Friday, May 30, 2025

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

 




"ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..."
"ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..."
"ಲೋಕದ ಕಣ್ಣಿಗೆ ರಾಧೆಯೂ ಕೂಡ ..."
"ಇಷ್ಟು ಕಾಲ ಒಟ್ಟಿಗಿದ್ದು ಎಷ್ಟು ಬೆರೆತರೂ..." 
ಹುಚ್ಚು ಖೋಡಿ  ಮನಸು, ಅದು ಹದಿನಾರರ ವಯಸು..."
ಡಾ ಹೆಚ್ಚೆಸ್ವಿ ಅವರ, ಮನಸೂರೆಗೊಂಡ  ಈ ಮಧುರ ಭಾವ  ಗೀತೆಗಳನ್ನು ಕೇಳದ, ಗುನುಗುನಿಸದ ಸಾಹಿತ್ಯಾಸಕ್ತ ಕನ್ನಡಿಗರಿಲ್ಲ ಎಂದೇ ಹೇಳಬಹುದು. 

ಡಾ ಹೊದಿಗೆರೆ ಶಾನ್ ಭಾಗ್ ವೆಂಕಟೇಶ ಮೂರ್ತಿ(೨೩.೦೬.೧೯೪೪) ಹೆಚ್ಚೆಸ್ವಿ ಎಂದೇ ಸಾರಸ್ವತ ಲೋಕದಲ್ಲಿ ಪರಿಚಿತರು. ಕವಿ, ಕಾದಂಬರಿಕಾರ, ನಾಟಕಕಾರ, ಪ್ರಬಂಧಕಾರ, ಶಿಶು ಸಾಹಿತಿ, ಅನುವಾದಕ, ವಿಮರ್ಶಕ, ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಧಾರಾವಾಹಿಗಳಿಗೆ  ಗೀತೆ, ಸಂಭಾಷಣಾ ರಚನೆಕಾರ... ಹೆಚ್ಚೆಸ್ವಿ ಅವರ ಹಲವು ಮುಖಗಳಿವು!ನೂರಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.
ಸಮಕಾಲೀನ ಸಂದರ್ಭದ ಮುಖ್ಯ ಕವಿ ಎಂದು ಅವರನ್ನು ಗುರುತಿಸಲಾಗಿದೆ. 

ಡಾ ಎಚ್ ಎಸ್ ವೆಂಕಟೇಶ ಮೂರ್ತಿ  ಅವರ ಮುತ್ತಜ್ಜ ಕೆಲ್ಲೋಡು ಪುಟ್ಟಪ್ಪ ಪ್ರಸಿದ್ಧ ಗಮಕಿಗಳು. ಅಜ್ಜ ಭೀಮರಾಯರು ಮೃದಂಗ ವಾದಕರು ಹಾಗೂ ನಾಟಕ ಪ್ರಿಯರು. ಹಾಗಾಗಿ ಸಾಹಿತ್ಯ, ಸಂಗೀತದ ಪ್ರೇಮ ಹೆಚ್ಚೆಸ್ವಿ ಅವರಿಗೆ ರಕ್ತಗತವಾಗಿಯೇ ಬಂದದ್ದು .

ಚಿತ್ರದುರ್ಗ ಜಿಲ್ಲೆಯ ಮಲ್ಲಾಡಿಹಳ್ಳಿಯಲ್ಲಿ ಪ್ರೌಢಶಾಲೆಯ ಕ್ರಾಫ಼್ಟ್ ಟೀಚರಾಗಿ ವೃತ್ತಿ ಆರಂಭಿಸಿದ ಹೆಚ್ಚೆಸ್ವಿ, ಬೆಂಗಳೂರಿನ ಸೇಂಟ್ ಜೋಸೆಫ್ ಕಾಮರ್ಸ್ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತರಾದವರು.  ಮೆಕ್ಯಾನಿಕಲ್ ಇಂಜಿನಿಯರಿಂಗನಲ್ಲಿ ಡಿಪ್ಲೊಮಾ ಪಡೆದರೂ ಕನ್ನಡ ಸಾಹಿತ್ಯವೇ ಅವರನ್ನು ಸೆಳೆದಿದ್ದರಿಂದ ನಂತರದಲ್ಲಿ ಕನ್ನಡ ಎಂ ಎ ಮಾಡಿದರು. 
ಕಲ್ಬುರ್ಗಿಯಲ್ಲಿ ನಡೆದ ಎಂಭತ್ತೈದನೇ ಅಖಿಲ ಭ್ಹಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. 
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ಡಿವಿಜಿ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ಅವರ ಮುಡಿಯಲ್ಲಿವೆ. ಅವರ ಬಗ್ಗೆ ಇನ್ನಷ್ಟು ಮಾಹಿತಿ.

