ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ - kannada.info@gmail.com |.

Monday, December 11, 2023

ರಾಜನ ಮೂರು ಪ್ರಶ್ನೆಗಳು... ⁉ ( ಸಂಗ್ರಹ)

 - ರಾಜನ ಮೂರು ಪ್ರಶ್ನೆಗಳು... ⁉

ಪ್ರತಿದಿನವೂ ಶ್ರದ್ಧೆಯಿಂದ ಭಗವಂತನನ್ನು ಪೂಜಿಸುವವರೂ ಕೂಡಾ ಭಗವಂತ ನೆಂದರೆ ಏನು? ಯಾರು? ಎನ್ನುವ ಪ್ರಶ್ನೆಗೆ ಉತ್ತರಿಸಲಾರರು(ಬಹುಶಃ ಈ ಪ್ರಶ್ನೆ ನಿಮ್ಮನ್ನು ಕಾಡುತ್ತಿರಬಹುದು)

ಈ ಕಥೆಯನ್ನು ಕೇಳಿ --

ಒಬ್ಬ ರಾಜನಿಗೆ ಮೂರು ಅರ್ಥವಾಗದ ಪ್ರಶ್ನೆಗಳು ಬಹುವಾಗಿ ಕಾಡುತ್ತಿದ್ದವು --

೧  - ದೇವರು ಯಾವ ಕಡೆ ನೋಡುತ್ತಾನೆ?

೨  - ದೇವರು ಎಲ್ಲಿರುತ್ತಾನೆ?

೩  - ದೇವರು ಏನು ಮಾಡುತ್ತಾನೆ?

ಈ ಮೂರು ಪ್ರಶ್ನೆಗಳಿಗೆ ಎಷ್ಟು ಯೋಚಿಸಿದರು ಸರಿಯಾದ ಉತ್ತರ ದೊರಕಲಿಲ್ಲ ದರ್ಬಾರಿನಲ್ಲಿ ರಾಜನು ಎಲ್ಲರೊಡನೆ  ಸಮಾವೇಶಗೊಂಡು ಅಲ್ಲಿ ಹಾಜರಿದ್ದ ಎಲ್ಲ ಪಂಡಿತರು ಮೇಧಾವಿಗಳನ್ನುದ್ದೇಷಿಸಿ ಈ ಎಲ್ಲಾ ಪ್ರಶ್ನೆಗಳಿಗೆ

ಸರಿಯಾದ ಉತ್ತರ ಕೊಟ್ಟವರಿಗೆ ಸೂಕ್ತವಾದ ಬಹುಮತಿಯನ್ನು ಕೊಡುವುದಾಗಿಯೂ ತಪ್ಪಿದರೆ/ ತಪ್ಪಿದ್ದಲ್ಲಿ ಉಗ್ರವಾದ ಶಿಕ್ಷೆಯನ್ನು ನೀಡುವುದಾಗಿಯೂ ತಿಳಿಸುತ್ತಾನೆ.ರಾಜನ ಶಿಕ್ಷೆಯ  ಭಯದಿಂದ ಉತ್ತರ ಕೊಡಲು ಯಾರು ಮುಂದೆ ಬರಲಿಲ್ಲ.ಇದೇ ವಿಷಯವಾಗಿ ರಾಜ್ಯದಲ್ಲೆಲ್ಲಾ ಡಂಗುರ ಸಾರಿಸಲಾಯಿತು.ಇದನ್ನು ಕೇಳಿಸಿಕೊಂಡ ದನಗಾಹಿ ಒಬ್ಬನು ಉತ್ತರ ಕೊಡುವುದಾಗಿ ಒಪ್ಪಿ

ಮುಂದೆ ಬಂದನು ಅವನನ್ನು ರಾಜನ ಆಸ್ಥಾನಕ್ಕೆ ಕರೆಸಲಾಯಿತು ಅವನು ಉತ್ತರಿಸುವ ಮೊದಲು ರಾಜನಿಗೆ ಒಂದು ವಿಷಯವನ್ನು ಹೇಳುತ್ತಾನೆ-- 

