Thursday, July 28, 2011

ಜನುಮದ ಜಾತ್ರಿ .............ದ.ರಾ.ಬೇಂದ್ರೆ

ನೇತ್ರಪಲ್ಲವಿಯಿಂದ ಸೂತ್ರಗೊಂಬೀ ಹಾಂಗ
ಪಾತ್ರ ಕುಣಿಸ್ಯಾನ ಒಲುಮೀಗೆ | ದಿನದಿನ
ಜಾತ್ರಿಯೆನಿಸಿತ್ತ ಜನುಮವು. ||೧||

ಹುಬ್ಬು ಹಾರಸಿದಾಗ ಹಬ್ಬ ಎನಿಸಿತು ನನಗ
‘ಅಬ್ಬ’ ಎನಬೇಡs ನನ ಗೆಣತಿ | ಸಾವಿರಕ
ಒಬ್ಬ ನೋಡವ್ವ ನನ ನಲ್ಲ. ||೨||


ಕಣ್ಣೆವಿ ಎತ್ತಿದರ ಹುಣ್ಣೀವಿ ತೆರಧ್ಹಾಂಗ
ಕಣ್ಣು ಏನಂತ ಬಣ್ಣಿಸಲೆ | ಚಿತ್ತಕ್ಕ
ಕಣ್ಣು ಬರೆಧ್ಹಾಂಗ ಕಂಡಿತ್ತು. ||೩||

ಹೇಸಿರಲು ಈ ಜೀವ ಆಸಿ ಹುಟ್ಟಿಸುತಿತ್ತು
ಮೀಸಿ ಮೇಲೆಳೆದ ಕಿರಿಬೆರಳು | ಕೆಂಗಯ್ಯ
ಬೀಸಿ ಕರೆದಾನ ನನಗಂತ. ||೪||

ತಂಬುಲತುಟಿ ನಗಿ ಹೊಂಬಿಸಲೆಂಬಂತೆ
ಬಿಂಬಿಸಿತವ್ವಾ ಎದಿಯಾಗ | ನಂಬೀಸಿ
ರಂಬೀಸಿತವ್ವಾ ಜೀವವ. ||೫||
-- ದ.ರಾ.ಬೇಂದ್ರೆ

ಕೃಪೆ: ಸುನಾಥ್
ಮೂಲ ಲೇಖನ: http://sallaap.blogspot.com/2011/07/blog-post.html

ಸಂಯಮವುಳ್ಳ ಶಕ್ತಿ

ಅದೊಂದು ಕರಾಟೆ ತರಬೇತಿ ನೀಡುವ ಶಾಲೆ. ಆ ಶಾಲೆಯ ಮುಖ್ಯಗುರುಗಳು ಈ ಕಲೆಗಾಗಿ ಜೀವನವನ್ನೇ ಮುಡಿಪಾಗಿಟ್ಟು ತಮ್ಮ ಶಿಷ್ಯರಿಗೆಲ್ಲ ಆದರ್ಶಪ್ರಾಯರಾದವರು. ಅವರಿಗೆ ಕರಾಟೆಯ ಪಾಠ ಹೊಟ್ಟೆಪಾಡಿನ ಉದ್ಯೋಗವಾಗಿರಲಿಲ್ಲ, ತರುಣ, ತರುಣಿಯರ ಜೀವನವನ್ನು ಪರಿಷ್ಕಾರಗೊಳಿಸುವ ಒಂದು ಕ್ರಿಯೆಯಾಗಿತ್ತು.

ಹಲವಾರು ಮಕ್ಕಳು, ತರುಣರು ಇಲ್ಲಿ ಕರಾಟೆ ಕಲಿಯುತ್ತಿದ್ದರು. ಒಬ್ಬ ಹುಡುಗ ಈ ಗುರುಗಳ ಹತ್ತಿರ ತನ್ನ ಐದನೇ ವಯಸ್ಸಿನಿಂದ ಕರಾಟೆ ಕಲಿಯಲು ಬರುತ್ತಿದ್ದ. ಹದಿನೈದು ವರ್ಷಗಳ ನಿರಂತರ ಪರಿಶ್ರಮದ ಸಾಧನೆಯಿಂದ ಆತ ಅತ್ಯಂತ ಶ್ರೇಷ್ಠ ಕರಾಟೆ ಪಟುವಾಗಿ ಹೊಮ್ಮಿದ. ಅತ್ಯಂತ ಶ್ರೇಷ್ಠ ಕರಾಟೆ ಸಾಧನೆ ಮಾಡಿದವನಿಗೆ  ಬ್ಲ್ಯಾಕ್ ಬೆಲ್ಟ್  ಅಂದರೆ ಕಪ್ಪುಪಟ್ಟಿಯನ್ನು ನೀಡಲಾಗುತ್ತದೆ.

