ವಸಂತ ಬಂದ, ಋತುಗಳ ರಾಜ ತಾ ಬಂದ
ಚಿಗುರನು ತಂದ, ಹೆಣ್ಗಳ ಕುಣಿಸುತ ನಿಂದ,
ಚಳಿಯನು ಕೊಂದ, ಹಕ್ಕಿಗಳುಲಿಗಳೆ ಚೆಂದ,
ಕೂವೂ , ಜಗ್ ಜಗ್, ಪುವ್ವೀ, ಟೂವಿಟ್ಟವೂ !
ಕುರಿ ನೆಗೆದಾಟ, ಕುರುಬರ ಕೊಳಲಿನೂದಾಟ,
ಇನಿಯರ ಬೇಟ; ಬನದಲಿ ಬೆಳದಿಂಗಳೂಟ,
ಹೊಸ ಹೊಸ ನೋಟ, ಹಕ್ಕಿಗೆ ನಲಿವಿನ ಪಾಟ,
ಕೂವೂ , ಜಗ್ ಜಗ್, ಪುವ್ವೀ, ಟೂವಿಟ್ಟವೂ !
ಮಾವಿನ ಸೊಂಪು, ಮಲ್ಲಿಗೆ ಬಯಲೆಲ್ಲ ಕಂಪು
ಗಾಳಿಯ ತಂಪು, ಜನಗಳ ಜಾತ್ರೆಯ ಗುಂಪು,
ಕಿವಿಗಳಿಗಿಂಪು ಹಕ್ಕಿಗಳುಲುಹಿನ ಪೆಂಪು,
ಕೂವೂ , ಜಗ್ ಜಗ್, ಪುವ್ವೀ, ಟೂವಿಟ್ಟವೂ !
ಬಂದ ವಸಂತ - ನಮ್ಮಾ ರಾಜ ವಸಂತ !
ಇಂಗ್ಲಿಷ್ ಗೀತಗಳು’ ಸಂಕಲನದ್ದು. ಆಂಗ್ಲ ಕವಿ Thomas Nashe (1567–1601) ಬರೆದ ’Spring' ಕವಿತೆಯ ಅನುವಾದ.
ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Friday, June 24, 2016
ವನಸುಮದೊಲೆನ್ನ ಜೀವನವು ವಿಕಸಿಸುವಂತೆ - ಡಿ ವಿ ಜಿ
ವನಸುಮದೊಲೆನ್ನ ಜೀವನವು ವಿಕಸಿಸುವಂತೆ
ಮನವನನುಗೊಳಿಸು ಗುರುವೆ, ಹೇ ದೇವಾ
ಜನಕೆ ಸಂತಸವೀವಘನನು ನಾನೆಂದೆಂಬ
ಎಣಿಕೆ ತೋರದೆ ಜಗದ ಪೊಗಳಿಕೆಗೆ ಬಾಯ್ ಬಿಡದೆ
ಕಾನನದಿ ಮಲ್ಲಿಗೆಯುಮೌನದಿಂ ಬಿರಿದು ನಿಜ
ಸೌರಭವ ಸೂಸಿ ನಲವಿಂತಾನೆಲೆಯ ಪಿಂತಿರ್ದು
ದೀನತೆಯ ತೋರಿ ಅಭಿ
ಮಾನವನು ತೊರೆದು ಕೃತಕೃತ್ಯತೆಯ ಪಡೆವಂತೆ
ಉಪಕಾರಿ ನಾನು ಎನ್ನುಪಕೃತಿಯು ಜಗಕೆಂಬ
ವಿಪರೀತ ಮತಿಯನುಳಿದು ವಿಪುಲಾಶ್ರಯವೀವ
ಸುಫಲ ಸುಮಭರಿತ ಪಾ-
ದಪದಂತೆ ನೈಜಮಾದೊಳ್ವಿನಿಂ ಬಾಳ್ವವೊಲು
- ಡಿ ವಿ ಜಿ
ಮನವನನುಗೊಳಿಸು ಗುರುವೆ, ಹೇ ದೇವಾ
ಜನಕೆ ಸಂತಸವೀವಘನನು ನಾನೆಂದೆಂಬ
ಎಣಿಕೆ ತೋರದೆ ಜಗದ ಪೊಗಳಿಕೆಗೆ ಬಾಯ್ ಬಿಡದೆ
ಕಾನನದಿ ಮಲ್ಲಿಗೆಯುಮೌನದಿಂ ಬಿರಿದು ನಿಜ
ಸೌರಭವ ಸೂಸಿ ನಲವಿಂತಾನೆಲೆಯ ಪಿಂತಿರ್ದು
ದೀನತೆಯ ತೋರಿ ಅಭಿ
ಮಾನವನು ತೊರೆದು ಕೃತಕೃತ್ಯತೆಯ ಪಡೆವಂತೆ
ಉಪಕಾರಿ ನಾನು ಎನ್ನುಪಕೃತಿಯು ಜಗಕೆಂಬ
ವಿಪರೀತ ಮತಿಯನುಳಿದು ವಿಪುಲಾಶ್ರಯವೀವ
ಸುಫಲ ಸುಮಭರಿತ ಪಾ-
ದಪದಂತೆ ನೈಜಮಾದೊಳ್ವಿನಿಂ ಬಾಳ್ವವೊಲು
- ಡಿ ವಿ ಜಿ
ಓದಿ ಬ್ರಾಹ್ಮಣನಾಗು - ಸಿದ್ಧಯ್ಯ ಪುರಾಣಿಕ
ಓದಿ ಬ್ರಾಹ್ಮಣನಾಗು
ಕಾದಿ ಕ್ಷತ್ರಿಯನಾಗು
ಶೂದ್ರ ವೈಶ್ಯನೆ ಆಗು
ದುಡಿದು ಗಳಿಸಿ
ಏನಾದರೂ ಆಗು