"ಹೇಳುವವನು ಗುರು ಅವನು ಮೇಲಿರಬೇಕು ಅದರಂತೆ ಕೇಳುವವನು ಶಿಷ್ಯ ಅವನು ಕೆಳಗಿರಬೇಕು"

-- ಅದಕ್ಕೆ ರಾಜನು ಸಮ್ಮತಿಸಿ ಸಿಂಹಾಸನದಿಂದ ಕೆಳಗಿಳಿದು ಕುಳಿತನು ದನಗಾಹಿ ಸಿಂಹಾಸನದ ಮೇಲೆ ಕೂರುತ್ತಾನೆ.

ನಂತರ ದನಗಾಹಿ ರಾಜನಿಗೆ ಪ್ರಶ್ನೆಗಳನ್ನು ಕೇಳಲು ಸೂಚಿಸುತ್ತಾನೆ* 


(1) - ಮೊದಲನೇ ಪ್ರಶ್ನೆ -ದೇವರು ಯಾವ ಕಡೆ ನೋಡುತ್ತಾನೆ?

- ಕೂಡಲೇ ದನಗಾಹಿ ಒಂದು ಉರಿಯುತ್ತಿರುವ ದೀಪವನ್ನು ತರಿಸಲು ಹೇಳುತ್ತಾನೆ ಅದರಂತೆ ಸಭೆಯ ಮಧ್ಯದಲ್ಲಿ ಉರಿಯುತ್ತಿರುವ ದೀಪವನ್ನು ತಂದಿಡಲಾಗುತ್ತದೆ. ರಾಜರೇ ಹೇಳಿ -ಈ ದೀಪ ಯಾವ ಕಡೆಗೆ ನೋಡುತ್ತಿದೆ- ನನ್ನ ಕಡೆಗೋ,

ನಿಮ್ಮ ಕಡೆಗೋ, ಮೇಲೆಯೋ, ಕೆಳಗಡೆಯೋ, ಪೂರ್ವಕ್ಕೋ , ಪಶ್ಚಿಮಕ್ಕೋ ಎನ್ನುತ್ತಾನೆ*

ಆಗ ರಾಜನು  - "ಎಲ್ಲ ಕಡೆಗೂ" ಎಂದು ಉತ್ತರಿಸುತ್ತಾನೆ ಆಗ ದನಗಾಹಿ ಇಷ್ಟು ಸಣ್ಣ ಜ್ಯೋತಿ ಎಲ್ಲಾ ಕಡೆಗೂ ನೋಡುತ್ತಿದೆಯಾದರೆ ಪರಂಜ್ಯೋತಿ ಸ್ವರೂಪನಾದ ಭಗವಂತನು ಎಲ್ಲ ಕಡೆಗೂ ನೋಡಲಾರನಾ, ಸಮಸ್ತ ಜೀವಿಗಳ ಕಣ್ಣಲ್ಲಿ ಬೆಳಕಾಗಿರುವ ಪರಂಜ್ಯೋತಿಯೇ ಪರಮಾತ್ಮ...!!🪔🙏

 (2) - ಎರಡನೇ ಪ್ರಶ್ನೆ "ದೇವರು ಎಲ್ಲಿರುವನು?"