೧.ಡಾ ಎಚ್ ಎಸ್ ವೆಂಕಟೇಶ ಮೂರ್ತಿ ಅವರ ಮೊದಲ ಕವನ ಸಂಕಲನದ ಹೆಸರೇನು?  
       *'ಪರಿವೃತ್ತ' 

೨.ಡಾ ಎಚ್ ಎಸ್ ವೆಂಕಟೇಶ ಮೂರ್ತಿ ಅವರು ಮಹಾ ಪ್ರಬಂಧದ ವಸ್ತು ಯಾವುದು? 
       *'ಕನ್ನಡದಲ್ಲಿ ಕಥನ ಕವನಗಳು'

೩.ಡಾ ಎಚ್ ಎಸ್ ವೆಂಕಟೇಶ ಮೂರ್ತಿ ಅವರ ಎರಡು ಕಥಾ ಸಂಕಲನಗಳು ಯಾವುವು? 
       *'ಬಾನಸವಾಡಿಯ ಬೆಂಕಿ' ಮತ್ತು 'ಪುಟ್ಟಾರಿಯ ಮತಾಂತರ'

೪.ಡಾ ಎಚ್ ಎಸ್ ವೆಂಕಟೇಶ ಮೂರ್ತಿ ಅವರು ಅನುವಾದಿಸಿದ ಕಾಳಿದಾಸನ ಕಾವ್ಯ ಯಾವುದು? 
       *'ಋತುಸಂಹಾರ' ವನ್ನು 'ಋತುವಿಲಾಸ' ಎಂದು ಅನುವಾದಿಸಿದ್ದಾರೆ. ಈ ಕೃತಿಗೆ ಕೇಂದ್ರ ಸಾಹಿತ್ಯ  ಅಕಾಡೆಮಿ ಅನುವಾದ ಪುರಸ್ಕಾರ ಲಭಿಸಿದೆ.

೫.ಡಾ ಎಚ್ ಎಸ್ ವೆಂಕಟೇಶ ಮೂರ್ತಿ ಅವರ ಆತ್ಮಕಥನದ ಹೆಸರೇನು? 
       *'ಎಚ್ಚೆಸ್ವಿ ಅನಾತ್ಮ ಕಥನ'

೬.ಡಾ ಎಚ್ ಎಸ್ ವೆಂಕಟೇಶ ಮೂರ್ತಿ ಅವರು ಟಿ ಎನ್  ಸೀತಾರಾಂ ಅವರ ಯಾವ ಧಾರಾವಾಹಿಗೆ  ಶೀರ್ಷಿಕೆ ಗೀತೆ ರಚಿಸಿದ್ದಾರೆ? 
       *'ಮುಕ್ತಾ'

೭.ಡಾ ಎಚ್ ಎಸ್ ವೆಂಕಟೇಶ ಮೂರ್ತಿ ಅವರ ಮಹಾ ಕಾವ್ಯ ಯಾವುದು? 
        * 'ಬುದ್ಧ ಚರಣ'

