Saturday, March 19, 2011

ಆದದ್ದೆಲ್ಲ ಒಳಿತೆ ಆಯಿತು

ಆದದ್ದೆಲ್ಲ ಒಳಿತೆ ಆಯಿತು ನಮ್ಮ
ಶ್ರೀಧರ ಸೇವೆ ಮಾಡಲು ಸಾಧನ ಸಂಪತ್ತಾಯಿತು

ದಂಡಿಗೆ ಬೆತ್ತ ಹಿಡಿಯೊದಕ್ಕೆ
ಮಂಡೆ ಮಾಚಿ ನಾಚುತಲಿದ್ದೆ
ಹೆಂಡತಿ ಸಂತತಿ ಸಾವಿರವಾಗಲಿ
ದಂಡಿಗೆ ಬೆತ್ತ ಹಿಡಿಸಿದಳಯ್ಯ

ಗೋಪಾಳ ಬುಟ್ಟಿ ಹಿಡಿಯೊದಕ್ಕೆ
ಭೂಪತಿಯಂತೆ ಗರ್ವಿಸುತಿದ್ದೆ
ಆ ಪತ್ನೀ ಕುಲ ಸಾವಿರವಾಗಲಿ
ಗೋಪಾಳ ಬುಟ್ಟಿ ಹಿಡಿಸಿದಳಯ್ಯ

ತುಳಸಿ ಮಾಲೆ ಹಾಕುವುದಕ್ಕೆ
ಅರಸನಂತೆ ನಾಚುತಲಿದ್ದೆ
ಸರಸಿಜಾಕ್ಷ ಪುರಂದರ ವಿಠ್ಠಲ
ತುಳಸಿ ಮಾಲೆ ಹಾಕಿಸಿದನಯ್ಯ

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...