ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Tuesday, October 27, 2015
Monday, October 26, 2015
ಚುಟುಕ - ಸಂತೋಷ್ ಕುಮಾರ್ ಎಲ್. ಎಂ.
---1 ---
ಬತ್ತಿಯ ಬಾಯಿಗೆ
ಬೆಂಕಿಯಿಟ್ಟವನ ಆಶಯ
ಬೆಳಕಷ್ಟೇ!
ಮುಗಿಯುವ
ಅದರ ಆಯಸ್ಸಲ್ಲ
---2---------
ಗೂಡು ಕಟ್ಟಿದ್ದ ಮರವ
ಧರೆಗುರುಳಿಸಿದ ಕಾರಣ
ಹುಡುಕುತ್ತಿದ್ದ ಹಕ್ಕಿಗೆ
ವಿಳಾಸವಿಲ್ಲ...
ಹಕ್ಕಿಯೂ ಶಪಿಸಿತು,
ಉರುಳಿಸಿದ ದುರುಳನಿಗೂ
ಮುಂದೊಂದು ದಿನ
ವಿಳಾಸವಿಲ್ಲ!
ಬತ್ತಿಯ ಬಾಯಿಗೆ
ಬೆಂಕಿಯಿಟ್ಟವನ ಆಶಯ
ಬೆಳಕಷ್ಟೇ!
ಮುಗಿಯುವ
ಅದರ ಆಯಸ್ಸಲ್ಲ
---2---------
ಗೂಡು ಕಟ್ಟಿದ್ದ ಮರವ
ಧರೆಗುರುಳಿಸಿದ ಕಾರಣ
ಹುಡುಕುತ್ತಿದ್ದ ಹಕ್ಕಿಗೆ
ವಿಳಾಸವಿಲ್ಲ...
ಹಕ್ಕಿಯೂ ಶಪಿಸಿತು,
ಉರುಳಿಸಿದ ದುರುಳನಿಗೂ
ಮುಂದೊಂದು ದಿನ
ವಿಳಾಸವಿಲ್ಲ!
ಅತೀ ಎತ್ತರದ ಕಟ್ಟಡಗಳ ಮೇಲೆ ಹಗ್ಗ ಕಟ್ಟಿ ನಡೆದ - Philippe Petit
ಚಿಕ್ಕವನಿದ್ದಾಗ ಫ್ರಾನ್ಸಿನ ಬೀದಿಗಳಲ್ಲಿ ತಿರುಗುತ್ತ, ಜನಗಳು ಅಚ್ಚರಿಪಡುವ ಪುಟ್ಟ ಪುಟ್ಟ ಸಾಹಸ ಪ್ರದರ್ಶನಗಳನ್ನು ನೀಡುತ್ತ ಸಂಪಾದಿಸುವ ಹುಡುಗ Philippe Petit. ಇದರ ಬಗ್ಗೆ ಅವರ ಅಪ್ಪ ಅಮ್ಮನಿಗೆ ಕೊಂಚವೂ ಇಷ್ಟವಿರುವುದಿಲ್ಲ. ಸರ್ಕಸ್ಸೊಂದರಲ್ಲಿ ಹಗ್ಗದ ಮೇಲೆ ನಡೆಯುವ ಸರ್ಕಸ್ಸಿನವನೊಬ್ಬನ ಕೌಶಲ್ಯದಿಂದ ಪ್ರೇರಿತನಾಗುವ Philippe Petitಗೆ ಮುಂದೆ ತಾನೂ ಈ ಸಾಹಸವನ್ನು ಮಾಡಬೇಕೆಂಬ ಆಸೆಯಾಗುತ್ತದೆ. ಅದನ್ನು ಕಲಿಯುತ್ತ ಸಾಗುವ ಹಾದಿಯಲ್ಲಿ ಆತ ಹಗ್ಗ ಕಟ್ಟಿ ಮಧ್ಯೆ ನಡೆಯಲು ಅನುಕೂಲವಾಗಬಲ್ಲ ಎರಡು ಎತ್ತರದ ವಸ್ತುಗಳನ್ನು ಸದಾ ಹುಡುಕುತ್ತಿರುತ್ತಾನೆ.