ಅದನ್ನು ವಿಶೇಷ ಸಮಾರಂಭದಲ್ಲಿ ನೀಡಲು ಆಯೋಜಿಸಲಾಗಿತ್ತು. ಅದು ಆ ತರುಣನ ಕರಾಟೆ ಜೀವನದ ಮರೆಯಲಾಗದ ಸಂದರ್ಭ. ಆತ ತುಂಬ ಖುಷಿಯಾಗಿದ್ದ. ಆ ದಿನವೂ ಬಂತು.

ಕಾರ್ಯಕ್ರಮವನ್ನು ನೋಡಲು ತುಂಬ ಜನ ಬಂದಿದ್ದರು. ಹುಡುಗ ಎದ್ದು ತನ್ನ ಕಪ್ಪು ಪಟ್ಟಿಯನ್ನು ಪಡೆಯಲು ಗುರುವಿನ ಪೀಠದತ್ತ ಸಾಗಿದ.

`ಕಪ್ಪುಪಟ್ಟಿ ಪಡೆಯುವ ಎ್ಲ್ಲಲ ಅರ್ಹತೆಯನ್ನು ನೀನು ಪಡೆದುಕೊಂಡಿರುವುದು ಸಂತೋಷ, ಆದರೆ ಅದನ್ನು ಪಡೆಯುವುದಕ್ಕೆ ಮುನ್ನ ಇನ್ನೊಂದು ಮಹತ್ವದ ಪರೀಕ್ಷೆಯಲ್ಲಿ ಉತ್ತಿರ್ಣನಾಗಬೇಕು`  ಎಂದರು ಗಂಭೀರವಾಗಿ ಗುರುಗಳು.

`ನಾನು ಸಿದ್ಧವಾಗಿದ್ದೇನೆ ಗುರುಗಳೇ`  ಎಂದ ಶಿಷ್ಯ. ಬಹುಶಃ ಮತ್ತೊಂದು ದೈಹಿಕ ಪರೀಕ್ಷೆ ಇದ್ದಿರಬೇಕು ಎಂದು ಭಾವಿಸಿದ.`ಈಗ ನಾನು ಕೇಳುವ ಬಹುಮುಖ್ಯವಾದ ಪ್ರಶ್ನೆಗೆ ನೀನು ಸರಿಯಾದ ಉತ್ತರ ನೀಡಬೇಕು. ಈ ಕಪ್ಪುಪಟ್ಟಿಯ (ಬ್ಲ್ಯಾಕ್ ಬೆಲ್ಟ್ )  ನಿಜವಾದ ಅರ್ಥವೇನು?`

`ಗುರುಗಳೇ ಬಂದು ರೀತಿಯಲ್ಲಿ ಇದು ಮಹಾನ್ ಪ್ರಯಾಣದ ಅಂತಿಮ ಹಂತ. ದೀರ್ಘ ಕಾಲದ ಪರಿಶ್ರಮದ ಕಲಿಕೆಗೆ ದೊರೆತ ಪಾರಿತೋಷಕ.`ಗುರುಗಳು ಕ್ಷಣಕಾಲ ಯಾವ ಮಾತೂ ಆಡದೇ ನಿಂತು ನಂತರ ನಿಧಾನವಾಗಿ ಹೇಳಿದರು, `ನೀನು ಇನ್ನೂ ಕಪ್ಪು ಪಟ್ಟಿಗೆ ಸಿದ್ಧನಾಗಿಲ್ಲ, ಇನ್ನೊಂದು ವರ್ಷ ಪ್ರಯತ್ನಮಾಡಿ ಮರುವರ್ಷ ಬಾ.`
ಒಂದು ವರ್ಷದ ನಂತರ ಮತ್ತೆ ತರುಣ ಮೊಣಕಾಲೂರಿ ಗುರುವಿನ ಮುಂದೆ ಕಪ್ಪು ಪಟ್ಟಿಗಾಗಿ ಕುಳಿತ.

`ಈಗ ಹೇಳು ಕಪ್ಪುಪಟ್ಟಿಯ ನಿಜವಾದ ಅರ್ಥವೇನು?`  ಕೇಳಿದರು ಗುರುಗಳು.  `ಪರಿಶ್ರಮ ಸಾರ್ಥಕವಾದದ್ದರ ಸಂಕೇತ ಈ ಕಪ್ಪುಪಟ್ಟಿ` ಎಂದು ನುಡಿದ ಶಿಷ್ಯ.
ಗುರು ಮತ್ತೆ ಕ್ಷಣಕಾಲ ಸುಮ್ಮನಿದ್ದು ತಲೆ ಅಲ್ಲಾಡಿಸಿ ಅಸಮ್ಮತಿ ವ್ಯಕ್ತಪಡಿಸಿ,  `ಮಗೂ, ನೀನು ಇನ್ನೊಂದು ವರ್ಷ ಸಾಧನೆ ಮುನ್ನಡೆಸಿ ಬಾ` ಎಂದು ನಡೆದುಬಿಟ್ಟರು.

