Friday, May 30, 2025

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

 




"ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..."
"ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..."
"ಲೋಕದ ಕಣ್ಣಿಗೆ ರಾಧೆಯೂ ಕೂಡ ..."
"ಇಷ್ಟು ಕಾಲ ಒಟ್ಟಿಗಿದ್ದು ಎಷ್ಟು ಬೆರೆತರೂ..." 
ಹುಚ್ಚು ಖೋಡಿ  ಮನಸು, ಅದು ಹದಿನಾರರ ವಯಸು..."
ಡಾ ಹೆಚ್ಚೆಸ್ವಿ ಅವರ, ಮನಸೂರೆಗೊಂಡ  ಈ ಮಧುರ ಭಾವ  ಗೀತೆಗಳನ್ನು ಕೇಳದ, ಗುನುಗುನಿಸದ ಸಾಹಿತ್ಯಾಸಕ್ತ ಕನ್ನಡಿಗರಿಲ್ಲ ಎಂದೇ ಹೇಳಬಹುದು. 

ಡಾ ಹೊದಿಗೆರೆ ಶಾನ್ ಭಾಗ್ ವೆಂಕಟೇಶ ಮೂರ್ತಿ(೨೩.೦೬.೧೯೪೪) ಹೆಚ್ಚೆಸ್ವಿ ಎಂದೇ ಸಾರಸ್ವತ ಲೋಕದಲ್ಲಿ ಪರಿಚಿತರು. ಕವಿ, ಕಾದಂಬರಿಕಾರ, ನಾಟಕಕಾರ, ಪ್ರಬಂಧಕಾರ, ಶಿಶು ಸಾಹಿತಿ, ಅನುವಾದಕ, ವಿಮರ್ಶಕ, ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಧಾರಾವಾಹಿಗಳಿಗೆ  ಗೀತೆ, ಸಂಭಾಷಣಾ ರಚನೆಕಾರ... ಹೆಚ್ಚೆಸ್ವಿ ಅವರ ಹಲವು ಮುಖಗಳಿವು!ನೂರಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.
ಸಮಕಾಲೀನ ಸಂದರ್ಭದ ಮುಖ್ಯ ಕವಿ ಎಂದು ಅವರನ್ನು ಗುರುತಿಸಲಾಗಿದೆ. 

ಡಾ ಎಚ್ ಎಸ್ ವೆಂಕಟೇಶ ಮೂರ್ತಿ  ಅವರ ಮುತ್ತಜ್ಜ ಕೆಲ್ಲೋಡು ಪುಟ್ಟಪ್ಪ ಪ್ರಸಿದ್ಧ ಗಮಕಿಗಳು. ಅಜ್ಜ ಭೀಮರಾಯರು ಮೃದಂಗ ವಾದಕರು ಹಾಗೂ ನಾಟಕ ಪ್ರಿಯರು. ಹಾಗಾಗಿ ಸಾಹಿತ್ಯ, ಸಂಗೀತದ ಪ್ರೇಮ ಹೆಚ್ಚೆಸ್ವಿ ಅವರಿಗೆ ರಕ್ತಗತವಾಗಿಯೇ ಬಂದದ್ದು .

ಚಿತ್ರದುರ್ಗ ಜಿಲ್ಲೆಯ ಮಲ್ಲಾಡಿಹಳ್ಳಿಯಲ್ಲಿ ಪ್ರೌಢಶಾಲೆಯ ಕ್ರಾಫ಼್ಟ್ ಟೀಚರಾಗಿ ವೃತ್ತಿ ಆರಂಭಿಸಿದ ಹೆಚ್ಚೆಸ್ವಿ, ಬೆಂಗಳೂರಿನ ಸೇಂಟ್ ಜೋಸೆಫ್ ಕಾಮರ್ಸ್ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತರಾದವರು.  ಮೆಕ್ಯಾನಿಕಲ್ ಇಂಜಿನಿಯರಿಂಗನಲ್ಲಿ ಡಿಪ್ಲೊಮಾ ಪಡೆದರೂ ಕನ್ನಡ ಸಾಹಿತ್ಯವೇ ಅವರನ್ನು ಸೆಳೆದಿದ್ದರಿಂದ ನಂತರದಲ್ಲಿ ಕನ್ನಡ ಎಂ ಎ ಮಾಡಿದರು. 
ಕಲ್ಬುರ್ಗಿಯಲ್ಲಿ ನಡೆದ ಎಂಭತ್ತೈದನೇ ಅಖಿಲ ಭ್ಹಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. 
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ಡಿವಿಜಿ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ಅವರ ಮುಡಿಯಲ್ಲಿವೆ. ಅವರ ಬಗ್ಗೆ ಇನ್ನಷ್ಟು ಮಾಹಿತಿ.