ಯಾವುದೋ ಒಂದು ದೃಶ್ಯದಲ್ಲಿ ಹಲ್ಲು ನೋವಾಗಿ Dental Clinic ಗೆ ಹೋದಾಗ, ಅಲ್ಲಿಟ್ಟ ಮ್ಯಾಗಜೈನುಗಳ ಪೈಕಿ ಒಂದರಲ್ಲಿ ಪ್ರಪಂಚದ ಅತೀ ಎತ್ತರದ ಕಟ್ಟಡ ನ್ಯೂಯಾರ್ಕಿನ WTCಯ ಬಗೆಗಿನ ಮಾಹಿತಿ ಇವನ ಕಣ್ಣಿಗೆ ಬೀಳುತ್ತದೆ. ಕೇವಲ ಅದರ ಚಿತ್ರ ನೋಡಿಯೇ ರೋಮಾಂಚನಗೊಂಡು, ಜೀವನದಲ್ಲೊಮ್ಮೆ ತಾನು ಆ ಜೋಡಿ ಕಟ್ಟಡಗಳ ಮಧ್ಯೆ ಹಗ್ಗ ಕಟ್ಟಿ ನಡೆಯಬೇಕೆಂಬ ಮಹದಾಶೆ ಆ ಕ್ಷಣದಲ್ಲೇ ಅವನೆದೆಯೊಳಗೆ ಚಿಗುರೊಡೆಯುತ್ತದೆ. ಇಂಟರ್ನೆಟ್ಟುಗಳಿಲ್ಲದ ಎಪ್ಪತ್ತರ ದಶಕಗಳಲ್ಲಿ ಕೇವಲ ಪುಸ್ತಕಗಳಲ್ಲಿ, ವೃತ್ತಪತ್ರಿಕೆಗಳಲ್ಲಿ ಬರುವ ಆ ಕಟ್ಟಡದ ಬಗೆಗಿನ ಮಾಹಿತಿಯನ್ನು ಸಂಗ್ರಹಿಸುತ್ತ ತಯಾರಿ ಶುರುವಿಟ್ಟುಕೊಳ್ಳುತ್ತಾನೆ.

ಇದು ಕಾಲ್ಪನಿಕ ಕಥೆಯಲ್ಲ. ಅತೀ ಎತ್ತರದ ಕಟ್ಟಡಗಳ ಮೇಲೆ ಹಗ್ಗ ಕಟ್ಟಿ ನಡೆದು ಪ್ರಸಿದ್ಧಿಯಾದ ವ್ಯಕ್ತಿ Philippe Petit, ತಮ್ಮ ಅನುಭವವನ್ನು "To Reach the Clouds" ಅನ್ನುವ ಪುಸ್ತಕದಲ್ಲಿ ದಾಖಲಿಸಿದ್ದಾರೆ. ಅದೇ ಪುಸ್ತಕವನ್ನಾಧರಿಸಿ "The Walk" ಚಿತ್ರವನ್ನು ತಯಾರಿಸಲಾಗಿದೆ. ಅವಕಾಶ ಸಿಕ್ಕರೆ ನೀವೂ ಒಮ್ಮೆ ಚಿತ್ರಮಂದಿರದಲ್ಲಿ ನೋಡಿ.
![]() |
ಸಂತೋಷ್ ಕುಮಾರ್ ಎಲ್. ಎಂ. |
Saturday, September 26, 2015
ಹಾಸ್ಯ - ಕೃಪೆ - ವಾಟ್ಸ್ ಆಪ್
ಎಂಟು , ಹತ್ತು ವರುಷದ ಇಬ್ಬರು ಹುಡುಗರು ತುಂಟತನದಲ್ಲಿ ಪ್ರಖ್ಯಾತರಾಗಿದ್ದರು. ಕುಖ್ಯಾತರು ಕೂಡ. ಊರಲ್ಲಿ ಏನೇ ಕಿತಾಪತಿಯಾದರೂ ಅದರಲ್ಲಿ ಇವರಿಬ್ಬರ ಹೆಸರು ಇದ್ದೇ ಇರುತಿತ್ತು.. ಅವರ ಹೆತ್ತವರಿಗೆ ಸಹಜವಾಗಿಯೇ ಇದು ತಲೆಬಿಸಿಯ ಸಂಗತಿಯಾಗಿತ್ತು. ಹೀಗಿರುವಾಗ ಅವರಮ್ಮನಿಗೆ ಒಬ್ಬ ಸ್ವಾಮೀಜಿಯ ಬಗ್ಗೆ ತಿಳಿದು ಬಂತು. ಅವರು ಇಂಥ ಎಷ್ಟೊ ಮಕ್ಕಳ ತಂಟತನವನ್ನು ಬುದ್ಧಿ ಹೇಳಿ ಕಡಿಮೆ ಮಾಡಿದ್ದರು. ಮಕ್ಕಳಿಬ್ಬರನ್ನೂ ಕರೆದುಕೊಂಡು ಸ್ವಾಮೀಜಿಯವರ ಬಳಿ ಹೋದಳು.