೮.ಡಾ ಎಚ್ ಎಸ್ ವೆಂಕಟೇಶ ಮೂರ್ತಿ ಅವರ ಯಾವ ಯಾವ ಕೃತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ ಬಂದಿದೆ? 
       *ಸಿಂದಬಾದನ ಆತ್ಮಕಥೆ(ಕವನ ಸಂಕಲನ)
       *ಹರಿಗೋಲು(ಕವನ ಸಂಕಲನ)
       *ಅಗ್ನಿಮುಖಿ( ಕಾದಂಬರಿ)
       *ಒಂದು ಸೈನಿಕ ವೃತ್ತಾಂತ( ನಾಟಕ)
       *ಹೂವಿನ ಶಾಲೆ( ಮಕ್ಕಳ ಸಾಹಿತ್ಯ)

೯.ಡಾ ಎಚ್ ಎಸ್ ವೆಂಕಟೇಶ ಮೂರ್ತಿ ಅವರ ವೈಚಾರಿಕ ಪ್ರಬಂಧ ಸಂಪುಟದ ಹೆಸರೇನು?
       * 'ಈ ಮುಖೇನ'

೧೦.ಡಾ ಎಚ್ ಎಸ್ ವೆಂಕಟೇಶ ಮೂರ್ತಿ ಅವರು ನಿರ್ದೇಶಿಸಿದ ಸಿನಿಮಾ ಯಾವುದು?
       *'ಹಸಿರು ರಿಬ್ಬನ್'



Monday, May 5, 2025

ಒಂದು ಘಟನೆ - ಕೃಪೆ: ವಾಟ್ಸಾಪ್

 ಹರಿದುಹೋದ ಧೋತಿ ಮತ್ತು ಹರಿದ ಅಂಗಿಯನ್ನು ಧರಿಸಿದ ವ್ಯಕ್ತಿ ತನ್ನ 15-16 ವರ್ಷದ ಮಗಳ ಜೊತೆ 

ದೊಡ್ಡ ಹೋಟೆಲ್ ಗೆ ಹೋದರು. ಇಬ್ಬರೂ ಕುರ್ಚಿಯ ಮೇಲೆ ಕುಳಿತಿದ್ದನ್ನು ನೋಡಿ , ವೇಟರ್ ಬಂದು ಎರಡು ನೀರಿನ  ಲೋಟ ಇಟ್ಟು ಕೇಳಿದ. ತಮಗೇನು ಬೇಕು? ಆಗ ಆ ವ್ಯಕ್ತಿ

" ನನ್ನ ಮಗಳಿಗೆ ಹತ್ತನೇ ತರಗತಿಯಲ್ಲಿ ಜಿಲ್ಲೆಗೆ ಪ್ರಥಮ ಬಂದರೆ ನಗರದ ಅತಿದೊಡ್ಡ ಹೋಟೆಲ್ ನಲ್ಲಿ ದೋಸೆ ತಿನ್ನಿಸುತ್ತೇನೆ ಎಂದು ಭರವಸೆ ನೀಡಿದ್ದೆ.

ಇದು  ಆ ಭರವಸೆಯನ್ನು ನನ್ನ  ಮಗಳು ಈಡೇರಿಸಿದ್ದಾಳೆ. ದಯವಿಟ್ಟು ಮಗಳಿಗಾಗಿ ಒಂದು ದೋಸೆ ತನ್ನಿ. ? ವೇಟರ್ ಕೇಳಿದ " ಆಯಿತು ತಮಗೇನು ತರಬೇಕು?"   ನನ್ನ ಬಳಿ ಕೇವಲ ಒಂದು ದೊಸೆ ಸಾಕಾಗುವಷ್ಟು ಮಾತ್ರ ಹಣವಿದೆ ಅವಳಿಗಷ್ಟೆ ಕೊಟ್ಟರೆ ಸಾಕು.ಎಂದ.ಈ  ಮಾತು ಕೇಳಿ ವೇಟರ್ ನ ಮನಸು ಕರಗಿತು. ಮಾಲೀಕನ ಬಳಿ ಹೋಗಿ   ಅವನು ವ್ಯಕ್ತಿ ಮತ್ತು ಮಗಳ ಕಥೆ ಹೇಳಿದ.ಮುಂದುವರಿದು ಇವರಿಬ್ಬರಿಗೂ ನನ್ನ ಪರವಾಗಿ ತಿಂಡಿ  ನೀಡಬೇಕೆಂದು ನಿರ್ಧರಿಸಿದ್ದೇನೆ.  ನೀವು ಅವರ ಬಿಲ್ ಹಣವನ್ನು ನನ್ನ ಸಂಬಳದಿಂದ ಕಡಿತಗೊಳಿಸಬಹುದು. ಈ ಮಾತನ್ನು ಕೇಳಿದ ಹೊಟೆಲ್ ಮಾಲಿಕನಿಗೂ ಅವರಿಬ್ಬರ ಮೇಲೆ ಮರುಕವಾಯಿತು ಹಾಗೂ ವೆಯ್ಟರ್ ನ ಅಭಿಮಾನ ಕಂಡು  ಸಂತುಷ್ಟನಾಗಿ "ಅವರಿಬ್ಬರಿಗೆ  ಹೋಟೆಲ್ ಪರವಾಗಿ ಇಂದು ನಾವು ಅಭಿನಂದನಾ ಪಾರ್ಟಿ ಕೊಡೋಣ ಎಂದು ಮಾಲೀಕರು ಹೇಳಿದರು".  

