ಕಡೆಗೂ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಮುಖಂಡರ ಮನದ ಬಹುಕಾಲದ ಒಳ ಆಸೆ ಇಂದು ತಾನೆ ತಾನಾಗಿ ಫಲಿಸುವಂತಿದೆ. ಬೂಸಿಯ ಎಂಬ ಮಾಜಿ ಪೀಡೆ ಇಂದು ಪಕ್ಷ ಬಿಟ್ಟು ತೊಲಗುವುದು ಬಹುತೇಕ ನಿರೀಕ್ಷಿತ. ಅಂಡುಸುಟ್ಟ ಬೆಕ್ಕಿನಂತೆ ಭುಸುಗುಟ್ಟುತ್ತಾ ಕಂಡಕಂಡವರ ಮೇಲೆ ಹರಿಹಾಯುವ ಅವರದ್ದು "ಮಗುವಿನ ಮನಸ್ಸು" ಅಂತ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಮಹಿಷಾಸುರನ ಕಜಿನ್ ಬ್ರದರ್ ಮಾಧ್ಯಮಗಳ ಮುಂದೆ ಮುಲುಕಿದ್ದಾರೆ . ಮಗುವಿನ ಮನಸು ಎನ್ನೋದು ಹೀಗಿರೋದೆ ಹೌದಾಗಿದ್ದರೆ ಇಂತಹ "ಕಳ್ಳ ನನ್ನ ಮಕ್ಕಳು" ಹುಟ್ಟದಿದ್ರೇನೆ ಚನ್ನಾಗಿತ್ತು ಅನ್ನಿಸ್ತಿದೆ!
ಹೋಗಲಿ ಅವರ ಜೊತೆ ಇರುವ ಭಕ್ತಾಗ್ರೆಣಿ ಶಾಸಕ ಇಸಮುಗಳನ್ನೆ ಗಮನಿಸಿ ನೋಡಿ. "ಸಿಬಿಐ ಕೇಸ್ ಅನ್ನೋದು ಅಷ್ಟೇನೂ ದೊಡ್ಡ ಪ್ರಶ್ನೆ ಅಲ್ಲ" ಅಂತನ್ನುವ ಸೊರಬದ ರೇಪ್ ಮಾಡಿ ಪರಪ್ಪನ ಛತ್ರಕ್ಕೆ ಹೋಗಿದ್ದವನು, 'ನರ್ಸ'ರಿಯಲ್ಲೇ ಕಿಸ್ ಕೊಟ್ಟ ಹೊನ್ನಾಳಿ ಹೋರಿ, ರೇಪ್ ಮಾಡಲು ಧೈರ್ಯವಿಲ್ಲದೆ ಮೈಸವರಿ 'ನಿರಾಣಿ'ರಾದ ಬಾಗಲಕೋಟೆಯ ಗಡವ, ಪಿಂಪ್ ಖ್ಯಾತಿಯ ವಿಜಯನಗರದ ವೀರಪುತ್ರ ಅಲಿಯಾಸ್ ಮುಜುರಾಯಿ ಸರ್ವರ್, ಮಾಡುವ ಶಕ್ತಿ(?) ಇಲ್ಲದೆ ನೋಡಿ ಸಿಕ್ಕುಬಿದ್ದ ಪಾಟೀಲನ ಒಣಗಿದ ಸವದಿ! ಏಕಕಾಲದಲ್ಲಿಯೇ 'ಕುಮಾರಿ'ಯಾಗಿದ್ದುಕೊಂಡೆ 'ಶ್ರೀಮತಿ'ಯೂ ಆಗಿರುವ ಯಶವಂತಪುರದ ಕನ್ಯಾ ಮೇರಿಯ ಅಪರಾವತಾರ, ಇನ್ನು ಮುಂದೆ ಸಾಗರದಲ್ಲಿ ಹಸ್ತಾಂತರವಾಗಿ ಈಜುವ ಆತುರದಲ್ಲಿ ಕಮಲಳಿಗೆ 'ಕೈ ' ಕೊಡುವ ಕಾತರದಲ್ಲಿರುವ 'ಗೋಲ್'ಮಾಲ್' ಗೋಪಾಲ, ಸರಸ್ವತಿ ಪುತ್ರರ ಇಲಾಖೆಯ ಉಸ್ತುವಾರಿ ಹೊತ್ತ ಪಲ್ವಾನ್ ಹೆಬ್ಬೆಟ್ಟು ಸಚಿವ. ಒಂದಾದರೂ ಅಪ್ಪಂತಾ ಮೂತಿಗಳಿವೆಯ ಅಲ್ಲಿ? ಇವತ್ತು ಬೂಸಿಯರನ್ನ ಅಪ್ಪಾಜಿ ಅನ್ನುವ ಅವರೆಲ್ಲರ ನಾಲಗೆ ನಾಳೆ ಅಧಿಕಾರದ ರಕ್ತದ ರುಚಿ ಸಿಕ್ಕೊದಾದರೆ ನಿಖಿಲ್ ಗೌಡರಿಗೂ(!) ಅರ್ಜೆಂಟಾಗಿ ಅಪ್ಪಾಜಿ ಅನ್ನಲು ತಯಾರು ಇಂತಹ ಹಡಬೆಗಳ ಗುಪಿನ ನಾಯಕನ ತೆವಲಿಗೆ ಸರಕಾರ ಇದ್ದರೆಷ್ಟು? ಬಿದ್ದರೆಷ್ಟು....
ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Monday, May 14, 2012
Friday, April 27, 2012
ಗಾಲವನ ಗಲ್ಲದ ಮೇಲಿನ ದೃಷ್ಟಿ ಮಚ್ಚೆ ನಾನು.......
ಕನಸಿನಿಂದಾಚೆ ನಟ್ಟಿರುಳಲ್ಲಿ ಗರಿಬಿಚ್ಚಿ ಹಾರಿದ
ನನ್ನ ಮನಸಿಗೆ....ನಿನ್ನೆದೆಯಲ್ಲೆ ಗೂಡು ಕಟ್ಟುವ ಹಂಬಲ...
ನನ್ನೆದೆಯನ್ನಿರಿದ ನಿನ್ನ ಚೂಪು ನೋಟಗಳೆಲ್ಲ
ಹೃದಯದ ಆಳಕ್ಕಿಳಿದು ನನ್ನ ಕೊಂದರೂ
ನಾನಿನ್ನೂ ಬದುಕಿಯೆ ಇದ್ದೇನೆ!,
ಉಸಿರಿನ ಪ್ರತಿ ಆವರ್ತಕ್ಕೆ
ನಿನ್ನ ನೆನಪಿನ ಅಂತರವಿದೆ....
ಪ್ರತಿ ಕ್ಷಣವೂ ಬಾಳಲೇ ಬೇಕೆಂಬ ಭರವಸೆಗೆ
ಅಷ್ಟು ಸಾಕು/
ಕರಿಮೋಡ ನೆನ್ನೆಯಂತೆ ಇಂದೂ
ಸಂತಸದ ಹನಿಗಳಾಗಿ ಧರೆ ಮುಟ್ಟಲಿದೆ....
ಮತ್ತೆ ಭರವಸೆಯ ಹಸಿರ ಹೊಸ ಗರಿಕೆ
ಸಂಭ್ರಮದಿಂದ ಹುಟ್ಟಲಿದೆ,
ಅಪರೂಪಕ್ಕೆ ಬಂದ ಮಳೆಗೆ ರಂಗಾದದ್ದು
ಇಳೆಯಷ್ಟೇ ಅಲ್ಲ
ನಾನು.... ಜೊತೆಗೆ ನನ್ನೊಳಗೆ ಬೆಚ್ಚಗಿದ್ದ ನಿನ್ನ ನೆನಪುಗಳೂ ಕೂಡ//
ಇರುಳಿಡೀ ನಿನ್ನ ನೆನೆಯುತ್ತಿದ್ದೆ
ಹಗಲಲ್ಲೂ ನಿನ್ನ ನೆನಪಿನಲ್ಲಿ ಕ್ಷಣ ಮಾತ್ರವೂ ನಾನು ಸುಳಿದಿರಲಾರೆ
ಎನ್ನುವ ಖಚಿತ ಅರಿವಿದ್ದರೂನೂ...
ಎಲ್ಲೆಲ್ಲೋ ಅಲ್ಲ ಇಂದು ನಮ್ಮೂರಲ್ಲೂ ಮಳೆಯಿದೆ
ಆದರೆ ನನ್ನ ಕಣ್ಣಲ್ಲಿರುವ ಹನಿ ಮಾತ್ರ ಕೇವಲ ನನ್ನ ಸ್ವಂತದ್ದು,
ನೆನೆಯುತ್ತಾ ಮಳೆಯಲ್ಲಿ ನಿನ್ನನೆ ಮನಸಲ್ಲೂ ನೆನೆಯುತ್ತಿರುವಾಗ
ಕಾಲ ಇದ್ದಕ್ಕಿದ್ದಂತೆ ನಿಂತರೆ ಅದೆಷ್ಟು ಚೆಂದ!/
ಸದ್ದಿಲ್ಲದೂರಿಗೆ ಓಡಿ ಹೋಗ ಬೇಕೆನ್ನುವ ಅನುಗಾಲದ ಆಸೆ ನನಗೆ
ನಿನ್ನ ಹೆಜ್ಜೆ ಸದ್ದನ್ನುಳಿದು ಇನ್ನೇನನ್ನೂ ಕೇಳದಂತೆ ಕಿವುಡನಾದ ಮೇಲೆ....
ಅದಾಗೆಯೆ ಇದ್ದಲ್ಲಿಯೆ ಈಡೇರಿಹೋಗಿದೆ,
ಕನಸಿಗೂ ನನಸಿಗೂ ಒಂದೇ ಒಂದು ಅಕ್ಷರದ ಅಂತರ
ಅಂದುಕೊಳ್ಳುತ್ತಿದ್ದೆ ಆಗೆಲ್ಲ....
ಅದರ ನಿಜವಾದ ಅರ್ಥ ಆಗುತ್ತಿದೆ ಈಗೀಗ//
ಎಂದೆಂದೂ ಕರಗದ ಕನಸಿನ ಹಿಮಮಣಿಯಲ್ಲಿ
ಉಳಿದು ಹೋದ ನನ್ನ ಪ್ರೀತಿ
ಅನುಗಾಲ ತಾಜಾ ನಳನಳಿಸುತ್ತಿರುತ್ತದೆ...
ಕಣಕಣದಲ್ಲೂ ಸೇರಿ ಹೋದ ಒಲವ ಭಾವ
ಶಾಶ್ವತವಾಗಿ ಇಲ್ಲವಾಗೋಕೆ....
