ವಯಸ್ಸಾದ ತಂದೆಯನ್ನು ಮಗ ಊರಿನ ಪ್ರಸಿದ್ಧ ಹೋಟೆಲಿಗೆ ಊಟಕ್ಕೆಂದು ಕರೆದೊಯ್ದಿದ್ದ. ಹೋಟೆಲ್ ಜನಸಂದಣಿಯಿಂದ ತುಂಬಿತ್ತು. ಮಗ ಹೇಗೂ ಜಾಗ ಗಿಟ್ಟಿಸಿದ. ಇವರ ಟೇಬಲ್ಲಿನ ಮತ್ತೊಂದು ಭಾಗದಲ್ಲಿ ನವದಂಪತಿಗಳು ಕುಳಿತಿದ್ದರು. ಊಟ ಪ್ರಾರಂಭವಾಯಿತು. ಈ ವ್ಯಕ್ತಿಯ ತಂದೆ ತುತ್ತನ್ನು ಬಾಯಿಗೆ ಇಡುವಾಗ ಕೈ ನಡುಗಿ ಬಿಳಿ ಅಂಗಿಯ ಮೇಲೆ ಚೆಲ್ಲಿ ಹೋಯಿತು. ಎದುರಿಗೆ ಕುಳಿತಿದ್ದ ಯುವಕ,
"'ಛೆ! ಇಷ್ಟು ವಯಸ್ಸಾದವರನ್ನು ಯಾಕಾದರೂ ಇಂತಹ ಹೋಟೆಲಿಗೆ ಕರೆದುಕೊಂಡು ಬರಬೇಕು..? ಅಂಗಿಯೆಲ್ಲಾ ಕೊಳೆ ಮಾಡಿಕೊಂಡರು ನೋಡಿ. ಹೊರಗೆ ಹೇಗೆ ಕರೆದುಕೊಂಡು ಹೋಗ್ತೀರಿ'"
ಎಂದು ಕೇಳಿದ. ಆದರೆ ಈ ಮಾತುಗಳು 'ಕೇಳಿಯೋ ಇಲ್ಲವೇನೋ 'ಎಂಬಂತೆ ಆ ವ್ಯಕ್ತಿ ತಾನೇ ತುತ್ತು ಮಾಡಿ ಉಣ್ಣಿಸಿದ. ನಂತರ ವಾಷ್ ರೂಮಿನಲ್ಲಿ ತಂದೆಯ ಅಂಗಿಯ ಕಲೆಯನ್ನು ತಿಕ್ಕಿ ತೊಳೆದು ತನ್ನ ಅಂಗಿಯನ್ನು ತಂದೆಗೆ ಹಾಕಿ, ಆತನ ಅಂಗಿಯನ್ನು ತಾನು ಹಾಕಿಕೊಂಡು ಮೇಲೆ ಕೋಟು ಕೋಟುಹಾಕಿಕೊಂಡ. ತಂದೆಯ ಕೆದರಿದ ಕೂದಲನ್ನು ಸರಿಪಡಿಸಿ ಬೆವರಿದ ಮುಖ ಒರೆಸಿ ಬಿಲ್ ಪಾವತಿಸಿ ಹೊರಡುವಷ್ಟರಲ್ಲಿ ರೆಸ್ಟೊರೆಂಟ್ ಗದ್ದಲ ಸ್ವಲ್ಪ ಕಡಿಮೆಯಾಗಿತ್ತು. ಇನ್ನೇನು ಹೊರ ನಡೆಯಬೇಕೆನ್ನುವಾಗ ಆ ಘಟನೆಯನ್ನು ವೀಕ್ಷಿಸಿದ್ದ ಪಕ್ಕದ ಟೇಬಲಿನಲ್ಲಿದ್ದ ಓರ್ವ ವ್ಯಕ್ತಿ
"'ಹಲೋ ಜಂಟಲ್ ಮ್ಯಾನ್ ನೀವೇನೋ ಬಿಟ್ಟು ಹೊರಟಿದ್ದೀರಿ'"
ಎಂದು ಜೋರಾಗಿ ಕೂಗಿದ. ಆ ಮಾತು ಕೇಳಿ ಹೋಟೆಲಲ್ಲಿದ್ದವರ ಚಿತ್ತ ಇವರತ್ತ ನೆಟ್ಟಿತು. 'ಇಲ್ಲ ನಾನೇನು ಬಿಟ್ಟು ಹೋಗಿಲ್ಲವಲ್ಲ' ಎಂದ ಮಗ. ಅದಕ್ಕೆ ಆ ವ್ಯಕ್ತಿ
