Wednesday, March 20, 2013

ಬಾ ಇಲ್ಲಿ ಸಂಭವಿಸು ಇಂದೆನ್ನ ಹೃದಯದಲಿ - ಕುವೆಂಪು


ಬಾ ಇಲ್ಲಿ ಸಂಭವಿಸು ಇಂದೆನ್ನ ಹೃದಯದಲಿ
ನಿತ್ಯವೂ ಅವತರಿಪ ಸತ್ಯಾವತಾರಾ..

ಬಾ ಇಲ್ಲಿ ಸಂಭವಿಸು ಇಂದೆನ್ನ ಹೃದಯದಲಿ
ನಿತ್ಯವೂ ಅವತರಿಪ ಸತ್ಯಾವತಾರಾ..

ಮಣ್ಣಾಗಿ ಮರವಾಗಿ ಮಿಗವಾಗಿ ಖಗವಾಗೀ..
ಮಣ್ಣಾಗಿ ಮರವಾಗಿ ಮಿಗವಾಗಿ ಖಗವಾಗಿ
ಭವ ಭವದಿ ಭವಿಸಿಹೇ ಭವ ವಿದೂರಾ

ನಿತ್ಯವೂ ಅವತರಿಪ ಸತ್ಯಾವತಾರಾ
ನಿತ್ಯವೂ ಅವತರಿಪ ಸತ್ಯಾವತಾರಾ

|| ಬಾ ಇಲ್ಲಿ ||

ಮಣ್ ತನಕೆ ಮರತನಕೆ ಮಿಗತನಕೆ ಖಗತನಕೆ
ಮಣ್ತನಕೆ ಮರತನಕೆ ಮಿಗತನಕೆ ಖಗತನಕೆ
ಮುನ್ನಡೆಗೆ ಕಣ್ಣಾದ ಗುರುವೆ ಬಾರಾ
ಮೂಡಿ ಬಂದೆನ್ನಾ ನರ ರೂಪ ಚೇತನದೀ…
ಮೂಡಿ ಬಂದೆನ್ನಾ ನರ ರೂಪ ಚೇತನದಿ
ನಾರಾಯಣತ್ವಕ್ಕೆ ದಾರಿ ತೋರ
ನಿತ್ಯವೂ ಅವತರಿಪ ಸತ್ಯಾವತಾರ

|| ಬಾ ಇಲ್ಲಿ ||

ಅಂದು ಅರಮನೆಯಲ್ಲಿ, ಮತ್ತೆ ಸೆರೆಮನೆಯಲ್ಲಿ
ಅಲ್ಲಿ ತುರುಪಟ್ಟಿಯಲಿ, ಇಲ್ಲಿ ಕಿರುಗುಡಿಸಲಲಿ,

ಅಂದು ಅರಮನೆಯಲ್ಲಿ, ಮತ್ತೆ ಸೆರೆಮನೆಯಲ್ಲಿ
ಅಲ್ಲಿ ತುರುಪಟ್ಟಿಯಲಿ, ಇಲ್ಲಿ ಕಿರುಗುಡಿಸಲಲಿ,

ದೇಶದೇಶದಿ ವೇಷವೇಷಾಂತರವನಾಂತು
ವಿಶ್ವಸಾರಥಿಯಾಗಿ ಲೀಲಾರಥವನೆಂತು
ಚೋದಿಸಿರುವೆಯೊ ಅಂತೆ, ಸೃಷ್ಟಿಲೋಲ ,
ಚೋದಿಸಿರುವೆಯೊ ಅಂತೆ, ಸೃಷ್ಟಿಲೋಲಾ,

ಅವತರಿಸು ಬಾ…
ಅವತರಿಸು ಬಾ…

ಅವತರಿಸು ಬಾ ಇಲ್ಲಿ ಇಂದೆನ್ನ ಚೈತ್ಯದಲಿ
ಹೇ ದಿವ್ಯ ಸಚ್ಚಿದಾನಂದ ಶೀಲ
ಹೇ ದಿವ್ಯ ಸಚ್ಚಿದಾನಂದ ಶೀಲ
ಹೇ ದಿವ್ಯ ಸಚ್ಚಿದಾನಂದ ಶೀಲ

