Saturday, February 13, 2016

ವಿರೋಧಿಗಳಿಂದಲ್ಲೇ ಜನಪ್ರೀಯವಾಗುತ್ತಿರುವ ಪ್ರೇಮಿಗಳ ದಿನಾಚರಣೆ - ವಿವೇಕ ಬೆಟ್ಕುಳಿ

ಪ್ರೇಮಿಗಳ ದಿನಾಚರಣೆ 10 ವರ್ಷದ ಹಿಂದೆ ಈ ಬಗ್ಗೆ ಯಾರಿಗೂ ಗೊತ್ತೇ ಇರಲಿಲ್ಲ. ಈ ದಿನಾಚರಣೆಗೆ ಈ ರೀತಿ ಪ್ರಚಾರ ಸಿಗಲು ಮುಖ್ಯಕಾರಣ ನಮ್ಮ ಸಂಸ್ಕೃತಿ ಉಳಿಸಲು ಬೀದಿಗಿಳಿಯುತ್ತಾ ಹೋರಾಟ ಮಾಡುತ್ತಿರುವ ಹಿಂದುತ್ವವಾದಿಗಳು. ನಮ್ಮ ಸಮಾಜದಲ್ಲಿ ಯಾವುದಕ್ಕೆವಿರೋಧ ಇದೆಯೋ ಅದೇ ಹೆಚ್ಚಾಗಿ ಜನಪ್ರೀಯವಾಗುವುದು.

ಮಾಜಿ ಸಚಿವ ಹೆಚ್ ವಿಶ್ವನಾಥ ಅವರ ಆತ್ಮಕಥೆ ಹಳ್ಳಿಹಕ್ಕಿಯ ಹಾಡು ಕೆಲ ಕಾಂಗ್ರೆಸಿಗರ ವಿರೋಧದಿಂದ ಜನಪ್ರಿಯವಾಯಿತು. ಎಸ್ಎಲ್ ಭೈರಪ್ಪ ನವರ ಕೃತಿಗಳು ಪ್ರಗತಿಶೀಲರ ವಿರೋಧದಿಂದ. ಯು ಆರ್ ಆನಂತಮೂತರ್ಿಯವರ ಕೃತಿಗಳು ಹಿಂದುತ್ವವಾದಿಗಳ ವಿರೋಧದಿಂದಾಗಿ ಎಲ್ಲರೂ ಕೊಂಡು ಓದುವಂತಾಗಿ ಅವರವರ ಅಭಿಮಾನ ಬಳಗ ಸೃಷ್ಠಿಯಾಯಿತು. ಪುಸ್ತಕಗಳು, ಸಿನಿಮಾ, ಈ ರೀತಿಯಾದ ನೂರಾರು ಉದಾಹರಣೆಗಳು ವಿರೋಧದಿಂದಾಗಿಯೆ ಪ್ರಚಾರಕ್ಕೆ ಬಂದಿರುವದನ್ನು ಕಾಣಬಹುದಾಗಿದೆ. ತೀರಾ ಇತ್ತಿಚೀನ ಬೆಳವಣಿಗೆ ಎಂದರೆ ಟಿಪ್ಪು 
ಜಯಂತಿಯ ಪರ ವಿರೋಧದಿಂದ ಬೇರೆ ರಾಜ್ಯದಲ್ಲಿಯೂ ಆಚರಣೆ ಪ್ರಾರಂಭವಾಗಿರುವುದು.ಇದೇ ರೀತಿಯಾಗಿ ಪ್ರೇಮಿಗಳ ದಿನಾಚರಣೆಯನ್ನು ಪ್ರತಿ ವರ್ಷ ಹಿಂದೂ ಸಂಸ್ಕೃತಿಗೆ ಮಾರಕ ಎಂಬ ಕಾರಣಕ್ಕಾಗಿ ಒಂದು ಗುಂಪು ವಿರೋಧಿಸುತ್ತಾ ಬಂದಿರುವುದು. ಈ ವಿರೋಧ ಹೆಚ್ಚಾಗುತ್ತಾ ನಿಜವಾಗಿ ಪ್ರೇಮಿಗಳ ದಿನಾಚರಣೆಗೆ ಹೆಚ್ಚು ಹೆಚ್ಚು ಮಹತ್ವ ಸಿಗುತ್ತಿರುವುದು. ಇದು
ಒಂದು ರೀತಿ ಪುಕ್ಕಟೆ ಪ್ರಚಾರ.
ಈ ದಿನಾಚರಣೆಯನ್ನು ಹೇಗೆ ಆಚರಿಸಬೇಕು? ಪ್ರೇಮಿಗಳು ಪರಸ್ಪರ ಯಾವ ಯಾವ ರೀತಿಯ ಉಡುಗೊರೆಗಳನ್ನು ಹಂಚಿಕೊಳ್ಳಬೇಕು ಎಂಬುದರ ಬಗ್ಗೆ ಎಲ್ಲಾ ಬಗೆಯ ಮಾದ್ಯಮಗಳಲ್ಲಿ ಹೆಚ್ಚಾಗಿ ಚಚೆ౯ ಆಗುತ್ತಿರುವುದು. ಇದರಿಂದ ಇಂದು ಹಳ್ಳಿ ಹಳ್ಳಿಗಳಲ್ಲಿ ಪ್ರೇಮಿಗಳ ದಿನಾಚರಣೆ ಜನಪ್ರಿಯವಾಗುತ್ತಿರುವುದು. ಅದರಲ್ಲಿಯೂ ಸೋಶಿಯಲ್ ಮಾಧ್ಯಮದಲ್ಲಿಯಂತು ಈ ದಿನಾಚರಣೆಯ ಪ್ರಚಾರ ತುಂಬಾ ಹೆಚ್ಚಾಗಿಯೇ ಆಗುತ್ತಿರುವುದು.

