ, ದಿನವು ನಿತ್ಯ ಉಗಾದಿನೇ
ನನ್ನ ನಿನ್ನ ಪಾಲಿಗೆ
ಪ್ರೀತಿನೇ ಆ ದ್ಯಾವ್ರು ತಂದ ಆಸ್ತಿ ನಮ್ಮ ಬಾಳ್ವೆಗೆ
ಹಸಿವಿನಲ್ಲೂ ಹಬ್ಬಾನೇ, ದಿನವು ನಿತ್ಯ ಉಗಾದಿನೇ
ನನ್ನ ನಿಮ್ಮ ಪಾಲಿಗೆ
ಪ್ರೀತಿನೇ ಆ ದ್ಯಾವ್ರು ತಂದ ಆಸ್ತಿ ನಮ್ಮ ಬಾಳ್ವೆಗೆ
ನೀ ಪಕ್ಕ ಇದ್ರೇ ಹಿಂಗೆ, ಬೆಟ್ಟಾನ್ ಎತ್ತಿ ಬೆಳ್ನಾಗೆ
ನೀ ಪಕ್ಕ ಇದ್ರೇ ಹಿಂಗೆ, ಬೆಟ್ಟಾನ್ ಎತ್ತಿ ಬೆಳ್ನಾಗೆ
ಏಸೇ ಕಷ್ಟ ಬಂದ್ರು ನಮ್ಗೆ, ಗೌರ
ಏಸೇ ಕಷ್ಟ ಬಂದ್ರು ನಮ್ಗೆ, ಮೀಸೆ ಬುಡ್ತೀನ್ ಸುಮ್ಗೆ
ಪ್ರೀತಿನೇ ಆ ದ್ಯಾವ್ರು ತಂದ ಆಸ್ತಿ ನಮ್ಮ ಬಾಳ್ವೆಗೆ
ಈ ಜೀವ ನಿಮ್ಮದೇನೆ, ನಿಮ್ಮ ಪೂಜೆಗ್ ಹೂವು ನಾನೆ
ಈ ಜೀವ ನಿಮ್ಮದೇನೆ, ನಿಮ್ಮ ಪೂಜೆಗ್ ಹೂವು ನಾನೆ
ಈ ನಿಮ್ಮ ಪಾದದಾಣೆ
ಈ ನಿಮ್ಮ ಪಾದದಾಣೆ, ನಿಮಗಿಂತ ದ್ಯಾವ್ರೆ ಕಾಣೆ
ಪ್ರೀತಿನೇ ಆ ದ್ಯಾವ್ರು ತಂದ, ಆಸ್ತಿ ನಮ್ಮ ಬಾಳ್ವೆಗೆ
ಹಸಿವಿನಲ್ಲೂ ಹಬ್ಬಾನೇ, ದಿನವು ನಿತ್ಯ ಉಗಾದಿನೇ
ನನ್ನ ನಿಮ್ಮ ಪಾಲಿಗೆ, ನನ್ನ ನಿನ್ನ ಪಾಲಿಗೆ
ಪ್ರೀತಿನೇ ಆ ದ್ಯಾವ್ರು ತಂದ ಆಸ್ತಿ ನಮ್ಮ ಬಾಳ್ವೆಗೆ
ಚಿತ್ರ: ದೂರದ ಬೆಟ್ಟ (೧೯೭೩/1973)
ಸಾಹಿತ್ಯ: ಚಿ.ಉದಯಶಂಕರ್
ಸಂಗೀತ: ಜಿ.ಕೆ.ವೆಂಕಟೇಶ್
ಹಾಡಿದವರು: ಪಿ.ಬಿ.ಶ್ರೀನಿವಾಸ್, ಪಿ.ಸುಶೀಲಾ


No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......