ಬಾ ಇಲ್ಲಿ ಸಂಭವಿಸು ಇಂದೆನ್ನ ಹೃದಯದಲಿ
ನಿತ್ಯವೂ ಅವತರಿಪ ಸತ್ಯಾವತಾರ
|| ಬಾ ಇಲ್ಲಿ ||

|| ಬಾ ಇಲ್ಲಿ ||

ಮುಚ್ಚು ಮರೆ ಇಲ್ಲದೆಯೇ - ಕುವೆಂಪು


ಮುಚ್ಚು ಮರೆ ಇಲ್ಲದೆಯೇ ನಿನ್ನಮುಂದೆಲ್ಲವನು ಬಿಚ್ಚಿಡುವೇ ಓ ಗುರುವೇ ಅಂತರಾತ್ಮ
ಪಾಪವಿದೆ ಪುಣ್ಯವಿದೆ , ನರಕವಿದೆ ನಾಕವಿದೆ, ಸ್ವೀಕರಿಸು ಓ ಗುರುವೇ ಅಂತರಾತ್ಮ
|| ಮುಚ್ಚು ಮರೆ ಇಲ್ಲದೆಯೇ ||

ರವಿಗೆ ಕಾಂತಿಯನೀವ ನಿನ್ನ ಕಣ್ಣೀಕ್ಷಿಸಲು, ಪಾಪ ತಾನುಳಿಯುವುದೇ ಪಾಪವಾಗಿ
ಗಂಗೆ ತಾನುದ್ಭವಿಪ ನಿನ್ನಡಿಯ ಸೋಂಕಿಂಗೇ, ನರಕ ತಾನುಳಿಯುವುದೇ ನರಕವಾಗಿ
|| ಮುಚ್ಚು ಮರೆ ಇಲ್ಲದೆಯೇ ||

ಸಾಂತ ರೀತಿಯನೆಮ್ಮೀ ಕದಡಿರುವುದೆನ್ನಾತ್ಮ, ನಾಂತರೀತಿಯು ಅದೆಂತೋ ಓ ಅನಂತ
ನನ್ನ ನೀತಿಯ ಕುರುಡಿನಿಂದೆನ್ನ ರಕ್ಶಿಸಯ್, ನಿನ್ನ ಪ್ರೀತಿಯ ಬೆಳಕಿನ ಆನಂದಕೆ
|| ಮುಚ್ಚು ಮರೆ ಇಲ್ಲದೆಯೇ ||

ಬಾ ಚಕೋರಿ ಬಾ ಚಕೋರಿ ಚಂದ್ರ ಮಂಚಕೆ - ಕುವೆಂಪು


ಬಾ ಚಕೋರಿ ಬಾ ಚಕೋರಿ ಚಂದ್ರ ಮಂಚಕೆ
ಜೊನ್ನ ಜೇನಿಗೆ ಬಾಯಾರಿದೆ ಚಕೋರ ಚುಂಬನ

ಚಂದ್ರಿಕಾಮಧುಪಾನಮತ್ತ
ಪೀನಕುಂಭಪಯೋಧವಿತ್ತ
ವಕ್ಷಪರಿಲಂಭನ ನಿಮಿತ್ತ ನಿರಾವಲಂಬನ
ಬಾ ಚಕೋರಿ ಬಾ ಚಕೋರಿ ಚಂದ್ರ ಮಂಚಕೆ

ಚರಣನೂಪುರಕಿಂಕಿಣಿಕೊಳ
ಮದನಸಿಂಜಿನಿ ಜನಿತ ನಿಹ್ವಳ
ಚಿತ್ತ ರಂಜನಿ ತಳುವದೀಕ್ಷಣ
ಚಂದ್ರ ಮಂಚಕೆ ಬಾ ಚಕೋರಿ
ಬಾ ಚಕೋರಿ ಬಾ ಚಕೋರಿ ಚಂದ್ರ ಮಂಚಕೆ