ಆಗ ದನಗಾಹಿ ಒಂದು ಪಾತ್ರೆಯಲ್ಲಿ ಹಾಲನ್ನು ತರುವಂತೆ ಹೇಳುತ್ತಾನೆ ಹಾಲನ್ನು ತಂದಿರಿಸಿದಾಗ ರಾಜರೇ ಈ ಹಾಲಿನಲ್ಲಿ ತುಪ್ಪ ಎಲ್ಲಿರುವುದು ತೋರಿಸುವಿರಾ ಎನ್ನುವನು ಆಗ ರಾಜನು ಹಾಲನ್ನು ಕುದಿಸಿ, ಹೆಪ್ಪಿಟ್ಟು ಅದು ಮೊಸರಾದ ನಂತರ ಅದನ್ನು ಚೆನ್ನಾಗಿ ಕಡೆದರೆ ಬೆಣ್ಣೆ ಸಿಗುತ್ತೆ ನಂತರ ಅದನ್ನು ಹದವಾಗಿ ಕಾಯಿಸಿದಾಗ ತುಪ್ಪ ಸಿಗುತ್ತದೆ.

ಆಗ ದನಗಾಹಿ - ಸರಿಯಾಗಿ ಹೇಳಿದಿರಿ ರಾಜರೇ- ಅದೇ ರೀತಿ ಹೃದಯವೆಂಬ "ಹಾಲ"ನ್ನು "ಗುರು" ಎನ್ನುವ "ಬೆಂಕಿ"ಯಿಂದ ಚೆನ್ನಾಗಿ ಕಾಯಿಸಿ "ಮನಸ್ಸು" ಎನ್ನುವ ಹೆಪ್ಪನ್ನಿಟ್ಟು ಬರುವ ಮೊಸರನ್ನು "ಸಾಧನೆ" ಎಂಬ ಕಡಗೋಲಿನಿಂದ ಚೆನ್ನಾಗಿ ಕಡೆದರೆ "ಜ್ಞಾನ" ಎನ್ನುವ ಬೆಣ್ಣೆ ಸಿಗುತ್ತದೆ...!

ಆ ಬೆಣ್ಣೆಯನ್ನು "ಅಂತರಾತ್ಮ" ಎನ್ನುವ ಬೆಂಕಿಯಿಂದ ಹದವಾಗಿ ಕಾಯಿಸಿದರೆ "ಪರಮಾತ್ಮ' ಎನ್ನುವ ತುಪ್ಪ ಸಿಗುತ್ತದೆ*

(3) - ಮೂರನೇ ಪ್ರಶ್ನೆ- ದೇವರು ಏನು ಮಾಡುತ್ತಾನೆ?

ಆಗ ದನಗಾಹಿ ನಾನೊಬ್ಬ ದನಗಾಹಿ, ನೀವು ಈ ರಾಜ್ಯದ ಮಹಾರಾಜರು- ಕೆಳಗಿದ್ದ ನನ್ನನ್ನು ಸಿಂಹಾಸನದ ಮೇಲೆ ಕೂಡಿಸಿ,  ಸಿಂಹಾಸನದಲ್ಲಿದ್ದ

ನಿಮ್ಮನ್ನು ಕೆಳಗಿಳಿಸಿದ್ದು..!, ಇದೇ ಪರಮಾತ್ಮನ ಲೀಲೆ, ಸತ್ಕರ್ಮಗಳನ್ನು ಮಾಡುವ ಜೀವಿಗಳಿಗೆ ಮುಂದಿನ  ಜನ್ಮದಲ್ಲಿ ಉತ್ತಮ ಜನ್ಮವನ್ನು ನೀಡುವ,  ದುಷ್ಕರ್ಮ ಮಾಡುವವರಿಗೆ ಮುಂದಿನ ಜನ್ಮದಲ್ಲಿ ದುಸ್ತರ ಜೀವನ ನೀಡುವುದು ಪರಮಾತ್ಮನ ಕೆಲಸ...!🙏

ಈ ಉತ್ತರಗಳನ್ನು ಕೇಳುತ್ತಿದ್ದಂತೆ ಇಡೀ ಸಭೆಯು ಅಲ್ಲಿ ನೆರದಿದ್ದವರ ಕರತಾಡನದಿಂದ ಮಾರ್ಮೊಳಗಿತು

🕉 ಸರ್ವೇ ಜನಾಃ ಸುಖಿನೋ ಭವಂತು🕉


No comments:

Post a Comment