ಮುಂದಿನ ವರ್ಷ ಅದೇ ದಿನ ಗುರುಗಳು ಮತ್ತೆ ಅದೇ ಪ್ರಶ್ನೆ ಕೇಳಿದರು.  `ಈ ಕಪ್ಪುಪಟ್ಟಿಯ ನಿಜವಾದ ಅರ್ಥವೇನು?`ಈ ಬಾರಿ ಹುಡುಗ ನಿಧಾನವಾಗಿ ಹೇಳಿದ,  `ಗುರುಗಳೇ ಈ ಕಪ್ಪುಪಟ್ಟಿ ಸಾಧನೆಯ ಅಂತ್ಯವಲ್ಲ, ಪ್ರಾರಂಭ.

ಸದಾ ಉನ್ನತದ ಸಾಧನೆಯೆಡೆಗೆ ತುಡಿಯುವ, ಎಂದಿಗೂ ಮುಗಿಯದ ಸಾಧನೆಯ ಪ್ರಯಾಣದ ಪ್ರಾರಂಭದ ಸಂಕೇತ. ಇದು ಅಸಾಮಾನ್ಯ ಶಕ್ತಿಯ ದ್ಯೋತಕವಲ್ಲ, ಶಕ್ತಿಯಿದ್ದೂ ಅದನ್ನು ದುರ್ಬಳಕೆ ಮಾಡದಿರುವ ಸಂಯಮದ ಸಂಕೇತ.`
ಗುರುಗಳು ತಲೆ ಅಲ್ಲಾಡಿಸಿ ಮೆಚ್ಚುಗೆ ಸೂಸಿ,  `ಈಗ ನೀನು ಕಪ್ಪುಪಟ್ಟಿಗೆ ಅರ್ಹನಾಗಿದ್ದೀಯಾ` ಎಂದು ಅವನನ್ನು ಅಪ್ಪಿಕೊಂಡು ಕಪ್ಪುಪಟ್ಟಿ ನೀಡಿದರು.

ರಾಕ್ಷಸರ ಹಾಗೆ ವಿಪರೀತ ಶಕ್ತಿ ಪಡೆಯುವುದು ದೊಡ್ಡದಲ್ಲ, ಭಾರೀ ಶಕ್ತಿ ಇದ್ದೂ ಅದನ್ನು ರಾಕ್ಷಸರ ಹಾಗೆ ಬಳಸದಿರುವುದು ಬಹುದೊಡ್ಡ ಶಕ್ತಿ. ಅದೇ ಸಂಯಮ.ಸಂಯಮವಿಲ್ಲದ ಶಕ್ತಿ ಘಾತಕವಾದದ್ದು. ಅದಕ್ಕೇ ಕವಿ ಹೇಳಿದ್ದು,  ವೈರಾಗ್ಯ, ಕಾರುಣ್ಯ ಮೇಳನವೇ ಧೀರತನ . ಕರುಣೆ, ಮತ್ತು ವೈರಾಗ್ಯವಿಲ್ಲದ ಶಕ್ತಿ ಅಪಾಯಕಾರಿಯಾದದ್ದು.

ಶಕ್ತಿ ಇದ್ದೂ ಅದನ್ನು ವೈರಾಗ್ಯದಿಂದ, ಕರುಣೆಯಿಂದ ಕಾಣುವ ಶಕ್ತಿಯೇ ಧೀರತನ, ಅದರಿಂದಲೇ ಜಗತ್ತಿನ ಬೆಳವಣಿಗೆ, ರಕ್ಷಣೆ ಸಾಧ್ಯವಾಗುತ್ತದೆ.

Krupe Prajavani  06 July 2011

Wednesday, July 27, 2011

ಸಂಸ್ಕಾರ.. ಮತ್ತು ಇತರ ಕಥೆಗಳು

ಕನ್ನಡದಲ್ಲಿ ದ್ವನಿ ಪುಸ್ತಕಗಳ ಸರಣಿಗೆ ಮತ್ತೋಂದು ಪುಸ್ತಕ.. ಸಂಸ್ಕಾರ.. ಮತ್ತು ಇತರ ಕಥೆಗಳು
ಅನಂತ ಮೂರ್ತಿಯವರ ಸಂಸ್ಕಾರ ಕಾದಂಬರಿಯನು ಸಿ ಅರ್ ಸಿಂಹ ವಾಚನ ಮಾಡಿದರೆ.
ಇತರೆ ಕಥೆಗಳು - ಕಾರ್ತಿಕ ಮತ್ತು ಸೂರ್ಯನ ಕುದರೆಯನ್ನು..ರೇಖಾ ಮತ್ತು ಋತ್ವಿಕ ಸಿಂಹ ರವರು ವಾಚನ ಮಾಡಿದರೆ....  9.23 ಗಂಟೆಗಳ.. ದ್ವನಿ ಪುಸ್ತಕ ಇದು...