  ಪ್ರೇಮಿಗಳ ದಿನಾಚರಣೆಯನ್ನು ಮಾಡಲು ಬಿಡುವುದಿಲ್ಲ ಎಂದು ಕೆಲ ಗುಂಪು ಈಗಾಗಲೇ ಮಾಧ್ಯಮದ ಮೂಲಕ ವಿರೋಧ
ವ್ಯಕ್ತಪಡಿಸಿದರೆ, ಇನ್ನೂ ಕೆಲವು ಗುಂಪುಗಳು ಆಚರಣೆಯನ್ನು ಅರ್ಥಪೂರ್ಣಗೊಳಿಸಲು ತಮ್ಮದೇ ಆದ ತಯಾರಿ ಮಾಡಿಕೊಳ್ಳುತ್ತಿದೆ. ಒಟ್ಟಾರೆ ಈ ದಿನಾಚರಣೆ ದಿನದಿಂದ ದಿನಕ್ಕೆ ಹೆಚ್ಚು ಜನರನ್ನು ಆಕಷರ್ಿಸುತ್ತಿದೆ.

ವಿವಿಧತೆಯಲ್ಲಿ ಏಕತೆ ಇರುವ ಜಾಗತೀಕರಣ ಗೊಂಡಿರುವ ಈ ದೇಶದಲ್ಲಿ ಯಾವುದೇ ವಿಚಾರವಾಗಿ ಒಂದೇ ಅಭಿಪ್ರಾಯ ಬರಲು ಸಾಧ್ಯವಿಲ್ಲ. ಹೀಗಿರುವಾಗ ದಿನಾಚರಣೆಗಳ ಆಚರಣೆ ಬಗ್ಗೆ ಪರ ವಿರೋಧ ಅಭಿಪ್ರಾಯಗಳು ಮುಂದೆಯೂ ಇರುವುದರಲ್ಲಿ ಯಾವುದೇಸಂದೇಹವಿಲ್ಲ. ಗಾಂಧಿಯನ್ನು ಕೊಂದ ಗೋಡ್ಸೆಯನ್ನು ವೈಭವಿಕರಿಸುವಂತಹ ಸ್ಥಿತಿಯಲ್ಲಿ ನಮ್ಮ ದೇಶ ಇರುವುದು. ಇಂತಹ ಸಂದರ್ಭದಲ್ಲಿ ಯಾವುದು ಸರಿ ಯಾವುದು ತಪ್ಪು ಎಂಬುದನ್ನು ನಿರ್ಧರಿಸುವುದನ್ನು  ನಾವಿಂದು ಬಿಡಬೇಕಾಗಿದೆ.  ಆರೋಗ್ಯಯುತವಾದ ಚಚರ್ೆಯನ್ನು ಮಾತ್ರ ನಾವು ಹುಟ್ಟುಹಾಕವ ಅಗತ್ಯವಿದೆ. ಒಂದಂತು ಸತ್ಯ ಎಲ್ಲಿ ವಿರೋಧ ಇದೆಯೋ ಅಲ್ಲಿ ಪ್ರತಿರೋಧ ಎಂದಿಗೂ ಇದ್ದೇ ಇರುವುದು.

ಪ್ರೇಮಿಗಳದಿನಾಚರಣೆಯ ಪರ ವಿರೋಧ ಏನಿದ್ದರೂ ಅದು ಚಚೆ౯ಗೆ ಮಾತ್ರ ಇರಲಿ, ಬದಲಾಗಿ ಅದು ಹಿಂಸೆಗೆ ತಿರುಗಿದರೆ ಅದರಿಂದ ಯಾರಿಗೂ ಸುಖವಿಲ್ಲ. ಈ ಸಂದರ್ಭದಲ್ಲಿ ಈ ದಿನದ ಆಚರಣೆ ಹೇಗೆ ಇರಬೇಕು ಎಂಬುದು ಅವರವರ ವಿವೇಚನೆಗೆ ಬಿಟ್ಟಿದಾಗಿರುವುದು. ಆದರೇ ಈ ರೀತಿ ಪ್ರಚಾರಕ್ಕೆ ಕಾರಣರಾದ ವಿರೋಧಿ-ಪರ ಇಬ್ಬರಿಗೂ ಪ್ರೇಮಿಗಳ ದಿನಾಚರಣೆಯ ಶುಭಾಶಯಗಳು.

                                                                                                                                 ವಿವೇಕ ಬೆಟ್ಕುಳಿ                                                                                                                                        vivekpy@gmail.com