ನಾನೆ ಕಾಣದಂತೆ ಮರೆಯಾಗಿ ಹೋಗಬೇಕಷ್ಟೆ,
ಏಕಾಂತದಲ್ಲಿ ತನ್ಮಯನಾಗಿ ಯೋಚಿಸುತ್ತೇನೆ
ನನ್ನಷ್ಟಕ್ಕೆ ನಾನು ಅಂದುಕೊಂಡು ಮುಗುಳ್ನಗುತ್ತೇನೆ....
.ಒಂದು ವೇಳೆ ಇದು ಘೋಷಿತ ಅಪರಾಧವೇ ಆಗಿದ್ದರೂ
ನಾನು ಮನಸಾರೆ ನಿನ್ನ ಪ್ರೀತಿಸುತ್ತಿದ್ದೆ/
ಗಾಲವನ ಗಲ್ಲದ ಮೇಲಿನ ದೃಷ್ಟಿ ಮಚ್ಚೆ ನಾನು
ಅಗತ್ಯವಿಲ್ಲದಾಗ ನೀನು ಅದನ್ನ ಒರೆಸಿ ಹಾಕಿದ್ದು
ಅದಕ್ಕೇನೆ ಇರಬೇಕೇನೋ....
ಕೇವಲ ಮನಸಲ್ಲಿದ್ದಿದ್ದರೆ ಸಮಸ್ಯೆ ಅಷ್ಟಿರುತ್ತಿರಲಿಲ್ಲ
ಎದೆಯಾಳದ ತನಕ ವ್ಯಾಪಿಸಿರೋದರಿಂದಲೆ.....
ನಿನ್ನ ನೆನಪುಗಳಿಂದ ನನಗೆ ಬಿಡುಗಡೆಯಿಲ್ಲ,
ಗ್ರಹಿಕೆಗೆ ನಿಲುಕದ ಮೃದು ಭಾವ ನೀನು
ನಿನಗೂ ನಾನು ಹಾಗೇನೆ......
ಅಂತ ತಿಳಿದುಕೊಂಡ ಅನುಗಾಲದ ಮೂಢ ನಾನು//
ನನ್ನ ಮನಸಿಗೆ....ನಿನ್ನೆದೆಯಲ್ಲೆ ಗೂಡು ಕಟ್ಟುವ ಹಂಬಲ...
ನನ್ನೆದೆಯನ್ನಿರಿದ ನಿನ್ನ ಚೂಪು ನೋಟಗಳೆಲ್ಲ
ಹೃದಯದ ಆಳಕ್ಕಿಳಿದು ನನ್ನ ಕೊಂದರೂ
ನಾನಿನ್ನೂ ಬದುಕಿಯೆ ಇದ್ದೇನೆ!,
ಉಸಿರಿನ ಪ್ರತಿ ಆವರ್ತಕ್ಕೆ
ನಿನ್ನ ನೆನಪಿನ ಅಂತರವಿದೆ....
ಪ್ರತಿ ಕ್ಷಣವೂ ಬಾಳಲೇ ಬೇಕೆಂಬ ಭರವಸೆಗೆ
ಅಷ್ಟು ಸಾಕು/
ಕರಿಮೋಡ ನೆನ್ನೆಯಂತೆ ಇಂದೂ
ಸಂತಸದ ಹನಿಗಳಾಗಿ ಧರೆ ಮುಟ್ಟಲಿದೆ....
ಮತ್ತೆ ಭರವಸೆಯ ಹಸಿರ ಹೊಸ ಗರಿಕೆ
ಸಂಭ್ರಮದಿಂದ ಹುಟ್ಟಲಿದೆ,
ಅಪರೂಪಕ್ಕೆ ಬಂದ ಮಳೆಗೆ ರಂಗಾದದ್ದು
ಇಳೆಯಷ್ಟೇ ಅಲ್ಲ
ನಾನು.... ಜೊತೆಗೆ ನನ್ನೊಳಗೆ ಬೆಚ್ಚಗಿದ್ದ ನಿನ್ನ ನೆನಪುಗಳೂ ಕೂಡ//
ಇರುಳಿಡೀ ನಿನ್ನ ನೆನೆಯುತ್ತಿದ್ದೆ
ಹಗಲಲ್ಲೂ ನಿನ್ನ ನೆನಪಿನಲ್ಲಿ ಕ್ಷಣ ಮಾತ್ರವೂ ನಾನು ಸುಳಿದಿರಲಾರೆ
ಎನ್ನುವ ಖಚಿತ ಅರಿವಿದ್ದರೂನೂ...
ಎಲ್ಲೆಲ್ಲೋ ಅಲ್ಲ ಇಂದು ನಮ್ಮೂರಲ್ಲೂ ಮಳೆಯಿದೆ
ಆದರೆ ನನ್ನ ಕಣ್ಣಲ್ಲಿರುವ ಹನಿ ಮಾತ್ರ ಕೇವಲ ನನ್ನ ಸ್ವಂತದ್ದು,
ನೆನೆಯುತ್ತಾ ಮಳೆಯಲ್ಲಿ ನಿನ್ನನೆ ಮನಸಲ್ಲೂ ನೆನೆಯುತ್ತಿರುವಾಗ
ಕಾಲ ಇದ್ದಕ್ಕಿದ್ದಂತೆ ನಿಂತರೆ ಅದೆಷ್ಟು ಚೆಂದ!/
ಸದ್ದಿಲ್ಲದೂರಿಗೆ ಓಡಿ ಹೋಗ ಬೇಕೆನ್ನುವ ಅನುಗಾಲದ ಆಸೆ ನನಗೆ
ನಿನ್ನ ಹೆಜ್ಜೆ ಸದ್ದನ್ನುಳಿದು ಇನ್ನೇನನ್ನೂ ಕೇಳದಂತೆ ಕಿವುಡನಾದ ಮೇಲೆ....
ಅದಾಗೆಯೆ ಇದ್ದಲ್ಲಿಯೆ ಈಡೇರಿಹೋಗಿದೆ,
ಕನಸಿಗೂ ನನಸಿಗೂ ಒಂದೇ ಒಂದು ಅಕ್ಷರದ ಅಂತರ
ಅಂದುಕೊಳ್ಳುತ್ತಿದ್ದೆ ಆಗೆಲ್ಲ....
ಅದರ ನಿಜವಾದ ಅರ್ಥ ಆಗುತ್ತಿದೆ ಈಗೀಗ//
ಎಂದೆಂದೂ ಕರಗದ ಕನಸಿನ ಹಿಮಮಣಿಯಲ್ಲಿ
ಉಳಿದು ಹೋದ ನನ್ನ ಪ್ರೀತಿ
ಅನುಗಾಲ ತಾಜಾ ನಳನಳಿಸುತ್ತಿರುತ್ತದೆ...
ಕಣಕಣದಲ್ಲೂ ಸೇರಿ ಹೋದ ಒಲವ ಭಾವ
ಶಾಶ್ವತವಾಗಿ ಇಲ್ಲವಾಗೋಕೆ....
ನಾನೆ ಕಾಣದಂತೆ ಮರೆಯಾಗಿ ಹೋಗಬೇಕಷ್ಟೆ,
ಏಕಾಂತದಲ್ಲಿ ತನ್ಮಯನಾಗಿ ಯೋಚಿಸುತ್ತೇನೆ
ನನ್ನಷ್ಟಕ್ಕೆ ನಾನು ಅಂದುಕೊಂಡು ಮುಗುಳ್ನಗುತ್ತೇನೆ....
.ಒಂದು ವೇಳೆ ಇದು ಘೋಷಿತ ಅಪರಾಧವೇ ಆಗಿದ್ದರೂ
ನಾನು ಮನಸಾರೆ ನಿನ್ನ ಪ್ರೀತಿಸುತ್ತಿದ್ದೆ/
ಗಾಲವನ ಗಲ್ಲದ ಮೇಲಿನ ದೃಷ್ಟಿ ಮಚ್ಚೆ ನಾನು
ಅಗತ್ಯವಿಲ್ಲದಾಗ ನೀನು ಅದನ್ನ ಒರೆಸಿ ಹಾಕಿದ್ದು
ಅದಕ್ಕೇನೆ ಇರಬೇಕೇನೋ....
ಕೇವಲ ಮನಸಲ್ಲಿದ್ದಿದ್ದರೆ ಸಮಸ್ಯೆ ಅಷ್ಟಿರುತ್ತಿರಲಿಲ್ಲ
ಎದೆಯಾಳದ ತನಕ ವ್ಯಾಪಿಸಿರೋದರಿಂದಲೆ.....
ನಿನ್ನ ನೆನಪುಗಳಿಂದ ನನಗೆ ಬಿಡುಗಡೆಯಿಲ್ಲ,
ಗ್ರಹಿಕೆಗೆ ನಿಲುಕದ ಮೃದು ಭಾವ ನೀನು
ನಿನಗೂ ನಾನು ಹಾಗೇನೆ......
ಅಂತ ತಿಳಿದುಕೊಂಡ ಅನುಗಾಲದ ಮೂಢ ನಾನು//
Monday, April 23, 2012
Friday, April 20, 2012
ತಪ್ಪಿಲ್ಲವಲ್ಲ ಇದರಲ್ಲಿ?
ಖಾಲಿ ಕಂಗಳಲ್ಲಿ ಕಂಬನಿಯ ಕೊನೆ ಹನಿ ಇನ್ನೂ ಇದೆ
ಎದೆಯಾಳದಲ್ಲಿ ನೋವಿನ ಕಡೇ ಹನಿ ಉಳಿದಿರುವ ತನಕ....
ಮನದೊಳಗೆ ನಿರೀಕ್ಷೆ ಜೀವಂತ,
ಕಿರಣ ತಬ್ಬಿದ ನೆಲದ ಬತ್ತಲೆ ಮ
ನಸುಕಿನಲ್ಲೂ ನವಿರಾಗಿ ಬೆವರಿದಾಗ....
ನನ್ನೊಳಗೆ ಹುಟ್ಟಿದ ಹೊಸ ಕನಸೆ ನೀನು/
ನಿನ್ನ ಕನಸುಗಳು ಸೆರೆಯಾದ ನನ್ನ ಕಣ್ಣುಗಳಲ್ಲಿ
ಸಿರಿ ತುಂಬಿ ತುಳುಕಿತು...
ನಿನ್ನೊಲವಿನ ಜಹಗೀರಿನಲ್ಲಿ ನೆಲೆಯಾದ ನನ್ನ ಮನ
ದೋಚಲಾರದಷ್ಟು ದೊಡ್ಡ ಖಜಾನೆಯಾಯಿತು,
ಮುಂಬೆಳಗಿನ ಬೀಸೊ ಗಾಳಿ ಇಷ್ಟು ತಂಪೆನಿಸೋಕೆ...
