Showing posts with label ಈಶ್ವರ ಸಣಕಲ್ಲ. Show all posts
Showing posts with label ಈಶ್ವರ ಸಣಕಲ್ಲ. Show all posts

Friday, June 24, 2016

"ಕೋರಿಕೆ" - ಈಶ್ವರ ಸಣಕಲ್ಲ


ಜಗವೆಲ್ಲ ನಗುತಿರಲಿ!
ಜಗದಳುವು ನನಗಿರಲಿ!
ನಾನಳಲು, ಜಗವೆನ್ನನೆತ್ತಿಕೊಳದೇ?
ನಾ ನಕ್ಕು, ಜಗವಳಲು ನೋಡಬಹುದೇ?
ತೆರವಾಗಿ ನನ್ನೆದೆಯು,
ಧರೆಯೆದೆಯು ಉಕ್ಕಿರಲಿ!
ಧರೆಯೊಳಗೆ ತೇಲಿಸುವೆನೆನ್ನೆದೆಯನು!
ಧರೆ ಬತ್ತಿ, ಎನ್ನೆದೆಯು ಉಕ್ಕಲೇನು?
ಪೊಡವಿಯೈಸಿರಿವಡೆದು,
ಬಡತನವು ನನಗಿರಲಿ
ಕೈಯೊಡ್ಡೆ ಪೊಡವಿಯೆನಗಿಕ್ಕದೇನು?
ಪೊಡವಿಯೇ ಮೈಯಳಿಯೆ, ಮಾಡಲೇನು?
ವಿಶ್ವವನು ತುಂಬಿರುವ
ಈಶ್ವರನೆ ಅಳತೊಡಗೆ,
ಸೈತಿಡಲು, ಸೈಪಿಡಲು ಬರುವನಾವಂ?
’ಹೇ ತಂದೆ’,ಎನಲೆನ್ನನವನೆ ಕಾವಂ!

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...