Friday, June 24, 2016

ಕರುಣಾಳು ಬಾ ಬೆಳಕೆ .. - ಬಿ.ಎಂ. ಶ್ರೀಕಂಠಯ್ಯ


ಕರುಣಾಳು ಬಾ ಬೆಳಕೆ ಮಸುಕಿದೀ ಮಬ್ಬಿನಲಿ
ಕೈ ಹಿಡಿದು ನಡೆಸೆನ್ನನು
ಇರುಳು ಕತ್ತಲೆಯ ಗವಿ ಮನೆ ದೂರ ಕನಿಕರಿಸಿ
ಕೈ ಹಿಡಿದು ನಡೆಸೆನ್ನನು

ಹೇಳಿ ನನ್ನಡಿಯಿಡಿಸು ಬಲುದೂರ ನೋಟವನು
ಕೇಳನೊಡನೆಯೆ ಸಾಕು ನನಗೊಂದು ಹೆಜ್ಜೆ
ಮುನ್ನ ಇಂತಿರದಾದೆ ನಿನ್ನ ಬೇಡದೆ ಹೋದೆ
ಕೈ ಹಿಡಿದು ನಡೆಸೆನ್ನನು

ಇಷ್ಟುದಿನ ಸಲಹಿರುವೆ ಈ ಮೂರ್ಖನನು ನೀನು ಮುಂದೆಯೂ
ಕೈ ಹಿಡಿದು ನಡೆಸದಿಹೆಯಾ
ಕಷ್ಟದಡವಿಯ ಕಳೆದು ಬೆಟ್ಟ ಹೊಳೆಗಳ ಹಾದು
ಇರುಳನ್ನು ನೂಕದಿಹೆಯಾ?

ಬೆಳಗಾಗ ಹೊಳೆಯದೆಯೆ ಹಿಂದೊಮ್ಮೆ ನಾನೊಲಿದು
ಈ ನಡುವೆ ಕಳಕೊಂಡೆ ದಿವ್ಯ ಮುಖ ನಗುತ

                                                      - ಬಿ.ಎಂ. ಶ್ರೀಕಂಠಯ್ಯ

"ಕೋರಿಕೆ" - ಈಶ್ವರ ಸಣಕಲ್ಲ


ಜಗವೆಲ್ಲ ನಗುತಿರಲಿ!
ಜಗದಳುವು ನನಗಿರಲಿ!
ನಾನಳಲು, ಜಗವೆನ್ನನೆತ್ತಿಕೊಳದೇ?
ನಾ ನಕ್ಕು, ಜಗವಳಲು ನೋಡಬಹುದೇ?
ತೆರವಾಗಿ ನನ್ನೆದೆಯು,
ಧರೆಯೆದೆಯು ಉಕ್ಕಿರಲಿ!
ಧರೆಯೊಳಗೆ ತೇಲಿಸುವೆನೆನ್ನೆದೆಯನು!
ಧರೆ ಬತ್ತಿ, ಎನ್ನೆದೆಯು ಉಕ್ಕಲೇನು?
ಪೊಡವಿಯೈಸಿರಿವಡೆದು,
ಬಡತನವು ನನಗಿರಲಿ
ಕೈಯೊಡ್ಡೆ ಪೊಡವಿಯೆನಗಿಕ್ಕದೇನು?
ಪೊಡವಿಯೇ ಮೈಯಳಿಯೆ, ಮಾಡಲೇನು?
ವಿಶ್ವವನು ತುಂಬಿರುವ
ಈಶ್ವರನೆ ಅಳತೊಡಗೆ,
ಸೈತಿಡಲು, ಸೈಪಿಡಲು ಬರುವನಾವಂ?
’ಹೇ ತಂದೆ’,ಎನಲೆನ್ನನವನೆ ಕಾವಂ!

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......