ಹೋಟೆಲ್ ಮಾಲೀಕರು ಎಲ್ಲ ಸಿಬ್ಬಂದಿಯವರನ್ನು ಸೇರಿಸಿ ಟೇಬಲ್ ನ್ನು ಚೆನ್ನಾಗಿ ಅಲಂಕರಿಸಲು ಹೇಳಿದರು.ಹಾಗೂ ಬಡ ಹುಡುಗಿಯ ಯಶಸ್ಸನ್ನು ಗ್ರಾಹಕರೊಂದಿಗೆ ಸಂಭ್ರಮಿಸಿ ಅವರಿಬ್ಬರಿಗೆ ಹೊಟ್ಟೆ ತುಂಬುವಷ್ಟು ತಿಂಡಿ  ಹಾಗೂ ಸಿಹಿ ಹಂಚಿ ಆಚರಿಸಿದರು.ಜೊತೆಗೆ ಮಾಲೀಕರು   ದೊಡ್ಡ ಚೀಲದಲ್ಲಿ  ಸಿಹಿ ತಿಂಡಿ ಪ್ಯಾಕ್ ನೀಡಿ ತಮ್ಮ ನೆರೆಹೊರೆಯಲ್ಲಿ ಹಂಚಲು  ಕೊಟ್ಟರು. ಇಷ್ಟೆಲ್ಲಾ ಗೌರವ ಪಡೆದ ಅವರಿಗೆ ಹೊಟೆಲ ನವರ ಬಗ್ಗೆ ಧನ್ಯತಾಭಾವದಿಂದ ಕಣ್ಣಲ್ಲಿ ನೀರು ಜಿನುಗತೊಡಗಿತ್ತು.                                                        .

ಸಮಯ ಕಳೆಯಿತು. ಒಂದು ದಿನ ಅದೇ ಹುಡುಗಿ I.A.S. ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಅದೇ ಊರಿಗೆ ಬಂದಳು. ಮೊದಲು ಆಪ್ತ ಸಹಾಯಕನನ್ನು ಅದೇ ಹೋಟೆಲ್ ಗೆ ಕಳುಹಿಸಿ, "ಕಲೆಕ್ಟರ್ ಸಾಹಿಬಾ" ತಿಂಡಿ ತಿನ್ನಲು ಬರುತ್ತಾರೆ ಎಂದು ಹೊಟೆಲ್ ಮಾಲಿಕರಿಗೆ ತಿಳಿಸುವಂತೆ ಹೇಳಿದರು. ಹೋಟೆಲ್ ಮಾಲೀಕರು ತಕ್ಷಣ  ಹೊಟೆಲ್ ಹಾಗೂ ಟೇಬಲ್ ಗಳನ್ನು ತಮ್ಮ ಸಹಾಯಕರ  ಸಹಾಯದಿಂದ ಸುಂದರವಾಗಿ ಅಲಂಕರಿಸಿದರು. ಈ ಸುದ್ದಿ ಕೇಳಿ ಇಡೀ ಹೋಟೆಲ್ ಗ್ರಾಹಕರಿಂದ ತುಂಬಿ ತುಳುಕಿತು.

