Showing posts with label ವಿವೇಕ ಬೆಟ್ಕುಳಿ. Show all posts
Showing posts with label ವಿವೇಕ ಬೆಟ್ಕುಳಿ. Show all posts

Friday, February 14, 2020

ಅಪೇಕ್ಷೆಯ ಒತ್ತಡದಲ್ಲಿ ಪ್ರೀತಿ


ಅಪೇಕ್ಷೆಯ ಒತ್ತಡದಲ್ಲಿ ಪ್ರೀತಿ..


    ಮನುಷ್ಯ ಜೀವಿಗಳಿಗೆ ಪ್ರೀತಿ ಎಂಬುದು ಬೇಕೆ ಬೇಕು. ಪ್ರೀತಿ ಎಂಬುದು ಸ್ವಾಭಾವಿಕವಾಗಿಅಪೇಕ್ಷೆಯ ಒತ್ತಡದಲ್ಲಿ ಪ್ರೀತಿ..

 ಇರಬೇಕು ವಿನಃ ಅದು ಒಬ್ಬರ ಅಪೇಕ್ಷೆ ಆಗಬಾರದು. ಅತಿಯಾದ ಅಪೇಕ್ಷೆಯಿಂದ ಪ್ರೀತಿಯೂ ಇತ್ತೀಚಿನ ದಿನಗಳಲ್ಲಿ ಅರ್ಥ ಕಳೆದು ಕೊಳ್ಳುತ್ತಿರುವುದನ್ನು ಗಮನಿಸಬಹುದಾಗಿದೆ. ಪ್ರತಿಯೊಂದು ಮಾನವ ಜೀವಿಗಳ ಸಂಬಂಧಗಳಲ್ಲಿ ಪರಸ್ಪರ ಪ್ರೀತಿ ಇದ್ದೇ ಇರುವುದು. ಪ್ರೀತಿ ಮತ್ತು ಅಪೇಕ್ಷೆ ಒಂದಕ್ಕೊಂದು ಅವಿನಾಭಾವ ಸಂಬಂಧವನ್ನು ಹೊಂದಿರುವುದು. ಆದರೇ ಬದಲಾಗುತ್ತಿರುವ ಸಮಾಜದಲ್ಲಿ ಅದಕ್ಕೆ ತಕ್ಕಂತೆ ಬದಲಾಗುತ್ತಿರುವ ಜೀವನ ಶೈಲಿಯಲ್ಲಿ ಪ್ರೀತಿ ಮತ್ತು ಅಪೇಕ್ಷೆಗಳ ನಡುವಿನ ಸಂಬಂಧ ಬಿಗಡಾಯಿಸುತ್ತಿದೆ. ಇದರ ಪರಿಣಾಮವಾಗಿ ಇಂದು ವೃದ್ಧಾಶ್ರಮಗಳು, ಚಿಕ್ಕ ಕುಟುಂಬಗಳು, ವಿವಾಹ ವಿಚ್ಛೇದನಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಅಣ್ಣ-ತಮ್ಮ ಅಕ್ಕ-ತಂಗಿಯ ಸಂಬಂಧಗಳು ದ್ವೇಷದ ಸಂಬಂಧಗಳಾಗಿ ಬದಲಾಗುತ್ತಿರುವುದು. ಅತಿಯಾದ ಅಪೇಕ್ಷೆ ಎಂಬುದು ಪ್ರೀತಿಯನ್ನು ಒತ್ತಡದಲ್ಲಿ ಸಿಲುಕಿಸುತ್ತಿರುವದನ್ನು  ಕಾಣಬಹುದಾಗಿದೆ.
ಅಪ್ಪ ಅಮ್ಮನ ಅಪೇಕ್ಷೆಯಂತೆ ಮಗ-ಮಗಳು ಇಲ್ಲ ಅಥವಾ ನಡೆದುಕೊಳ್ಳಲಿಲ್ಲ ಎಂದಾಗ ಅಪ್ಪ-ಅಮ್ಮ ಹಾಗೂ ಮಕ್ಕಳು ಎಲ್ಲರೂ ದುಖ: ಪಡುವರು. ತನ್ನ ಮಗ-ಮಗಳು ತಾನು ಹೇಳಿದ ಹಾಗೇ ಕೇಳಬೇಕು, ಅವರು ಮಾಡುವ ಕೆಲಸ ಅವರ ಜೀವನ ಎಲ್ಲವು ತಾನು ಹೇಳಿದಂತೆ ಇರಬೇಕು ಎಂದು ಪಾಲಕರು ಬಯಸುವದು ಒಂದು ಕಡೆಯಾದರೇ, ಈಗೀನ ಬದಲಾಗುತ್ತಿರುವ ಜೀವನ ಶೈಲಿಯಲ್ಲಿ ವಿಭೀನ್ನವಾಗಿ ಬದುಕು ಸಾಗಿಸುತ್ತಿರುವ ಮಕ್ಕಳ ನಡುವೆ ಪರಸ್ಪರ ಹೊಂದಾಣಿಕೆ ವಿರಳವಾಗಿದೆ.  ಇಂದು ಪಾಲಕರು ಮತ್ತು ಮಕ್ಕಳ ನಡುವಿನ ಪ್ರೀತಿ ಎಂಬುದು ಈ ಕಾರಣಕ್ಕಾಗಿ ಅರ್ಥ ಕಳೆದುಕೊಳ್ಳುತ್ತಿರುವುದು. 
ಗಂಡ ಹೆಂಡತಿಯ ಪ್ರೀತಿಯು ಮದುವೆಯಾಗಿ ಒಂದು ವರ್ಷದಲ್ಲಿ ಅತಿಯಾಗಿ ಇರುವುದು. ಕಾಲ ಕಳೆದಂತೆ ಅಲ್ಲಿಯೂ ಪ್ರೀತಿಯ ಪ್ರಮಾಣ ಕಡಿಮೆಯಾಗುತ್ತಾ ಹೋಗುವುದು. ಆದರೂ ಗಂಡ ಹೆಂಡತಿ ನಡುವೆ ಪ್ರೀತಿಯ ಸಾಕ್ಷೀಯಾಗಿ ಹುಟ್ಟುವ ಮಕ್ಕಳು ಆ ನಂತರದ ದಿನಗಳಲ್ಲಿ ಗಂಡ ಹೆಂಡತಿಗೆ ಬದುಕುವ ಭರವಸೆ ನೀಡುವ ಕಿರಣವಾಗಿ ಕಾಣುವರು. ಬಹುತೇಕ ಹೆಚ್ಚಿನ ದಾಂಪತ್ಯ ಜೀವನ ಸಾಗುವುದು ಆ ಒಂದು ನಂಬಿಕೆಯಿಂದ ಮಾತ್ರ. ಇಂದಿನ ದಿನಗಳಲ್ಲಿ ವೈವಾಹಿಕ ಜೀವನವನ್ನು ಪರಸ್ಪರ ಅನ್ಯೋನ್ಯವಾಗಿ ಅನುಭವಿಸುವರಿಗಿಂತ ಅನಿವಾರ್ಯವಾಗಿ ಜೀವನ ಸಾಗಿಸುವವರೇ ಹೆಚ್ಚಾಗಿರುವರು. ಪರಸ್ಪರ ದಂಪತಿಗಳಲ್ಲಿ ಪ್ರೀತಿ ಇದ್ದೇ ಇರುವುದು ಆದರೇ ಪರಸ್ಪರರ ಆಕಾಂಕ್ಷೆಗಳು ಹೆಚ್ಚಾದಾಗ ಅವರ ನಡುವಿನ ಪ್ರೀತಿ ಒತ್ತಡದಿಂದಾಗಿ  ಮನಸ್ಥಾಪದ ಸ್ಥಿತಿಗೆ ಕೊಂಡೊಯ್ಯುವುದು.  
ಅಣ್ಣ ತಂಗಿ ನಡುವೆ ಉತ್ತಮವಾದ ಪ್ರೀತಿ ಒಂದು ಹಂತದ ವರೆಗೆ ಇರುವುದು. ಯಾವಾಗ ಸ್ವಂತಂತ್ರವಾಗಿ ಆಲೋಚನೆ ಮಾಡಿ ತಮಗೆ ಬೇಕಾದ ಗೆಳೆಯ ಗೆಳತಿಯನ್ನು ನೋಡುಕೊಳ್ಳಲು ಅವರವರು ನೋಡುವರೋ ಅಲ್ಲಿ ಅಭಿಪ್ರಾಯ ಭೇದ ಪ್ರಾರಂಭವಾಗುವುದು. ವಯಸ್ಸಿಗೆ ತಕ್ಕಂತ ಅಗತ್ಯಗಳು ಬದಲಾವಣೆ ಆಗುವುದು ಎಂಬುದನ್ನು ಎಲ್ಲರೂ ಅರ್ಥಮಾಡಿಕೊಂಡು ಸನ್ನೀವೇಶವನ್ನು ಹಾಗೇ ಸ್ವೀಕರಿಸಿದರೇ ಯಾವುದೇ ಸಮಸ್ಯೆ ಇರುವುದಿಲ್ಲ. ಅಣ್ಣ ತಂಗಿಯ ನಡುವೆ ತಂಗಿಯೂ ತನಗೆ ಇಷ್ಟವಾದವನನ್ನು ಪ್ರೀತಿಸುವುದು ಅಣ್ಣನಿಗೆ ಇಷ್ಟವಿರುವುದಿಲ್ಲ. ಬದಲಾಗಿ ಮನೆಯವರು ನೋಡಿದ ವ್ಯಕ್ತಿಯೊಂದಿಗೆ ಸಾಂಪ್ರದಾಯಿಕವಾಗಿ ತಂಗಿಯ ಮದುವೆ ಮಾಡುವುದು ಅಣ್ಣನ ಕನಸಾಗಿರುವುದು. ಅಣ್ಣನ ಈ ರೀತಿಯ ಕನಸೆ ತಂಗಿಯ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವುದು. ಆದರೇ ಅಣ್ಣನಾದವನು ಯಾರನ್ನೇ ಇಷ್ಟ ಪಟ್ಟರು ಅವರಿಗೆ ತಂಗಿಯಾದವಳು ಕುಟುಂಬ ಮತ್ತು ಅಣ್ಣನ ನಡುವೆ ಕೊಂಡಿಯಂತೆ ಇರಬೇಕು ಅಂದು ಅಣ್ಣ ಬಯಸುವನು. ಈ ರೀತಿಯಾಗಿ ತಮ್ಮ ಅಗತ್ಯಕ್ಕೆ/ಅಪೇಕ್ಷೇಗೆ ತಕ್ಕಂತೆ ಸಂಬಂಧಗಳ ನಡುವೆ ಪ್ರೀತಿಯನ್ನು ಬಳಸಿಕೊಳ್ಳುವುದರಿಂದ ನೈಜ ಪ್ರೀತಿ ಅರ್ಥ ಕಳೆದುಕೊಳ್ಳುತ್ತಿರುವುದು. 
ಹುಡುಗ ಹುಡುಗಿ ಪ್ರೀತಿ : ಯೌವನದಲ್ಲಿ ಪ್ರೀತಿ ಪ್ರೇಮ ಸಹಜವಾಗಿರುವುದು. ಪ್ರಾರಂಭದಲ್ಲಿ ಪ್ರೀತಿಯ ಅನುಭವ ಸಹಾ ಪರಸ್ಪರಿರಿಗೆ ಸಂತೋಷವನ್ನು ನೀಡುವುದು. ಪ್ರೀತಿ ಪ್ರಾರಂಭವಾದ ದಿನಗಳಲ್ಲಿ ಪರಸ್ಪರ ಯಾವ ತ್ಯಾಗಕ್ಕೂ ಸಿದ್ದರಾಗುವರು. ಕಾಲ ಕಳೆದಂತೆ  ಪ್ರೀತಿಯ ನೈಜತೆ ಅರ್ಥವಾಗಲು ಪ್ರಾರಂಭವಾಗುವುದು ಪರಸ್ಪರರ ಅಪೇಕ್ಷೆಗಳು ಬದುಕುವ ಶೈಲಿ, ಸಮಾಜವನ್ನು ನೋಡುವ ರೀತಿ ಈ ಎಲ್ಲವೂ ಸಹಾ ಪ್ರೀತಿಯ ಮೇಲೆ ಪರಿಣಾಮ ಬೀರಲು ಪ್ರಾರಂಭಿಸುವುದು. ಪ್ರಾರಂಭದ ದಿನದಿಂದ ಕೊನೆತನಕ ಆಯಾ ಕಾಲಘಟ್ಟಕೆ ತಕ್ಕಂತೆ ಅಥರ್ೈಸುವಿಕೆ ಪ್ರೀತಿ ಇದ್ದರೇ ಅದೇ ನೈಜ ಪ್ರೀತಿಯಾಗಿರುವುದು. ಬದಲಾಗಿ ದೈಹಿಕ ಆಕ್ಷಾಂಕ್ಷೆ, ಆಸ್ತಿಯ ಆಸೆ, ನೌಕರಿಯ ಆಸೆ, ಸೌಂದರ್ಯ ಈ ಎಲ್ಲಾ ಅಪೇಕ್ಷೆಗಳೆ ಪ್ರೀತಿಸಲು ಮೂಲ ಕಾರಣಾವಾದರೆ ಆ ಪ್ರೀತಿ ಅರ್ಥ ಕಳೆದುಕೊಳ್ಳುವುದರಲ್ಲಿ ಯಾವ ಸಂದೇಹವೂ ಇಲ್ಲ. 
  ಒಟ್ಟಾರೆಯಾಗಿ ಅಪೇಕ್ಷೆ ಎಂಬುದು ಅತಿಯಾದಾಗ ಸಂಬಂಧಗಳ ನಡುವಿನ ಪ್ರೀತಿ ತಾನಾಗಿಯೇ ಅರ್ಥ ಕಳೆದುಕೊಳ್ಳುವುದನ್ನು ಕಾಣಬಹುದಾಗಿದೆ. ನಮ್ಮ ಅತಿಯಾದ ಅಪೇಕ್ಷೆಯ ಮೇಲೆ ಹಿಡಿತವನ್ನು ಸಾಧಿಸಿ ಎಲ್ಲ ರೀತಿಯ ಸಂಬಂಧಗಳನ್ನು ಪ್ರೀತಿಯಿಂದ ಉಳಿಸಿಕೊಳ್ಳುವ ಬಗ್ಗೆ ಈ ಸಂದರ್ಭದಲ್ಲಿ ಅವಲೋಕಿಸಿಕೊಂಡರೆ ಒಳ್ಳೆಯದಲ್ಲವೇ?
                                                                                                                              .ವಿವೇಕ ಬೆಟ್ಕುಳಿ