೧.ಡಾ ಎಚ್ ಎಸ್ ವೆಂಕಟೇಶ ಮೂರ್ತಿ ಅವರ ಮೊದಲ ಕವನ ಸಂಕಲನದ ಹೆಸರೇನು?  
       *'ಪರಿವೃತ್ತ' 

೨.ಡಾ ಎಚ್ ಎಸ್ ವೆಂಕಟೇಶ ಮೂರ್ತಿ ಅವರು ಮಹಾ ಪ್ರಬಂಧದ ವಸ್ತು ಯಾವುದು? 
       *'ಕನ್ನಡದಲ್ಲಿ ಕಥನ ಕವನಗಳು'

೩.ಡಾ ಎಚ್ ಎಸ್ ವೆಂಕಟೇಶ ಮೂರ್ತಿ ಅವರ ಎರಡು ಕಥಾ ಸಂಕಲನಗಳು ಯಾವುವು? 
       *'ಬಾನಸವಾಡಿಯ ಬೆಂಕಿ' ಮತ್ತು 'ಪುಟ್ಟಾರಿಯ ಮತಾಂತರ'

೪.ಡಾ ಎಚ್ ಎಸ್ ವೆಂಕಟೇಶ ಮೂರ್ತಿ ಅವರು ಅನುವಾದಿಸಿದ ಕಾಳಿದಾಸನ ಕಾವ್ಯ ಯಾವುದು? 
       *'ಋತುಸಂಹಾರ' ವನ್ನು 'ಋತುವಿಲಾಸ' ಎಂದು ಅನುವಾದಿಸಿದ್ದಾರೆ. ಈ ಕೃತಿಗೆ ಕೇಂದ್ರ ಸಾಹಿತ್ಯ  ಅಕಾಡೆಮಿ ಅನುವಾದ ಪುರಸ್ಕಾರ ಲಭಿಸಿದೆ.

೫.ಡಾ ಎಚ್ ಎಸ್ ವೆಂಕಟೇಶ ಮೂರ್ತಿ ಅವರ ಆತ್ಮಕಥನದ ಹೆಸರೇನು? 
       *'ಎಚ್ಚೆಸ್ವಿ ಅನಾತ್ಮ ಕಥನ'

೬.ಡಾ ಎಚ್ ಎಸ್ ವೆಂಕಟೇಶ ಮೂರ್ತಿ ಅವರು ಟಿ ಎನ್  ಸೀತಾರಾಂ ಅವರ ಯಾವ ಧಾರಾವಾಹಿಗೆ  ಶೀರ್ಷಿಕೆ ಗೀತೆ ರಚಿಸಿದ್ದಾರೆ? 
       *'ಮುಕ್ತಾ'

೭.ಡಾ ಎಚ್ ಎಸ್ ವೆಂಕಟೇಶ ಮೂರ್ತಿ ಅವರ ಮಹಾ ಕಾವ್ಯ ಯಾವುದು? 
        * 'ಬುದ್ಧ ಚರಣ'