Monday, February 8, 2016

ಇನ್‌ಬಾಕ್ಸ್ ಗೆಳೆಯನಿಗೆ ಬಹಿರಂಗ ಪತ್ರ - ಫಾತಿಮಾ

ಇನ್‌ಬಾಕ್ಸ್ ಗೆಳೆಯನಿಗೆ ಬಹಿರಂಗ ಪತ್ರ ::
ಇನ್‌ಬಾಕ್ಸ್ ಗೆಳೆಯ
ನೀನು ಕೇಳಿದೆ...
ನೀನು ಸುನ್ನಿನಾ? ಶಿಯಾನಾ?
ನೀನು ಸಲಾಫಿಯಾ? ಹನಾಫಿಯಾ..?
ನಾವು ಯಾರಾದರೇನು ?
ನಾವೆಲ್ಲಾ ಒಂದೇ ಕಾರವಾನ್‌ನ
ಸಹಚರರು
ಸತ್ಯ ಮಾರ್ಗದ ಅನ್ವೇಷಿಗರು
ಅಂದು ಕೊಂಡಿದ್ದೆ
ನಾವೆಲ್ಲಾ ಇಷ್ಟು ಬೇರೆ ಬೇರೆ ಅಂತ
ಅರಿವಿರಲಿಲ್ಲ.
ಕಣ್ಣು ತೆರೆಸಿದೆ ಧನ್ಯವಾದ
...........
ಬುರ್ಖಾ ಹಾಕೋಲ್ವಾ?
ಅಬಯಾ ತೊಡೊಲ್ವಾ ?
ವೇಲು ಸುತ್ತಿಕೊಳ್ಳೋಲ್ವಾ?
ಅಂತ ಹೆದರಿಸಿದೆ ನೀನು ನನ್ನ
ನಿನ್ನ ಕಣ್ಣ ಬೆಂಕಿಗೆ
ಸುಟ್ಟು ಹೋಗುವ ಕಾಗೆ ನಾನಲ್ಲ
ಮೊದಲು ನಿನ್ನ ಮನಕೆ ಬೇಕು
ಸಭ್ಯತೆಯ ತಂಪು ಕನ್ನಡಕ
ಅರಿವಾಗಲಿ ನಿನಗೆ ಬೇಗ.
...........
ನೀ ಕೇಳಿದೆ
’ನಿನ್ನ ವಾಲ್ ಮೇಲೆ
ಪವಿತ್ರ ಸ್ಥಳದ ಚಿತ್ರ ಏಕಿಲ್ಲ ? ’
ಚಿತ್ರ ಹಾಕಿದರೆ ಮಾತ್ರ
ಪ್ರೊಫ಼ೈಲ್ ಪವಿತ್ರವಾಗುವುದೆಂದು
ನನಗೆ ಗೊತ್ತಿರಲಿಲ್ಲ.
ಗೊತ್ತಿದ್ದರೆ ಪವಿತ್ರ ಸ್ಥಳದ ಚಿತ್ರ
ನಿನ್ನ ಎದೆಗೂ ಅಂಟಿಸುತ್ತಿದ್ದೆ
ಖಂಡಿತಾ ಬಿಡುತ್ತಿರುಲಿಲ್ಲ.
.............
ಅದಿರಲಿ
ನೀನೇಕೆ ತ್ವಾಬ್ ತೊಟ್ಟಿಲ್ಲ?
ನಿನ್ನ ವಾಲ್ ಮೇಲೇಕೆ
ಪಾರಿವಾಳ ಬಿಳಿಗುಲಾಬಿ ಚಿತ್ರಗಳಿಲ್ಲ?
ಗುಂಡಿ ತೆರೆದ ಅಂಗಿ - ಬರ್ಬುಡಾ ಚಡ್ದಿ
ಚಿತ್ರಗಳು ಸರಿಯಲ್ಲ.
ರೇಸ್ ಬೈಕಿನ ಚಿತ್ರವೇಕೆ?
ನಿನಗೆ ಮಾಡಲು ಬೇರೆ ಕೆಲಸವಿಲ್ಲ ?
ನಿನ್ನ ಮದುವೆ ಆಗುವ ಹುಡುಗಿಗೆ ಯಾಕೆ ಮುಖವಿಲ್ಲ ?
ಅವಳ ಪ್ರೊಫ಼ೈಲ್ನಲ್ಲಿ ಯಾಕೆ ನಗುತ್ತಿದ್ದಾರೆ
ಬುರ್ಖಾ ಧರಿಸದ
ಜೆನೆಲಿಯಾ ಡಿಸೋಜಾ
ಭೂಮಿಕಾ ಚಾವ್ಲಾ..
 ಫಾತಿಮಾ ಬೆಳವಾಡಿ 