.ಅದರಲ್ಲಿ ತೇಲಿ ಬರುತ್ತಿರೊ ನಿನ್ನ ನೆನಪೂ ಕಾರಣ//
ಹಿಮದ ಹಲಗೆಯ ಮೇಲೆ ನಿನ್ನ ಹೆಸರನ್ನ ಪ್ರಾರ್ಥನೆ ಅಂತ ಬರೆದೆ
ಕಲ್ಲಿನ ಎದೆಯ ಮೇಲೆ ನಿನ್ನ ಉಸಿರನ್ನ ವರ ಅಂತ ಕೊರೆದೆ...
ತಪ್ಪಿಲ್ಲವಲ್ಲ ಇದರಲ್ಲಿ?,
ಸಂಜೆ ನೀನೆ
ಮರಳಿ ಬರುವ ಮುಂಜಾನೆಯೂ....
ಮನಸ ಅಂಚಿನಲ್ಲಿ ಹಾಕಿದ ಚಂದದ ಚಿತ್ತಾರವೂ ನೀನೇನೆ/
ಬರುವ ಕ್ಷಣಗಳೆಲ್ಲ ಹೋಗಲೇ ಬೇಕಿದೆ
ಮನದೊಳಗೆ ಅರಳುವ ಕನಸಿನ ಸುಮಗಳೂ.....
ಎಂದಾದರೊಮ್ಮೆ ಮುದುಡಲೇ ಬೇಕಿದೆ,
ನನ್ನೆದೆಯ ಪೊಟರೆಯಲ್ಲಿ ಹಾಡುವ ಕೋಗಿಲೆಯ ಗುಂಜನವನ್ನ
ಹಾಗೆ ಕಾಯ್ದಿರಿಸಿದ್ದೇನೆ....
ಕೇಳುವ ನಿನ್ನ ಕಿವಿಯ ನಿರೀಕ್ಷೆಯಷ್ಟೆ ಇನ್ನಿರೋದು//
ಗೋಳ ಭೂಮಿಯಾಚೆ ನೀನಿದ್ದರೂ
ನಿನ್ನ ನೆನಪಿನ ತಲ್ಲಣದ ಕಂಪನ ನಿತ್ಯ ನನ್ನೆದೆಯಲ್ಲಿ ಏಳಿಸುತ್ತಿದ್ದೀಯ....
ಗಾಬರಿ ಇಲ್ಲ ಭೂಮಿ ಕಂಪಿಸಿದರೆ
ಪಾಪ ಅದಕ್ಕೂ ಅದ್ಯಾರದೋ ಕನಸಿನ ಕನವರಿಕೆ ಆವರಿಸಿದ್ದಿರಬಹುದು,
ನಾನೇನು ಬಯಸಿರಲಿಲ್ಲ
ನೀನೆ ಇಷ್ಟಪಟ್ಟು ಕೂಡಿಸಿದ್ದು ನಮ್ಮಿಬ್ಬರ ಜೀವದ ನಡುವೆ ಬಂಧದ ಕೊಂಡಿ....
ನೀನೇನೆ ಈಗ ಎಲ್ಲಾ ಅಲಿಖಿತ ಒಪ್ಪಂದಗಳನ್ನ
ಏಕಪಕ್ಷೀಯವಾಗಿ ಮುರಿದು ಹಾದಿ ಬದಲಿಸಿಕೊಂಡೆ ನಿನ್ನ ಬಾಳಿನ ಬಂಡಿ....
ಉಳಿದದ್ದು ನನ್ನ ಪಾಲಿಗೆ ನೆನಪಿನ ನೋವು ಮಾತ್ರ....ಇದನ್ನೂ ನಾನು ಬಯಸಿರಲಿಲ್ಲ!/
ನಾನು ಬಯಸಿದ್ದ ಜೀವದ್ದು ಇಷ್ಟೊಂದು ಕಲ್ಲು ಮನಸ?
ನನ್ನನ್ನದು ಆವರಿಸಿ ಒಂದೊಮ್ಮೆ ಮುದಗೊಳಿಸಿದ್ದು ಕೇವಲ ಕನಸ?
ಪಡುವಣಕ್ಕೂ ರಂಗು ರಂಗಾಗುವ ಹಕ್ಕಿದೆ......
ಅದರ ಒಳ ಮನಸಲ್ಲಿ
ಸಂಜೆಯಲ್ಲಾದರೂ ಸರಿ ರವಿ ತನ್ನನ್ನೂ ಅಪ್ಪುತ್ತಾನೆ ಅನ್ನುವ ಸೊಕ್ಕಿದೆ,
ನಸು ಇರುಳ ಮಬ್ಬು ಬೆಳಕಿನಲ್ಲಿ ನಿನ್ನ ಬಿಂಬ ಕಂಡಂತಾದ ನನ್ನ ಕನಸು......
ಎಂದಾದರೊಮ್ಮೆ ಕನಿಷ್ಠ ಕನಸಲ್ಲಾದರೂ(?) ನನಸಾದೀತ ನೀನೆ ಹೇಳು?//
ಎದೆಯಾಳದಲ್ಲಿ ನೋವಿನ ಕಡೇ ಹನಿ ಉಳಿದಿರುವ ತನಕ....
ಮನದೊಳಗೆ ನಿರೀಕ್ಷೆ ಜೀವಂತ,
ಕಿರಣ ತಬ್ಬಿದ ನೆಲದ ಬತ್ತಲೆ ಮ
ನಸುಕಿನಲ್ಲೂ ನವಿರಾಗಿ ಬೆವರಿದಾಗ....
ನನ್ನೊಳಗೆ ಹುಟ್ಟಿದ ಹೊಸ ಕನಸೆ ನೀನು/
ನಿನ್ನ ಕನಸುಗಳು ಸೆರೆಯಾದ ನನ್ನ ಕಣ್ಣುಗಳಲ್ಲಿ
ಸಿರಿ ತುಂಬಿ ತುಳುಕಿತು...
ನಿನ್ನೊಲವಿನ ಜಹಗೀರಿನಲ್ಲಿ ನೆಲೆಯಾದ ನನ್ನ ಮನ
ದೋಚಲಾರದಷ್ಟು ದೊಡ್ಡ ಖಜಾನೆಯಾಯಿತು,
ಮುಂಬೆಳಗಿನ ಬೀಸೊ ಗಾಳಿ ಇಷ್ಟು ತಂಪೆನಿಸೋಕೆ...
.ಅದರಲ್ಲಿ ತೇಲಿ ಬರುತ್ತಿರೊ ನಿನ್ನ ನೆನಪೂ ಕಾರಣ//
ಹಿಮದ ಹಲಗೆಯ ಮೇಲೆ ನಿನ್ನ ಹೆಸರನ್ನ ಪ್ರಾರ್ಥನೆ ಅಂತ ಬರೆದೆ
ಕಲ್ಲಿನ ಎದೆಯ ಮೇಲೆ ನಿನ್ನ ಉಸಿರನ್ನ ವರ ಅಂತ ಕೊರೆದೆ...
ತಪ್ಪಿಲ್ಲವಲ್ಲ ಇದರಲ್ಲಿ?,
ಸಂಜೆ ನೀನೆ
ಮರಳಿ ಬರುವ ಮುಂಜಾನೆಯೂ....
ಮನಸ ಅಂಚಿನಲ್ಲಿ ಹಾಕಿದ ಚಂದದ ಚಿತ್ತಾರವೂ ನೀನೇನೆ/
ಬರುವ ಕ್ಷಣಗಳೆಲ್ಲ ಹೋಗಲೇ ಬೇಕಿದೆ
ಮನದೊಳಗೆ ಅರಳುವ ಕನಸಿನ ಸುಮಗಳೂ.....
ಎಂದಾದರೊಮ್ಮೆ ಮುದುಡಲೇ ಬೇಕಿದೆ,
ನನ್ನೆದೆಯ ಪೊಟರೆಯಲ್ಲಿ ಹಾಡುವ ಕೋಗಿಲೆಯ ಗುಂಜನವನ್ನ
ಹಾಗೆ ಕಾಯ್ದಿರಿಸಿದ್ದೇನೆ....
ಕೇಳುವ ನಿನ್ನ ಕಿವಿಯ ನಿರೀಕ್ಷೆಯಷ್ಟೆ ಇನ್ನಿರೋದು//
ಗೋಳ ಭೂಮಿಯಾಚೆ ನೀನಿದ್ದರೂ
ನಿನ್ನ ನೆನಪಿನ ತಲ್ಲಣದ ಕಂಪನ ನಿತ್ಯ ನನ್ನೆದೆಯಲ್ಲಿ ಏಳಿಸುತ್ತಿದ್ದೀಯ....
ಗಾಬರಿ ಇಲ್ಲ ಭೂಮಿ ಕಂಪಿಸಿದರೆ
ಪಾಪ ಅದಕ್ಕೂ ಅದ್ಯಾರದೋ ಕನಸಿನ ಕನವರಿಕೆ ಆವರಿಸಿದ್ದಿರಬಹುದು,
ನಾನೇನು ಬಯಸಿರಲಿಲ್ಲ
ನೀನೆ ಇಷ್ಟಪಟ್ಟು ಕೂಡಿಸಿದ್ದು ನಮ್ಮಿಬ್ಬರ ಜೀವದ ನಡುವೆ ಬಂಧದ ಕೊಂಡಿ....
ನೀನೇನೆ ಈಗ ಎಲ್ಲಾ ಅಲಿಖಿತ ಒಪ್ಪಂದಗಳನ್ನ
ಏಕಪಕ್ಷೀಯವಾಗಿ ಮುರಿದು ಹಾದಿ ಬದಲಿಸಿಕೊಂಡೆ ನಿನ್ನ ಬಾಳಿನ ಬಂಡಿ....
ಉಳಿದದ್ದು ನನ್ನ ಪಾಲಿಗೆ ನೆನಪಿನ ನೋವು ಮಾತ್ರ....ಇದನ್ನೂ ನಾನು ಬಯಸಿರಲಿಲ್ಲ!/
ನಾನು ಬಯಸಿದ್ದ ಜೀವದ್ದು ಇಷ್ಟೊಂದು ಕಲ್ಲು ಮನಸ?
ನನ್ನನ್ನದು ಆವರಿಸಿ ಒಂದೊಮ್ಮೆ ಮುದಗೊಳಿಸಿದ್ದು ಕೇವಲ ಕನಸ?
ಪಡುವಣಕ್ಕೂ ರಂಗು ರಂಗಾಗುವ ಹಕ್ಕಿದೆ......