೮.ಡಾ ಎಚ್ ಎಸ್ ವೆಂಕಟೇಶ ಮೂರ್ತಿ ಅವರ ಯಾವ ಯಾವ ಕೃತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ ಬಂದಿದೆ? 
       *ಸಿಂದಬಾದನ ಆತ್ಮಕಥೆ(ಕವನ ಸಂಕಲನ)
       *ಹರಿಗೋಲು(ಕವನ ಸಂಕಲನ)
       *ಅಗ್ನಿಮುಖಿ( ಕಾದಂಬರಿ)
       *ಒಂದು ಸೈನಿಕ ವೃತ್ತಾಂತ( ನಾಟಕ)
       *ಹೂವಿನ ಶಾಲೆ( ಮಕ್ಕಳ ಸಾಹಿತ್ಯ)

೯.ಡಾ ಎಚ್ ಎಸ್ ವೆಂಕಟೇಶ ಮೂರ್ತಿ ಅವರ ವೈಚಾರಿಕ ಪ್ರಬಂಧ ಸಂಪುಟದ ಹೆಸರೇನು?
       * 'ಈ ಮುಖೇನ'

೧೦.ಡಾ ಎಚ್ ಎಸ್ ವೆಂಕಟೇಶ ಮೂರ್ತಿ ಅವರು ನಿರ್ದೇಶಿಸಿದ ಸಿನಿಮಾ ಯಾವುದು?
       *'ಹಸಿರು ರಿಬ್ಬನ್'



Monday, May 5, 2025

ಒಂದು ಘಟನೆ - ಕೃಪೆ: ವಾಟ್ಸಾಪ್

 ಹರಿದುಹೋದ ಧೋತಿ ಮತ್ತು ಹರಿದ ಅಂಗಿಯನ್ನು ಧರಿಸಿದ ವ್ಯಕ್ತಿ ತನ್ನ 15-16 ವರ್ಷದ ಮಗಳ ಜೊತೆ 

ದೊಡ್ಡ ಹೋಟೆಲ್ ಗೆ ಹೋದರು. ಇಬ್ಬರೂ ಕುರ್ಚಿಯ ಮೇಲೆ ಕುಳಿತಿದ್ದನ್ನು ನೋಡಿ , ವೇಟರ್ ಬಂದು ಎರಡು ನೀರಿನ  ಲೋಟ ಇಟ್ಟು ಕೇಳಿದ. ತಮಗೇನು ಬೇಕು? ಆಗ ಆ ವ್ಯಕ್ತಿ

" ನನ್ನ ಮಗಳಿಗೆ ಹತ್ತನೇ ತರಗತಿಯಲ್ಲಿ ಜಿಲ್ಲೆಗೆ ಪ್ರಥಮ ಬಂದರೆ ನಗರದ ಅತಿದೊಡ್ಡ ಹೋಟೆಲ್ ನಲ್ಲಿ ದೋಸೆ ತಿನ್ನಿಸುತ್ತೇನೆ ಎಂದು ಭರವಸೆ ನೀಡಿದ್ದೆ.

ಇದು  ಆ ಭರವಸೆಯನ್ನು ನನ್ನ  ಮಗಳು ಈಡೇರಿಸಿದ್ದಾಳೆ. ದಯವಿಟ್ಟು ಮಗಳಿಗಾಗಿ ಒಂದು ದೋಸೆ ತನ್ನಿ. ? ವೇಟರ್ ಕೇಳಿದ " ಆಯಿತು ತಮಗೇನು ತರಬೇಕು?"   ನನ್ನ ಬಳಿ ಕೇವಲ ಒಂದು ದೊಸೆ ಸಾಕಾಗುವಷ್ಟು ಮಾತ್ರ ಹಣವಿದೆ ಅವಳಿಗಷ್ಟೆ ಕೊಟ್ಟರೆ ಸಾಕು.ಎಂದ.ಈ  ಮಾತು ಕೇಳಿ ವೇಟರ್ ನ ಮನಸು ಕರಗಿತು. ಮಾಲೀಕನ ಬಳಿ ಹೋಗಿ   ಅವನು ವ್ಯಕ್ತಿ ಮತ್ತು ಮಗಳ ಕಥೆ ಹೇಳಿದ.ಮುಂದುವರಿದು ಇವರಿಬ್ಬರಿಗೂ ನನ್ನ ಪರವಾಗಿ ತಿಂಡಿ  ನೀಡಬೇಕೆಂದು ನಿರ್ಧರಿಸಿದ್ದೇನೆ.  ನೀವು ಅವರ ಬಿಲ್ ಹಣವನ್ನು ನನ್ನ ಸಂಬಳದಿಂದ ಕಡಿತಗೊಳಿಸಬಹುದು. ಈ ಮಾತನ್ನು ಕೇಳಿದ ಹೊಟೆಲ್ ಮಾಲಿಕನಿಗೂ ಅವರಿಬ್ಬರ ಮೇಲೆ ಮರುಕವಾಯಿತು ಹಾಗೂ ವೆಯ್ಟರ್ ನ ಅಭಿಮಾನ ಕಂಡು  ಸಂತುಷ್ಟನಾಗಿ "ಅವರಿಬ್ಬರಿಗೆ  ಹೋಟೆಲ್ ಪರವಾಗಿ ಇಂದು ನಾವು ಅಭಿನಂದನಾ ಪಾರ್ಟಿ ಕೊಡೋಣ ಎಂದು ಮಾಲೀಕರು ಹೇಳಿದರು".  