ತೆರೆಯ ಚಿಮ್ಮಿಸಿ ನೊರೆಯ ಹೊಮ್ಮಿಸಿ
ಕ್ಷೀರಸಾಗರದಲ್ಲಿ ತೇಲುವ
ಬಾಗುಚಂದ್ರನ ತೂಗುಮಂಚಕೆ
ಬಾ ಚಕೋರಿ ಬಾ ಚಕೋರಿ ಎದೆ ಹಾರಿದೆ
ಬಾಯಾರಿದೆ ಚಕೋರ ಚುಂಬನ
ಬಾ ಚಕೋರಿ ಬಾ ಚಕೋರಿ ಚಂದ್ರ ಮಂಚಕೆ

ನಿಕುಂಜ ರತಿವನ ಮದನ ಯಾಗಕೆ
ಅನಂಗರಕ್ತಿಯ ಬಿಂಬ ಭೋಗಕೆ
ಕಾಂಕ್ಷಿಯಾಗಿದೆ ನಗ್ನ ಯೋಗಕೆ
ಇಕ್ಷು ಮಂಚದ ಸಾಗ್ನಿ ಪಕ್ಷಿಯ ಅಚಂಚು ಚುಂಬನ
ಬಾ ಚಕೋರಿ ಬಾ ಚಕೋರಿ ಚಂದ್ರ ಮಂಚಕೆ

ಇಳಿದು ಬಾ ತಾಯೆ ಇಳಿದು ಬಾ - ಕುವೆಂಪು


ಓಂ ಸಚ್ಚಿದಾನಂದ ತ್ರಿತ್ವ ಮುಖವಾದ ಪರಬ್ರಹ್ಮದಲ್ಲಿ
ಅಭವದೊತ್ತಾದೆ ಭವದ ಬಿತ್ತಾದೆ ಋತದ ಚಿತ್ತಾದೆ ನೀ
ಇಳಿದು ಬಾ ಇಳೆಗೆ ತುಂಬಿ ತಾ ಬೆಳೆಗೆ ಜೀವ ಕೇಂದ್ರದಲ್ಲಿ
ಮತ್ತೆ ಮೂಡಿ ಬಾ ಒತ್ತಿ ನೀನೆನ್ನ ಚಿತ್ತ ಪೃಥ್ವಿಯಲ್ಲಿ ||

ಋತದ ಚಿತ್ತಾಗಿ ವಿಶ್ವಗಳ ಸೃಜಿಸಿ ನಡೆಸುತಿಹ ಶಕ್ತಿಯೆ
ಅನ್ನ ಪ್ರಾಣಗಳ ಮನೋಲೋಕಗಳ ಸೂತ್ರಧರ ಯುಕ್ತಿಯೆ
ಅಖಿಲ ಬಂಧನದ ಹೃದಯದಲ್ಲಿ ಅವಿನಾಶಿ ಆಸಕ್ತಿಯೆ
ನಿನ್ನ ಅವತಾರವೆನ್ನ ಉದ್ಧಾರ ಬಾ ದಿವ್ಯ ಮುಕ್ತಿಯೆ
ಎಲ್ಲವನು ಮಾಡಿ ಎಲ್ಲರೊಳಗೂಡಿ ನೀನೆ ಎಲ್ಲವಾದೆ
ಜ್ಯೋತಿಯಾದರೂ ತಮೋಲೀಲೆಯಲಿ ಜಡದ ಮುದ್ರೆಯಾದೆ
ಎನಿತು ಕರೆದರೂ ಓಕೊಳ್ಳದಿರುವಚಿನ್ನಿದ್ರೆಯಾದೆ
ಬೆಳಗಿ ನನ್ನಾತ್ಮಕಿಳಿದು ಬಾ ತಾಯೆ ನೀನೆ ಬ್ರಹ್ಮ ಬೋಧೆ
ಇಳಿದು ಬಾ ತಾಯೆ ಇಳಿದು ಬಾ ||