ಅದರ ಒಳ ಮನಸಲ್ಲಿ
ಸಂಜೆಯಲ್ಲಾದರೂ ಸರಿ ರವಿ ತನ್ನನ್ನೂ ಅಪ್ಪುತ್ತಾನೆ ಅನ್ನುವ ಸೊಕ್ಕಿದೆ,
ನಸು ಇರುಳ ಮಬ್ಬು ಬೆಳಕಿನಲ್ಲಿ ನಿನ್ನ ಬಿಂಬ ಕಂಡಂತಾದ ನನ್ನ ಕನಸು......
ಎಂದಾದರೊಮ್ಮೆ ಕನಿಷ್ಠ ಕನಸಲ್ಲಾದರೂ(?) ನನಸಾದೀತ ನೀನೆ ಹೇಳು?//
Monday, March 19, 2012
ಜಾರುಬೆಣ್ಣೆಯಿದೆ ಕೈಯೊಳಗೆ
ಜಾರುಬೆಣ್ಣೆಯಿದೆ ಕೈಯೊಳಗೆ
ಅಂಬೆಗಾಲನಡೆ! ಧೂಳಡರಿದ ಮೈ!
ಮೊಸರಿನ ಕೊಸರಿದೆ ಮುಖದೊಳಗೆ!
ಕನ್ನಡಿ ಕೆನ್ನೆ! ನೇರಿಲೆ ಕಣ್ಣು !
ಹಣೆಯಲಿ ಗೋರೋಚನ ತಿಲಕ !
ನೊಸಲಿನ ತುಂಬ ಗುಂಗುರಿನುಂಗುರ
ಮುಖಕಮಲಕೆ ಕವಿದಿವೆ ಭೃಂಗ ||
ಕೊರಳಲಿ ತಾಯತಿ! ಹುಲಿಯುಗುರಿನ ಸರ !
ಬರುತಿದೆ ಶ್ಯಾಮಾಂಗನ ಡೋಲಿ |
ಗಾಳಿಗಾಡುತಿದೆ ಸಿರಿ ಮುಂಗುರುಳು
ಮಧು ಹೀರಿದ ದುಂಬಿಯ ಹೋಲಿ ||
-ಹೆಚ್. ಎಸ್ ವೆಂಕಟೇಶ ಮೂರ್ತಿ (ಉತ್ತರಾಯಣ ಮತ್ತು.... ಕವನ ಸಂಕಲನದಿಂದ)
ಅಂಬೆಗಾಲನಡೆ! ಧೂಳಡರಿದ ಮೈ!
ಮೊಸರಿನ ಕೊಸರಿದೆ ಮುಖದೊಳಗೆ!
ಕನ್ನಡಿ ಕೆನ್ನೆ! ನೇರಿಲೆ ಕಣ್ಣು !
ಹಣೆಯಲಿ ಗೋರೋಚನ ತಿಲಕ !
ನೊಸಲಿನ ತುಂಬ ಗುಂಗುರಿನುಂಗುರ
ಮುಖಕಮಲಕೆ ಕವಿದಿವೆ ಭೃಂಗ ||
ಕೊರಳಲಿ ತಾಯತಿ! ಹುಲಿಯುಗುರಿನ ಸರ !
ಬರುತಿದೆ ಶ್ಯಾಮಾಂಗನ ಡೋಲಿ |
ಗಾಳಿಗಾಡುತಿದೆ ಸಿರಿ ಮುಂಗುರುಳು
ಮಧು ಹೀರಿದ ದುಂಬಿಯ ಹೋಲಿ ||
-ಹೆಚ್. ಎಸ್ ವೆಂಕಟೇಶ ಮೂರ್ತಿ (ಉತ್ತರಾಯಣ ಮತ್ತು.... ಕವನ ಸಂಕಲನದಿಂದ)
Tuesday, February 28, 2012
ಆಡಂಬರದ ಪೂಜೆ
ಕುರುಕ್ಷೇತ್ರದ ಯುದ್ಧ ಮುಗಿದು ಯುಧಿಷ್ಠರ ಚಕ್ರವರ್ತಿಯಾಗಿದ್ದಾನೆ. ದೇಶದಲ್ಲಿ ಶಾಂತಿ ಇದೆ. ಇನ್ನು ಮುಂದೆ ಯುದ್ಧದ ಭೀತಿ ಇಲ್ಲ. ಯುದ್ಧ ಮಾಡಲು ಯಾರೂ ಉಳಿದೇ ಇಲ್ಲ.
ಅರ್ಜುನನಿಗೆ ತಾನು ಯುದ್ಧದಲ್ಲಿ ಮಾಡಿದ ಸಾಧನೆಯ ಬಗ್ಗೆ ಗರ್ವ ಬಂದಿದೆ.
ತಾನಿಲ್ಲದಿದ್ದರೆ ಪಾಂಡವರು ಗೆಲ್ಲುವುದು ಸಾಧ್ಯವಿತ್ತೇ? ತಾನು ಈಶ್ವರನನ್ನು ಒಲಿಸಿಕೊಂಡು ಪಡೆದ ಪಾಶುಪತಾಸ್ತ್ರದಿಂದಲೇ ವಿಜಯ ಸಾಧ್ಯವಾದದ್ದು ಎಂದು ಬಲವಾಗಿ ನಂಬಿದ್ದ. ಪರಶಿವನ ಬಗ್ಗೆ ತನಗಿದ್ದ ಗೌರವವನ್ನು ತೋರಿಸಲು ದಿನಾಲು ಭರ್ಜರಿಯಾಗಿ ಪೂಜೆ ಮಾಡುತ್ತಿದ್ದ.
ಅವನು ಪೂಜೆಗೆ ಕುಳಿತರೆ ಆ ಕರ್ಪೂರ, ಊದುಬತ್ತಿಗಳ ಘಮಲೇನು? ಅದೆಷ್ಟು ಆರತಿಗಳು, ಅದೆಷ್ಟು ಬಂಡಿ ಬಂಡಿ ಹೂಗಳು? ಅರ್ಜುನ ಪೂಜೆ ಮಾಡುವಾಗ ಅವನ ಸೇವಕರಿಗೆ ಈ ವಸ್ತುಗಳನ್ನು ಒದಗಿಸಿ ಒದಗಿಸಿ ಪ್ರಾಣ ಹೋಗುತ್ತಿತ್ತು.
ಇಡೀ ದೇಶದ ತುಂಬೆಲ್ಲ ಅರ್ಜುನನ ಪೂಜೆಯ ವೈಖರಿಯ ಮಾತು ಹರಡಿತ್ತು. ಅದು ಪ್ರಚಾರವಾದಷ್ಟೂ ಅರ್ಜುನನ ಅಭಿಮಾನ ಹೆಚ್ಚಾಗುತ್ತಿತ್ತು, ಮತ್ತೆ ಪೂಜೆಯ ಆಡಂಬರ ಬೆಳೆಯುತ್ತಿತ್ತು.
ಆದರೆ ಭೀಮ ಈ ತರಹದ ಪೂಜೆಯನ್ನು ಮಾಡುತ್ತಿರಲಿಲ್ಲ. ಬಹಳ ಹೆಚ್ಚೆಂದರೆ ಊಟಕ್ಕೆ ಕೂಡ್ರುವ ಮುಂದೆ ಐದು ನಿಮಿಷ ಕಣ್ಣು ಮುಚ್ಚಿ ಧ್ಯಾನ ಮಾಡಿ ಓಂ ಶಿವಾಯ ನಮಃ ಎನ್ನುತ್ತಿದ್ದ.
ಅದನ್ನು ನೋಡಿ ಅರ್ಜುನ ತಿರಸ್ಕಾರದ ನಗೆ ನಗುತ್ತಿದ್ದ. ತನ್ನ ಪೂಜೆಯ ಸಂಭ್ರಮದ ಬಗ್ಗೆ ಅರ್ಜುನನಿಗೆ ಬಂದ ಅಹಂಕಾರದ ಸೂಚನೆ ಕೃಷ್ಣನಿಗೆ ದೊರೆಯಿತು, ತಕ್ಷಣವೇ ಹಸ್ತಿನಾವತಿಗೆ ಬಂದ.
ಮರುದಿನ, ಅರ್ಜುನನ ಪೂಜೆಯ ಆರ್ಭಟವನ್ನು ನೋಡಿದ. ಪೂಜೆಯ ನಂತರ ಹೇಳಿದ, `ಅರ್ಜುನ, ನಿನ್ನ ಪೂಜೆಯನ್ನು ನೋಡಿ ತುಂಬ ಸಂತೋಷವಾಯಿತು. ಇದು ಈಶ್ವರನನ್ನು ನಿಜವಾಗಿಯೂ ಒಲಿಸುವ ಬಗೆ ಅಲ್ಲವೇ?` `ಹೌದು ಕೃಷ್ಣ, ಮಹೇಶ್ವರನ ಗೌರವಕ್ಕೆ ತಕ್ಕ ರೀತಿಯಲ್ಲಿ ಪೂಜೆ ಮಾಡಬೇಡವೇ? ಭೀಮನ ಹಾಗೆ ಒಮ್ಮೆ ಮಾತ್ರ ಓಂ ಶಿವಾಯ ನಮಃ ಎಂದರೆ ಸಾಕೇ? ಅದೂ ಒಂದು ಪೂಜೆಯೇ` ಎಂದು ಅಹಂಕಾರದಿಂದ ಬೀಗಿದ ಅರ್ಜುನ.
ಆಗ ಕೃಷ್ಣ ಹೇಳಿದ, `ಅರ್ಜುನ, ನೀನು ಆ ಮಹೇಶ್ವರನನ್ನು ನೋಡಿ ತುಂಬ ದಿನಗಳಾದುವಲ್ಲವೇ? ನಡೆ, ನಾವಿಬ್ಬರೂ ಸೇರಿ ಕೈಲಾಸಕ್ಕೆ ಹೋಗಿ ಆತನಿಗೆ ಪ್ರಣಾಮ ಸಲ್ಲಿಸಿ ಬರೋಣ.` ಅರ್ಜುನ ಒಪ್ಪಿದ. ಮರುದಿನವೇ ಇಬ್ಬರೂ ಪ್ರಯಾಣ ಬೆಳೆಸಿದರು.
