Wednesday, March 30, 2011

ಹರಿ ಚಿತ್ತ ಸತ್ಯ ನಮ್ಮ ಹರಿ ಚಿತ್ತ ಸತ್ಯ

ಹರಿ ಚಿತ್ತ ಸತ್ಯ ನಮ್ಮ ಹರಿ ಚಿತ್ತ ಸತ್ಯ
ನರ ಚಿತ್ತಕೆ ಬಂದದ್ದು ಲವಲೇಶ ನಡೆಯದು

ಸುದತಿ ಮಕ್ಕಳ ಭಾಗ್ಯ ಬಯಸೋದು ನರ ಚಿತ್ತ
ಮದುವ್ಯಾಗದಿರುವುದು ಹರಿ ಚಿತ್ತವಯ್ಯ

ಕುದುರೆ ಅಂದಣ ಆನೆ ಬಯಸೋದು ನರ ಚಿತ್ತ
ಪಾದಚಾರಿ ಆಗೋದು ಹರಿ ಚಿತ್ತವಯ್ಯ

ಸದಾ ಅನ್ನದಾನವ ಬಯಸೋದು ನರ ಚಿತ್ತ
ಉದರಕೆ ಅಳುವುದು ಹರಿ ಚಿತ್ತವಯ್ಯ

ಪುರಂದರ ವಿಠ್ಠಲನ ಬಯಸೋದು ನರ ಚಿತ್ತ
ದುರಿತವ ಕಳೆವುದು ಹರಿ ಚಿತ್ತವಯ್ಯ

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...