ಕಲೆಕ್ಟರ್ ತನ್ನ ಪೋಷಕರೊಂದಿಗೆ ಹೋಟೆಲ್ ತಲುಪಿದರು.  ಎಲ್ಲರೂ ಅವರ ಗೌರವಕ್ಕೆ ನಿಂತರು. ಹೋಟೆಲ್ ಮಾಲೀಕರು ಅವರಿಗೆ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.  ಅವಳು ನೇರವಾಗಿ  ಹೋಟೆಲ್ ಮಾಲೀಕ ಮತ್ತು ವೆಟರ್ ನ ಕಾಲಿಗೆ  ನಮಸ್ಕರಿಸಿ ಹೇಳಿದಳು - ' ಬಹುಶಃ ನೀವಿಬ್ಬರೂ ನನ್ನನ್ನು ಗುರುತಿಸಲಿಲ್ಲ. ದೋಸೆ ಕೊಡೋಕೆ ಅಪ್ಪನ ಬಳಿ ದುಡ್ಡಿಲ್ಲದ ಹುಡುಗಿ ನಾನು. ಆ ದಿನ ನೀವಿಬ್ಬರೂ ಮಾನವೀಯತೆಯು ಇನ್ನೂ ಇದೆ ಎನ್ನುವದಕ್ಕೆ ನೈಜ  ಉದಾಹರಣೆ ಕೊಟ್ಟಿದ್ದಿರಿ. ನನ್ನ ನೆರೆಹೊರೆಗೆ ಹಂಚಲು ಸಿಹಿತಿಂಡಿಯ ಪ್ಯಾಕ್  ನೀಡಿ ಗೌರವಿಸಿದ್ದಿರಿ.

 ನಿಮ್ಮಿಬ್ಬರಿಂದಲೇ ಇಂದು ನಾನು ಈ ಹಂತಕ್ಕೆ ಬರಲು ಪ್ರಯತ್ನ ಪಟ್ಟೆ . ನಾನು ನಿಮ್ಮಿಬ್ಬರನ್ನು ಯಾವಾಗಲೂ  ನೆನಪಿನಲ್ಲಿಟ್ಟುಕೊಳ್ಳುತ್ತೇನೆ. ಇವತ್ತು ಈ ಪಾರ್ಟಿ ನನ್ನಿಂದ. ಎಲ್ಲಾ ಗ್ರಾಹಕರು ಮತ್ತು ಹೋಟೆಲ್ ಸಿಬ್ಬಂದಿಗಳ ಬಿಲ್ ನಾನು ಕಟ್ಟುತ್ತೇನೆ.  ಇವತ್ತಿನಿಂದ ನಿಮ್ಮಿಬ್ಬರ ಸುಖ ದುಃಖಗಳಿಗೆ ನಾನೂ ಭಾಗಿ.ಎಂದು ಹೇಳಿದಳು.ಇವತ್ತು ಹೊಟೆಲ್ ಮಾಲಿಕ  ಹಾಗೂ ವೆಯ್ಟರನ ಕಣ್ಣುಗಳು ತೆವ ವಾಗಿದ್ದವು.     

 ಯಾವುದೇ ಬಡವರ ಬಡತನವನ್ನು ನೋಡಿ ಅಪಹಾಸ್ಯ ಮಾಡುವ ಬದಲು, ಅವರ ಪ್ರತಿಭೆಯನ್ನು ಸರಿಯಾಗಿ ಗೌರವಿಸಿದರೆ ಆ ಸಂತೃಪ್ತ ಭಾವ ಅವರಲ್ಲಿ ಯಾವತ್ತೂ ಹಚ್ಚಹಸುರನಾಗಿ ಇರುತ್ತದೆ.    