ಕೈಲಾಸದ ಹತ್ತಿರಕ್ಕೆ ಬರುತ್ತಿದ್ದರು. ಆಗ ಅಲ್ಲೊಂದು ದೃಶ್ಯ ಕಾಣಿಸಿತು. ಒಬ್ಬ ಮನುಷ್ಯ ಒಂದು ಗಾಡಿಯ ತುಂಬ ಹೂಗಳನ್ನು ತುಂಬಿಕೊಂಡು ಬಂದು ಒಂದೆಡೆಗೆ ಸುರಿಯುತ್ತಿದ್ದ. ಅವನ ಹಿಂದೆ ಮತ್ತೊಂದು ಬಂಡಿ, ಅದರ ಹಿಂದೆ ಇನ್ನೊಂದು ಬಂಡಿ. ಹೀಗೆ ಬಂಡಿಗಳ ಸಾಲೇ ಬರುತ್ತಿದ್ದವು. ಒಬ್ಬೊಬ್ಬರಾಗಿ ಬಂದು ಹೂಗಳನ್ನು ತಂದು ತೆಗ್ಗಿನಲ್ಲಿ ಸುರುವಿ ಮತ್ತೆ ಅವಸರದಿಂದ ಹೋಗುತ್ತಿದ್ದರು.
ಕೃಷ್ಣ ಆ ಬಂಡಿ ಸವಾರನನ್ನು ಕೇಳಿದ, `ಏನಪ್ಪಾ ಇದು. ಇಷ್ಟೊಂದು ಹೂಗಳನ್ನು ಇಲ್ಲಿ ಸುರಿದು ಹೋಗುತ್ತಿದ್ದೀರಿ?` ಆತ ಹೇಳಿದ, `ಸ್ವಾಮೀ ದಯವಿಟ್ಟು ನಮ್ಮನ್ನು ಮಾತನಾಡಿಸಬೇಡಿ.
ನಮಗೆ ಒಂದು ನಿಮಿಷವೂ ಪುರುಸೊತ್ತಿಲ್ಲ, ಈಗಾಗಲೇ ಐದು ನೂರು ಬಂಡಿ ಹೂಗಳನ್ನು ಕೈಲಾಸದಿಂದ ತಂದು ಸುರುವಿದ್ದೇವೆ. ಇನ್ನೂ ಸಾವಿರ ಬಂಡಿಗಳಷ್ಟು ಹೂಗಳಿವೆ. ಈಶ್ವರನಿಗೆ ಅರ್ಪಿಸಿದ ಹೂಗಳನ್ನು ಖಾಲಿಮಾಡುವುದರಲ್ಲಿ ಸಾಕುಸಾಕಾಗಿ ಹೋಗಿದೆ.
` ಅರ್ಜುನ ಉತ್ಸಾಹದಿಂದ ಕೇಳಿದ, `ಯಾರು ಇಷ್ಟು ಪ್ರಮಾಣದಲ್ಲಿ ಈಶ್ವರನಿಗೆ ಹೂ ಅರ್ಪಿಸಿದವರು?` ಸೇವಕ ಹೇಳಿದ, `ಮತ್ತಾರು ಸ್ವಾಮಿ, ಅವನೇ ಭೀಮಸೇನ. ದಿನಾಲು ಅವನು ಅರ್ಪಿಸಿದ ಹೂಗಳನ್ನು ತೆಗೆಯುವುದೇ ಕಷ್ಟ.` ಅರ್ಜುನನಿಗೆ ಆಶ್ಚರ್ಯವಾಯಿತು. `ಇವು ಅರ್ಜುನ ಅರ್ಪಿಸಿದ ಹೂಗಳಿರಬೇಕು. ಭೀಮನೆಲ್ಲಿ ಹೂ ಅರ್ಪಿಸುತ್ತಾನೆ?` ಎಂದ.
ಅದಕ್ಕೆ ಸೇವಕ, `ಛೇ ಆ ಅಹಂಕಾರದ ಮುದ್ದೆ ಅರ್ಜುನನೆಲ್ಲಿ ಹೂ ಏರಿಸುತ್ತಾನೆ? ತೋರಿಕೆಗಾಗಿ ಪೂಜೆಯ ಆಡಂಬರ ಮಾಡುತ್ತಾನೆ. ಬಹಳವೆಂದರೆ ದಿನವೂ ಕೇವಲ ಒಂದೆರಡು ಹೂಗಳು ಇಲ್ಲಿಗೆ ಬಂದಿರಬಹುದು. ಆದರೆ ಅತ್ಯಂತ ಭಕ್ತಿಯಿಂದ ಭೀಮ ಕ್ಷಣಮಾತ್ರ ಮಾಡಿದ ಪೂಜೆಯಿಂದ ಬಂಡಿಗಟ್ಟಲೆ ಹೂಗಳು ಇಲ್ಲಿಗೆ ಈಶ್ವರನ ಪಾದಕ್ಕೆ ತಲುಪುತ್ತವೆ` ಎಂದ. ಕೃಷ್ಣ ಅರ್ಜುನನ ಮುಖ ನೋಡಿದ. ಅಹಂಕಾರ ಪೂರ್ತಿ ಇಳಿದುಹೋದದ್ದು ಕಾಣುತ್ತಿತ್ತು.
ಪೂಜೆ ಭಕ್ತ-ಭಗವಂತರ ನಡುವಿನ ಅತ್ಯಂತ ಪ್ರೀತಿಯ ಸಂಬಂಧ, ಸಂವಾದ. ಅದಕ್ಕೆ ಆಡಂಬರದ ಅವಶ್ಯಕತೆ ಇಲ್ಲ. ಆಡಂಬರ ಹೆಚ್ಚಾದಂತೆ ನಮ್ಮ ಅಹಂಕಾರದ ಮೆರವಣಿಗೆಯಾಗುತ್ತದೆ ಅಷ್ಟೇ. ಅದು ಭಕ್ತಿಯ ಪೂಜೆ ಆಗುವುದಿಲ್ಲ.
ಅರ್ಜುನನಿಗೆ ತಾನು ಯುದ್ಧದಲ್ಲಿ ಮಾಡಿದ ಸಾಧನೆಯ ಬಗ್ಗೆ ಗರ್ವ ಬಂದಿದೆ.
ತಾನಿಲ್ಲದಿದ್ದರೆ ಪಾಂಡವರು ಗೆಲ್ಲುವುದು ಸಾಧ್ಯವಿತ್ತೇ? ತಾನು ಈಶ್ವರನನ್ನು ಒಲಿಸಿಕೊಂಡು ಪಡೆದ ಪಾಶುಪತಾಸ್ತ್ರದಿಂದಲೇ ವಿಜಯ ಸಾಧ್ಯವಾದದ್ದು ಎಂದು ಬಲವಾಗಿ ನಂಬಿದ್ದ. ಪರಶಿವನ ಬಗ್ಗೆ ತನಗಿದ್ದ ಗೌರವವನ್ನು ತೋರಿಸಲು ದಿನಾಲು ಭರ್ಜರಿಯಾಗಿ ಪೂಜೆ ಮಾಡುತ್ತಿದ್ದ.
ಅವನು ಪೂಜೆಗೆ ಕುಳಿತರೆ ಆ ಕರ್ಪೂರ, ಊದುಬತ್ತಿಗಳ ಘಮಲೇನು? ಅದೆಷ್ಟು ಆರತಿಗಳು, ಅದೆಷ್ಟು ಬಂಡಿ ಬಂಡಿ ಹೂಗಳು? ಅರ್ಜುನ ಪೂಜೆ ಮಾಡುವಾಗ ಅವನ ಸೇವಕರಿಗೆ ಈ ವಸ್ತುಗಳನ್ನು ಒದಗಿಸಿ ಒದಗಿಸಿ ಪ್ರಾಣ ಹೋಗುತ್ತಿತ್ತು.
ಇಡೀ ದೇಶದ ತುಂಬೆಲ್ಲ ಅರ್ಜುನನ ಪೂಜೆಯ ವೈಖರಿಯ ಮಾತು ಹರಡಿತ್ತು. ಅದು ಪ್ರಚಾರವಾದಷ್ಟೂ ಅರ್ಜುನನ ಅಭಿಮಾನ ಹೆಚ್ಚಾಗುತ್ತಿತ್ತು, ಮತ್ತೆ ಪೂಜೆಯ ಆಡಂಬರ ಬೆಳೆಯುತ್ತಿತ್ತು.
ಆದರೆ ಭೀಮ ಈ ತರಹದ ಪೂಜೆಯನ್ನು ಮಾಡುತ್ತಿರಲಿಲ್ಲ. ಬಹಳ ಹೆಚ್ಚೆಂದರೆ ಊಟಕ್ಕೆ ಕೂಡ್ರುವ ಮುಂದೆ ಐದು ನಿಮಿಷ ಕಣ್ಣು ಮುಚ್ಚಿ ಧ್ಯಾನ ಮಾಡಿ ಓಂ ಶಿವಾಯ ನಮಃ ಎನ್ನುತ್ತಿದ್ದ.
ಅದನ್ನು ನೋಡಿ ಅರ್ಜುನ ತಿರಸ್ಕಾರದ ನಗೆ ನಗುತ್ತಿದ್ದ. ತನ್ನ ಪೂಜೆಯ ಸಂಭ್ರಮದ ಬಗ್ಗೆ ಅರ್ಜುನನಿಗೆ ಬಂದ ಅಹಂಕಾರದ ಸೂಚನೆ ಕೃಷ್ಣನಿಗೆ ದೊರೆಯಿತು, ತಕ್ಷಣವೇ ಹಸ್ತಿನಾವತಿಗೆ ಬಂದ.
ಮರುದಿನ, ಅರ್ಜುನನ ಪೂಜೆಯ ಆರ್ಭಟವನ್ನು ನೋಡಿದ. ಪೂಜೆಯ ನಂತರ ಹೇಳಿದ, `ಅರ್ಜುನ, ನಿನ್ನ ಪೂಜೆಯನ್ನು ನೋಡಿ ತುಂಬ ಸಂತೋಷವಾಯಿತು. ಇದು ಈಶ್ವರನನ್ನು ನಿಜವಾಗಿಯೂ ಒಲಿಸುವ ಬಗೆ ಅಲ್ಲವೇ?` `ಹೌದು ಕೃಷ್ಣ, ಮಹೇಶ್ವರನ ಗೌರವಕ್ಕೆ ತಕ್ಕ ರೀತಿಯಲ್ಲಿ ಪೂಜೆ ಮಾಡಬೇಡವೇ? ಭೀಮನ ಹಾಗೆ ಒಮ್ಮೆ ಮಾತ್ರ ಓಂ ಶಿವಾಯ ನಮಃ ಎಂದರೆ ಸಾಕೇ? ಅದೂ ಒಂದು ಪೂಜೆಯೇ` ಎಂದು ಅಹಂಕಾರದಿಂದ ಬೀಗಿದ ಅರ್ಜುನ.