Thursday, March 8, 2018

ಮಹಿಳಾ ಸಮಾನತೆ ಎಂಬ ಉತ್ತಮ ಚಚಾ೯ ವಿಷಯ.



  ಮಾರ್ಚ 8 ರಂದು ವಿಶ್ವ ಮಹಿಳಾ ದಿನಾಚರಣೆಯನ್ನು ನಮ್ಮ ದೇಶದಲ್ಲಿಯೂ ಆಚರಿಸಲಾಗುವುದು. ಈ ದಿನದಂದು ಮಹಿಳೆಯರ ಬಗ್ಗೆ ಅವರ ಸಾಧನೆ ಬಗ್ಗೆ ಒಳ್ಳೆಯ ಮಾತುಗಳು ಕೇಳಿಬರುವುದು. ಜೊತೆಗೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರ ಸನ್ಮಾನವನ್ನು ಮಾಡಲಾಗುವುದು. ವರ್ಷದಿಂದ ವರ್ಷಕ್ಕೆ ಈ ಕಾರ್ಯಕ್ರಮ ಹೆಚ್ಚಾಗುತ್ತಾ ಇರುವುದು.. ಸ್ವತಂತ್ರ ಭಾರತದ ನಂತರದ ಏಳ್ಗೆಯಲ್ಲಿ ಮಹಿಳೆಯರ ಕೊಡುಗೆ ಬಹು ಅತ್ಯಮೂಲ್ಯವಾದದ್ದು ಆಗಿರುವುದು.
ಆಳುವ ಸಕರ್ಾರಗಳು ಕಾಲ ಕಾಲಕ್ಕೆ ಹಲವಾರು ಯೋಜನೆಯನ್ನು ಜಾರಿಗೊಳಿಸಿ ಮಹಿಳೆಯರ ಸಬಲೀಕರಣಕ್ಕೆ ಪ್ರಯತ್ನವನ್ನು ಮಾಡಿರುವುದು. ಅದರ ಪರಿಣಾಮವೇ ಇಂದು ವಿವಿಧ ಕ್ಷೇತ್ರದಲ್ಲಿ ಎಲ್ಲಾ ಹಂತದಲ್ಲಿ ಮಹಿಳಾ ಉದ್ಯೋಗಿಗಳು ಸಿಗುವರು. ಇವೆಲ್ಲವು ಸಹಾ ಮಹಿಳಾ ಸಬಲೀಕರಣದ ಪ್ರಮುಖ ಮೈಲಿಗಲ್ಲೆಂದು ಗುರುತಿಸಬಹುದಾಗಿದೆ.
ಇಂದಿಗೂ  ಮನೆಯಲ್ಲಿ  ಅಡುಗೆ ಕಾರ್ಯ ಮಹಿಳೆಯರ ತಲೆ ಮೇಲೆ ಇರುವುದು. ಗಂಡ, ಅತ್ತೆ, ಮಾವ, ಮಕ್ಕಳು ಈ ಭಾವನಾತ್ಮಕ ಸಂಬಂಧದ ಸುಳಿಯಲ್ಲಿ ಸಿಕ್ಕಿ ಅದರಿಂದ ಹೊರಗು ಬರಲಾಗದೇ ತಮ್ಮಜೀವನದ ಅತಿ ಹೆಚ್ಚು ಸಮಯವನ್ನು ಅಡುಗೆ ಮನೆಯಲ್ಲಿ, ಮನೆಗೆಲಸದಲ್ಲಿ ಕಳೆಯುವವರ ಸಂಖ್ಯೆ ಕಡಿಮೆಯಾಗಿಲ್ಲ.
ಅಡುಗೆಯ ಜೊತೆಗೆ ಮನೆಯ ಎಲ್ಲರ ಬಟ್ಟೆಯನ್ನು ಸ್ವಚ್ಛಗೊಳಿಸುವುದು, ಮನೆಯನ್ನು ಸ್ವಚ್ಛಮಾಡುವುದು,  ಈ ಎಲ್ಲಾ ಕಾರ್ಯಗಳು ಮಹಿಳೆಯರದ್ದೇ ಆಗಿದೆ. ಇವೆಲ್ಲ ಅವರ ಮೂಲಭೂತ ಕಾರ್ಯಗಳು ಎಂಬಂತೆ ಗಂಡಸರು ವತರ್ಿಸುವುದು ಇರುವುದು. ಬಹುತೇಕ ಎಲ್ಲಾ ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಮೊದಲು ಗಂಡಸರ ಊಟ ನಂತರದಲ್ಲಿ ಹೆಂಗಸರು ಊಟ ಮಾಡುವುದು ಸಾಮಾನ್ಯವಾಗಿದೆ. ಗಂಡಿನಷ್ಠೆ ಸಂಪಾದನೆ ಮಾಡುವ ಹೆಂಗಸರು ಸಹಾ ಮನೆಗೆ ಬಂದು ತನ್ನ ಮಹಿಳಾ ಕಾರ್ಯವನ್ನು ಮಾಡಲೆಬೇಕಾದ ಅನಿವಾರ್ಯತೆ ಇರುವುದು.
ಮಹಿಳೆಯ ಮೇಲೆ ಈ ರೀತಿಯ ದೌರ್ಜನ ನಡೆಸುವವರಲ್ಲಿ ಅಕ್ಷರಸ್ಥ ಪುರುಷರು, ಅದರಲ್ಲಿಯೂ ಸಮಾಜವನ್ನು ಬದಲಿಸುವ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಸಮಾಜ ಸೇವಿಗಳು, ರಾಜಕಾರಣಗಳು ಎಲ್ಲರೂ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತಾರೆ ಆದರೇ ಅವರವರ ಮನೆಯಲ್ಲಿ ನಡೆದುಕೊಂಡು ಬಂದ ಯಾವದೇ ಸಂಪ್ರದಾಯವನ್ನು ಬದಲಿಸಲು ಧೈರ್ಯ ತೋರಿಸುವುದಿಲ್ಲ. ಒಟ್ಟಾರೆ ಉತ್ತಮ ಭಾಷಣಕಾರರಾಗಿ, ವಿಚಾರವಾದಿಗಳಾಗಿ ವೇದಿಕೆಯಲ್ಲಿ ಮಾತನಾಡುವರು.
ನನ್ನ ಮನೆ ಮತ್ತು ಸುತ್ತಮುತ್ತಲಿನ ಸಮಾಜವನ್ನು ಗಮನಿಸಿದರೆ ಇಂದಿಗೂ ಮಹಿಳೆಗೆ ಸಮಾನ ಅವಕಾಶಗಳು ಸಿಗುತ್ತಾ ಇಲ್ಲ. ಕೆಲವೊಂದು ಕಾರ್ಯಕ್ಕೆ ಮಾತ್ರ ಮಹಿಳೆ ಸೀಮಿತವಾಗಿರುವಳು. ಬದಲಾವಣೆ ಬಯಸುವ ವ್ಯಕ್ತಿಗಳು, ಅದಕ್ಕೆ ಬದಲಾಗಲು ತಯಾರಾಗುವ ಮಹಿಳೆಯರು ತಾವಾಗಿಯೇ ತಮ್ಮ ತಮ್ಮ ಸ್ವತಂತ್ಯ, ಸಮಾನತೆ ಬಗ್ಗೆ ಧ್ವನಿ ಎತ್ತ ಬೇಕಾಗಿದೆ. ಇಲ್ಲವಾದರೇ ನಾವೆಲ್ಲ ಯೋಚಿಸುವ ಮಹಿಳಾ ಸಬಲೀಕರಣ ಕೇವಲ ಕನಸು ಮಾತ್ರ ಆಗಿರುವುದು.