Sunday, April 20, 2025

ವ್ಯತಿರಿಕ್ತ' ಕಾದಂಬರಿ

 ಜೀವನದ ಧಾವಂತದಲ್ಲಿ ನಮ್ಮನ್ನು ನಾವು ಒಂದೆಡೆ ನಿಂತು ಆತ್ಮಾವಲೋಕನಕ್ಕೆ ಆಸ್ಪದ ನೀಡಬೇಕಾಗುತ್ತದೆ. 


ನಮ್ಮ ಭಾವನೆಗೆ ಅನುಗುಣವಾಗಿ ನಾವು ಇತರರನ್ನು ಸುಲಭವಾಗಿ ಅಳೆದು ಬಿಡುತ್ತೇವೆ. ಆದರೆ ನಮ್ಮನ್ನು ನಾವು ಅರಿತುಕೊಳ್ಳಲು ಹೋಗುವುದೇ ಇಲ್ಲ. ಕಲ್ಮಷ ತುಂಬಿದ ನೀರಿನಲ್ಲಿ ಯಾವುದೇ ಬಾಹ್ಯ ಘರ್ಷಣೆ ನಿಂತ ಬಳಿಕ ಕ್ರಮೇಣ ಆ ಕಲ್ಮಷಗಳೆಲ್ಲಾ ಅಡಿಗೆ ಹೋಗಿ ಮೇಲಿನ ನೀರು ತಿಳಿಯಾಗುತ್ತದೆ. ಅದು ಬಳಸಲು ಯೋಗ್ಯವಾಗುತ್ತದೆ.


✍️ *ವಿವೇಕಾನಂದ ಕಾಮತ್* 

'ವ್ಯತಿರಿಕ್ತ' ಕಾದಂಬರಿ

Wednesday, April 9, 2025

ಪರೀಕ್ಷೆಯಲ್ಲಿ ಅಂಕ ಕಡಿಮೆ ಯಾದರೇನು?......... ಜೀವನದಲ್ಲಿ ಹೆಚ್ಚು ಅಂಕ ಗಳಿಸಬಹುದಲ್ಲವೇ? - ಡಾ.ಶಶಿಕಿರಣ್ ಶೆಟ್ಟಿ, ಉಡುಪಿ

 PUC ರಿಸಲ್ಟ್ ಬಂದಿದೆ ಸಂತೋಷ 580,600 ಪ್ಲಸ್ ಅಂಕ ತೆಗೆದವರಿಗೆ ಅಭಿನಂದನೆಗಳು ಅದೂ ಸಂತೋಷ  ಪತ್ರಿಕೆ, ಟಿವಿ, ಯಲ್ಲೇ ಇರಲಿ, ವಾಟ್ಸಪ್ ಗ್ರೂಪ್ನಲ್ಲಿ, ಸೋಷಿಯಲ್ ಮಿಡಿಯಾ ಎಲ್ಲೇ ಇರಲಿ ಅವರ ಮಗ 600+, ಇವರ ಮಗಳು 610 ಅಂತೆ ಎನ್ನುವುದರ ನಡುವೆ, ಏನೂ ತಪ್ಪು ಮಾಡದ 50% ಮಾರ್ಕ್ ತೆಗೆದ, ಫೇಲ್ ಆದ ಮಕ್ಕಳನ್ನು ಕೇಳುವವರಿಲ್ಲ ನೋಡಿ😥😥.....

ಇನ್ನೇಷ್ಟೋ ಕಡೆ ನೀನು ವೇಸ್ಟ್ ಬಾಡಿ, ನಮ್ಮ ಮರ್ಯಾದೆ ತೆಗೆದೆ, ನಮ್ಮ ಶಾಲೆಗೆ ಕಪ್ಪು ಚುಕ್ಕೆ, ದನ ಮೇಯಿಸು, ಸಾಯ್ಬಾರದಿತ್ತಾ😥, ಅವರ ಮಗ ನೋಡು,ಇವರ ಮಗಳನ್ನು ನೋಡು ಮುಂತಾದ ಚುಚ್ಚು ನುಡಿ ಇದು ಬೆಳೆಯುವ ಸಿರಿ ಯೊಂದನ್ನು ಮೊಳಕೆಯಲ್ಲೇ ಚಿವುಟುವ ಸಮಾಜ, ಬಾಂದವರು, ಒಡಹುಟ್ಟಿದವರು, ತಂದೆ ತಾಯಿ ಒಮ್ಮೆ ಇವರ ಬಗ್ಗೆ ಯೋಚಿಸ ಬಾರದೇಕೆ??