ಆಗ ಕೃಷ್ಣ ಹೇಳಿದ, `ಅರ್ಜುನ, ನೀನು ಆ ಮಹೇಶ್ವರನನ್ನು ನೋಡಿ ತುಂಬ ದಿನಗಳಾದುವಲ್ಲವೇ? ನಡೆ, ನಾವಿಬ್ಬರೂ ಸೇರಿ ಕೈಲಾಸಕ್ಕೆ ಹೋಗಿ ಆತನಿಗೆ ಪ್ರಣಾಮ ಸಲ್ಲಿಸಿ ಬರೋಣ.` ಅರ್ಜುನ ಒಪ್ಪಿದ. ಮರುದಿನವೇ ಇಬ್ಬರೂ ಪ್ರಯಾಣ ಬೆಳೆಸಿದರು.
ಕೈಲಾಸದ ಹತ್ತಿರಕ್ಕೆ ಬರುತ್ತಿದ್ದರು. ಆಗ ಅಲ್ಲೊಂದು ದೃಶ್ಯ ಕಾಣಿಸಿತು. ಒಬ್ಬ ಮನುಷ್ಯ ಒಂದು ಗಾಡಿಯ ತುಂಬ ಹೂಗಳನ್ನು ತುಂಬಿಕೊಂಡು ಬಂದು ಒಂದೆಡೆಗೆ ಸುರಿಯುತ್ತಿದ್ದ. ಅವನ ಹಿಂದೆ ಮತ್ತೊಂದು ಬಂಡಿ, ಅದರ ಹಿಂದೆ ಇನ್ನೊಂದು ಬಂಡಿ. ಹೀಗೆ ಬಂಡಿಗಳ ಸಾಲೇ ಬರುತ್ತಿದ್ದವು. ಒಬ್ಬೊಬ್ಬರಾಗಿ ಬಂದು ಹೂಗಳನ್ನು ತಂದು ತೆಗ್ಗಿನಲ್ಲಿ ಸುರುವಿ ಮತ್ತೆ ಅವಸರದಿಂದ ಹೋಗುತ್ತಿದ್ದರು.
ಕೃಷ್ಣ ಆ ಬಂಡಿ ಸವಾರನನ್ನು ಕೇಳಿದ, `ಏನಪ್ಪಾ ಇದು. ಇಷ್ಟೊಂದು ಹೂಗಳನ್ನು ಇಲ್ಲಿ ಸುರಿದು ಹೋಗುತ್ತಿದ್ದೀರಿ?` ಆತ ಹೇಳಿದ, `ಸ್ವಾಮೀ ದಯವಿಟ್ಟು ನಮ್ಮನ್ನು ಮಾತನಾಡಿಸಬೇಡಿ.
ನಮಗೆ ಒಂದು ನಿಮಿಷವೂ ಪುರುಸೊತ್ತಿಲ್ಲ, ಈಗಾಗಲೇ ಐದು ನೂರು ಬಂಡಿ ಹೂಗಳನ್ನು ಕೈಲಾಸದಿಂದ ತಂದು ಸುರುವಿದ್ದೇವೆ. ಇನ್ನೂ ಸಾವಿರ ಬಂಡಿಗಳಷ್ಟು ಹೂಗಳಿವೆ. ಈಶ್ವರನಿಗೆ ಅರ್ಪಿಸಿದ ಹೂಗಳನ್ನು ಖಾಲಿಮಾಡುವುದರಲ್ಲಿ ಸಾಕುಸಾಕಾಗಿ ಹೋಗಿದೆ.
` ಅರ್ಜುನ ಉತ್ಸಾಹದಿಂದ ಕೇಳಿದ, `ಯಾರು ಇಷ್ಟು ಪ್ರಮಾಣದಲ್ಲಿ ಈಶ್ವರನಿಗೆ ಹೂ ಅರ್ಪಿಸಿದವರು?` ಸೇವಕ ಹೇಳಿದ, `ಮತ್ತಾರು ಸ್ವಾಮಿ, ಅವನೇ ಭೀಮಸೇನ. ದಿನಾಲು ಅವನು ಅರ್ಪಿಸಿದ ಹೂಗಳನ್ನು ತೆಗೆಯುವುದೇ ಕಷ್ಟ.` ಅರ್ಜುನನಿಗೆ ಆಶ್ಚರ್ಯವಾಯಿತು. `ಇವು ಅರ್ಜುನ ಅರ್ಪಿಸಿದ ಹೂಗಳಿರಬೇಕು. ಭೀಮನೆಲ್ಲಿ ಹೂ ಅರ್ಪಿಸುತ್ತಾನೆ?` ಎಂದ.
ಅದಕ್ಕೆ ಸೇವಕ, `ಛೇ ಆ ಅಹಂಕಾರದ ಮುದ್ದೆ ಅರ್ಜುನನೆಲ್ಲಿ ಹೂ ಏರಿಸುತ್ತಾನೆ? ತೋರಿಕೆಗಾಗಿ ಪೂಜೆಯ ಆಡಂಬರ ಮಾಡುತ್ತಾನೆ. ಬಹಳವೆಂದರೆ ದಿನವೂ ಕೇವಲ ಒಂದೆರಡು ಹೂಗಳು ಇಲ್ಲಿಗೆ ಬಂದಿರಬಹುದು. ಆದರೆ ಅತ್ಯಂತ ಭಕ್ತಿಯಿಂದ ಭೀಮ ಕ್ಷಣಮಾತ್ರ ಮಾಡಿದ ಪೂಜೆಯಿಂದ ಬಂಡಿಗಟ್ಟಲೆ ಹೂಗಳು ಇಲ್ಲಿಗೆ ಈಶ್ವರನ ಪಾದಕ್ಕೆ ತಲುಪುತ್ತವೆ` ಎಂದ. ಕೃಷ್ಣ ಅರ್ಜುನನ ಮುಖ ನೋಡಿದ. ಅಹಂಕಾರ ಪೂರ್ತಿ ಇಳಿದುಹೋದದ್ದು ಕಾಣುತ್ತಿತ್ತು.
ಪೂಜೆ ಭಕ್ತ-ಭಗವಂತರ ನಡುವಿನ ಅತ್ಯಂತ ಪ್ರೀತಿಯ ಸಂಬಂಧ, ಸಂವಾದ. ಅದಕ್ಕೆ ಆಡಂಬರದ ಅವಶ್ಯಕತೆ ಇಲ್ಲ. ಆಡಂಬರ ಹೆಚ್ಚಾದಂತೆ ನಮ್ಮ ಅಹಂಕಾರದ ಮೆರವಣಿಗೆಯಾಗುತ್ತದೆ ಅಷ್ಟೇ. ಅದು ಭಕ್ತಿಯ ಪೂಜೆ ಆಗುವುದಿಲ್ಲ.
Monday, February 27, 2012
ಕತ್ತೆಯ ಕೊರಳಿನ ಹರಳು
ಅವನೊಬ್ಬ ಬಡವ. ಅವನು ದಿನಾಲು ಕಾಡಿಗೆ ಹೋಗಿ ಕಟ್ಟಿಗೆ ಕಡಿದುಕೊಂಡು ಊರಿಗೆ ಬಂದು, ಅದನ್ನು ಮಾರಿ ಜೀವನ ಸಾಗಿಸುತ್ತಿದ್ದ. ಏನು ಮಾಡಿದರೂ ಬಡತನ ಹಿಂಗದು. ಅವನ ಕಾರ್ಯದಲ್ಲಿ ಸಹಕಾರಿಯಾಗಿದ್ದುದು ಅವನ ಕತ್ತೆ. ಹತ್ತು ವರ್ಷದಿಂದ ಕಟ್ಟಿಗೆ ಹೊತ್ತು ಹೊತ್ತು ಸಣ್ಣದಾಗಿತ್ತು.
ಚಳಿಗಾಲದ ಒಂದು ದಿನ ಸಂಜೆ ಹೀಗೆ ಕಟ್ಟಿಗೆಯನ್ನು ಕತ್ತೆಯ ಮೇಲೆ ಹೊರಿಸಿ ಕಾಡಿನಿಂದ ಬರುತ್ತಿದ್ದಾಗ ರಸ್ತೆಯ ಮಧ್ಯದಲ್ಲಿ ಹೊಳೆಹೊಳೆಯುವ ಕಲ್ಲೊಂದು ಅವನ ಗಮನ ಸೆಳೆಯಿತು. ಅದೊಂದು ಗಾಜಿನ ಚೂರು ಇರಬೇಕೆಂದುಕೊಂಡು ಎತ್ತಿಕೊಂಡ.
ಆ ಕಲ್ಲಿನ ಮಧ್ಯದಲ್ಲೊಂದು ಸಣ್ಣ ತೂತಿತ್ತು. ಚೆನ್ನಾಗಿದೆ ನೋಡುವುದಕ್ಕೆ ಎಂದುಕೊಂಡು ಆ ತೂತಿನಲ್ಲಿ ದಾರ ಪೋಣಿಸಿ ಅದನ್ನು ತನ್ನ ಕತ್ತೆಯ ಕೊರಳಿನಲ್ಲಿ ಹಾರದಂತೆ ಹಾಕಿದ. ಪಾಪ! ಇದುವರೆಗೂ ಕತ್ತೆಗೆ ತಾನು ಏನೂ ಮಾಡಲಿಲ್ಲ, ಹೀಗಾದರೂ ಒಂದು ಮರ್ಯಾದೆ ಇರಲಿ ಎಂದು ಸಮಾಧಾನ ಪಟ್ಟುಕೊಂಡ.
ಮುಂದೆ ನಡೆಯುತ್ತಿರುವಾಗ ಎದುರಿಗೆ ಒಬ್ಬ ವರ್ತಕ ಬಂದ. ಅವನು ಕತ್ತೆಯ ಕೊರಳಲ್ಲಿ ನೇತಾಡುತ್ತಿದ್ದ ಹೊಳೆಯುವ ಹರಳು ನೋಡಿದ. ಅವನ ತರಬೇತಾದ ಕಣ್ಣುಗಳಿಗೆ ಅದು ಒಂದು ವಜ್ರವೆಂದು ತಕ್ಷಣ ಹೊಳಿಯಿತು.
ಬಹುಶಃ ಈ ಬಡವನಿಗೆ ಅದು ವಜ್ರವೆಂದು ತಿಳಿದಿಲ್ಲ, ಅದಕ್ಕೇ ಕತ್ತೆಯ ಕೊರಳಲ್ಲಿ ಕಟ್ಟಿದ್ದಾನೆ ಎಂದು ಗೊತ್ತಾಗಿ ಅದನ್ನು ಲಪಟಾಯಿಸಲು ಹೊಂಚು ಹಾಕಿದ. `ಏನಪ್ಪಾ, ಕತ್ತೆಯ ಕೊರಳಲ್ಲಿ ಯಾಕೆ ಈ ಸಿಂಗಾರ? ನನಗೆ ಈ ಕಲ್ಲು ಕೊಡುತ್ತೀಯಾ?