ವಿಷಯವೆಲ್ಲ ತಿಳಿದುಕೊಂಡು ಸ್ವಾಮೀಜಿ ಹೇಳಿದರು ಒಬ್ಬೊಬ್ಬರನ್ನೇ ಮಾತಾಡಿಸುತ್ತೇನೆ. ನಾಳೆ ಚಿಕ್ಕವನನ್ನು ಕಳುಹಿಸಿ ನನ್ನ ಹತ್ತಿರ.
ಸರಿ ಎಂದ ಅಮ್ಮ.. ಮಾರನೆ ದಿನ ಚಿಕ್ಕವನನ್ನು ಕಳುಹಿಸಿದರು. ಅವನನ್ನು ಸ್ವಲ್ಪ ಹೊತ್ತು ದಿಟ್ಟಿಸಿ ನೋಡಿದ ಸ್ವಾಮೀಜಿ ತಮ್ಮ ಕಂಚಿನ ಕಂಠದಿಂದ ದೇವರು ಎಲ್ಲಿದ್ದಾನೆ? ಎಂದು ಕೇಳಿದರು. ಹುಡುಗ ಮೌನವಾಗಿದ್ದ. ಪುನಃ ಹತ್ತಿರ ಬಂದು ದೇವರು ಎಲ್ಲಿದ್ದಾನೆ ಎಂದು ಕೇಳಿದರು.
ಆಗಲೂ ಮಾತಾಡದ ಹುಡುಗನ ಕೆನ್ನೆಯನ್ನು ತನ್ನ ಬೆರಳಿಂದ ತಿವಿದು ಅದೇ ಪ್ರಶ್ನೆಯನ್ನು ಕೇಳಿದರು.. ದೇವರು ಎಲ್ಲಿದ್ದಾನೆ?.
ಹುಡುಗ ಅಲ್ಲಿಂದ ಒಂದೇ ಉಸಿರಿಗೆ ಓಡಿ ಬಂದು ಮನೆ ಸೇರಿ ಮೂಲೆಯೊಂದರಲ್ಲಿ ಅಡಗಿ ಕೂತ.
ಅದನ್ನು ಕಂಡ ದೊಡ್ಡ ಹುಡುಗ ಹತ್ತಿರ ಬಂದು ಏನಾಯ್ತು ಎಂದು ಕೇಳಿದ.
ಚಿಕ್ಕವನು ನಡುಗುತ್ತ... ಅಣ್ಣಾ.... ಎಂದು ಅವನ ಕಿವಿಯಲ್ಲಿ ಗುಟ್ಟಾಗಿ ಹೇಳಿದ..
ಆ ಪುಟ್ಟ ಹುಡುಗನ ಉತ್ತರ ಅದೆಷ್ಟು ಮುಗ್ಧವಾಗಿತ್ತೆಂದರೆ ನನಗಂತೂ ನಗು ತಡೆಯಲೇ ಆಗಲಿಲ್ಲ..
ನೀವೂ ಓದಿ.
.
.
.
.
"ಅಣ್ಣಾ...ಈ ಸಲ ದೊಡ್ಡ ತೊಂದರೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದೇವೆ ಕಣೊ... ದೇವರು ಕಾಣೆಯಾಗಿದ್ದಾನಂತೆ .. ಅದೂ ನಮ್ಮ ಮೇಲೆ ಬಂದಿದೆ."
