ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Monday, June 27, 2016
Friday, June 24, 2016
ಕರುಣಾಳು ಬಾ ಬೆಳಕೆ .. - ಬಿ.ಎಂ. ಶ್ರೀಕಂಠಯ್ಯ
ಕರುಣಾಳು ಬಾ ಬೆಳಕೆ ಮಸುಕಿದೀ ಮಬ್ಬಿನಲಿ
ಕೈ ಹಿಡಿದು ನಡೆಸೆನ್ನನು
ಇರುಳು ಕತ್ತಲೆಯ ಗವಿ ಮನೆ ದೂರ ಕನಿಕರಿಸಿ
ಕೈ ಹಿಡಿದು ನಡೆಸೆನ್ನನು
ಹೇಳಿ ನನ್ನಡಿಯಿಡಿಸು ಬಲುದೂರ ನೋಟವನು
ಕೇಳನೊಡನೆಯೆ ಸಾಕು ನನಗೊಂದು ಹೆಜ್ಜೆ
ಮುನ್ನ ಇಂತಿರದಾದೆ ನಿನ್ನ ಬೇಡದೆ ಹೋದೆ
ಕೈ ಹಿಡಿದು ನಡೆಸೆನ್ನನು
ಇಷ್ಟುದಿನ ಸಲಹಿರುವೆ ಈ ಮೂರ್ಖನನು ನೀನು ಮುಂದೆಯೂ
ಕೈ ಹಿಡಿದು ನಡೆಸದಿಹೆಯಾ
ಕಷ್ಟದಡವಿಯ ಕಳೆದು ಬೆಟ್ಟ ಹೊಳೆಗಳ ಹಾದು
ಇರುಳನ್ನು ನೂಕದಿಹೆಯಾ?
ಬೆಳಗಾಗ ಹೊಳೆಯದೆಯೆ ಹಿಂದೊಮ್ಮೆ ನಾನೊಲಿದು
ಈ ನಡುವೆ ಕಳಕೊಂಡೆ ದಿವ್ಯ ಮುಖ ನಗುತ
- ಬಿ.ಎಂ. ಶ್ರೀಕಂಠಯ್ಯ
"ಕೋರಿಕೆ" - ಈಶ್ವರ ಸಣಕಲ್ಲ
ಜಗವೆಲ್ಲ ನಗುತಿರಲಿ!
ಜಗದಳುವು ನನಗಿರಲಿ!
ನಾನಳಲು, ಜಗವೆನ್ನನೆತ್ತಿಕೊಳದೇ?
ನಾ ನಕ್ಕು, ಜಗವಳಲು ನೋಡಬಹುದೇ?
ತೆರವಾಗಿ ನನ್ನೆದೆಯು,
ಧರೆಯೆದೆಯು ಉಕ್ಕಿರಲಿ!
ಧರೆಯೊಳಗೆ ತೇಲಿಸುವೆನೆನ್ನೆದೆಯನು!
ಧರೆ ಬತ್ತಿ, ಎನ್ನೆದೆಯು ಉಕ್ಕಲೇನು?
ಪೊಡವಿಯೈಸಿರಿವಡೆದು,
ಬಡತನವು ನನಗಿರಲಿ
ಕೈಯೊಡ್ಡೆ ಪೊಡವಿಯೆನಗಿಕ್ಕದೇನು?
ಪೊಡವಿಯೇ ಮೈಯಳಿಯೆ, ಮಾಡಲೇನು?
ವಿಶ್ವವನು ತುಂಬಿರುವ
ಈಶ್ವರನೆ ಅಳತೊಡಗೆ,
ಸೈತಿಡಲು, ಸೈಪಿಡಲು ಬರುವನಾವಂ?
’ಹೇ ತಂದೆ’,ಎನಲೆನ್ನನವನೆ ಕಾವಂ!