ಎಷ್ಟು ಕೊಡಬೇಕು ಹೇಳು` ಎಂದು ಕೇಳಿದ. ಬಡವನಿಗೆ ಆಶ್ಚರ್ಯವಾಯಿತು. ಈ ಕಲ್ಲನ್ನು ಯಾಕೆ ಕೊಂಡುಕೊಳ್ಳುತ್ತಾನೆ ಈತ ಎಂದು ಚಿಂತಿಸಿ `ನೂರು ರೂಪಾಯಿ ಕೊಟ್ಟರೆ ಕೊಟ್ಟೇನು` ಎಂದ.
ವ್ಯಾಪಾರಿಗೆ ದುರಾಸೆ. ಹೇಗಿದ್ದರೂ ಮೂರ್ಖನಿಗೆ ವಜ್ರದ ಬೆಲೆ ಗೊತ್ತಿಲ್ಲ. ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಜ್ರವನ್ನು ನೂರು ರೂಪಾಯಿಗೆ ಕೊಡಲು ಸಿದ್ಧನಿದ್ದಾನೆ. ಅವನು ಕೇಳಿದಷ್ಟೇ ಕೊಟ್ಟರೆ ಸಂಶಯ ಬಂದೀತು, ಇನ್ನಷ್ಟು ಚೌಕಾಸಿಮಾಡೋಣವೆಂದು, `ಇಲ್ಲಪ್ಪ, ನೂರು ರೂಪಾಯಿ ಹೆಚ್ಚಾಯಿತು, ಐವತ್ತು ರೂಪಾಯಿ ಕೊಡುತ್ತೇನೆ.
ಏನು ಹೇಳುತ್ತೀ?` ಎಂದು ಕೇಳಿದ. ಬಡವನಿಗೆ ಗೊತ್ತಾಯಿತು, ಈ ಕಲ್ಲಿನ ಬೆಲೆ ಐವತ್ತಕ್ಕಿಂತ ಹೆಚ್ಚಾಗಿದೆ. ಇಲ್ಲದಿದ್ದರೆ ಬುದ್ಧಿವಂತ ವ್ಯಾಪಾರಿ ಕಲ್ಲಿಗೆ ಇಷ್ಟೇಕೆ ಬೆಲೆಕೊಡುತ್ತಿದ್ದ? ಗೋಣು ಅಲ್ಲಾಡಿಸಿ ಹೇಳಿದ, `ಬೇಡ ಬಿಡಿ ಸ್ವಾಮಿ. ನನ್ನ ಕತ್ತೆಯ ಕೊರಳಲ್ಲಿ ಚೆನ್ನಾಗಿ ಕಾಣುತ್ತದೆ. ಹಾಗೆಯೇ ಇರಲಿ.` ರೈತ ಗಮನಿಸಿದ, ಕೊಡುವುದಿಲ್ಲವೆಂದರೂ ವ್ಯಾಪಾರಿ ಹಿಂದೆಯೇ ಬರುತ್ತಿದ್ದಾನೆ.
ಆಗ ದಾರಿಯಲ್ಲಿ ಮತ್ತೊಬ್ಬ ವ್ಯಾಪಾರಿ ಬಂದ. ಅವನೂ ಹರಳು ನೋಡಿದ ಅವನಿಗೂ ಆದರ ಬೆಲೆ ಅರ್ಥವಾಯಿತು. ಹಿಂದೆಯೇ ಬರುತ್ತಿದ್ದ ವ್ಯಾಪಾರಿಯನ್ನು ಕಂಡ. ಇವನೂ ಈ ಹರಳಿನ ಹಿಂದೆಯೇ ಬಿದ್ದಿದ್ದಾನೆ ಎಂದು ತಿಳಿಯಿತು.
ತಾನೇ ಬಡವನನ್ನು ಕೇಳಿದ, `ಏನಪ್ಪಾ, ನಿನಗೆ ಸಾವಿರ ರೂಪಾಯಿ ಕೊಡುತ್ತೇನೆ, ಕಲ್ಲು ಕೊಡುತ್ತೀಯಾ?` ಇವನಿನ್ನೂ ಪ್ರಶ್ನೆಯನ್ನು ಮುಗಿಸಿರಲಿಲ್ಲ, ಆಗ ಹಿಂದೆ ಬರುತ್ತಿದ್ದ ವ್ಯಾಪಾರಿ ಥಟ್ಟನೇ ಹಾರಿ ಬಂದ. `ನೀನು ಬರೀ ಸಾವಿರ ರೂಪಾಯಿ ಕೊಟ್ಟು ಹರಳು ಹೊಡೆಯಬೇಕೆಂದು ಮಾಡಿದ್ದೀಯಾ?
ನಾನು ಐದು ಸಾವಿರ ಕೊಡುತ್ತೇನೆ` ಎಂದು ಅರಚಿದ. ಇನ್ನೊಬ್ಬ ಬಿಟ್ಟಾನೆಯೇ, `ಏನಯ್ಯೊ ಐದು ಸಾವಿರಕೊಟ್ಟು ಈ ಮುಗ್ಧನಿಗೆ ಟೋಪಿ ಹಾಕಲು ನೋಡುತ್ತೀಯಾ? ನಾನು ಹತ್ತು ಸಾವಿರ ರೂಪಾಯಿ ಕೊಡುತ್ತೇನೆ.` ಇಬ್ಬರ ನಡುವೆ ಪೈಪೋಟಿ ನಡೆಯಿತು.
ಕಟ್ಟಿಗೆ ಮಾರುವ ಬಡವ ನಕ್ಕು. ತನ್ನ ಕತ್ತೆಗೆ, ಸ್ನೇಹಿತ, `ನಮ್ಮಿಬ್ಬರ ಬಡತನ ಕೊನೆಗೂ ನೀಗಿತು. ನಿನ್ನ ಕೊರಳಲ್ಲಿ ಇರುವುದು ವಜ್ರವೆಂದು ತಿಳಿಯಿತು. ನಾವು ವಜ್ರದ ವ್ಯಾಪಾರಿಗೆ ಇದನ್ನು ಮಾರಿ ಮುಂದೆ ಸುಖವಾಗಿರೋಣ.
ನೀನಿನ್ನು ಕೆಲಸ ಮಾಡುವುದು ಬೇಡ. ಈ ಮೂರ್ಖರು ಹೊಡೆದಾಡುತ್ತ ಇರಲಿ` ಎಂದು ಹೇಳಿ ನಡೆದ. ಮುಂದೆ ಸಂತೋಷವಾಗಿ ಬದುಕಿದ.
ಮಾಸ್ತಿ ಹೇಳುತ್ತಿದ್ದರು : ಪ್ರತಿಯೊಬ್ಬರ ಮನೆಯಲ್ಲೂ ಒಂದು ಕಪಾಟಿದೆ. ಅದರೊಳಗೆ ನೂರು ಕೋಟಿ ರೂಪಾಯಿ ನಗದು ಇದೆ. ಆದರೆ ನಾವು ಮನೆ ಮನೆಗೆ ಹೋಗಿ ಹತ್ತು ರೂಪಾಯಿ ಕೊಡಿ ಎಂದು ಬೇಡುತ್ತೇವೆ.
ಯಾಕೆ ಗೊತ್ತೇ? ನಮಗೆ ಕಪಾಟಿನ ಕೀಲಿಕೈ ನಮ್ಮ ಜೇಬಿನಲ್ಲೇ ಇದೆ ಎಂಬುದು ತಿಳಿದಿಲ್ಲ. ಅದನ್ನು ಹುಡುಕಿ ಹೊರ ತೆಗೆದರೆ ನಮ್ಮ ಜೀವನವೇ ಬದಲಾಗಿ ಹೋಗುತ್ತದೆ .
ನಿಜ, ನಮ್ಮಳಗಿರುವ ಅಸಾಮಾನ್ಯ ಶಕ್ತಿಯನ್ನು ತಿಳಿಯದೇ ನಾವು ಬರೀ ಕಲ್ಲೆಂದುಕೊಳ್ಳುತ್ತೇವೆ.
ಅದು ವಜ್ರವೆಂದು ಒಂದು ಬಾರಿ ತಿಳಿದರೆ ಸಾಕು ನಮಗೇ ಆಶ್ಚರ್ಯವಾಗುವಂತೆ ಜೀವನ ಅದ್ಭುತವಾಗಿ ತೆರೆದುಕೊಳ್ಳುತ್ತದೆ.
ಚಳಿಗಾಲದ ಒಂದು ದಿನ ಸಂಜೆ ಹೀಗೆ ಕಟ್ಟಿಗೆಯನ್ನು ಕತ್ತೆಯ ಮೇಲೆ ಹೊರಿಸಿ ಕಾಡಿನಿಂದ ಬರುತ್ತಿದ್ದಾಗ ರಸ್ತೆಯ ಮಧ್ಯದಲ್ಲಿ ಹೊಳೆಹೊಳೆಯುವ ಕಲ್ಲೊಂದು ಅವನ ಗಮನ ಸೆಳೆಯಿತು. ಅದೊಂದು ಗಾಜಿನ ಚೂರು ಇರಬೇಕೆಂದುಕೊಂಡು ಎತ್ತಿಕೊಂಡ.
ಆ ಕಲ್ಲಿನ ಮಧ್ಯದಲ್ಲೊಂದು ಸಣ್ಣ ತೂತಿತ್ತು. ಚೆನ್ನಾಗಿದೆ ನೋಡುವುದಕ್ಕೆ ಎಂದುಕೊಂಡು ಆ ತೂತಿನಲ್ಲಿ ದಾರ ಪೋಣಿಸಿ ಅದನ್ನು ತನ್ನ ಕತ್ತೆಯ ಕೊರಳಿನಲ್ಲಿ ಹಾರದಂತೆ ಹಾಕಿದ. ಪಾಪ! ಇದುವರೆಗೂ ಕತ್ತೆಗೆ ತಾನು ಏನೂ ಮಾಡಲಿಲ್ಲ, ಹೀಗಾದರೂ ಒಂದು ಮರ್ಯಾದೆ ಇರಲಿ ಎಂದು ಸಮಾಧಾನ ಪಟ್ಟುಕೊಂಡ.