ಹೊಸ ವಾಟ್ಸಾಪ್ ಸ್ಕ್ಯಾಮ್ ಬಗ್ಗೆ ಹುಷಾರ್. - ಸುದ್ದಿ ಸಮಾಚಾರ

ಹೊಸ ವಾಟ್ಸಾಪ್ ಸ್ಕ್ಯಾಮ್ ಬಗ್ಗೆ ಹುಷಾರ್..! ಸ್ನೇಹಿತರ ಸೋಗಿನಲ್ಲಿ ಬರುತ್ತವೆ ಲಿಂಕ್'ಗಳು
ವಿಶ್ವದಲ್ಲಿ ಅಪಾರ ಜನಪ್ರಿಯತೆ ಪಡೆದಿರುವ ವಾಟ್ಸಾಪ್ ಈಗ ವಂಚಕರ ಟಾರ್ಗೆಟ್ ಆಗಿದೆ. ವಾಟ್ಸಾಪ್ ಅಪ್ಡೇಟ್ ಎಂಬ ನಕಲಿ ಸಂದೇಶ ಕಳುಹಿಸಿ ಜನರ ಮೊಬೈಲ್'ಗಳಲ್ಲಿರುವ ಮಾಹಿತಿಯನ್ನು ವಂಚಕರು ಕದಿಯುತ್ತಿದ್ದಾರೆಂದು ಕಳೆದ ತಿಂಗಳು ಭದ್ರತಾ ತಜ್ಞರು ಎಚ್ಚರಿಸಿದ್ದರು. ಈಗ ಮತ್ತೊಂದು ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ವಾಟ್ಸಾಪ್ ಬಳಕೆದಾರರನ್ನು ಮೋಸ ಮಾಡುವ ಹೊಸ ಸ್ಕ್ಯಾಮ್ ಬಗ್ಗೆ ತಜ್ಞರು ಎಚ್ಚರಿಸಿದ್ದಾರೆ.
ಏನಿದು ಹೊಸ ಸ್ಕ್ಯಾಮ್..?
ನಿಮ್ಮ ವಾಟ್ಸಾಪ್'ನಲ್ಲಿ ನಿಮ್ಮ ಸ್ನೇಹಿತರ ಹೆಸರಿನಲ್ಲಿ ಲಿಂಕ್'ಗಳು ಕಾಣಿಸುತ್ತವೆ. ಗೆಳೆಯರು ಕಳುಹಿಸಿದ್ದಿರಬಹುದೆಂದು ನೀವೇನಾದರೂ ಆ ಲಿಂಕ್ ಕ್ಲಿಕ್ ಮಾಡಿದರೆ ವಂಚಕ ವೆಬ್'ಸೈಟ್'ವೊಂದಕ್ಕೆ ಹೋಗುತ್ತದೆ. ಅದರಲ್ಲಿ ಅನೇಕ ರೀತಿಯ ಆಫರ್, ಡಿಸ್ಕೌಂಟ್'ಗಳನ್ನು ನಿಮಗೆ ತೋರಿಸಿ ನಂಬಿಸಲಾಗುತ್ತದೆ.