ನಿನ್ನೊಲವಿನಂತಾಗು
ಏನಾದರೂ ಸರಿಯೆ –
ಮೊದಲು ಮಾನವನಾಗು
ಹಿಂದು ಮುಸ್ಲಿಮನಾಗು
ಬೌದ್ಧ ಕ್ರೈಸ್ತನೆ ಆಗು
ಚಾರ್ವಾಕನೇ ಆಗು
ಭೋಗ ಬಯಸಿ
ಏನಾದರೂ ಆಗು
ಹಾರೈಸಿದಂತಾಗು
ಏನಾದರೂ ಸರಿಯೆ –
ಮೊದಲು ಮಾನವನಾಗು
ರಾಜಕಾರಣಿಯಾಗು
ರಾಷ್ಟ್ರಭಕ್ತನೆ ಆಗು
ಕಲೆಗಾರ ವಿಜ್ಞಾನಿ
ವ್ಯಾಪಾರಿಯಾಗು
ಏನಾದರೂ ಆಗು
ನೀ ಬಯಸಿದಂತಾಗು
ಏನಾದರೂ ಸರಿಯೇ –
ಮೊದಲು ಮಾನವನಾಗು
ಸಿದ್ಧಯ್ಯ ಪುರಾಣಿಕ ( 1918-1994)
ಕಾದಿ ಕ್ಷತ್ರಿಯನಾಗು
ಶೂದ್ರ ವೈಶ್ಯನೆ ಆಗು
ದುಡಿದು ಗಳಿಸಿ
ಏನಾದರೂ ಆಗು
ನಿನ್ನೊಲವಿನಂತಾಗು
ಏನಾದರೂ ಸರಿಯೆ –
ಮೊದಲು ಮಾನವನಾಗು
ಹಿಂದು ಮುಸ್ಲಿಮನಾಗು
ಬೌದ್ಧ ಕ್ರೈಸ್ತನೆ ಆಗು
ಚಾರ್ವಾಕನೇ ಆಗು
ಭೋಗ ಬಯಸಿ
ಏನಾದರೂ ಆಗು
ಹಾರೈಸಿದಂತಾಗು
ಏನಾದರೂ ಸರಿಯೆ –
ಮೊದಲು ಮಾನವನಾಗು
ರಾಜಕಾರಣಿಯಾಗು
ರಾಷ್ಟ್ರಭಕ್ತನೆ ಆಗು
ಕಲೆಗಾರ ವಿಜ್ಞಾನಿ
ವ್ಯಾಪಾರಿಯಾಗು
ಏನಾದರೂ ಆಗು
ನೀ ಬಯಸಿದಂತಾಗು
ಏನಾದರೂ ಸರಿಯೇ –
ಮೊದಲು ಮಾನವನಾಗು
ಸಿದ್ಧಯ್ಯ ಪುರಾಣಿಕ ( 1918-1994)
Friday, June 17, 2016
Monday, June 13, 2016
ಬಿಎಂಆರ್ಸಿಎಲ್(BMRCL)ನಲ್ಲಿ ಉದ್ಯೋಗ
ಬಿಎಂಆರ್ಸಿಎಲ್(BMRCL)ನಲ್ಲಿ ಉದ್ಯೋಗ
http://kannadakannadigga.blogspot.in/p/blog-page_13.html
BMRCL Vacancy Details:
Total No of Posts: 308
Name of the Posts:
1. Maintainer: 72 Posts
2. Train Operator: 255 Posts
3. Section Engineer: 11 Posts
Thursday, June 2, 2016
Wednesday, June 1, 2016
Subscribe to:
Posts (Atom)
ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.
"ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......

-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರ, ಕೋರಿಕೆಗೆ ಕೋರಿಕೆ! ಅಂದರೆ, ಈಶ್ವರ ಸಣಕಲ್ಲ ಅವರ ಪ್ರಖ್ಯಾತ ಕವಿತೆ "ಕೋರಿಕೆ" ಪ್ರಕ...
-
ಮೂಡುವನು ರವಿ ಮೂಡುವನು ಕತ್ತಲೊಡನೆ ಜಗಳಾಡುವನು ಪಂಜೆ ಮಂಗೇಶ ರಾಯರು ಮೂಡಣ ರಂಗಸ್ಥಳದಲಿ ನೆತ್ತರ ಮಾಡುವನು ಕುಣಿದಾಡುವನು ಬೆಳಕಿನ ಕಣ್ಣುಗಳಿ೦ದಾ ಸೂರ್ಯನು ನೋಡ...