ವಸಂತ ಬಂದ, ಋತುಗಳ ರಾಜ ತಾ ಬಂದ - ಬಿ ಎಂ ಶ್ರೀ
ವಸಂತ ಬಂದ, ಋತುಗಳ ರಾಜ ತಾ ಬಂದ
ಚಿಗುರನು ತಂದ, ಹೆಣ್ಗಳ ಕುಣಿಸುತ ನಿಂದ,
ಚಳಿಯನು ಕೊಂದ, ಹಕ್ಕಿಗಳುಲಿಗಳೆ ಚೆಂದ,
ಕೂವೂ , ಜಗ್ ಜಗ್, ಪುವ್ವೀ, ಟೂವಿಟ್ಟವೂ !
ಕುರಿ ನೆಗೆದಾಟ, ಕುರುಬರ ಕೊಳಲಿನೂದಾಟ,
ಇನಿಯರ ಬೇಟ; ಬನದಲಿ ಬೆಳದಿಂಗಳೂಟ,
ಹೊಸ ಹೊಸ ನೋಟ, ಹಕ್ಕಿಗೆ ನಲಿವಿನ ಪಾಟ,
ಕೂವೂ , ಜಗ್ ಜಗ್, ಪುವ್ವೀ, ಟೂವಿಟ್ಟವೂ !
ಮಾವಿನ ಸೊಂಪು, ಮಲ್ಲಿಗೆ ಬಯಲೆಲ್ಲ ಕಂಪು
ಗಾಳಿಯ ತಂಪು, ಜನಗಳ ಜಾತ್ರೆಯ ಗುಂಪು,
ಕಿವಿಗಳಿಗಿಂಪು ಹಕ್ಕಿಗಳುಲುಹಿನ ಪೆಂಪು,
ಕೂವೂ , ಜಗ್ ಜಗ್, ಪುವ್ವೀ, ಟೂವಿಟ್ಟವೂ !
ಬಂದ ವಸಂತ - ನಮ್ಮಾ ರಾಜ ವಸಂತ !
ಇಂಗ್ಲಿಷ್ ಗೀತಗಳು’ ಸಂಕಲನದ್ದು. ಆಂಗ್ಲ ಕವಿ Thomas Nashe (1567–1601) ಬರೆದ ’Spring' ಕವಿತೆಯ ಅನುವಾದ.
ಚಿಗುರನು ತಂದ, ಹೆಣ್ಗಳ ಕುಣಿಸುತ ನಿಂದ,
ಚಳಿಯನು ಕೊಂದ, ಹಕ್ಕಿಗಳುಲಿಗಳೆ ಚೆಂದ,
ಕೂವೂ , ಜಗ್ ಜಗ್, ಪುವ್ವೀ, ಟೂವಿಟ್ಟವೂ !
ಕುರಿ ನೆಗೆದಾಟ, ಕುರುಬರ ಕೊಳಲಿನೂದಾಟ,
ಇನಿಯರ ಬೇಟ; ಬನದಲಿ ಬೆಳದಿಂಗಳೂಟ,
ಹೊಸ ಹೊಸ ನೋಟ, ಹಕ್ಕಿಗೆ ನಲಿವಿನ ಪಾಟ,
ಕೂವೂ , ಜಗ್ ಜಗ್, ಪುವ್ವೀ, ಟೂವಿಟ್ಟವೂ !
ಮಾವಿನ ಸೊಂಪು, ಮಲ್ಲಿಗೆ ಬಯಲೆಲ್ಲ ಕಂಪು
ಗಾಳಿಯ ತಂಪು, ಜನಗಳ ಜಾತ್ರೆಯ ಗುಂಪು,
ಕಿವಿಗಳಿಗಿಂಪು ಹಕ್ಕಿಗಳುಲುಹಿನ ಪೆಂಪು,
ಕೂವೂ , ಜಗ್ ಜಗ್, ಪುವ್ವೀ, ಟೂವಿಟ್ಟವೂ !
ಬಂದ ವಸಂತ - ನಮ್ಮಾ ರಾಜ ವಸಂತ !