http://www.bookstalk.in/

Monday, July 25, 2011

ಉಶೀನರ ಎಂಬ ಮಹಾದಾನಿ -

ನಮ್ಮ ದೇಶದಲ್ಲಿ ಅನೇಕ ದಾನಿಗಳು ಆಗಿ ಹೋಗಿದ್ದಾರೆ. ಅವರ ದಾನದ ಕಥೆಗಳು ಅನೇಕರಿಗೆ ಸ್ಫೂರ್ತಿ ನೀಡಿವೆ. ಆದರೆ ಕೆಲವೊಂದು ಪ್ರಸಂಗಗಳು ಹೆಚ್ಚು ಪ್ರಸಿದ್ಧಿಯನ್ನು ಪಡೆದಿಲ್ಲ. ಅಂಥ ಹೆಚ್ಚು ಪ್ರಚಾರ ಪಡೆಯದ ಒಬ್ಬ ದಾನಿ ಉಶೀನರ. ಈ ಕಥೆ ಮಹಾಭಾರತದ ವನಪರ್ವದಲ್ಲಿ ಬಂದಿದೆ.

ಉಶೀನರ ಭೋಜನಗರದಲ್ಲಿ  ಒಂದು ಕಾಲದಲ್ಲಿ  ಮಹಾಪ್ರತಾಪಶಾಲಿಯಾದ ರಾಜನಾಗಿದ್ದ. ಆತ ತುಂಬ ಉದಾರಿಯೆಂತಲೂ, ಪರೋಪಕಾರಿ ಹಾಗೂ ಮಹಾದಾನಿ ಎಂತಲೂ ಪ್ರಸಿದ್ಧನಾಗಿದ್ದ.

ಇವನ ದಾನಶೀಲತೆಯ ಕೀರ್ತಿ ಮೂರು ಲೋಕಗಳಲ್ಲೂ ಹರಡಿತ್ತು. ಈ ವಿಷಯ ದೇವತೆಗಳ ನಾಯಕನಾದ ದೇವೇಂದ್ರನನ್ನು ಮುಟ್ಟಿತು. ಬಹುಶಃ ಮಾನವರ ಸಾಧನೆಗಳು ದೇವತೆಗಳಲ್ಲೂ ಅಸೂಯೆಯನ್ನು ಉಂಟುಮಾಡುತ್ತಿದ್ದವೆಂದು ತೋರುತ್ತದೆ.

ಇಂದ್ರನಿಗೆ ಉಶೀನರನ ದಾನ ಮಾಡುವ ಮನಸ್ಸು ಯಾವ ಮಟ್ಟದವರೆಗೂ ಹೋಗಬಲ್ಲುದು ಎಂಬುದನ್ನು ಪರೀಕ್ಷಿಸುವ ಮನಸ್ಸಾಯಿತು. ಈ ಪರೀಕ್ಷೆ ನಡೆಸುವುದಕ್ಕಾಗಿ ಆತ ಇತರ ದೇವತೆಗಳ ಸಹಾಯ ಕೇಳಿದ.

ಅಗ್ನಿಯನ್ನು ಕರೆದು ಒಂದು ಪಾರಿವಾಳದ ರೂಪವನ್ನು ಪಡೆಯಲು ಹೇಳಿದ. ತಕ್ಷಣ ಪಾರಿವಾಳದ ರೂಪದಲ್ಲಿ ಅಗ್ನಿ ನಿಂತ. ಇಂದ್ರ ಸ್ವತಃ ತಾನೇ ನಾಯಿಯ ರೂಪ ತಾಳಿ ಪಾರಿವಾಳವನ್ನು ಹಿಡಿಯಲು ಬೆನ್ನು ಹತ್ತಿದ.

ಗಾಬರಿಯಾದ ಪಾರಿವಾಳ ಹಾರುತ್ತ ಹಾರುತ್ತ ಉಶೀನರನ ಬಳಿಗೆ ಬಂದಿತು. ರಾಜ ತುಂಬ ದಯಾಳುವಲ್ಲವೇ? ಅದಕ್ಕೆ ಶರಣಾಗತಿಯನ್ನು ನೀಡಿದ. ಅದರ ಹಿಂದೆಯೇ ನಾಯಿಯೂ ಓಡಿ ಬಂತು. ತನಗೆ ಆಹಾರವಾಗಬೇಕಿದ್ದ ಪಾರಿವಾಳದ ಕಡೆಗೆ ನುಗ್ಗಲು ನೋಡಿತು. ಅದನ್ನು ಉಶೀನರ ತಡೆದು ನಿಲ್ಲಿಸಿದ.