5 ಬೆರಳು ಒಂದೇ ರೀತಿ ಆಗಲು ಸಾಧ್ಯವಿಲ್ಲ ಎನ್ನುವ ಸತ್ಯ ನಮಗೇಕೆ ಅರ್ಥವಾಗುವುದಿಲ್ಲ?, ಸಮಾಜದಲ್ಲಿ ಯಶಸ್ವೀ ವ್ಯಕ್ತಿ ಆಗಬೇಕಾದರೆ rank ಬರುವುದು ಅನಿವಾರ್ಯವೇ? ಟಾಟಾ ಬಿರ್ಲಾ, ಅದಾನಿ, ಅಂಬಾನಿ, ಸಚಿನ್ ತೆಂಡೂಲ್ಕರ್ ನಂತಹ rank ಬಾರದ ಅದೆಷ್ಟು ಯಶಸ್ವೀ ವ್ಯಕ್ತಿ ಗಳಿಲ್ಲವೇ?...👌🙏🙏

ಬನ್ನಿ ಸ್ವಲ್ಪ ಬದಲಾಗೋಣ...

🌹1) ಕಡಿಮೆ ಅಂಕ ಬಂದ ಮಕ್ಕಳನ್ನು ಪ್ರೀತಿ ಯಿಂದ ಮಾತಾಡೋಣ

🌹2) ಅವರಲ್ಲಿ ಧೈರ್ಯ ತುಂಬೋಣ

🌹3) ಪರ್ಯಾಯ ಆಯ್ಕೆ ಗಳ ಬಗ್ಗೆ ತಿಳಿ ಹೇಳೋಣ

🌹4)ಎರಡನೇ ಯತ್ನದಲ್ಲಿ ಯಶಸ್ವೀ ಯಾದವರ ಕಥೆ ಹೇಳೋಣ..

🌹5) 1 ವರ್ಷ sslc ಮಾತ್ರ ಹೋಗಿದ್ದು ಜೀವನ ಇನ್ನೂ ಇದೆ ಎನ್ನುವ ಸತ್ಯ ತಿಳಿ ಹೇಳೋಣ..

🌹6) ಅವರಲ್ಲಿರುವ ಟ್ಯಾಲೆಂಟ್ ಅನ್ನು ಗುರುತಿಸೋಣ...


ಒಟ್ಟಲ್ಲಿ ರೆಕ್ಕೆ ಮುರಿದ ಹಕ್ಕಿಗೆ ಉಪಚಾರಿಸಿ ಹೊಸರೆಕ್ಕೆ ಕಟ್ಟಿ ಆಗಸಕ್ಕೆ ಹಾರಿ ಬಿಡೋಣ 🙏🙏...

