Monday, May 30, 2016

ಮುಂಗೋಳಿ ಕೂಗ್ಯಾವು ಮೂಡು ಕೆಂಪೇರ್ಯಾವು - ಜಾನಪದ ಗೀತೆ

ಮುಂಗೋಳಿ ಕೂಗ್ಯಾವು ಮೂಡು ಕೆಂಪೇರ್ಯಾವು
ಸ್ವಾಮೀ ನನ್ನಯ್ಯ ರಥವೇರಿ
ಬರುವಾಗ ನಾವೆದ್ದು ಕೈಯ್ಯ ಮುಗುದೇವು

ಮಕ್ಕಳಾಟವು ಚಂದ ಮತ್ತೆ ಯೌವನ ಚಂದ
ಮುಪ್ಪಿನಲಿ ಚಂದ ನರೆಗಡ್ಡ
ಜಗದೊಳಗೆ ಎತ್ತ ನೋಡಿದರೂ ನಗು ಚಂದ

ಹಾಲ್ಬೇಡಿ ಅತ್ತಾನ ಕೊಲ್ಬೇಡಿ ಕುಣುದಾನ
ಮೊಸರ್ಬೇಡಿ ಕೆಸರಾ ತುಳುದಾನ
ಕಂದನ ಕುಸುರಾದ ಗೆಜ್ಜೆ ಕೆಸರಾಯ್ತು

ಕಪ್ಪೆಂದು ಜನರನ್ನು ಎತ್ಯಾಡದಿರು ಕಂಡ್ಯ
ಕಪ್ಪಾದ ಹಸುವು ಕರೆದಾರೆ
ಆ ಹಾಲು ಒಪ್ಪೀತು ಶಿವನ ಪೂಜೆಗೆ
ಎಲ್ಲಾದರು ಇರಲವ್ವ ಹುಲ್ಲಾಗಿ ಬೆಳೆಯಾಲಿ
ನೆಲ್ಲಿ ಬುಡ್ಯಾಗಿ ಚಿಗಿಯಾಲಿ
ನನ ಕಂದ ಜಯವನ್ತನಾಗಿ ಮೆರೆಯಾಲಿ
               

                                      * * * *


2 comments:

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......