ನಂತರ, ನಿಮ್ಮ ವೈಯಕ್ತಿಕ ವಿವರಗಳನ್ನು ಪಡೆದುಕೊಳ್ಳಲಾಗುತ್ತದೆ. ಅದಾದ ನಂತರ ನಿಮ್ಮ ಫೋನ್'ಗೆ ಮಾಲ್ವೇರ್ ಅಂಟಿಕೊಳ್ಳುತ್ತದೆ. ಈ ಮಾಲ್ವೇರ್ ಮೂಲಕ ಫೋನ್'ನಲ್ಲಿರುವ ನಿಮ್ಮ ವೈಯಕ್ತಿಕ ಮಾಹಿತಿಯನ್ನೆಲ್ಲಾ ವಂಚಕರು ಸುಲಭವಾಗಿ ಸಂಗ್ರಹಿಸುತ್ತಾರೆ.
ಈ ವಾಟ್ಸಾಪ್ ವಂಚಕರು ಕೆಲ ಕಾಲದಿಂದ ಬಹಳ ಸಕ್ರಿಯರಾಗಿದ್ದಾರಂತೆ. ಆತಂಕದ ವಿಷಯವೆಂದರೆ, ಈ ವಂಚಕರು ಇಂಗ್ಲೀಷ್ ಒಂದಷ್ಟೇ ಅಲ್ಲ ಅನೇಕ ಭಾರತೀಯ ಭಾಷೆಗಳಲ್ಲಿ ಮೋಸದ ಸಂದೇಶಗಳನ್ನು ಕಳುಹಿಸಬಲ್ಲರು. ಅಲ್ಲದೇ, ನೀವು ಮೋಸಗೊಂಡಿದ್ದಲ್ಲದೇ ನಿಮ್ಮೊಂದಿಗೆ ಇನ್ನೂ 10 ಜನರಿಗೆ ನಿಮ್ಮಿಂದಲೇ ಹಳ್ಳ ತೋಡಿಸುತ್ತಾರೆ. ನಿಮಗೆ ಕಳುಹಿಸಿದ ಸಂದೇಶವನ್ನು ನಿಮ್ಮ ಹತ್ತು ಸ್ನೇಹಿತರಿಗೆ ಫಾರ್ವರ್ಡ್ ಮಾಡಿದರೆ ಆ ಹೋಟೆಲ್'ನಲ್ಲಿ ಇಷ್ಟು ಡಿಸ್ಕೌಂಟ್ ಸಿಗುತ್ತದೆ, ಗಿಫ್ಟ್ ಕಾರ್ಡ್ ಸಿಗುತ್ತದೆ ಎಂದೆಲ್ಲಾ ಪ್ರಲೋಭನೆಗೊಳಪಡಿಸುತ್ತಾರೆ ಎಂದು ಆಯಂಟಿ-ವೈರಸ್ ಸಾಫ್ಟ್'ವೇರ್ ಕಂಪನಿ ಕಾಸ್ಪೆರ್'ಸ್ಕಿ ಲ್ಯಾಬ್'ನ ಪ್ರಧಾನ ಭದ್ರತಾ ಸಂಶೋಧಕ ಡೇವಿಡ್ ಎಮ್ ತಿಳಿಸುತ್ತಾರೆ.