ಕೊನೆಗೊಂದು ಎಲ್ಲೊ ಓದಿದ ಕಥೆಯೊಂದನ್ನು ಹೇಳುತ್ತೇನೆ ಕೇಳಿ.. ಅಪ್ಪ ಈಗಷ್ಟೇ ತಂದ ಹೊಸ ಕಾರಿನ ಕೆಂಪು ಪೈಂಟ್ ಮೇಲೆ ಚಿಕ್ಕ ಮಗ ಕಲ್ಲಲ್ಲಿ ಏನೋ ಗೀಚುತಿದ್ದ ಸಿಟ್ಟಲ್ಲಿದ್ದ ಅಪ್ಪ ಅಲ್ಲೇ ಇದ್ದ ಕಬ್ಬಿಣದ ರೋಡ್ ಅಲ್ಲಿ ಮಗನ ಕೈಗೆ ಹೊಡೆದನಂತೆ ಮಗನ ಕೈ ಫ್ರಾಕ್ಚರ್ ಆಗಿತ್ತು🥱, ಆಸ್ಪತ್ರೆ ಗೆ ಕೊಂಡು ಹೋದರೆ ಹೊಡೆತ ಜೋರಾಗಿ ಬಿದ್ದಿದ್ದರಿಂದ ಹೆಬ್ಬೆರಳು ಪುಡಿ ಪುಡಿ ಆಗಿದ್ದು ಮಗು ವಿನ ಹೆಬ್ಬೆರಳು ಕತ್ತರಿಸಬೇಕು ಎಂದು ಬೆರಳು ಕತ್ತರಿಸಿದರಂತೆ 😥.. ಅಪ್ಪ ಬೇಸರದಿಂದ ಮನೆಗೆ ಬಂದರೆ ಕೆಂಪು ಕಾರ್ ಮೇಲೆ ಅಪ್ಪ ಈ ಲವ್ ಯು ಎಂದು ಕಲ್ಲಲ್ಲಿ ಗೀಚಿದ್ದ ಮಗ.. ಅಲ್ಲಿ ರಕ್ತ ದ ಕಲೆ ಗಳಿದ್ದವು... ಅಪ್ಪ ದುಃಖ ತಡೆಯಲಾರದೇ ಅಲ್ಲೇ ಕೂತಿದ್ದ.. ಹಿಂದೆ ನಿಂದ ಬಂದ ಮಗ ಬ್ಯಾಂಡೆಜ್ ಮಾಡಿದ್ದ ಕೈ ತೋರಿಸಿ ಹೇಳಿದನಂತೆ ಅಪ್ಪ ನೀನು ಟೆನ್ಶನ್ ತಗೋಬೇಡ ನಾನು ಬರೆಯೋದು ಎಡ ಕೈ ಯಲ್ಲಿ ಮೊನ್ನೆ ಬಲ ಕೈ ಅಲ್ಲಿ ಟ್ರೈ ಮಾಡುತಿದ್ದೆ, ಬಲ ಕೈ ಹೆಬ್ಬೆರಳು ಹೋದರೆ ಹೊಗಲಿ ಬಿಡು ಅಂದನಂತೆ😔🥱.....

ನಿಜ ಇಂತಹ ಮಕ್ಕಳ ನಿಷ್ಕಲ್ಮಶ ಪ್ರೀತಿ,ಮಮತೆ ಯನ್ನು ಅರಿಯುವ ತಂದೆ ತಾಯಿಗಳಾಗೋಣ.. ಮಾರ್ಕ್ ಕಮ್ಮಿ ಬಂತೆಂದು ಅವರ ಮುಗ್ಧ ಹೃದಯಕ್ಕೆ ನೋವು ಕೊಟ್ಟು ನಾಳೆ ಮಕ್ಕಳನ್ನು ಕಳೆದುಕೊಂಡು ಬೇಸರಿಸುವ ಮೊದಲು ಎಚ್ಚರ ದಿಂದ ಇರೋಣ.

SSLC, PUC  ಯಲ್ಲಿ ಕಡಿಮೆ ಅಂಕ ಬಂದ /ಫೇಲ್ ಆದ ಅದೆಷ್ಟೋ ವಿದ್ಯಾರ್ಥಿಗಳು ಜೀವನವೆಂಬ ಪರೀಕ್ಷೆ ಯಲ್ಲಿ ಪಾಸ್ ಆಗಿದ್ದಾರೆ, ಕೆಲವರoತು ಜೀವನದಲ್ಲಿ Rank ಬಂದಿದ್ದಾರೆ.. ಹಾಗಾಗಿ ಇದಿಷ್ಟು ನೆನಪಿರಲಿ....ಅವರಿಗೊಂದು ಅವಕಾಶ ಕೊಡಿ

ಯಾಕೆಂದರೆ....

ಪರೀಕ್ಷೆ ಯಲ್ಲಿ ಅಂಕ ಕಡಿಮೆಯಾದರೇನು?.... ಜೀವನದಲ್ಲಿ ಹೆಚ್ಚು ಅಂಕ ಗಳಿಸಬಹುದಲ್ಲವೇ?? 🙏🙏

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......