ಇಂಗ್ಲಿಷ್ ಗೀತಗಳು’ ಸಂಕಲನದ್ದು. ಆಂಗ್ಲ ಕವಿ Thomas Nashe (1567–1601) ಬರೆದ ’Spring' ಕವಿತೆಯ ಅನುವಾದ.
ವನಸುಮದೊಲೆನ್ನ ಜೀವನವು ವಿಕಸಿಸುವಂತೆ - ಡಿ ವಿ ಜಿ
ವನಸುಮದೊಲೆನ್ನ ಜೀವನವು ವಿಕಸಿಸುವಂತೆ
ಮನವನನುಗೊಳಿಸು ಗುರುವೆ, ಹೇ ದೇವಾ
ಜನಕೆ ಸಂತಸವೀವಘನನು ನಾನೆಂದೆಂಬ
ಎಣಿಕೆ ತೋರದೆ ಜಗದ ಪೊಗಳಿಕೆಗೆ ಬಾಯ್ ಬಿಡದೆ
ಕಾನನದಿ ಮಲ್ಲಿಗೆಯುಮೌನದಿಂ ಬಿರಿದು ನಿಜ
ಸೌರಭವ ಸೂಸಿ ನಲವಿಂತಾನೆಲೆಯ ಪಿಂತಿರ್ದು
ದೀನತೆಯ ತೋರಿ ಅಭಿ
ಮಾನವನು ತೊರೆದು ಕೃತಕೃತ್ಯತೆಯ ಪಡೆವಂತೆ
ಉಪಕಾರಿ ನಾನು ಎನ್ನುಪಕೃತಿಯು ಜಗಕೆಂಬ
ವಿಪರೀತ ಮತಿಯನುಳಿದು ವಿಪುಲಾಶ್ರಯವೀವ
ಸುಫಲ ಸುಮಭರಿತ ಪಾ-
ದಪದಂತೆ ನೈಜಮಾದೊಳ್ವಿನಿಂ ಬಾಳ್ವವೊಲು
- ಡಿ ವಿ ಜಿ
ಮನವನನುಗೊಳಿಸು ಗುರುವೆ, ಹೇ ದೇವಾ
ಜನಕೆ ಸಂತಸವೀವಘನನು ನಾನೆಂದೆಂಬ
ಎಣಿಕೆ ತೋರದೆ ಜಗದ ಪೊಗಳಿಕೆಗೆ ಬಾಯ್ ಬಿಡದೆ
ಕಾನನದಿ ಮಲ್ಲಿಗೆಯುಮೌನದಿಂ ಬಿರಿದು ನಿಜ
ಸೌರಭವ ಸೂಸಿ ನಲವಿಂತಾನೆಲೆಯ ಪಿಂತಿರ್ದು
ದೀನತೆಯ ತೋರಿ ಅಭಿ
ಮಾನವನು ತೊರೆದು ಕೃತಕೃತ್ಯತೆಯ ಪಡೆವಂತೆ
ಉಪಕಾರಿ ನಾನು ಎನ್ನುಪಕೃತಿಯು ಜಗಕೆಂಬ
ವಿಪರೀತ ಮತಿಯನುಳಿದು ವಿಪುಲಾಶ್ರಯವೀವ
ಸುಫಲ ಸುಮಭರಿತ ಪಾ-
ದಪದಂತೆ ನೈಜಮಾದೊಳ್ವಿನಿಂ ಬಾಳ್ವವೊಲು
- ಡಿ ವಿ ಜಿ
ಓದಿ ಬ್ರಾಹ್ಮಣನಾಗು - ಸಿದ್ಧಯ್ಯ ಪುರಾಣಿಕ
ಓದಿ ಬ್ರಾಹ್ಮಣನಾಗು
ಕಾದಿ ಕ್ಷತ್ರಿಯನಾಗು
ಶೂದ್ರ ವೈಶ್ಯನೆ ಆಗು
ದುಡಿದು ಗಳಿಸಿ
ಏನಾದರೂ ಆಗು
ನಿನ್ನೊಲವಿನಂತಾಗು
ಏನಾದರೂ ಸರಿಯೆ –
ಮೊದಲು ಮಾನವನಾಗು
ಹಿಂದು ಮುಸ್ಲಿಮನಾಗು