http://www.suvarnanews.tv/Technology/gadgets/beware-of-new-whatsapp-scam-19294?cf=article-bottom

Saturday, February 6, 2016

ಹಾಸ್ಯ - ಕೃಪೆ - ವಾಟ್ಸ್ ಆಪ್

ಹೊಸದಾಗಿ ಮದುವೆ ಆಗಿ ಬಂದ ಸೊಸೆ ಏನೂ ಕೆಲಸ ಮಾಡಲ್ಲ ಅಂತ ಮಗನಿಗೆ

ಹೇಳಿ ಪೇಚಾಡಿಕೊಂಡರು ಅಮ್ಮ.

ಆಮೇಲೇ ಅಮ್ಮಾ ಮಗ ಸೇರಿ ಒಂದು plan ಮಾಡಿದರು

ಅಮ್ಮ ಹೇಳಿದ್ರು" ನಾಳೆ ಬೆಳಿಗ್ಗೆ ಕಸ ಗುಡಿಸತಾ ಇರ್ತೀನಿ ಆಗ ನೀನು ಬಿಡಮ್ಮ ನಾ
ಗುಡಸ್ತೀನಿ ಅನ್ನು ಆಗಲಾದ್ರೂ ನಾ ಮಾಡ್ತೀನಿ ಅಂತಾಳಾ ನೋಡೋಣ"

ಅದೇ ಪ್ರಕಾರ ಅಮ್ಮ ಕಸ ಗುಡಸ್ತಾ ಇದ್ದಾಗ ಮಗ "ಬಿಡಮ್ಮ ನಾ ಗುಡಸ್ತೀನಿ"
ಅಂದ

"ಇಲ್ಲ ನಾ ಗುಡಸ್ತೀನಿ"


ಅಮ್ಮ ಮಗ ಕಿತ್ತಾಡೊಕೆ ಶುರು ಮಾಡಿದ್ರು.

ಸೊಸೆ ಬಂದು ಶಾಂತ ರೀತಿಯಿಂದ ಹೇಳಿದಳು"ಅದಕ್ಕೆ ಯಾಕ ಕಿತ್ತಾಡತೀರಿEven

 date ಗೆ ಅಮ್ಮ ಗುಡಸಲಿ,Odd date ಗೆ ಮಗ ಗುಡಸಲಿ" ಅಂತ.