ಆಗ ನಾಯಿ ಹೇಳಿತು,  `ರಾಜಾ, ನೀನು ಮಾಡುವುದು ಅನ್ಯಾಯ. ಅದು ನನ್ನ ಆಹಾರ. ಅಲ್ಲಿಂದ ಇಲ್ಲಿಯವರೆಗೂ ಅದನ್ನು ಅಟ್ಟಿಸಿಕೊಂಡು ಬಂದಿದ್ದೇನೆ. ನನಗೆ ಬೆಳಿಗ್ಗಿನಿಂದ ಯಾವ ಆಹಾರವೂ ದೊರೆತಿಲ್ಲ.

ಈ ಪಾರಿವಾಳವೇ ನನ್ನ ಇಡೀ ಮನೆಮಂದಿಗೆಲ್ಲ ಆಹಾರ. ಇದು ಸಿಗದಿದ್ದರೆ ನನ್ನ ಹೆಂಡತಿ, ಮಕ್ಕಳು ಮತ್ತು ನಾನು ಉಪವಾಸದಿಂದ ಸಾಯಬೇಕಾಗುತ್ತದೆ. ಆದ್ದರಿಂದ ಪಾರಿವಾಳವನ್ನು ನನಗೆ ಕೊಟ್ಟು ಬಿಡು.`

ರಾಜ ಈಗಾಗಲೇ ಪಾರಿವಾಳಕ್ಕೆ ರಕ್ಷಣೆಯ ಅಭಯವನ್ನು ನೀಡಿದ್ದಾಗಿದೆ. ಅದನ್ನು ನಾಯಿಗೆ ಒಪ್ಪಿಸುವುದು ಸಾಧ್ಯವಿಲ್ಲ. ಆದರೆ ನಾಯಿಯ ವಾದವೂ ಸರಿಯಾದದ್ದೇ. ಅದಕ್ಕೆ ತನ್ನ ಆಹಾರವನ್ನು ಪಡೆದುಕೊಳ್ಳುವ ಅಧಿಕಾರವಿದೆ.

ಪಾರಿವಾಳವನ್ನು ಅದಕ್ಕೆ ಕೊಡದಿದ್ದರೆ ನಾಯಿಗೆ ಅಪಚಾರ ಮಾಡಿದಂತಾಗುತ್ತದೆ. ಹೀಗೆ ಯೋಚಿಸಿ ಉಶೀನರ ನಾಯಿಗೆ ಹೇಳಿದ, `ಪಾರಿವಾಳಕ್ಕೆ ನಾನು ರಕ್ಷಣೆ ನೀಡಿದ್ದರಿಂದ ಅದನ್ನು ನಿನಗೆ ಕೊಡಲಾರೆ.

ಆದರೆ ನೀನೂ ಉಪವಾಸ ಬೀಳಬಾರದು. ಅದಕ್ಕೆ ಪಾರಿವಾಳದ ತೂಕದ ಮಾಂಸವನ್ನು ನನ್ನ ದೇಹದಿಂದ ಕೊಡುತ್ತೇನೆ` ಎಂದು ಹೇಳಿ ತಕ್ಕಡಿಯನ್ನು ತರಿಸಿ ಅದರ ಒಂದು ತಟ್ಟೆಯಲ್ಲಿ ಪಾರಿವಾಳವನ್ನಿಟ್ಟು ಮತ್ತೊಂದರಲ್ಲಿ ತನ್ನ ದೇಹದ ಭಾಗಗಳನ್ನು ಕತ್ತರಿಸಿ ಹಾಕುತ್ತ ಬಂದ.

ಅದೆಷ್ಟು ಮಾಂಸವನ್ನು ಹಾಕಿದರೂ ಪಾರಿವಾಳದ ತಟ್ಟೆ ಮೇಲಕ್ಕೇರುತ್ತಲೇ ಇಲ್ಲ! ಕೊನೆಗೆ ತಾನೇ ತಟ್ಟೆಯಲ್ಲಿ ಕುಳಿತು ತನ್ನ ಇಡೀ ದೇಹವನ್ನೇ ಸಮರ್ಪಿಸಿಕೊಂಡ. ಈ ಸರ್ವಾರ್ಪಣ ಭಾವವನ್ನು ಕಂಡು ಇಂದ್ರ, ಅಗ್ನಿ ತೃಪ್ತರಾಗಿ, ಪ್ರತ್ಯಕ್ಷವಾಗಿ ಅವನು ಮತ್ತೆ ಮೊದಲಿನಂತಾಗುವಂತೆ ವರ ನೀಡಿದರು. ಅವನ ಖ್ಯಾತಿ ಮತ್ತಷ್ಟು ಹೆಚ್ಚಿತು.