ಪುರಾಣದ ಕಾಲದಿಂದ ಇಂದಿನ ಕಾಲಘಟ್ಟದ ವರೆಗೆ ಮಹಿಳೆ ನಡೆದ ದಾರಿಯನ್ನು ಅವಲೋಕಿಸುತ್ತಾ, ಇಂದಿಗೂ ಕೆಟ್ಟ ಸಂಪ್ರದಾಯವನ್ನು ಪಾಲಿಸುವ ಪ್ರಮುಖ ಸಂಘಟನೆಗಳ, ರಾಜಕೀಯ ವಿಚಾರಧಾರೆಗಳ ಬಗ್ಗೆ ಎಚ್ಚರಿಕೆಯಿಂದ ಇದ್ದು, ಅವಶ್ಯ ಇರುವಡೆ ಪ್ರತಿರೋಧವನ್ನು ಮಾಡುತ್ತಾ ಮಹಿಳೆಯರು ಮುಂದೆ ಬರಬೇಕಾಗಿದೆ. ಅದಕ್ಕೆ ತಕ್ಕದಾದ ವಾತಾವರಣವನ್ನು ಸೃಷ್ಠಿಸುವ ಜವಬ್ದಾರಿ ಪ್ರತಿಯೊಬ್ಬರದ್ದು ಆಗಿರುವುದು.


ವಿವೇಕ ಬೆಟ್ಕುಳಿ
vivekpy@gmail.com

8722954123


Saturday, January 28, 2017

ಮಕ್ಕಳನ್ನು ಯಂತ್ರಗಳನಾನ್ನಗಿಸುವ ವ್ಯವಸ್ಥೆ - ವಿವೇಕ ಬೆಟ್ಕುಳಿ,



ಹುಟ್ಟಿದಾಗ ಅಳುವ, ಆ ನಂತರದಲ್ಲಿ ಹಸಿವಾದಾಗ, ನೋವಾದಾಗ ಅಳುತ್ತಾ, ತನ್ನಷ್ಟಕ್ಕೆ ನಗುತ್ತಾ ಬೆಳೆಯುವ ಮಗು ತೊದಲು ಮಾತನಾಡಿದಾಗ...ಅಮ್ಮ, ಅಪ್ಪ...ಅಣ್ಣ  ಏನೇ ಹೇಳಿದರು ಮನೆ ಮಂದಿಯೆಲ್ಲಾ ಸಂತೋಷದಿಂದ ಆ ಮಗುವಿನ ಸಹಜತೆಯಿಂದ ಆಕಷಿ೯ತರಾಗುವರು. ಯಾವುದೇ ಹುದ್ದೆ, ಅಂತಸ್ತು ಯಾವುದೂ ಸಹಾ ಆ ಮಗುವಿಕೆ ತಿಳಿದರುವುದಿಲ್ಲ, ಮಗುವಿನ ಜನನ ಅದರ ಆಕರ್ಷಣೆಯಿಂದಾಗಿ ಮಗುವಿನ ತಾಯಿ ಸಹಾ ನಿಧಾನವಾಗಿ ಗೌರವಕ್ಕೆ ಅರ್ಹಳಾಗುವಳು. ಇಂತಹ ಮುಗ್ದ ಮನಸ್ಸಿನ ಮಕ್ಕಳು ಚಿಕ್ಕ ಪುಟ್ಟ ಹೆಜ್ಜೆಯನ್ನು ಇಡುತ್ತಾ ಮನೆಯೆಲ್ಲಾ ಓಡಾಡುವುದು. ಅದಕ್ಕೊಂದು ಹೆಸರು, ಜಾತಿ ನೀಡಿ ಯಾವಾಗ ನಾವು ಪ್ರತೇಕ ಗುರುತಿಸುವಿಕೆ ಪ್ರಾರಂಭ ಮಾಡುವೆವು. ಅಂದಿನಿಂದ ಮಕ್ಕಳು ತಮ್ಮತನವನ್ನು ಕಳೆದುಕೊಳ್ಳತೊಡಗುವರು. ಸಹಜವಾಗಿ ಇರುವ ಮಗುವಿಗೆ ಮನೆಯ ಅಂತಸ್ತು, ಅಪ್ಪ ಅಮ್ಮನ ಗೌರವ ಜಾತಿ, ಧರ್ಮದ ರೀತಿ ಈ ಎಲ್ಲವನ್ನು ಆ ಮಗುವಿನ ನಡುವಳಿಕೆ, ಆಹಾರ ವೇಷ ಭೂಷಣದಲ್ಲಿ ಒತ್ತಾಯವಾಗಿ ತುರುಕಲು ಪ್ರಾರಂಭಿಸುವೆವು. ಅದರ ಮುಂದುವರೆದ ಭಾಗವಾಗಿಯೇ ಶಾಲೆಗಳು ಸೃಷ್ಠಿಯಾಗಿರುವುದು. ಯಾವಾಗ ಮಗು ಶಾಲೆಗೆ ಹೋಗಲು ಪ್ರಾರಂಭ ಮಾಡುವುದೋ ಅಂದಿನಿಂದ ಮಗು ಯಾಂತ್ರಿಕ ಮಗುವಾಗಿರುವುದು, ವಿನಹ: ಸಹಜ ಮಗುವಾಗಿರದು. ಸಹಜ ಮಗುವನ್ನು ಯಾಂತ್ರಿಕ ಮಗುವನ್ನಾಗಿಸುವಲ್ಲಿ ಮುಖ್ಯವಾಗಿ ತಾಯಿ, ತಂದೆ ಹಾಗೂ ಶಾಲಾ ಶಿಕ್ಷಕರ ಪಾತ್ರ ಬಹುಮುಖ್ಯವಾಗಿರುವುದು. ಸ್ವಲ್ಪ ಸಹಜತೆ ಬಗ್ಗೆ ಮಾತನಾಡುವ ಅಜ್ಜ, ಅಜ್ಜಿ ಕಡೆ ಸಹಜವಾಗಿ ಮಗು ಆಕಷಿ೯ತವಾಗುವುದು. ಆದರೇ ಇಂದಿನ ಆದುನಿಕ ಯುಗದಲ್ಲಿ ವಯಸ್ಸಾದವರನ್ನು ವೃದ್ದಾಶ್ರಮದಲ್ಲಿ ಇಡುವ ವ್ಯವಸ್ಥೆ ಪ್ರಾರಂಭವಾಗಿರುವುದರಿಂದ ಮಗುವಿನ ಬಗ್ಗೆ, ಅದರ ಸ್ವಾತಂತ್ಯದ ಬಗ್ಗೆ ಮಾತನಾಡುವ ಯಾರು ಸಹಾ ಅದರ ಜೊತೆ ಇಲ್ಲದಂತೆ ಆಗಿರುವುದು. ಇಂತಹ ಸನ್ನಿವೇಶದಲ್ಲಿ ಖಾಸಗಿ ಶಾಲೆಗೆ ಹೋಗುವುದು, ಇಂಗ್ಲೀಷ ಮಾತನಾಡುವುದು, ಉತ್ತಮವಾದ ವೇಷ ಭೂಷಣ ಧರಿಸಿ ಬೇರೆ ಬೇರೆ ಭಾಷೆಯಲ್ಲಿ ಮಾತನಾಡುವುದು. ಒಟ್ಟಾರೆ ಎಲ್ಲರಕ್ಕಿಂತ ಮುಂದೆ ಬಂದು ಶಾಲೆಯಲ್ಲಿ ಉತ್ತಮ ವಿದ್ಯಾಥಿ೯ ಅನಿಸಿಕೊಳ್ಳುವುದೇ ಮಕ್ಕಳ ಮುಖ್ಯ ಕತ್ಯರ್ವವಾಗಿರುವುದು.