ಕೃಪೆ - ವಾಟ್ಸ್ ಆಪ್
Friday, September 4, 2015
Monday, August 10, 2015
ನಾಡೋಜ ಶ್ರೀ ಕಯ್ಯಾರ ಕಿಞ್ಞಣ್ಣ ರೈ - Rohith Chakrathirtha
ಕನ್ನಡದ ಅಕ್ಷರಗಳನ್ನು ಕೈಬಿಡಬೇಕು, ಮಹಾಪ್ರಾಣ ತೆಗೆಯಬೇಕು, ಕೊನೆಗೆ ಕನ್ನಡದ ಪ್ರಾಣವನ್ನೂ ಉಡಾಯಿಸಬೇಕು ಎಂದು ನಮ್ಮೊಳಗಿನ ಕನ್ನಡಿಗರೇ ಸಂಚು ಮಾಡುತ್ತಿರುವಾಗ ಕಾಸರಗೋಡಿನಂಥ ಪರಸ್ಥಳದಲ್ಲಿದ್ದು ಮಾನಸಿಕವಾಗಿ ಎಂದೆಂದೂ ಕನ್ನಡಿಗನೇ ಆಗಿ ಉಳಿದ ಮತ್ತು ತನ್ನ ತಾಯ್ನಾಡು ಕಾಸರಗೋಡನ್ನು ಕಡೆಯವರೆಗೂ ಕನ್ನಡನಾಡಿನ ಭಾಗವೆಂದೇ ತಿಳಿದ ರೈಗಳು ಪರೋಕ್ಷವಾಗಿ 'ಞ' ಎಂಬ ಪಾಪದ ಅಕ್ಷರವನ್ನೂ ಉಳಿಸಲು ಹೋರಾಡಿದರು ಎನ್ನಬಹುದು. ಯಾಕೆಂದರೆ ರೈದಂಪತಿ ತಮ್ಮೆರಡು ಹೆಸರುಗಳಲ್ಲೇ ನಾಲ್ಕು 'ಞ'ಗಳನ್ನು ಮಕ್ಕಳಂತೆ ಕಟ್ಟಿಕೊಂಡಿದ್ದರು.
ಹುಟ್ಟಿಸಿದ ತುಳುವಪ್ಪೆ, ಬೆಳೆಸಿದ ಕನ್ನಡತಾಯಿ ಇಬ್ಬರೂ ಬಡವಾಗಿದ್ದಾರೆ. 'ಞ' ಅಕ್ಷರ ಕೂಡ ತಬ್ಬಲಿಯಾಗಿದೆ.
ಹುಟ್ಟಿಸಿದ ತುಳುವಪ್ಪೆ, ಬೆಳೆಸಿದ ಕನ್ನಡತಾಯಿ ಇಬ್ಬರೂ ಬಡವಾಗಿದ್ದಾರೆ. 'ಞ' ಅಕ್ಷರ ಕೂಡ ತಬ್ಬಲಿಯಾಗಿದೆ.
![]() |
ನಾಡೋಜ ಶ್ರೀ ಕಯ್ಯಾರ ಕಿಞ್ಞಣ್ಣ ರೈ |
Friday, July 24, 2015
ಶ್ರೀ ಗಣೇಶಭಟ್ಟ ಕೊಪ್ಪಲತೋಟರ ಮೂರನೆಯ ಅಷ್ಟಾವಧಾನಕಾರ್ಯಕ್ರಕೆ ಅಮಂತ್ರಣ
ಆತ್ಮೀಯಮಿತ್ರರಿಗೆಲ್ಲ ನಮಸ್ಕಾರ,
ಇದೇ ತಿಂಗಳು ಇಪ್ಪತ್ತೈದನೆಯ ತಾರೀಖು ಶನಿವಾರದಂದು ಬೆಳಗ್ಗೆ ಹತ್ತುಗಂಟೆಗೆ ಬಸವನಗುಡಿ ರಸ್ತೆಯಲ್ಲಿರುವ ಗೋಖಲೆ ಸಾರ್ವಜನಿಕವಿಚಾರಸಂಸ್ಥೆಯಲ್ಲಿ ನಮ್ಮ ಯುವಮಿತ್ರರೂ ಸಾಹಿತ್ಯರಸಿಕರೂ ಆದ
ಶ್ರೀ ಗಣೇಶಭಟ್ಟ ಕೊಪ್ಪಲತೋಟರ ಮೂರನೆಯ ಅಷ್ಟಾವಧಾನಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದಕ್ಕೆ ಪ್ರಾಯೋಜಕರಾಗಿ ಒದಗಿ ಬಂದವರು ನಮ್ಮ ಪದ್ಯಪಾನ ಬಳಗದವರೇ ಆದ ಶ್ರೀ.ಸೋಮಶೇಖರಶರ್ಮ, ಶ್ರೀ.ರವಿಶಂಕರ್ ಮತ್ತು ಶ್ರೀ.ಶ್ರೀಧರ್ ಸಾಲಿಗ್ರಾಮ ಅವರ ಪೂಜ್ಯಮಾತಾಪಿತರು.ಇದಕ್ಕಾಗಿ ಅವರಿಗೆ ವಿಶೇಷಕೃತಜ್ಞತೆಗಳು.