ಹೋಟೆಲ್ ಮಾಲೀಕರು ಎಲ್ಲ ಸಿಬ್ಬಂದಿಯವರನ್ನು ಸೇರಿಸಿ ಟೇಬಲ್ ನ್ನು ಚೆನ್ನಾಗಿ ಅಲಂಕರಿಸಲು ಹೇಳಿದರು.ಹಾಗೂ ಬಡ ಹುಡುಗಿಯ ಯಶಸ್ಸನ್ನು ಗ್ರಾಹಕರೊಂದಿಗೆ ಸಂಭ್ರಮಿಸಿ ಅವರಿಬ್ಬರಿಗೆ ಹೊಟ್ಟೆ ತುಂಬುವಷ್ಟು ತಿಂಡಿ  ಹಾಗೂ ಸಿಹಿ ಹಂಚಿ ಆಚರಿಸಿದರು.ಜೊತೆಗೆ ಮಾಲೀಕರು   ದೊಡ್ಡ ಚೀಲದಲ್ಲಿ  ಸಿಹಿ ತಿಂಡಿ ಪ್ಯಾಕ್ ನೀಡಿ ತಮ್ಮ ನೆರೆಹೊರೆಯಲ್ಲಿ ಹಂಚಲು  ಕೊಟ್ಟರು. ಇಷ್ಟೆಲ್ಲಾ ಗೌರವ ಪಡೆದ ಅವರಿಗೆ ಹೊಟೆಲ ನವರ ಬಗ್ಗೆ ಧನ್ಯತಾಭಾವದಿಂದ ಕಣ್ಣಲ್ಲಿ ನೀರು ಜಿನುಗತೊಡಗಿತ್ತು.                                                        .

ಸಮಯ ಕಳೆಯಿತು. ಒಂದು ದಿನ ಅದೇ ಹುಡುಗಿ I.A.S. ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಅದೇ ಊರಿಗೆ ಬಂದಳು. ಮೊದಲು ಆಪ್ತ ಸಹಾಯಕನನ್ನು ಅದೇ ಹೋಟೆಲ್ ಗೆ ಕಳುಹಿಸಿ, "ಕಲೆಕ್ಟರ್ ಸಾಹಿಬಾ" ತಿಂಡಿ ತಿನ್ನಲು ಬರುತ್ತಾರೆ ಎಂದು ಹೊಟೆಲ್ ಮಾಲಿಕರಿಗೆ ತಿಳಿಸುವಂತೆ ಹೇಳಿದರು. ಹೋಟೆಲ್ ಮಾಲೀಕರು ತಕ್ಷಣ  ಹೊಟೆಲ್ ಹಾಗೂ ಟೇಬಲ್ ಗಳನ್ನು ತಮ್ಮ ಸಹಾಯಕರ  ಸಹಾಯದಿಂದ ಸುಂದರವಾಗಿ ಅಲಂಕರಿಸಿದರು. ಈ ಸುದ್ದಿ ಕೇಳಿ ಇಡೀ ಹೋಟೆಲ್ ಗ್ರಾಹಕರಿಂದ ತುಂಬಿ ತುಳುಕಿತು.