ಈ ಎಲ್ಲ ರೀತಿಯ ಪ್ರಯಾಣವನ್ನು ಮುಗಿಸಿ 15 ವರ್ಷಕ್ಕೆ ಕಾಲಿರಿಸದ ಮಕ್ಕಳು. ಯಂತ್ರಗಳಾಗಿರುವರು. ಭಾವನೆಗಳಿಗೆ ಬೆಲೆ ಇಲ್ಲದೆ, ತಪ್ಪು ಸರಿಯ ನಡುವಿನ ದಾರಿ ತಿಳಿಯದೇ, ಏನಾದರೂ ಮಾಡು ಉತ್ತಮವಾಗಿ ಅಂಕ ತೆಗೆದು ಹೆಚ್ಚು ಹಣ ಸಂಪಾದಿಸುವ ಕೆಲಸ ಮಾಡುವುದು. ತಮ್ಮ ಜೀವನದ ಗುರಿಯನ್ನಾಗಿ ಮಾಡಿಕೊಂಡು ಮಕ್ಕಳು ಮುಂದೆ ಸಾಗುವರು. ಇಂತಹ ಮಕ್ಕಳಿಗೆ ಅಜ್ಜ ಅಜ್ಜಿಯ ಪ್ರೀತಿ ಬೇಕಾಗಿಲ್ಲ, ಎತ್ತಿ ಆಡಿಸಿದ ಮನೆಮಂದಿಯ ಬಗ್ಗೆ ಕಲಿಕರವಿಲ್ಲ. ಏನಿದ್ದರು ಒಬ್ಬರನ್ನು ಹಿಂದೆ ಹಾಕಿ ಮುಂದೆ ಹೋಗುವುದು ಮಾತ್ರ ತಿಳಿದಿರುವುದು. ನನ್ನ ಆಸುಪಾಸಿನಲ್ಲಿ ನಮ್ಮ ಮನೆಯ ವಾತಾವರಣದಲ್ಲಿ ಹತ್ತಾರು ಮಕ್ಕಳನ್ನು ನಾನು ಕಳೆದ 15-20 ವರ್ಷದಿಂದ ನೋಡುತ್ತಾ ಇರುವೆನು. ವರ್ಷಗಳು ಕಳೆದಂತೆ ಈ ತರಹದ ವಿಷಕಾರಿ ವಾತಾವರಣ ಮಾತ್ರ ಹೆಚ್ಚಾಗುತ್ತಾ ಇರುವುದು. ಈ ಬಗ್ಗೆ ಗಂಭೀರವಾಗಿ ಯೋಚನೆ ಮಾಡಿ ಪರಿಹಾರ ಹುಡುಕುವ ಅಗತ್ಯವಿದೆ. ಇಲ್ಲವಾದರೇ ನಮ್ಮ ಮುಂದಿನ ದಿನಗಳಲ್ಲಿ ದ್ವೇಷ, ಅಸೂಯೆ, ಮೋಸ, ಯುದ್ದ, ಹಿಂಸೆ ಈ ಎಲ್ಲವುಗಳು ಜಗತ್ತಿನ ಎಲ್ಲಾ ಕಡೆಯಲ್ಲಿಯೂ ಮನೆ ಮನೆಗಳಲ್ಲಿಯೂ ಆವರಿಸುವುದು ಖಂಡಿತ.
ಪ್ರೀತಿ, ಪ್ರೇಮ ಶಾಂತಿಯ ಜಗತ್ತಿಗಾಗಿ, ನಮ್ಮ ಮನೆಗಾಗಿ, ಮಕ್ಕಳನ್ನು ಸಹಜವಾದ ವಾತಾವರಣದಲ್ಲಿ ಬೆಳಸಬೇಕಾಗಿದೆ. ಅದೇ ರೀತಿ ನಮ್ಮ ಸಂಪೂರ್ಣ ಶೈಕ್ಷಣಿಕ ವ್ಯವಸ್ಥೆಯನ್ನು ಬದಲಾವಣೆ ಮಾಡುವ ಅಗತ್ಯವಿದೆ. ಇದೇ ರೀತಿ ಶೈಕ್ಷಣಿಕ ವ್ಯವಸ್ಥೆ ಮುಂದುವರೆದರೆ ಬರುವ ಜಗತ್ತಿನಲ್ಲಿ ಮಕ್ಕಳು/ಜನರು ಗಳೆಂಬ ಯಂತ್ರಗಳು ಸಿಗುವುದು ವಿನಹ: ಭಾವನೆಗಳಿರುವ ಜೀವಿಗಳು ಸಿಗಲು ಸಾಧ್ಯವೇ ಇಲ್ಲ