ಶ್ರೀ ಗಣೇಶಭಟ್ಟ ಕೊಪ್ಪಲತೋಟರ ಮೂರನೆಯ ಅಷ್ಟಾವಧಾನಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದಕ್ಕೆ ಪ್ರಾಯೋಜಕರಾಗಿ ಒದಗಿ ಬಂದವರು ನಮ್ಮ ಪದ್ಯಪಾನ ಬಳಗದವರೇ ಆದ ಶ್ರೀ.ಸೋಮಶೇಖರಶರ್ಮ, ಶ್ರೀ.ರವಿಶಂಕರ್ ಮತ್ತು ಶ್ರೀ.ಶ್ರೀಧರ್ ಸಾಲಿಗ್ರಾಮ ಅವರ ಪೂಜ್ಯಮಾತಾಪಿತರು.ಇದಕ್ಕಾಗಿ ಅವರಿಗೆ ವಿಶೇಷಕೃತಜ್ಞತೆಗಳು.
![]() |
ಶ್ರೀ ಗಣೇಶಭಟ್ಟ ಕೊಪ್ಪಲತೋಟ |
ಈ ಅವಧಾನದಲ್ಲಿ ಪೃಚ್ಛಕರಾಗಿ ಪಾಲ್ಗೊಳ್ಳಲು ಪ್ರೀತಿಯಿಂದ ಒಪ್ಪಿದವರು :
ಶ್ರೀ. ಎಮ್ ಆರ್ ಚಂದ್ರಮೌಳಿ (ನಿಷೇಧಾಕ್ಷರಿ)
ಶ್ರೀ. ಎಮ್ ಆರ್ ಚಂದ್ರಮೌಳಿ (ನಿಷೇಧಾಕ್ಷರಿ)
ಶ್ರೀ. ಮಂಜುನಾಥ ಕೊಳ್ಳೇಗಾಲ (ಸಮಸ್ಯಾಪೂರಣ)
ಶ್ರೀ. ಬಿ ಆರ್ ಪ್ರಭಾಕರ್ (ದತ್ತಪದೀ)
ಶ್ರೀಮತಿ. ಉಷಾ ಉಮೇಶ್ (ನ್ಯಸ್ತಾಕ್ಷರೀ)
ಶ್ರೀ. ಸುಧೀರ್ ಕೃಷ್ಣಸ್ವಾಮಿ (ಆಶುಕವಿತೆ)
ಶ್ರೀಮತಿ. ಶ್ರೀಲಲಿತಾ ರೂಪನಗುಡಿ (ಕಾವ್ಯವಾಚನ)
ಶ್ರೀ. ರಂಗನಾಥ ಪ್ರಸಾದ್ (ಸಂಖ್ಯಾಬಂಧ)
ಶ್ರೀ. ಆರ್ ಗಣೇಶ್ (ಅಪ್ರಸ್ತುತಪ್ರಸಂಗ)
ಶ್ರೀ. ಬಿ ಆರ್ ಪ್ರಭಾಕರ್ (ದತ್ತಪದೀ)
ಶ್ರೀಮತಿ. ಉಷಾ ಉಮೇಶ್ (ನ್ಯಸ್ತಾಕ್ಷರೀ)
ಶ್ರೀ. ಸುಧೀರ್ ಕೃಷ್ಣಸ್ವಾಮಿ (ಆಶುಕವಿತೆ)
ಶ್ರೀಮತಿ. ಶ್ರೀಲಲಿತಾ ರೂಪನಗುಡಿ (ಕಾವ್ಯವಾಚನ)
ಶ್ರೀ. ರಂಗನಾಥ ಪ್ರಸಾದ್ (ಸಂಖ್ಯಾಬಂಧ)
ಶ್ರೀ. ಆರ್ ಗಣೇಶ್ (ಅಪ್ರಸ್ತುತಪ್ರಸಂಗ)