ಗಾಳಿಗುಸಿರು ನೀ ಬೆಂಕಿಗುರಿಯು ನೀನುದಕಕದರ ಜೀವ
ಅಗ್ನಿ ಇಂದ್ರ ವರುಣಾರ್ಕ ದೇವರನು ಮಾಡಿ ನೋಡಿ ಕಾವ
ಶಿವನ ಶಕ್ತಿ ನೀ, ವಿಷ್ಣು ಲಕ್ಷ್ಮೀ ನೀ, ಚತುರ್ಮುಖನ ರಾಣಿ
ದಿವ್ಯ ವಿಜ್ಞಾನ ನನ್ನೊಳುದ್ಭವಿಸೆ ಮತಿಗಾಗಮಿಸು, ವಾಣಿ
ಹೃದಯ ಪದ್ಮ ತಾನರಳೆ ಕರೆವೆ ಬಾರಮ್ಮ ಬಾ, ಇಳಿದು ಬಾ
ಮನೋದ್ವಾರ ತಾ ಬಿರಿಯೆ ಕರೆವೆ ಜಗದಂಬೆ ಬಾ, ಇಳಿದು ಬಾ
ಅಗ್ನಿ ಹಂಸ ಗರಿಗೆದರೆ ಕರೆವೆ ಬಾ ತಾಯೆ ಬಾ, ಇಳಿದು ಬಾ
ಚೈತ್ಯ ಪುರುಷ ಯಜ್ಞಕ್ಕೆ ನೀನೆ ಅಧ್ವರ್ಯು, ಬಾ, ಇಳಿದು ಬಾ
ಇಳಿದು ಬಾ ತಾಯಿ ಇಳಿದು ಬಾ ||'


ನೀನಿಲ್ಲದೇ ನನಗೇನಿದೇ - ಎಂ ಎನ್ ವ್ಯಾಸರಾವ್


ನೀನಿಲ್ಲದೇ ನನಗೇನಿದೇ
ಮನಸ್ಸೆಲ್ಲಾ ನಿನ್ನಲ್ಲಿ ನೆಲೆಯಾಗಿದೆ
ಕನಸ್ಸೆಲ್ಲಾ ಕಣ್ಣಲ್ಲೇ ಸೆರೆಯಾಗಿದೇ

ನಿನಗಾಗಿ ಕಾದು ಕಾದು ಪರಿತಪಿಸಿ ನೊಂದೇ ನಾನು
ಕಹಿಯಾದ ವಿರಹದ ನೋವೂ ಹಗಲಿರುಳು ತಂದೇ ನೀನು
ಎದೆಯಾಸೆ ಏನೋ ಎಂದೂ ನೀ ಕಾಣದಾದೇ
ನಿಶೆಯೊಂದೆ ನನ್ನಲ್ಲೀ ನೀ ತುಂಬಿದೇ
ಬೆಳಕೊಂದೆ ನಿನ್ನಿಂದಾ ನಾ ಬಯಸಿದೇ

ನೀನಿಲ್ಲದೇ ನನಗೇನಿದೇ…

ಒಲವೆಂಬ ಕಿರಣಾ ಬೀರೀ ಒಳಗಿರುವ ಕಣ್ಣಾ ತೆರೆಸೀ
ಒಣಗಿರುವ ಎದೆನೆಲದಲ್ಲಿ ಭರವಸೆಯ ಜೀವ ಹರಿಸಿ
ಸೆರೆಯಿಂದ ಬಿಡಿಸಿ ನನ್ನ ಆತಂಕ ನೀಗು
ಹೊಸ ಜೀವ ನಿನ್ನಿಂದಾ ನಾ ತಾಳುವೇ
ಹೊಸ ಲೋಕ ನಿನ್ನಿಂದಾ ನಾ ಕಾಣುವೇ

