Friday, June 24, 2016

ಓದಿ ಬ್ರಾಹ್ಮಣನಾಗು - ಸಿದ್ಧಯ್ಯ ಪುರಾಣಿಕ

ಓದಿ ಬ್ರಾಹ್ಮಣನಾಗು
ಕಾದಿ ಕ್ಷತ್ರಿಯನಾಗು
ಶೂದ್ರ ವೈಶ್ಯನೆ ಆಗು
ದುಡಿದು ಗಳಿಸಿ
ಏನಾದರೂ ಆಗು
ನಿನ್ನೊಲವಿನಂತಾಗು
ಏನಾದರೂ ಸರಿಯೆ –
ಮೊದಲು ಮಾನವನಾಗು

ಹಿಂದು ಮುಸ್ಲಿಮನಾಗು
ಬೌದ್ಧ ಕ್ರೈಸ್ತನೆ ಆಗು
ಚಾರ್ವಾಕನೇ ಆಗು
ಭೋಗ ಬಯಸಿ
ಏನಾದರೂ ಆಗು
ಹಾರೈಸಿದಂತಾಗು
ಏನಾದರೂ ಸರಿಯೆ –
ಮೊದಲು ಮಾನವನಾಗು

ರಾಜಕಾರಣಿಯಾಗು
ರಾಷ್ಟ್ರಭಕ್ತನೆ ಆಗು
ಕಲೆಗಾರ ವಿಜ್ಞಾನಿ
ವ್ಯಾಪಾರಿಯಾಗು
ಏನಾದರೂ ಆಗು
ನೀ ಬಯಸಿದಂತಾಗು
ಏನಾದರೂ ಸರಿಯೇ –
ಮೊದಲು ಮಾನವನಾಗು


ಸಿದ್ಧಯ್ಯ ಪುರಾಣಿಕ ( 1918-1994)

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......