ಅಷ್ಟಾವಧಾನಿ ಕೊಪ್ಪಲತೋಟರು ಕೇವಲ ಇಪ್ಪತ್ತಾರು ವರ್ಷಗಳ ಕಿರಿಯ ಹರೆಯದಲ್ಲಿಯೇ ಮಾಡಿರುವ ಸಾಹಿತ್ಯಸಾಧನೆ ಸ್ತುತ್ಯವಾಗಿದೆ. ಅವರು ಈಗಾಗಲೇ ಕಥೆ, ಕಾದಂಬರಿ, ಕವಿತೆ, ಖಂಡಕಾವ್ಯ ಮುಂತಾದ ಪ್ರಕಾರಗಳಲ್ಲಿ ದುಡಿದಿದ್ದಾರೆ. ಅಲ್ಲದೆ ಹಳಗನ್ನಡ, ನಡುಗನ್ನಡ ಮತ್ತು ಹೊಸಗನ್ನಡ ಸಾಹಿತ್ಯಗಳಲ್ಲಿ ಒಳ್ಳೆಯ ಅಧ್ಯಯನವನ್ನೂ ಮಾಡಿದ್ದಾರೆ. ಜೊತೆಗೆ ಒಳ್ಳೆಯ ಧಾರೆ, ಧಾರಣ ಮತ್ತು ಪ್ರತಿಭೆ-ಪಾಂಡಿತ್ಯಗಳ ಹದವುಳ್ಳ ತಮ್ಮ ಮೊದಲ ಅವಧಾನದ ಮೂಲಕವೇ ವಿದ್ವದ್ರಸಿಕರಲ್ಲಿ ಹೊಸಭರವಸೆಯನ್ನೂ ಮೂಡಿಸಿದ್ದಾರೆ. ಇಂಥ ಮೇಧಾವಿಗಳಾದ ತರುಣರ ವಿಶಿಷ್ಟಕಲೆಯನ್ನು ಮೆಚ್ಚಿ ಆದರಿಸಲು ಕನ್ನಡಸಾಹಿತ್ಯರಸಿಕರೂ ಅವಧಾನಕಲಾಪ್ರೇಮಿಗಳೂ ಬರಬೇಕೆಂದು ವಿನಂತಿ. ಎಲ್ಲ ಕಾವ್ಯರಸಿಕರಿಗೂ ಆದರದ ಸ್ವಾಗತ.
Subscribe to:
Posts (Atom)
ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.
"ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......

-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರ, ಕೋರಿಕೆಗೆ ಕೋರಿಕೆ! ಅಂದರೆ, ಈಶ್ವರ ಸಣಕಲ್ಲ ಅವರ ಪ್ರಖ್ಯಾತ ಕವಿತೆ "ಕೋರಿಕೆ" ಪ್ರಕ...
-
ಮೂಡುವನು ರವಿ ಮೂಡುವನು ಕತ್ತಲೊಡನೆ ಜಗಳಾಡುವನು ಪಂಜೆ ಮಂಗೇಶ ರಾಯರು ಮೂಡಣ ರಂಗಸ್ಥಳದಲಿ ನೆತ್ತರ ಮಾಡುವನು ಕುಣಿದಾಡುವನು ಬೆಳಕಿನ ಕಣ್ಣುಗಳಿ೦ದಾ ಸೂರ್ಯನು ನೋಡ...