Sunday, February 14, 2016

ಪ್ರೇಮಿಗಳ ದಿನಾಚರಣೆ ಪ್ರಯುಕ್ತ ಪ್ರೇಮ ಪತ್ರ - ವಿವೇಕ ಬೆಟ್ಕುಳಿ

ಪ್ರೀತಿಯ ಗೆಳತಿ,,,,,,,,,

    ನನಗೆ ಗೊತ್ತು ಕಣೆ ನಿನಗೆ ಈ ದಿನ ನಾನು ಕೆಂಪು ಗುಲಾಬಿ ಕೊಟ್ಟರೆ ತುಂಬಾ ಸಂತೋಷವಾಗುವುದು ಎಂದು. ಆದರೇ ಏನು ಮಾಡಲಿ, ನನ್ನ ಕುಟುಂಬದ ಬಗ್ಗೆ ಗೊತ್ತಲ್ಲ ನಿಜವಾಗಿ ನನ್ನ ಅಪ್ಪ ತುಂಬಾ ಲಿಬರಲ್ ಜಾತ್ಯಾತೀತ, ಆದರೇ ಅನಿವಾರ್ಯವಾಗಿ ಕಟ್ಟಾ  ಹಿಂದುತ್ವವನ್ನು ಪ್ರದಶಿ౯ಸುತ್ತಿರುವರು. ಅದರಿಂದಾಗಿಯೇ   ಇಂದು ನಮ್ಮ ಅಪ್ಪ ರಾಜಕೀಯದಲ್ಲಿ ಜಿಲ್ಲೆಯಲ್ಲಿ ಹೆಸರು ಪಡೆದಿರುವರು. ನನಗೂ ಹಿಂದುತ್ವದ ಹೆಸರಿನಲ್ಲಿ ಭಾವನೆಗಳನ್ನು ಅದುಮಿಕೊಳ್ಳಲು ಇಷ್ಟವಿಲ್ಲ ಗೆಳತಿ, ಆದರೂ ಅಪ್ಪನ ಪ್ರೆಸ್ಟಿಜ್, ರಾಜಕೀಯ ಭವಿಷ್ಯ ಎಲ್ಲವೂ ಇದರ ಜೊತೆ ಸೇರಿಕೊಂಡಿದೆ. ಅಕಸ್ಮಾತ ಆಗಿ ನಾನು ಪ್ರೇಮಿಗಳ ದಿನಾಚರಣೆಯಲ್ಲಿ ಭಾಗವಹಿಸಿ ನಿನೊಂದಿಗೆ ಕಾಲಕಳೆದರೆ ಖಂಡಿತಾ ನಮ್ಮ ಅಪ್ಪನಿಗೆ ಮುಂದಿನ ಬಾರಿ ಚುನಾವಣೆಗೆ ಟಿಕೇಟ್ ಸಿಗದು, ಉಳಿದ ಪಕ್ಷದವರಿಗೆ ನಾನೇ ಒಂದು ವಿಷಯವಾಗಿ ಬಿಡುವೆನು. ದಯವಿಟ್ಟು ಕ್ಷಮಿಸು ಗೆಳತಿ. ಜನವರಿ 1 ಹೊಸ ವರ್ಷಕ್ಕೂ ನಾನು ಬರಲಿಲ್ಲ. ಹೊಸವರ್ಷ ಆಚರಣೆಯಂದು ನಾನು ಮನೆಯಲ್ಲಿಯೇ ಇದ್ದೇ ಬರುವ ಮನಸ್ಸಿದರೂ  ಆ ದಿನವೂ ಇದೇ ಸ್ಥಿತಿ. ಏನು ಮಾಡಲಿ ಒಂದಡೇ ಸಮಾಜ, ಮನೆ, ಅಪ್ಪ, ಅಮ್ಮ ಇನ್ನೊಂದಡೆ ನೀನು ಯಾವುದನ್ನು ಆಯ್ಕೆ ಮಾಡಿಕೊಳ್ಳಲಿ? ನಾನು ತುಂಬಾ ದ್ವಂದದಲ್ಲಿ ಇರುವೆನು. ಆದರೇ ಒಂದಂತು ಸತ್ಯ ಗೆಳತಿ ಬರುವ ಯುಗಾದಿಯಂದು ನಾನು ನಿನ ಜೊತೆ ಖಂಡಿತಾ ಕಾಲ ಕಳೆಯುವೆನು. ಆ ದಿನ ನಮ್ಮ ಹಿಂದುಗಳಿಗೆ ನವ ವಷಾ౯ಚರಣೆಯ ಸಂದರ್ಭ ಮನೆಯಲ್ಲಿ ಸಹಾ ಯಾವುದೇ ಅನುಮಾನ ಬರದು. ಆ ದಿನಕ್ಕಾಗಿ ಕಾಯುತ್ತಿರುವೆ.. . ಇಂದು ಪ್ರೇಮಿಗಳ ದಿನಾರಣೆ ನಾನು ಖುದ್ದಾಗಿ ನಿನ್ನ ಜೊತೆ ಇದ್ದು ಕಾಲಕಳೆಯಲು ಆಗುತ್ತಿಲ್ಲ. ಈ ದಿನ ನಮ್ಮ ಅಪ್ಪನ ಜೊತೆ ದಿನಾಚರಣೆಯನ್ನು ವಿರೋಧಿಸಿ ಧರಣಿ ಮಾಡಬೇಕಾಗಿದೆ. ಅರ್ಥ ಮಾಡಿಕೊಳ್ಳುವೆ ಎಂಬ ನಂಬಿಕೆ ನನಗಿದೆ. ಏನೇ ಇರಲಿ ಚಿನ್ನಾ ಪ್ರೇಮಿಗಳ ದಿನಾಚರಣೆಯ ಈ ಸಂದರ್ಭದಲ್ಲಿ ನಿನ್ನ ಪ್ರೇಮಿಯ ಕಡೆಯಿಂದ ಮನಸ್ಸಿನಾಳದ ಶುಭಾಶಯಗಳು.........
ಇಂತಿ ನಿನ್ನ ಕನಸಿನ ಗೆಳೆಯ
ಕಟ್ಟಾ ಹಿಂದುತ್ವವಾದಿ ಯುವಕ

ನಲ್ಮೇಯ ಗೆಳೆಯಾ,,,,,,,,,,,,,,,
       ಕಳೆದ ಮೂರು ವರ್ಷದಿಂದ ನಾನು ನೋಡುತ್ತಿರುವೆನು. ನಿನಗೆ ನಿನ್ನ ಅಪ್ಪನನ್ನು ಎದುರಿಸುವ ಧೈರ್ಯ ಬರುವುದು. ಒಂದಾದರೂ ದಿನ ನಾವು ಜಾಲಿಯಾಗಿ ಪ್ರೇಮಿಗಳಾಗಿ ಓಡಾಡಬಹುದು ಎಂದು, ಆದರೇ ನಿನ್ನ ಪುಕ್ಕಲುತನ ನೋಡಿದರೆ ಅದು ಸಾಧ್ಯವಿಲ್ಲ ಅನಿಸುತಿದೆ. ನಿನಗೆ ನನಗಿಂತ, ನಿನ್ನ ಅಪ್ಪನ ಡೋಂಗಿ ರಾಜಕೀಯದ ಬಗ್ಗೆಯೇ ಹೆಚ್ಚು ಕಾಳಜಿ. ಯಾಕಾಗಿ ಅಪ್ಪ ಮಗ ಮನಸ್ಸಿನಲ್ಲಿ ಒಂದು ಇರಿಸಿಕೊಂಡು ಹೊರ ಜಗತ್ತಿಗೆ ಬೇರೆ ರೀತಿಯಾಗಿ ಕಾಣಿಸಿಕೊಳ್ಳುವಿರಿ. ಸದಾ ಕಾಲ ನೀನು ನನ್ನೊಂದಿಗೆ ಕಾಲ ಕಳೆಯಲು ಒಂದಲ್ಲ ಒಂದು ಕಾರಣ ಹೇಳಿ ತಪ್ಪಿಸಿಕೊಳ್ಳುತ್ತಿರುವೆ.
ನಾನು ರಾಜಕೀಯ ಕುಟುಂಬದಿಂದ ಬಂದವಳು ಗೆಳೆಯಾ ನನಗೆ ನಿನ್ನ ಸ್ಥಿತಿ ಅರ್ಥವಾಗುವುದು. ನಮ್ಮ ಅಪ್ಪ ಸಹಾ ಶುದ್ದ ಸಂಪ್ರದಾಯವಾದಿ, ಆದರೇ ರಾಜಕೀಯವಾಗಿ ಜಾತ್ಯಾತೀತ ಆದ ಕಾರಣಕ್ಕೆ ನಾನು ಹೊಸವರ್ಷ, ಪ್ರೇಮಿಗಳ ದಿನಾಚರಣೆಯಂದು ಎಲ್ಲಿ ಬೇಕಾದರೂ ಹೋಗಬಹುದು, ಅದಕ್ಕಾಗಿ ಯಾವುದೇ ಅಡೆತಡೆ ಇಲ್ಲ. ಆದರೇ ನೀನು ಹೇಳಿದಂತೆ ಯುಗಾದಿ ಹಬ್ಬದ ದಿನ ನನಗೆ ಮನೆ ಬಿಟ್ಟು ಬರಲು ಕಷ್ಟ ಆ ದಿನ ಪೂಜೆ ಪನಸ್ಕಾರ ಎಂದು ತುಂಬಾ ಕೆಲಸ ಇರುವುದು. ನಮ್ಮ ಅಪ್ಪ ತೋರಿಸಿಕೊಳ್ಳಲು ಮಾತ್ರ ಜಾತ್ಯಾತೀತ, ಆದರೇ ಮನೆಯಲ್ಲಿ ತುಂಬಾ ಸಂಪ್ರದಾಯ ಕಣೋ. ನಮ್ಮ ಅಪ್ಪ ಸಹಾ ಒಂದು ರೀತಿಯ ಡೋಂಗಿ ರಾಜಕಾರಣೀಯೆ ಆಗಿರುವರು.
ಗೆಳೆಯಾ ನನ್ನ ನಿನ್ನ ಕುಟುಂಬದವರು ಈ ರೀತಿಯ ಡೋಂಗಿ ರಾಜಕೀಯದ ನಡುವೆ ನಮ್ಮ ಪ್ರೀತಿ ಕಣ್ಮರೆಯಾಗುವುದು ಬೇಕಾಗಿಲ್ಲ. ಇಂದೇ ನಿರ್ಧರಿಸು, ಒಂದು ಮನೆಯವರನ್ನು ಎದುರು ಹಾಕಿಕೊಂಡು ಮದುವೆ ಆಗಿ ಬದುಕಿ ತೋರಿಸುವುದು. ಇಲ್ಲಾ ಒಂದು ಮನೆಯರನ್ನು ಒಪ್ಪಿಸಿ ಮದುವೆಯಾಗಿ ಆ ನಂತರ ಕಮ್ಯೂನಿಷ್ಟರಾಗಿ ನಾವು ನಮ್ಮ ಕುಟುಂಬವನ್ನು ಬೆಳೆಸುವುದು. ನಿನ್ನ ಉತ್ತರವನ್ನು ಇದೇ 14 ರ೦ದು ತಿಳಿಸು. ನೀನ್ನ ಉತ್ತರದ ನಂತರ ನಾನು ನನ್ನ ಭವಿಷ್ಯದ ಬಗ್ಗೆ 23 ರ೦ದು ತೀಮಾ౯ನ ತೆಗೆದುಕೊಳ್ಳುವೆನು.