ನೀನಿಲ್ಲದೇ ನನಗೇನಿದೇ …

ಹಾವು ಅಂದ್ರೆ ಮರಿ ಗುಬ್ಬಿಗೆ ಭಾರಿ ದಿಗಿಲೇನೆ - ಡಾ.ಹೆಚ್. ಎಸ್. ವೆಂಕಟೇಶಮೂರ್ತಿ,


ಹಾವು ಅಂದ್ರೆ ಮರಿ ಗುಬ್ಬಿಗೆ ಭಾರಿ ದಿಗಿಲೇನೆ
ನೆನಿಸಿಕೊಂದ್ರೆ ಮೈ ನಡುಗುತ್ತೆ ಹಾಡೇ ಹಗಲೇನೆ
ಒಂದು ಸಾರಿ ಪುಟಾಣಿ ಗುಬ್ಬಿ ಅಮ್ಮನ ಕೇಳುತ್ತೆ
ಅಮ್ಮ ಅಮ್ಮ ಬುಸ್ಸ್ ಬುಸ್ಸ್ ಹಾವು ಹ್ಯಾಗಿರತ್ತೆ ||

ಒಕ್ಕಲಿ ಬೆನ್ನು ತಿಕ್ಕಿ ಕೊಳ್ತಾ ಅಮ್ಮ ಅನ್ನುತ್ತೆ
ಒಳ್ಳೆ ಪ್ರಶ್ನೆ ಹಾವು-ಹ್ಯಾಗಿರತ್ತೆ ಹಾವು ಹ್ಯಾಗಿರತ್ತೆ
ಹಾವಿರತ್ತೆ ಹಾವಿನ ಹಾಗೆ ಕಾಗೆ ಕಪ್ಪಗೆ
ಸಪೂರ ಥಳ ಥಳ ಕೆಂಡದ ಕಣ್ಣು ಕಡ್ಡಿ ದಪ್ಪಗೆ ||

ಸೂರಿಗೆ ಸುತ್ತಿ ಜೋತಾಡತ್ತೆ ಗೋಧಿ ಬೆನ್ನು
ದೀಪದ ಹಾಗೆ ಉರಿತಿರತ್ತೆ ಹಾವಿನ ಕಣ್ಣು
ಬುಸ್ಸ್ ಎನ್ನುತ್ತೆ ದರಿದ್ರ ಹಾವಿಗೆ ತುಂಬದ ಹೊಟ್ಟೆ
ಇಡಿ ಇಡಿಯಾಗಿ ನುಂಗ್ ಬಿಡುತ್ತೆ ಹಕ್ಕಿ ಮೊಟ್ಟೆ

ಹಕ್ಕಿಯ ಮೊಟ್ಟೆ ನುಂಗಿದ್ ಮೇಲೆ ಇಡಿ ಇಡೀಲಿ
ಹಕ್ಕಿ ಮರಿ ಬೆಳ್ಕೊಳುತ್ತೆ ಹಾವಿನ ಹೊಟ್ಟೆಲಿ
ಹಕ್ಕಿ ಮರಿ ಹುಟ್ಕೋಳ್ಳತ್ತೆ ಹಾವಿನ ಹೊಟ್ಟೆಲಿ
ಅಂತ ಪುಟಾಣಿ ಕುಣಿದಾಡ್ತಿತ್ತು ಅಮ್ಮನ ತೋಳಲ್ಲಿ

ನಿಟ್ಟುಸಿರಿತ್ತು ಅಮ್ಮ ಗುಬ್ಬಿ ಇಲ್ಲ ಬಂಗಾರ
ಇನ್ನೂ ನಿನಗೆ ತಿಳೀದಮ್ಮ ಹಾವಿನ ಹುನ್ನಾರ
ಹಾವಿನ ಹೊಟ್ಟೆ ಸೇರಿದ್ ಮೇಲೆ ಹೇಳೋದ್ ಇನ್ನೇನು
ಹಾವಿನ ಮೊಟ್ಟೆ ಆಗ್ಬಿಡತ್ತೆ ಹಕ್ಕಿ ಮೊಟ್ಟೇನು

Sunday, March 17, 2013

ಜೀವನ


ಜೀವನ ಹುಮ್ಮಸು
.......ಹುಮ್ಮಸು ಜೀವನವಲ್ಲ

ನಗುವ ಜೀವನವಿರಲ್ಲಿ
.......ಜೀವನ ನಗುವಗದಿರಲ್ಲಿ

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......