ಘನವಾದ ತತ್ವವೊಂದಕ್ಕೆ ದಿನರಾತ್ರಿ ಮನಸೋತು, ಬೇರೆ ಏನನ್ನೂ ಚಿಂತಿಸದೇ ಸದಾ ಅದೇ ತತ್ವಕ್ಕೇ ತನ್ನನ್ನು ತೆತ್ತುಕೊಂಡು ಜೀವಭಾರವನ್ನು ಮರೆತ ಇಂಥ ಮಹಾನುಭಾವರ ಜೀವನ ಅಸಾಮಾನ್ಯವಾದದ್ದು

Krupe: : Prajavani  - July 15, 2011
http://www.prajavani.net/web/include/story.php?news=1649&section=136&menuid=14

Sunday, July 24, 2011

ವಿಚಿತ್ರ ತೀರ್ಮಾನ

ಅವನೊಬ್ಬ ಹತ್ತಿಯ ವ್ಯಾಪಾರಿ. ತಾನು ರೈತರಿಂದ ಹತ್ತಿಯನ್ನು ಕೊಂಡು, ಅದನ್ನು ಬಿಗಿಯಾಗಿ ಹಗ್ಗದಿಂದ ಕಟ್ಟಿ ದಿಂಡುಗಳನ್ನು ಮಾಡಿ ಪಟ್ಟಣಕ್ಕೆ ಒಯ್ದು ಹೆಚ್ಚಿನ ಹಣಕ್ಕೆ ಮಾರಿ ಬರುತ್ತಿದ್ದ. ಅವನ ಜೀವನ ಸುಖವಾಗಿ ಸಾಗುತ್ತಿತ್ತು.

ಒಂದು ದಿನ ಹೀಗೆ ಐವತ್ತು ಹತ್ತಿಯ ದಿಂಡುಗಳನ್ನು ಬಂಡಿಯಲ್ಲಿ ತೆಗೆದುಕೊಂಡು ಹೋಗುತ್ತಿರುವಾಗ ದಾರಿಯಲ್ಲಿ ಊಟಕ್ಕೆಂದು ಮರದ ಕೆಳಗೆ ಕುಳಿತ. ಊಟವಾದ ಮೇಲೆ ವಿಶ್ರಾಂತಿ ಪಡೆಯಲು ಮಲಗಿದ. ಆ ಮರದ ಕೆಳಗೆ ಒಂದು ಸುಂದರವಾದ ಬುದ್ಧನ ವಿಗ್ರಹ. ಅದರ ಮುಂದೆಯೇ ಮಲಗಿದ. ಎಚ್ಚರವಾದ ಮೇಲೆ ನೋಡುತ್ತಾನೆ,

ತನ್ನ ಬಂಡಿ ಪೂರ್ತಿ ಖಾಲಿಯಾಗಿದೆ. ಎಲ್ಲ ಹತ್ತಿಯ ದಿಂಡುಗಳನ್ನು ಯಾರೋ ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ! ಯಾರನ್ನಾದರೂ ಕೇಳೋಣವೆಂದರೆ ಬುದ್ಧನ ವಿಗ್ರಹದ ಹೊರತು ಯಾರೂ ಅಲ್ಲಿ ಇಲ್ಲ. ಅವನು ತಕ್ಷಣವೇ ಹೋಗಿ ನ್ಯಾಯಾಧಿಕಾರಿಗೆ ದೂರು ಒಪ್ಪಿಸಿದ.

ಆ ನ್ಯಾಯಾಧೀಶ ಎಲ್ಲ ವಿಷಯವನ್ನು ಕೇಳಿ ತಿಳಿದುಕೊಂಡು ಒಂದು ತೀರ್ಮಾನಕ್ಕೆ ಬಂದ. ಆ ಹತ್ತಿಯ ದಿಂಡುಗಳನ್ನು ಬುದ್ಧನ ವಿನಾ ಇನ್ನಾರೂ ಕದ್ದಿರುವುದಕ್ಕೆ ಸಾಧ್ಯವಿಲ್ಲ, ಯಾಕೆಂದರೆ ಅಲ್ಲಿ ಮತ್ತಾರೂ ಇರಲಿಲ್ಲ. ಆದ್ದರಿಂದ ಬುದ್ಧನನ್ನು ನ್ಯಾಯಾಲಯಕ್ಕೆ ಕರೆತರುವಂತೆ ಅಪ್ಪಣೆ ಮಾಡಿದ. ಅಧಿಕಾರಿಗಳು ಕಷ್ಟಪಟ್ಟು ವಿಗ್ರಹವನ್ನು ಹೊತ್ತು ತಂದರು.