ಕಲೆಕ್ಟರ್ ತನ್ನ ಪೋಷಕರೊಂದಿಗೆ ಹೋಟೆಲ್ ತಲುಪಿದರು.  ಎಲ್ಲರೂ ಅವರ ಗೌರವಕ್ಕೆ ನಿಂತರು. ಹೋಟೆಲ್ ಮಾಲೀಕರು ಅವರಿಗೆ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.  ಅವಳು ನೇರವಾಗಿ  ಹೋಟೆಲ್ ಮಾಲೀಕ ಮತ್ತು ವೆಟರ್ ನ ಕಾಲಿಗೆ  ನಮಸ್ಕರಿಸಿ ಹೇಳಿದಳು - ' ಬಹುಶಃ ನೀವಿಬ್ಬರೂ ನನ್ನನ್ನು ಗುರುತಿಸಲಿಲ್ಲ. ದೋಸೆ ಕೊಡೋಕೆ ಅಪ್ಪನ ಬಳಿ ದುಡ್ಡಿಲ್ಲದ ಹುಡುಗಿ ನಾನು. ಆ ದಿನ ನೀವಿಬ್ಬರೂ ಮಾನವೀಯತೆಯು ಇನ್ನೂ ಇದೆ ಎನ್ನುವದಕ್ಕೆ ನೈಜ  ಉದಾಹರಣೆ ಕೊಟ್ಟಿದ್ದಿರಿ. ನನ್ನ ನೆರೆಹೊರೆಗೆ ಹಂಚಲು ಸಿಹಿತಿಂಡಿಯ ಪ್ಯಾಕ್  ನೀಡಿ ಗೌರವಿಸಿದ್ದಿರಿ.

 ನಿಮ್ಮಿಬ್ಬರಿಂದಲೇ ಇಂದು ನಾನು ಈ ಹಂತಕ್ಕೆ ಬರಲು ಪ್ರಯತ್ನ ಪಟ್ಟೆ . ನಾನು ನಿಮ್ಮಿಬ್ಬರನ್ನು ಯಾವಾಗಲೂ  ನೆನಪಿನಲ್ಲಿಟ್ಟುಕೊಳ್ಳುತ್ತೇನೆ. ಇವತ್ತು ಈ ಪಾರ್ಟಿ ನನ್ನಿಂದ. ಎಲ್ಲಾ ಗ್ರಾಹಕರು ಮತ್ತು ಹೋಟೆಲ್ ಸಿಬ್ಬಂದಿಗಳ ಬಿಲ್ ನಾನು ಕಟ್ಟುತ್ತೇನೆ.  ಇವತ್ತಿನಿಂದ ನಿಮ್ಮಿಬ್ಬರ ಸುಖ ದುಃಖಗಳಿಗೆ ನಾನೂ ಭಾಗಿ.ಎಂದು ಹೇಳಿದಳು.ಇವತ್ತು ಹೊಟೆಲ್ ಮಾಲಿಕ  ಹಾಗೂ ವೆಯ್ಟರನ ಕಣ್ಣುಗಳು ತೆವ ವಾಗಿದ್ದವು.     

 ಯಾವುದೇ ಬಡವರ ಬಡತನವನ್ನು ನೋಡಿ ಅಪಹಾಸ್ಯ ಮಾಡುವ ಬದಲು, ಅವರ ಪ್ರತಿಭೆಯನ್ನು ಸರಿಯಾಗಿ ಗೌರವಿಸಿದರೆ ಆ ಸಂತೃಪ್ತ ಭಾವ ಅವರಲ್ಲಿ ಯಾವತ್ತೂ ಹಚ್ಚಹಸುರನಾಗಿ ಇರುತ್ತದೆ.    

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......