ಬೌದ್ಧ ಕ್ರೈಸ್ತನೆ ಆಗು
ಚಾರ್ವಾಕನೇ ಆಗು
ಭೋಗ ಬಯಸಿ
ಏನಾದರೂ ಆಗು
ಹಾರೈಸಿದಂತಾಗು
ಏನಾದರೂ ಸರಿಯೆ –
ಮೊದಲು ಮಾನವನಾಗು
ರಾಜಕಾರಣಿಯಾಗು
ರಾಷ್ಟ್ರಭಕ್ತನೆ ಆಗು
ಕಲೆಗಾರ ವಿಜ್ಞಾನಿ
ವ್ಯಾಪಾರಿಯಾಗು
ಏನಾದರೂ ಆಗು
ನೀ ಬಯಸಿದಂತಾಗು
ಏನಾದರೂ ಸರಿಯೇ –
ಮೊದಲು ಮಾನವನಾಗು
ಸಿದ್ಧಯ್ಯ ಪುರಾಣಿಕ ( 1918-1994)
ಕಾದಿ ಕ್ಷತ್ರಿಯನಾಗು
ಶೂದ್ರ ವೈಶ್ಯನೆ ಆಗು
ದುಡಿದು ಗಳಿಸಿ
ಏನಾದರೂ ಆಗು
ನಿನ್ನೊಲವಿನಂತಾಗು
ಏನಾದರೂ ಸರಿಯೆ –
ಮೊದಲು ಮಾನವನಾಗು
ಹಿಂದು ಮುಸ್ಲಿಮನಾಗು
ಬೌದ್ಧ ಕ್ರೈಸ್ತನೆ ಆಗು
ಚಾರ್ವಾಕನೇ ಆಗು
ಭೋಗ ಬಯಸಿ
ಏನಾದರೂ ಆಗು
ಹಾರೈಸಿದಂತಾಗು
ಏನಾದರೂ ಸರಿಯೆ –
ಮೊದಲು ಮಾನವನಾಗು
ರಾಜಕಾರಣಿಯಾಗು
ರಾಷ್ಟ್ರಭಕ್ತನೆ ಆಗು
ಕಲೆಗಾರ ವಿಜ್ಞಾನಿ
ವ್ಯಾಪಾರಿಯಾಗು
ಏನಾದರೂ ಆಗು
ನೀ ಬಯಸಿದಂತಾಗು
ಏನಾದರೂ ಸರಿಯೇ –
ಮೊದಲು ಮಾನವನಾಗು
ಸಿದ್ಧಯ್ಯ ಪುರಾಣಿಕ ( 1918-1994)
Subscribe to:
Posts (Atom)
ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.
"ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......

-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರ, ಕೋರಿಕೆಗೆ ಕೋರಿಕೆ! ಅಂದರೆ, ಈಶ್ವರ ಸಣಕಲ್ಲ ಅವರ ಪ್ರಖ್ಯಾತ ಕವಿತೆ "ಕೋರಿಕೆ" ಪ್ರಕ...
-
ಮೂಡುವನು ರವಿ ಮೂಡುವನು ಕತ್ತಲೊಡನೆ ಜಗಳಾಡುವನು ಪಂಜೆ ಮಂಗೇಶ ರಾಯರು ಮೂಡಣ ರಂಗಸ್ಥಳದಲಿ ನೆತ್ತರ ಮಾಡುವನು ಕುಣಿದಾಡುವನು ಬೆಳಕಿನ ಕಣ್ಣುಗಳಿ೦ದಾ ಸೂರ್ಯನು ನೋಡ...