ನ್ಯಾಯಾಲಯದಲ್ಲಿ ಜನಸಂದಣಿ. ಇದೆಂಥ ವಿಚಾರಣೆ? ಬುದ್ಧನ ವಿಗ್ರಹ ಹತ್ತಿಯ ದಿಂಡುಗಳನ್ನು ಕಳವು ಮಾಡುವುದುಂಟೇ? ಒಂದು ವೇಳೆ ಬುದ್ಧನೇ ಕಳವು ಮಾಡಿದ್ದು ನಿಜವೆಂದು ತೀರ್ಮಾನವಾದರೆ ದಿಂಡುಗಳನ್ನು ವ್ಯಾಪಾರಿಗೆ ಯಾರು ಕೊಡುವವರು?

ನ್ಯಾಯಾಧೀಶ ಗಂಭೀರವಾಗಿ ಬಂದು ತನ್ನ ಆಸನದಲ್ಲಿ ಕುಳಿತ. ಎಲ್ಲರೂ ಕುತೂಹಲದಿಂದ ಕಲಾಪವನ್ನು ಗಮನಿಸುತ್ತಿದ್ದರು. ನ್ಯಾಯಾಧೀಶ ವ್ಯಾಪಾರಿಗೆ ಮತ್ತೊಮ್ಮೆ ತನ್ನ ತಕರಾರನ್ನು ವಿವರಿಸಲು ಹೇಳಿದ. ಆತ ಚಾಚೂ ತಪ್ಪದಂತೆ ಎಲ್ಲವನ್ನೂ ವಿವರಿಸಿ. ತನ್ನ ಕಳವಾದ ಮಾಲನ್ನು ಹೇಗಾದರೂ ಹುಡುಕಿಕೊಡುವಂತೆ ಬೇಡಿಕೊಂಡ. ನ್ಯಾಯಾಧೀಶ ಅದೇ ಗಂಭೀರತೆಯಿಂದ ನ್ಯಾಯಾಲಯದಲ್ಲಿ ಇಡಲಾಗಿದ್ದ ಬುದ್ಧನ ವಿಗ್ರಹಕ್ಕೆ ಕೇಳಿದ,  `ಈ ತಕರಾರಿನ ಬಗ್ಗೆ ನಿನಗೇನಾದರೂ ಹೇಳುವುದು ಇದೆಯೇ?`  ಜನರೆಲ್ಲ ಗೊಳ್ಳೆಂದು ನಕ್ಕರು. ವಿಗ್ರಹ ಮಾತನಾಡುವುದುಂಟೇ? ನ್ಯಾಯಾಧೀಶ ಮೇಜು ಕುಟ್ಟಿ ಹೇಳಿದ,  `ಸದ್ದು, ನ್ಯಾಯಾಲಯದಲ್ಲಿ ಈ ರೀತಿಯ ಗಲಾಟೆ ಆಗಕೂಡದು`.  ಜನ ಸ್ತಬ್ಧರಾದರು.

ಮತ್ತೆ ನ್ಯಾಯಾಧೀಶ ಬುದ್ಧನ ವಿಗ್ರಹದ ಕಡೆಗೆ ನೋಡಿ ಹೇಳಿದ,  `ನಿನಗೆ ಹೇಳುವುದು ಏನೂ ಇಲ್ಲದಿದ್ದರೆ ನಾನು ತೀರ್ಪು ನೀಡಬೇಕಾಗುತ್ತದೆ ಮತ್ತು ನಾನು ನೀಡುವ ತೀರ್ಪಿಗೆ ನೀನು ಬದ್ಧನಾಗಬೇಕಾಗುತ್ತದೆ.` ವಿಗ್ರಹ ಏನು ಹೇಳೀತು?

ನಿಧಾನವಾಗಿ ನ್ಯಾಯಾಧೀಶ ತೀರ್ಪು ಕೊಟ್ಟ.  `ಅಪರಾಧಿ ಬುದ್ಧನೇ. ಅವನೇ ಹತ್ತಿಯ ದಿಂಡುಗಳನ್ನು ಕದ್ದು ಬೇರೆಯವರಿಗೆ ಮಾರಿದ್ದಾನೆ. ಯಾಕೆಂದರೆ ಅಪರಾಧ ನಡೆದಾಗ ಅವನ ವಿನಾ ಮತ್ತಾರೂ ಇರಲೇ ಇಲ್ಲ. ಆದ್ದರಿಂದ ಮೂರು ದಿನದ ಒಳಗಾಗಿ ಆತ ಕದ್ದ ಮಾಲನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕು.` ಜನಕ್ಕೆ ನಗು ತಡೆಯಲಾಗಲಿಲ್ಲ. ಈ ನ್ಯಾಯಾಧೀಶನ ಮೂರ್ಖತನಕ್ಕೆ ಅವರು ಕೈ ತಟ್ಟಿ ಜೋರಾಗಿ ನಕ್ಕರು.