ಸೊಸೆ Rockingಅಮ್ಮ ಮಗ Shocking

ಕೃಪೆ - ವಾಟ್ಸ್ ಆಪ್

ಚುಟುಕುಗಳು - ರಘು ವಿ.

  - 1-
ದಿನಚರಿಯ ಹೊಸಪುಟವ
ರಘು ವಿ.
ಸಂಪಾದಕ, ವಿವೇಕ ಹಂಸ.
ದಿನದ ಮೊದಲ ಕಿರಣದಿಂ
ತೆರೆವ ವಿಧಿಯ ಹಸ್ತವು ನೀನು
ಅಂಜದಳುಕದೆ ಬೆಳಕಿದೆಗೊಟ್ಟು
ನೆಳಲ ಹಿಂದಿಟ್ಟು ಒಲವಿನಿಂ
ಮುನ್ನಡೆವ ಧೀಮಂತಿಕೆಯ
ನೀಡಿ ಹರಸೊ ರವಿಯೇ!

 -2-
 ಜಗದ ದೊಡ್ಡಣ್ಣನುದಯಿಸಿಹ
ಕೃಪೆಯಿಂದ ಇಳೆಯ ಸಲಹಲೆಂದು
ಬೆಳಕ ಬಿತ್ತನೆಗೆ ತೆರೆಯಿರೆದೆಯನು
ನಿತ್ಯ ಜನುಮವು ಅಂತರಂಗದೊಳು
ದೊಡ್ಡಣ್ಣನೀವ ಮೌಲ್ಯಗಳ ಬಿತ್ತಿಹೆವು
ಸಾಧಿಸುವ ಮನ ನೀಡು ಬಾನ ರವಿಯೇ!
-3-
ಒಂಟಿ ಪಯಣಿಗ ನೀನು
ಅದೇನ ಧ್ಯಾನಿಸುವೆಯೊ
ಅದೇನ ಅರಿತಿಹೆಯೊ
ಅನಾದಿಯಿಂದಲೂ ಸತ್ಯ
ಪಾತ್ರೆಯ ಸುವರ್ಣ ಮುಚ್ಚಳ
ನೀನು, ಗುಟ್ಟನೆನಗೆ ಜಗಕೆ
ಉಣಬಡಿಸೊ ರವಿಯೇ! "
-ಕವಿ
( ನಾಳೆ ರವಿಯ ಉತ್ತರ )


-4-
 "ಪಯಣವದೆಲ್ಲ ಒಂಟಿಯೇ
ಲಕ್ಷ ತಾರಾಪಥದಿ ಜತೆಯಿಲ್ಲ
ಎದುರಿಲ್ಲ ಒದರಾಟ ಮೊದಲಿಲ್ಲ
ಸತ್ಯವನಂತ ಯಾತ್ರೆಯದು
ಪಾತ್ರೆ ಮುಚ್ಚಳಗಳಿಲ್ಲ ಬೆಸುಗೆ
ಬಂಧಗಳ ಬಿಡಿಸುವುದೇ ತಪವು
ಗುಟ್ಟು ಗಹ್ವರಗಳಿಲ್ಲ ಇಡು ಹೆಜ್ಜೆ
ಬೆಳಕಾಗುವುದೇ ರಟ್ಟು ನಡೆಯೊ
ಕವಿ ಕತ್ತಲಿಂದ ಬೆಳಕಿನೆಡೆಗೆ!"
-ರವಿ


-5-
"ಹೊತ್ತೊತ್ತಿಗೆ ಚಿತ್ತದಲಿ
ಮೊಳೆವ ಚಿಂತನೆಯಂತೆ
ಅಂದಂದಿನ ದಿನದಾಗಮವ
ಸಾರುವ ರವಿಯೇ,
ನಿನ್ನೊಳಚಿತ್ತದ ಚಿಂತನೆ
ಏನೋ?!"
-ಕವಿ


ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......