ಇಂತಿ ನಿನ್ನ ಮನದಾಳದ ಗೆಳತಿ
ಅಪ್ಪಟ ಜಾತ್ಯಾತೀತ ಯುವತಿ

ಆತ್ಮೀಯ  ಪ್ರೇಮಿಗಳೇ ಚುನಾವಣಾ ಸಮಯವಾದ್ದರಿಂದ ಈ ರೀತಿಯ ಪತ್ರ ಬರೆಯಬೇಕು ಎನಿಸಿತು. ದಯವಿಟ್ಟು ನಿಮ್ಮ ಜಾತಿ, ಧರ್ಮ, ಪ್ರಸ್ಟೆಜ್, ಸಮಾಜ ಈ ಎಲ್ಲದಕ್ಕೂ ಹೆದರಿ ನಿಮ್ಮತನವನ್ನು  ಬಿಟ್ಟು ಹೆಡಿಯಾಗಿ ಬದುಕದಿರಿ. ಡೋಂಗಿ ಜ್ಯಾತ್ಯಾತೀತತೆ, ಹಿಂದುತ್ವ ಧಾಮಿ౯ಕ ಅಂದತ್ವ ಈ ಎಲ್ಲವನ್ನು ಮೀರಿ ನಿಮ್ಮ ಪ್ರೇಮ ಅಮರವಾಗಲಿ. ಎಲ್ಲರಿಗೂ ಪ್ರೇಮಿಗಳ ದಿನಾಚರಣೆಯ ಶುಭಾಶಯಗಳು.

ವಿವೇಕ ಬೆಟ್ಕುಳಿ.

Saturday, February 13, 2016

ವಿರೋಧಿಗಳಿಂದಲ್ಲೇ ಜನಪ್ರೀಯವಾಗುತ್ತಿರುವ ಪ್ರೇಮಿಗಳ ದಿನಾಚರಣೆ - ವಿವೇಕ ಬೆಟ್ಕುಳಿ

ಪ್ರೇಮಿಗಳ ದಿನಾಚರಣೆ 10 ವರ್ಷದ ಹಿಂದೆ ಈ ಬಗ್ಗೆ ಯಾರಿಗೂ ಗೊತ್ತೇ ಇರಲಿಲ್ಲ. ಈ ದಿನಾಚರಣೆಗೆ ಈ ರೀತಿ ಪ್ರಚಾರ ಸಿಗಲು ಮುಖ್ಯಕಾರಣ ನಮ್ಮ ಸಂಸ್ಕೃತಿ ಉಳಿಸಲು ಬೀದಿಗಿಳಿಯುತ್ತಾ ಹೋರಾಟ ಮಾಡುತ್ತಿರುವ ಹಿಂದುತ್ವವಾದಿಗಳು. ನಮ್ಮ ಸಮಾಜದಲ್ಲಿ ಯಾವುದಕ್ಕೆವಿರೋಧ ಇದೆಯೋ ಅದೇ ಹೆಚ್ಚಾಗಿ ಜನಪ್ರೀಯವಾಗುವುದು.

ಮಾಜಿ ಸಚಿವ ಹೆಚ್ ವಿಶ್ವನಾಥ ಅವರ ಆತ್ಮಕಥೆ ಹಳ್ಳಿಹಕ್ಕಿಯ ಹಾಡು ಕೆಲ ಕಾಂಗ್ರೆಸಿಗರ ವಿರೋಧದಿಂದ ಜನಪ್ರಿಯವಾಯಿತು. ಎಸ್ಎಲ್ ಭೈರಪ್ಪ ನವರ ಕೃತಿಗಳು ಪ್ರಗತಿಶೀಲರ ವಿರೋಧದಿಂದ. ಯು ಆರ್ ಆನಂತಮೂತರ್ಿಯವರ ಕೃತಿಗಳು ಹಿಂದುತ್ವವಾದಿಗಳ ವಿರೋಧದಿಂದಾಗಿ ಎಲ್ಲರೂ ಕೊಂಡು ಓದುವಂತಾಗಿ ಅವರವರ ಅಭಿಮಾನ ಬಳಗ ಸೃಷ್ಠಿಯಾಯಿತು. ಪುಸ್ತಕಗಳು, ಸಿನಿಮಾ, ಈ ರೀತಿಯಾದ ನೂರಾರು ಉದಾಹರಣೆಗಳು ವಿರೋಧದಿಂದಾಗಿಯೆ ಪ್ರಚಾರಕ್ಕೆ ಬಂದಿರುವದನ್ನು ಕಾಣಬಹುದಾಗಿದೆ. ತೀರಾ ಇತ್ತಿಚೀನ ಬೆಳವಣಿಗೆ ಎಂದರೆ ಟಿಪ್ಪು 
ಜಯಂತಿಯ ಪರ ವಿರೋಧದಿಂದ ಬೇರೆ ರಾಜ್ಯದಲ್ಲಿಯೂ ಆಚರಣೆ ಪ್ರಾರಂಭವಾಗಿರುವುದು.ಇದೇ ರೀತಿಯಾಗಿ ಪ್ರೇಮಿಗಳ ದಿನಾಚರಣೆಯನ್ನು ಪ್ರತಿ ವರ್ಷ ಹಿಂದೂ ಸಂಸ್ಕೃತಿಗೆ ಮಾರಕ ಎಂಬ ಕಾರಣಕ್ಕಾಗಿ ಒಂದು ಗುಂಪು ವಿರೋಧಿಸುತ್ತಾ ಬಂದಿರುವುದು. ಈ ವಿರೋಧ ಹೆಚ್ಚಾಗುತ್ತಾ ನಿಜವಾಗಿ ಪ್ರೇಮಿಗಳ ದಿನಾಚರಣೆಗೆ ಹೆಚ್ಚು ಹೆಚ್ಚು ಮಹತ್ವ ಸಿಗುತ್ತಿರುವುದು. ಇದು
ಒಂದು ರೀತಿ ಪುಕ್ಕಟೆ ಪ್ರಚಾರ.
ಈ ದಿನಾಚರಣೆಯನ್ನು ಹೇಗೆ ಆಚರಿಸಬೇಕು? ಪ್ರೇಮಿಗಳು ಪರಸ್ಪರ ಯಾವ ಯಾವ ರೀತಿಯ ಉಡುಗೊರೆಗಳನ್ನು ಹಂಚಿಕೊಳ್ಳಬೇಕು ಎಂಬುದರ ಬಗ್ಗೆ ಎಲ್ಲಾ ಬಗೆಯ ಮಾದ್ಯಮಗಳಲ್ಲಿ ಹೆಚ್ಚಾಗಿ ಚಚೆ౯ ಆಗುತ್ತಿರುವುದು. ಇದರಿಂದ ಇಂದು ಹಳ್ಳಿ ಹಳ್ಳಿಗಳಲ್ಲಿ ಪ್ರೇಮಿಗಳ ದಿನಾಚರಣೆ ಜನಪ್ರಿಯವಾಗುತ್ತಿರುವುದು. ಅದರಲ್ಲಿಯೂ ಸೋಶಿಯಲ್ ಮಾಧ್ಯಮದಲ್ಲಿಯಂತು ಈ ದಿನಾಚರಣೆಯ ಪ್ರಚಾರ ತುಂಬಾ ಹೆಚ್ಚಾಗಿಯೇ ಆಗುತ್ತಿರುವುದು.

  ಪ್ರೇಮಿಗಳ ದಿನಾಚರಣೆಯನ್ನು ಮಾಡಲು ಬಿಡುವುದಿಲ್ಲ ಎಂದು ಕೆಲ ಗುಂಪು ಈಗಾಗಲೇ ಮಾಧ್ಯಮದ ಮೂಲಕ ವಿರೋಧ
ವ್ಯಕ್ತಪಡಿಸಿದರೆ, ಇನ್ನೂ ಕೆಲವು ಗುಂಪುಗಳು ಆಚರಣೆಯನ್ನು ಅರ್ಥಪೂರ್ಣಗೊಳಿಸಲು ತಮ್ಮದೇ ಆದ ತಯಾರಿ ಮಾಡಿಕೊಳ್ಳುತ್ತಿದೆ. ಒಟ್ಟಾರೆ ಈ ದಿನಾಚರಣೆ ದಿನದಿಂದ ದಿನಕ್ಕೆ ಹೆಚ್ಚು ಜನರನ್ನು ಆಕಷರ್ಿಸುತ್ತಿದೆ.