ನ್ಯಾಯಾಲಯ ಗದ್ದಲಮಯವಾಯಿತು. ತಕ್ಷಣ ನ್ಯಾಯಾಧೀಶ ಹೇಳಿದ,  `ನಾನು ಆಗಲೇ ನಿಮಗೆ ತಾಕೀತು ಮಾಡಿದ್ದೆ, ನ್ಯಾಯಾಲಯದ ಗೌರವಕ್ಕೆ ಕುಂದುಬರದ ಹಾಗೆ ನಡೆದುಕೊಳ್ಳಬೇಕು ಎಂದು. ನೀವು ಅದಕ್ಕೆ ಭಂಗ ತಂದಿದ್ದೀರಿ. ಆದ್ದರಿಂದ ನಿಮಗೆಲ್ಲ ಶಿಕ್ಷೆ ನೀಡಲೇಬೇಕು. ಅಧಿಕಾರಿಗಳು ಇಲ್ಲಿರುವ ಎಲ್ಲರ ಹೆಸರು, ವಿಳಾಸಗಳನ್ನು ಬರೆದುಕೊಳ್ಳಬೇಕು. ಮತ್ತು ಪ್ರತಿಯೊಬ್ಬರೂ ಇನ್ನು ನಾಲ್ಕು ತಾಸಿನಲ್ಲಿ ಮೂರು ಮೂರು ಹತ್ತಿಯ ದಿಂಡುಗಳನ್ನು ದಂಡವಾಗಿ ತಂದು ನ್ಯಾಯಾಲಯಕ್ಕೆ ಒಪ್ಪಿಸಬೇಕು.`

ಅನಿವಾರ್ಯವಾಗಿ ಎಲ್ಲರೂ ಮೂರು ದಿಂಡುಗಳನ್ನು ತಂದಿಟ್ಟರು. ಮೂಟೆಗಳನ್ನು ಕಳೆದುಕೊಂಡ ವ್ಯಾಪಾರಿ ಈ ರಾಶಿಗಳೊಳಗೆ ತನ್ನ ದಿಂಡುಗಳನ್ನು ಗುರುತಿಸಿದ. ಯಾಕೆಂದರೆ ಅವನು ತನ್ನ ದಿಂಡುಗಳ ಮೇಲೆ ನೀಲಿ ಬಣ್ಣದ ಗುರುತು ಮಾಡಿದ್ದ. ನ್ಯಾಯಾಧೀಶನ ಬುದ್ಧಿವಂತಿಕೆಯಿಂದ ನಿಜವಾದ ಕಳ್ಳರು ಸಿಕ್ಕಿಬಿದ್ದರು.

ಕೆಲವೊಂದು ಬಾರಿ ಕೆಲವು ವಿಚಾರಗಳು ಮೇಲ್ನೋಟಕ್ಕೆ ವಿಚಿತ್ರ, ಅಸಂಬದ್ಧ ಎನ್ನಿಸಿದರೂ ಆಳದಲ್ಲಿ ನೋಡಿದಾಗ ಚಿಂತನೆ ಕಂಡುಬರುತ್ತದೆ. ಆದ್ದರಿಂದ ಯಾವುದೇ ಚಿಂತನೆ, ನಮ್ಮ ಮನಸ್ಸಿಗೆ ಸರಿ ತೋರಲಿಲ್ಲವೆಂದಾಗ ಅದನ್ನು ಅಪ್ರಸ್ತುತ, ಅಪ್ರಯೋಜಕ ಎಂದು ತಳ್ಳಿಹಾಕುವುದು ಬುದ್ಧಿವಂತಿಕೆಯ ಲಕ್ಷಣವಲ್ಲ.  22- July 11

Saturday, July 23, 2011

ಧರ್ಮಶ್ರಿ , ಮತ್ತು ಕಂಬರರವ ಸಿಂಗಾರೆವ್ವ ಮತ್ತು ಅರಮನೆ


ಕನ್ನಡದಲ್ಲಿ ದ್ವನಿ ಪುಸ್ತಕಗಳ.. ಯುಗ ಪ್ರರಂಭವಾಗಿದೆ.. ಎಸ್ ಎಲ್  ಭೈರಪ್ಪರವ ಧರ್ಮಶ್ರಿ , ಮತ್ತು ಕಂಬರರವ ಸಿಂಗಾರೆವ್ವ ಮತ್ತು ಅರಮನೆ,, ಮತ್ತು ೩-೪ ಪುಸ್ತಕಗಳು ತುಂಬ ದಿನಗಳ ಹಿಂದೆ.. ಬಿಡುಗಡೆಯಗಿದೆ..

ಓದುಲು ಸಮಯ ಇಲ್ಲದವರು ಕೇಳಿ ಅನಂದೆಸಬಹುದು...

ಕನ್ನಡಿಗರೆ... ಕೊಂಡು ಕೇಳಿ.. ಮತ್ತು ಪುಸ್ತಕಗಳು ಪ್ರಕಟವಾಗಲು.. ಸಹಕರ ನೀಡಿ

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......