ಮುಂದೆ ನಡೆಯುತ್ತಿರುವಾಗ ಎದುರಿಗೆ ಒಬ್ಬ ವರ್ತಕ ಬಂದ. ಅವನು ಕತ್ತೆಯ ಕೊರಳಲ್ಲಿ ನೇತಾಡುತ್ತಿದ್ದ ಹೊಳೆಯುವ ಹರಳು ನೋಡಿದ. ಅವನ ತರಬೇತಾದ ಕಣ್ಣುಗಳಿಗೆ ಅದು ಒಂದು ವಜ್ರವೆಂದು ತಕ್ಷಣ ಹೊಳಿಯಿತು.
ಬಹುಶಃ ಈ ಬಡವನಿಗೆ ಅದು ವಜ್ರವೆಂದು ತಿಳಿದಿಲ್ಲ, ಅದಕ್ಕೇ ಕತ್ತೆಯ ಕೊರಳಲ್ಲಿ ಕಟ್ಟಿದ್ದಾನೆ ಎಂದು ಗೊತ್ತಾಗಿ ಅದನ್ನು ಲಪಟಾಯಿಸಲು ಹೊಂಚು ಹಾಕಿದ. `ಏನಪ್ಪಾ, ಕತ್ತೆಯ ಕೊರಳಲ್ಲಿ ಯಾಕೆ ಈ ಸಿಂಗಾರ? ನನಗೆ ಈ ಕಲ್ಲು ಕೊಡುತ್ತೀಯಾ?
ಎಷ್ಟು ಕೊಡಬೇಕು ಹೇಳು` ಎಂದು ಕೇಳಿದ. ಬಡವನಿಗೆ ಆಶ್ಚರ್ಯವಾಯಿತು. ಈ ಕಲ್ಲನ್ನು ಯಾಕೆ ಕೊಂಡುಕೊಳ್ಳುತ್ತಾನೆ ಈತ ಎಂದು ಚಿಂತಿಸಿ `ನೂರು ರೂಪಾಯಿ ಕೊಟ್ಟರೆ ಕೊಟ್ಟೇನು` ಎಂದ.
ವ್ಯಾಪಾರಿಗೆ ದುರಾಸೆ. ಹೇಗಿದ್ದರೂ ಮೂರ್ಖನಿಗೆ ವಜ್ರದ ಬೆಲೆ ಗೊತ್ತಿಲ್ಲ. ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಜ್ರವನ್ನು ನೂರು ರೂಪಾಯಿಗೆ ಕೊಡಲು ಸಿದ್ಧನಿದ್ದಾನೆ. ಅವನು ಕೇಳಿದಷ್ಟೇ ಕೊಟ್ಟರೆ ಸಂಶಯ ಬಂದೀತು, ಇನ್ನಷ್ಟು ಚೌಕಾಸಿಮಾಡೋಣವೆಂದು, `ಇಲ್ಲಪ್ಪ, ನೂರು ರೂಪಾಯಿ ಹೆಚ್ಚಾಯಿತು, ಐವತ್ತು ರೂಪಾಯಿ ಕೊಡುತ್ತೇನೆ.
ಏನು ಹೇಳುತ್ತೀ?` ಎಂದು ಕೇಳಿದ. ಬಡವನಿಗೆ ಗೊತ್ತಾಯಿತು, ಈ ಕಲ್ಲಿನ ಬೆಲೆ ಐವತ್ತಕ್ಕಿಂತ ಹೆಚ್ಚಾಗಿದೆ. ಇಲ್ಲದಿದ್ದರೆ ಬುದ್ಧಿವಂತ ವ್ಯಾಪಾರಿ ಕಲ್ಲಿಗೆ ಇಷ್ಟೇಕೆ ಬೆಲೆಕೊಡುತ್ತಿದ್ದ? ಗೋಣು ಅಲ್ಲಾಡಿಸಿ ಹೇಳಿದ, `ಬೇಡ ಬಿಡಿ ಸ್ವಾಮಿ. ನನ್ನ ಕತ್ತೆಯ ಕೊರಳಲ್ಲಿ ಚೆನ್ನಾಗಿ ಕಾಣುತ್ತದೆ. ಹಾಗೆಯೇ ಇರಲಿ.` ರೈತ ಗಮನಿಸಿದ, ಕೊಡುವುದಿಲ್ಲವೆಂದರೂ ವ್ಯಾಪಾರಿ ಹಿಂದೆಯೇ ಬರುತ್ತಿದ್ದಾನೆ.
ಆಗ ದಾರಿಯಲ್ಲಿ ಮತ್ತೊಬ್ಬ ವ್ಯಾಪಾರಿ ಬಂದ. ಅವನೂ ಹರಳು ನೋಡಿದ ಅವನಿಗೂ ಆದರ ಬೆಲೆ ಅರ್ಥವಾಯಿತು. ಹಿಂದೆಯೇ ಬರುತ್ತಿದ್ದ ವ್ಯಾಪಾರಿಯನ್ನು ಕಂಡ. ಇವನೂ ಈ ಹರಳಿನ ಹಿಂದೆಯೇ ಬಿದ್ದಿದ್ದಾನೆ ಎಂದು ತಿಳಿಯಿತು.
ತಾನೇ ಬಡವನನ್ನು ಕೇಳಿದ, `ಏನಪ್ಪಾ, ನಿನಗೆ ಸಾವಿರ ರೂಪಾಯಿ ಕೊಡುತ್ತೇನೆ, ಕಲ್ಲು ಕೊಡುತ್ತೀಯಾ?` ಇವನಿನ್ನೂ ಪ್ರಶ್ನೆಯನ್ನು ಮುಗಿಸಿರಲಿಲ್ಲ, ಆಗ ಹಿಂದೆ ಬರುತ್ತಿದ್ದ ವ್ಯಾಪಾರಿ ಥಟ್ಟನೇ ಹಾರಿ ಬಂದ. `ನೀನು ಬರೀ ಸಾವಿರ ರೂಪಾಯಿ ಕೊಟ್ಟು ಹರಳು ಹೊಡೆಯಬೇಕೆಂದು ಮಾಡಿದ್ದೀಯಾ?
ನಾನು ಐದು ಸಾವಿರ ಕೊಡುತ್ತೇನೆ` ಎಂದು ಅರಚಿದ. ಇನ್ನೊಬ್ಬ ಬಿಟ್ಟಾನೆಯೇ, `ಏನಯ್ಯೊ ಐದು ಸಾವಿರಕೊಟ್ಟು ಈ ಮುಗ್ಧನಿಗೆ ಟೋಪಿ ಹಾಕಲು ನೋಡುತ್ತೀಯಾ? ನಾನು ಹತ್ತು ಸಾವಿರ ರೂಪಾಯಿ ಕೊಡುತ್ತೇನೆ.` ಇಬ್ಬರ ನಡುವೆ ಪೈಪೋಟಿ ನಡೆಯಿತು.
ಕಟ್ಟಿಗೆ ಮಾರುವ ಬಡವ ನಕ್ಕು. ತನ್ನ ಕತ್ತೆಗೆ, ಸ್ನೇಹಿತ, `ನಮ್ಮಿಬ್ಬರ ಬಡತನ ಕೊನೆಗೂ ನೀಗಿತು. ನಿನ್ನ ಕೊರಳಲ್ಲಿ ಇರುವುದು ವಜ್ರವೆಂದು ತಿಳಿಯಿತು. ನಾವು ವಜ್ರದ ವ್ಯಾಪಾರಿಗೆ ಇದನ್ನು ಮಾರಿ ಮುಂದೆ ಸುಖವಾಗಿರೋಣ.
ನೀನಿನ್ನು ಕೆಲಸ ಮಾಡುವುದು ಬೇಡ. ಈ ಮೂರ್ಖರು ಹೊಡೆದಾಡುತ್ತ ಇರಲಿ` ಎಂದು ಹೇಳಿ ನಡೆದ. ಮುಂದೆ ಸಂತೋಷವಾಗಿ ಬದುಕಿದ.
ಮಾಸ್ತಿ ಹೇಳುತ್ತಿದ್ದರು : ಪ್ರತಿಯೊಬ್ಬರ ಮನೆಯಲ್ಲೂ ಒಂದು ಕಪಾಟಿದೆ. ಅದರೊಳಗೆ ನೂರು ಕೋಟಿ ರೂಪಾಯಿ ನಗದು ಇದೆ. ಆದರೆ ನಾವು ಮನೆ ಮನೆಗೆ ಹೋಗಿ ಹತ್ತು ರೂಪಾಯಿ ಕೊಡಿ ಎಂದು ಬೇಡುತ್ತೇವೆ.
ಯಾಕೆ ಗೊತ್ತೇ? ನಮಗೆ ಕಪಾಟಿನ ಕೀಲಿಕೈ ನಮ್ಮ ಜೇಬಿನಲ್ಲೇ ಇದೆ ಎಂಬುದು ತಿಳಿದಿಲ್ಲ. ಅದನ್ನು ಹುಡುಕಿ ಹೊರ ತೆಗೆದರೆ ನಮ್ಮ ಜೀವನವೇ ಬದಲಾಗಿ ಹೋಗುತ್ತದೆ .
ನಿಜ, ನಮ್ಮಳಗಿರುವ ಅಸಾಮಾನ್ಯ ಶಕ್ತಿಯನ್ನು ತಿಳಿಯದೇ ನಾವು ಬರೀ ಕಲ್ಲೆಂದುಕೊಳ್ಳುತ್ತೇವೆ.
ಅದು ವಜ್ರವೆಂದು ಒಂದು ಬಾರಿ ತಿಳಿದರೆ ಸಾಕು ನಮಗೇ ಆಶ್ಚರ್ಯವಾಗುವಂತೆ ಜೀವನ ಅದ್ಭುತವಾಗಿ ತೆರೆದುಕೊಳ್ಳುತ್ತದೆ.
Subscribe to:
Posts (Atom)
ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.
"ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......

-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರ, ಕೋರಿಕೆಗೆ ಕೋರಿಕೆ! ಅಂದರೆ, ಈಶ್ವರ ಸಣಕಲ್ಲ ಅವರ ಪ್ರಖ್ಯಾತ ಕವಿತೆ "ಕೋರಿಕೆ" ಪ್ರಕ...
-
ಮೂಡುವನು ರವಿ ಮೂಡುವನು ಕತ್ತಲೊಡನೆ ಜಗಳಾಡುವನು ಪಂಜೆ ಮಂಗೇಶ ರಾಯರು ಮೂಡಣ ರಂಗಸ್ಥಳದಲಿ ನೆತ್ತರ ಮಾಡುವನು ಕುಣಿದಾಡುವನು ಬೆಳಕಿನ ಕಣ್ಣುಗಳಿ೦ದಾ ಸೂರ್ಯನು ನೋಡ...