'ಮಗನಾದವನು ತನ್ನ ವಯಸ್ಸಾದ ತಂದೆಯನ್ನು ಹೇಗೆ ನೋಡಿಕೊಳ್ಳಬೇಕೆಂಬ ಅಮೂಲ್ಯ ಪಾಠವನ್ನು ನಮಗೆ ಬಿಟ್ಟು ಹೊರಟಿದ್ದೀರಿ'
ಎಂದ, ಮುಂಚೆ ಕೊಂಕು ನುಡದಿದ್ದ
ಆ ಯುವ ದಂಪತಿಗೆ ನಾಚಿಕೆಯಾಗಿ ಕ್ಷಮೆ ಕೇಳಿದರು.
"ನಾನು ಸಣ್ಣವನಿರುವಾಗ ಅಪ್ಪನನ್ನು ಅದೆಷ್ಟು ಗೋಳು ಹೊಯ್ದುಕೊಂಡಿರಲಿಲ್ಲ. ಆಗೆಲ್ಲಾ ಆತ ಕೋಪಿಸಿಕೊಳ್ಳದೆ ನನ್ನನ್ನು ಮುದ್ದು ಮಾಡಿರಲಿಲ್ವ..? ಈಗ ಅವನು ಮಗು ನಾನು ತಂದೆ"
ಎಂದು ಹೇಳಿದ. ಅಲ್ಲಿದ್ದವರ ಕಣ್ಣಾಲಿ ತುಂಬಿತು. ಮಗ ತಂದೆಯ ಕೈ ಹಿಡಿದುಕೊಂಡು ಮೆಲ್ಲನೆ ಕಾರಿನತ್ತ ಕರೆದೊಯ್ದ.
ಹೌದು,
ವಯಸ್ಸಾದ ಮೇಲೆ ಮನುಷ್ಯ ಮಗುವಿನಂತಾಗುತ್ತಾನೆ. ಮೊದಲು ತನ್ನ ಮಕ್ಕಳನ್ನು ಕೈ ಹಿಡಿದು ಬೆಳೆಸಿದ ಆತನಿಗೆ/ಳಿಗೆ
ನಾವೆಲ್ಲ ಅವರನ್ನು ಮಕ್ಕಳಂತೆ ನೋಡಿಕೊಂಡಾಗ ಬದುಕಿಗೆ ಒಂದು ಅರ್ಥ...
ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Subscribe to:
Post Comments (Atom)
ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.
"ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......

-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರ, ಕೋರಿಕೆಗೆ ಕೋರಿಕೆ! ಅಂದರೆ, ಈಶ್ವರ ಸಣಕಲ್ಲ ಅವರ ಪ್ರಖ್ಯಾತ ಕವಿತೆ "ಕೋರಿಕೆ" ಪ್ರಕ...
-
ಮೂಡುವನು ರವಿ ಮೂಡುವನು ಕತ್ತಲೊಡನೆ ಜಗಳಾಡುವನು ಪಂಜೆ ಮಂಗೇಶ ರಾಯರು ಮೂಡಣ ರಂಗಸ್ಥಳದಲಿ ನೆತ್ತರ ಮಾಡುವನು ಕುಣಿದಾಡುವನು ಬೆಳಕಿನ ಕಣ್ಣುಗಳಿ೦ದಾ ಸೂರ್ಯನು ನೋಡ...
No comments:
Post a Comment