ವಿವಿಧತೆಯಲ್ಲಿ ಏಕತೆ ಇರುವ ಜಾಗತೀಕರಣ ಗೊಂಡಿರುವ ಈ ದೇಶದಲ್ಲಿ ಯಾವುದೇ ವಿಚಾರವಾಗಿ ಒಂದೇ ಅಭಿಪ್ರಾಯ ಬರಲು ಸಾಧ್ಯವಿಲ್ಲ. ಹೀಗಿರುವಾಗ ದಿನಾಚರಣೆಗಳ ಆಚರಣೆ ಬಗ್ಗೆ ಪರ ವಿರೋಧ ಅಭಿಪ್ರಾಯಗಳು ಮುಂದೆಯೂ ಇರುವುದರಲ್ಲಿ ಯಾವುದೇಸಂದೇಹವಿಲ್ಲ. ಗಾಂಧಿಯನ್ನು ಕೊಂದ ಗೋಡ್ಸೆಯನ್ನು ವೈಭವಿಕರಿಸುವಂತಹ ಸ್ಥಿತಿಯಲ್ಲಿ ನಮ್ಮ ದೇಶ ಇರುವುದು. ಇಂತಹ ಸಂದರ್ಭದಲ್ಲಿ ಯಾವುದು ಸರಿ ಯಾವುದು ತಪ್ಪು ಎಂಬುದನ್ನು ನಿರ್ಧರಿಸುವುದನ್ನು  ನಾವಿಂದು ಬಿಡಬೇಕಾಗಿದೆ.  ಆರೋಗ್ಯಯುತವಾದ ಚಚರ್ೆಯನ್ನು ಮಾತ್ರ ನಾವು ಹುಟ್ಟುಹಾಕವ ಅಗತ್ಯವಿದೆ. ಒಂದಂತು ಸತ್ಯ ಎಲ್ಲಿ ವಿರೋಧ ಇದೆಯೋ ಅಲ್ಲಿ ಪ್ರತಿರೋಧ ಎಂದಿಗೂ ಇದ್ದೇ ಇರುವುದು.

ಪ್ರೇಮಿಗಳದಿನಾಚರಣೆಯ ಪರ ವಿರೋಧ ಏನಿದ್ದರೂ ಅದು ಚಚೆ౯ಗೆ ಮಾತ್ರ ಇರಲಿ, ಬದಲಾಗಿ ಅದು ಹಿಂಸೆಗೆ ತಿರುಗಿದರೆ ಅದರಿಂದ ಯಾರಿಗೂ ಸುಖವಿಲ್ಲ. ಈ ಸಂದರ್ಭದಲ್ಲಿ ಈ ದಿನದ ಆಚರಣೆ ಹೇಗೆ ಇರಬೇಕು ಎಂಬುದು ಅವರವರ ವಿವೇಚನೆಗೆ ಬಿಟ್ಟಿದಾಗಿರುವುದು. ಆದರೇ ಈ ರೀತಿ ಪ್ರಚಾರಕ್ಕೆ ಕಾರಣರಾದ ವಿರೋಧಿ-ಪರ ಇಬ್ಬರಿಗೂ ಪ್ರೇಮಿಗಳ ದಿನಾಚರಣೆಯ ಶುಭಾಶಯಗಳು.

                                                                                                                                 ವಿವೇಕ ಬೆಟ್ಕುಳಿ                                                                                                                                        vivekpy@gmail.com

Thursday, February 12, 2015

ದೇಶದ ರಾಜಕೀಯಕ್ಕೇ ಹೊಸ ಆಶಾ ಕಿರಣವಾದ ಆಮ ಆದ್ಮೀ ಪಕ್ಷದ ಗೆಲುವು............

ದೇಶದ ರಾಜಕೀಯಕ್ಕೇ ಹೊಸ ಆಶಾ ಕಿರಣವಾದ ಆಮ ಆದ್ಮೀ ಪಕ್ಷದ ಗೆಲುವು............
 ಇಂದು ಪ್ರಕಟವಾದ ದೆಹಲಿ ರಾಜ್ಯದ ಚುನಾವಣಾ ಫಲಿತಾಂಶದಲ್ಲಿ ಆಮ ಆದ್ಮೀ ಪಕ್ಷಕೆ ದೊರೆತ ಭರ್ಜರಿ ಜಯ ದೇಶದ ರಾಜಕೀಯಕ್ಕೆ ಆಶಾ ಕಿರಣವಾಗಿರುವುದರಲ್ಲಿ ಯಾವುದೇ ಸಂಶಯವಿಲ್ಲ.
ಕಾಂಗ್ರೇಸ್ಸನ ಭೃಷ್ಟತೆ, ಬಿಜಿಪಿಯ ಕೋಮವಾದ ರಾಜಕಾರಣ, ಉಳಿದ ಪ್ರಾದೇಶಿಕ ಪಕ್ಷಗಳ ಸ್ವಾರ್ಥ ರಾಜಕಾರಣದಿಂದಲ್ಲೇ ಕಳೆದ 25 ವರ್ಷಗಳಿಂದ ಭಾರತದ ರಾಜಕೀಯ ಕಲ್ಮಶವಾಗಿತ್ತು.   ನಿಷ್ಠಾವಂತ ಮಯಾ೯ದಸ್ಥ ವ್ಯಕ್ತಿಗಳು ರಾಜಕೀಯ ಕ್ಷೇತ್ರಕ್ಕೆ ಬರಬಾರದು ಎಂಬತಹ ಸ್ಥಿತಿಗೆ ಭಾರತದ ರಾಜಕೀಯ ಕಲ್ಮಶವಾಗಿತ್ತು.
 ಇಂತಹ ಸಂದರ್ಭದಲ್ಲಿ ಅಣ್ಣಾಹಜಾರೆ ಹೋರಾಟದ ಕೂಸಾಗಿ ಹುಟ್ಟಿದ ಆಮ ಆದ್ಮೀ ಪಕ್ಷವು ಉದಯವಾದ 8 ತಿಂಗಳ ಒಳಗೆ ಉತ್ತಮ ಪ್ರದರ್ಶನವನ್ನು ನೀಡಿತು. ಕಾಂಗ್ರೆಸ್ಸನ ಬಾಹ್ಯ ಬೆಂಬಲದೊಂದಿಗೆ 49 ದಿನ ಸಕಾರ ರಚಿಸಿದ ಪಕ್ಷ ನಂತರ ಸಕಾ೯ರವನ್ನು ವಿಸಜಿ೯ಸಿತು. ವ್ಯವಸ್ಥೆಯೊಂದನ್ನು ಬದಲಿಸುವ ತುಡಿತದಲ್ಲಿದ್ದ ಪಕ್ಷ ಅಧಿಕಾರದಿಂದ ಕೆಳಗಿಳಿದಿದ್ದು ದುಡುಕಿನ ನಿಧಾ೯ರವೆಂದು ಬಿಂಬಿತವಾಯಿತು.
ಅದೇ ಸಮಯದಲ್ಲಿ ಎದುರಾದ ಲೋಕಸಭೆಗೆ  ಅತಿ ಆಸೆಯಿಂದ ಸೂಕ್ತ ತಯಾರಿ ಇಲ್ಲದೇ ಹೋಯಿತು  ಕಾರಣದಿಂದಲ್ಲೇ ಸೋಲನ್ನು ಅನುಭವಿಸಿತು. ಆದರೇ ಸೋಲನ್ನು ಸ್ವೀಕಾರ ಮಾಡಿ ತಕ್ಷಣ ಕಾರ್ಯಪ್ರವೃತವಾಗಿ ಆಮ ಆದ್ಮೀ ಪಕ್ಷ ದೆಹಲಿಯ ಚುನಾವಣೆಗೆ ತಯಾರಿ ಮಾಡಿ ಕಳೆದು ಹೋದ ತನ್ನ ಕಳೆಯನ್ನು 8 ತಿಂಗಳ ಅವಧಿಯೊಳಗೆ ಇನ್ನೂ ಹೆಚ್ಚು ಕಳೆಯೊಂದಿಗೆ ಪುನರ್ ಸ್ಥಾಪಿಸಿಕೊಂಡಿರುವುದು. ಇದರ ಪರಿಣಾಮವೇ ಇಂದು 70 ಕ್ಷೇತ್ರದಲ್ಲಿ  ಆಮ ಆದ್ಮೀ ಪಕ್ಷ ಸಿಂಹಪಾಲನ್ನು ಗೆದ್ದು ಇತಿಹಾಸ ಬರೆದಿರುವುದು.
ಆಮ ಆದ್ಮೀ ಪಕ್ಷಕೆ ಕೊನೆಯ ಗಳಿಗೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ನೇರವಾಗಿ ಎದುರಿಸಲಾಗದೇ ಇಲ್ಲ ಸಲ್ಲದ ಆಪಾದನೇ ಮಾಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಲು ಪ್ರಯತಿಸಿತು. ಬಿಜೆಪಿಯ 120 ಎಂಪಿಗಳು ಬಿಜೆಪಿಯ ಗೆಲುವಿಗೆ ಕೊನೆ ಗಳಿಗೆಯಲ್ಲಿ ಎಲ್ಲಾ ರೀತಿಯಿಂದಲ್ಲೂ ಪ್ರಯತ್ನ ಪಟ್ಟರು. ಆದರೇ ದೆಹಲಿಯ ಜನತೆ ಎಲ್ಲವನ್ನು ಅರ್ಥಮಾಡಿಕೊಂಡು ಯಾವ ಆಪಾದನೆಗೂ ಬೆಲೆ ನೀಡದೆ ಆಮ ಆದ್ಮೀ ಪಕ್ಷಕೆ ಪ್ರಚಂಡ ಬಹುಮತ ನೀಡಿರುವುದು. ಆಮ ಆದ್ಮೀ ಪಕ್ಷದ ಬಗ್ಗೆ ಬೇರೆ ಪಕ್ಷಗಳು ಮಾಡಿದ ಅಪಪ್ರಚಾರ ಎಲ್ಲವು ಆಮ ಆದ್ಮೀಗೆ ಪಕ್ಷಕೆ ವರವಾಗಿ ಪರಿಣಮಿಸಿತು. ಕಾರಣ ಪಕ್ಷದ ಪಾರದರ್ಶಕತೆ ಬಗ್ಗೆ ಯಾವುದೇ ಅನುಮಾನ ಇರಲಿಲ್ಲ. ಎಲ್ಲ ಪರಿಣಾಮವಾಗಿ ದೇಶದ ರಾಜಧಾನಿಯಲ್ಲಾದ ರೀತಿಯ ರಾಜಕೀಯ ಫಲಿತಾಂಶ ಉಳಿದ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆಯ ಗಂಟೆಯಾಗಿರುವುದು
ದೇಶದ ರಾಜಧಾನಿಯಲ್ಲಿ ಆಮ ಆದ್ಮೀಯ ಪ್ರಚಂಡ ವಿಜಯ ದೇಶದ ಮುಂಬರುವ ರಾಜಕಾರಣದಲ್ಲಿ ಮಹತ್ತರ ಬದಲಾವಣೆ ತರುವುದರಲ್ಲಿ ಯಾವುದೇ ಸಂಶಯ ಇಲ್ಲ.
ಎಲ್ಲಾ ರಾಜಕೀಯ ಪಕ್ಷಗಳು ಸಹಾ ತಮ್ಮ ಪಕ್ಷದ ನೀತಿಗಳ ಬಗ್ಗೆ ಅವಲೋಕನ ಮಾಡಿಕೊಳ್ಳುತ್ತಾ  ಬದಲಾವಣೆಗಳನ್ನು ಮಾಡಿಕೊಳ್ಳುವ ಅಗತ್ಯವಿದೆ.
                ರಾಜಕೀಯ ಪಾಟರ್ಿಗಳ ದೇಣಿಗೆಯ ಬಗ್ಗೆ ಆಮ ಆದ್ಮೀ ಪಾಟಿ೯ಯ ತರಹ ಪಾರದರ್ಶಕತೆ ಇರುವುದು ಅಗತ್ಯವಿದೆ.
                ಬಿಜೆಪಿ ತನ್ನ ಸಹಚರ ಸಂಸ್ಥೆಗಳು ನಡೆಸುತ್ತಿರುವ ಘರ ವಾಪಸ್ಸಿಯಂತಹ ಚಟುವಟಿಕೆಯನ್ನು ತಕ್ಷಣ ನಿಲ್ಲಿಸಬೇಕಾಗಿದೆ.
                ಕಾಂಗ್ರೆಸ್ಸ ಪಕ್ಷ ತನ್ನ ಸೋಲನ್ನು ಒಪ್ಪಿಕೊಂಡು, ಆಗಿರುವ ತಪ್ಪನ್ನು ತಿದ್ದಿಕೊಳ್ಳುವ ಪ್ರಯತ್ನ ಮಾಡಬೇಕು. ಭೃಷ್ಟಾಚಾರವನ್ನು ತೆಗೆದು ಹಾಕುವ ಹಿನ್ನಲೆಯಲ್ಲಿ  ಪಾಟಿ೯ಯಲ್ಲಿಯೇ ಅಮೂಲಾಗ್ರ ಬದಲಾವಣೆ ತರಲು ಪ್ರಾರಂಭಿಸಬೇಕು.
                ಸಮಾಜವಾದಿ ಪಕ್ಷ, ಬಹುಜನ, ಜನತಾದಳದ ಪರಿವಾರಗಳು ಎಲ್ಲಾ ಪಾಟಿ೯ಗಳು ತಮ್ಮ ತಮ್ಮ ಪಕ್ಷವನ್ನು ಶುಚಿಗೊಳಿಸುವ ಕಾರ್ಯವನ್ನು ಪ್ರಾರಂಭಿಸಬೇಕು. ಮೊದಲು ಪಕ್ಷದಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಆಮ ಆದ್ಮೀ ಪಕ್ಷ ಅನುಸರಿಸುತ್ತಿರುವಂತಹ ನಿಯಮವನ್ನು ರೂಢಿಸಿಕೊಳ್ಳಬೇಕು.
                ಎಲ್ಲಾ ಪಕ್ಷಗಳು ವಿಷಯಾಧಾರಿತವಾಗಿ ರಾಜಕೀಯ ಮಾಡಬೇಕು ವಿನಹ ಜಾತಿ/ ಧರ್ಮ ರಾಜಕೀಯವನ್ನಲ್ಲ.
                ಜನಸಾಮಾನ್ಯರನ್ನು, ರೈತರನ್ನು ಕಡೆಗಣಿಸಿ ಮುಖ್ಯವಾಗಿ ಕೈಗಾರಿಕೋದ್ಯಮಿಗಳಿಗೆ ಅನುಕೂಲವಾಗುವಂತಹ ರೀತಿ ಕಾರ್ಯನಿರ್ವಹಿಸುವ ದೃಷ್ಠಿಯನ್ನು ಬಿಜೆಪಿ ಮುಖ್ಯವಾಗಿ ಬದಲಾಯಿಸಿಕೊಳ್ಳುವ ಅಗತ್ಯವಿದೆ.
                ಜನಸಾಮಾನ್ಯರ ಮೂಲಭೂತ ಅಗತ್ಯಗಳಾದ ಶುದ್ದ ಕುಡಿಯುವ ನೀರು, ವಸತಿ, ಉತ್ತಮ ಶಿಕ್ಷಣ, ಉತ್ತಮ ಆರೋಗ್ಯದ ಬಗ್ಗೆ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ದೃಷ್ಠಿ ಏನು ಎಂಬುದನ್ನು ಪುನ: ವಿಮಶಿ೯ಸಿ ಪಸ್ಥುತಪಡಿಸಬೇಕಾದ ಅಗತ್ಯತೆ ಇರುವುದು.
                ಕೊಲೆಗಡುಕರು, ಭೃಷ್ಠಾಚಾರಿಗಳು, ಕಪಟಿಗಳು, ಮೋಸಗಾರರು ಬಹುತೇಕ ಎಲ್ಲಾ ಪಕ್ಷಗಳಲ್ಲಿಯೂ ಇರುವರು ಇಂತವರನ್ನು ಹೊರಗೆ ಕಳುಹಿಸುವ ಕಾರ್ಯವನ್ನು ಎಲ್ಲಾ ಪಾಟಿ೯ಗಳು ತಕ್ಷಣ ಪ್ರಾರಂಭಿಸಬೇಕಾಗಿದೆ.
ಒಟ್ಟಾರೆ ಶುದ್ದ, ಪಾರದರ್ಶಕ ಆಡಳಿತದ ಭರವಸೆಗೆ ದೆಹಲಿಯಲ್ಲಿ ಸಿಕ್ಕ ಜಯ ನಿಜವಾಗಿಯೂ ಆಮ ಆದ್ಮೀಯದೇ ಜಯವಾಗಿರುವುದು. ಆಯ್ಕೆಯಾದ ಎಲ್ಲಾ ಜನಪ್ರತಿನಿಧಿಗಳು ವಾಸ್ತವದಲ್ಲಿ  ಜನರ ಪ್ರತಿನಿಧಿಯಾಗಿ ತಾವು ನೀಡಿದ ಆಶ್ವಾಸನೆಯಂತೆ ಕಾರ್ಯನಿಹಿಸಿ ದೇಶದಲ್ಲಿ ರಾಜಕೀಯದ ಚಿತ್ರಣ ಬದಲಾಗುವಂತೆ ಮಾಡುವ ಮಹತ್ವದ ಜವಬ್ದಾರಿ ಇಂದು ಅರವಿಂದ ಕ್ರೇಜಿವಾಲ್ ಮತ್ತು ಆಮ ಆದ್ಮೀ ಪಕ್ಷದ ಮುಂದಿದೆ.
ಚುನಾವಣೆ ಕೇವಲ ದೇಹಲಿಗೆ ಮಾತ್ರ ಸೀಮಿತ ಎಂದು ಅಸಡ್ಡೆ ತೋರದೆ ಎಲ್ಲಾ ರಾಜಕೀಯ ಪಕ್ಷಗಳು  ಗಂಭೀರವಾಗಿ ಚಿಂತಿಸಲು ಇದು ಸಕಾಲವಾಗಿದೆ.
ಕೊನೆಯದಾಗಿ ಪ್ರಾಮಾಣಿಕರು ರಾಜಕೀಯ ಕ್ಷೇತ್ರಕ್ಕೆ ಬರುವ ಭರವಸೆ ಮೂಡಿಸಿದ ದೆಹಲಿ ಜನತಗೆ ಮತ್ತು ಆಮ ಆದ್ಮೀ ಪಕ್ಷಕ್ಕೆ ತುಂಬು ಹೃದಯದ ಧನ್ಯವಾದಗಳು...

ವಿವೇಕ ಬೆಟ್ಕುಳಿ







ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...