Saturday, March 19, 2011

ಆದದ್ದೆಲ್ಲ ಒಳಿತೆ ಆಯಿತು

ಆದದ್ದೆಲ್ಲ ಒಳಿತೆ ಆಯಿತು ನಮ್ಮ
ಶ್ರೀಧರ ಸೇವೆ ಮಾಡಲು ಸಾಧನ ಸಂಪತ್ತಾಯಿತು

ದಂಡಿಗೆ ಬೆತ್ತ ಹಿಡಿಯೊದಕ್ಕೆ
ಮಂಡೆ ಮಾಚಿ ನಾಚುತಲಿದ್ದೆ
ಹೆಂಡತಿ ಸಂತತಿ ಸಾವಿರವಾಗಲಿ
ದಂಡಿಗೆ ಬೆತ್ತ ಹಿಡಿಸಿದಳಯ್ಯ

ಗೋಪಾಳ ಬುಟ್ಟಿ ಹಿಡಿಯೊದಕ್ಕೆ
ಭೂಪತಿಯಂತೆ ಗರ್ವಿಸುತಿದ್ದೆ
ಆ ಪತ್ನೀ ಕುಲ ಸಾವಿರವಾಗಲಿ
ಗೋಪಾಳ ಬುಟ್ಟಿ ಹಿಡಿಸಿದಳಯ್ಯ

ತುಳಸಿ ಮಾಲೆ ಹಾಕುವುದಕ್ಕೆ
ಅರಸನಂತೆ ನಾಚುತಲಿದ್ದೆ
ಸರಸಿಜಾಕ್ಷ ಪುರಂದರ ವಿಠ್ಠಲ
ತುಳಸಿ ಮಾಲೆ ಹಾಕಿಸಿದನಯ್ಯ

No comments:

Post a Comment

ಶ್ರೀ ರಾಮ ನವಮಿಯ ಶುಭಾಶಯಗಳು

 ಪ್ರಜಾಪ್ರಭುತ್ವದಲ್ಲಿ ಪ್ರಜೆಗಳಿಗೆ ಪ್ರಭುವಾಗದೆ ಪ್ರತಿನಿಧಿಯಾಗಿ ಸಾಮಾನ್ಯರಿಗೂ ಬೆಲೆ ಕೊಟ್ಟು , ಸ್ವಂತದ್ದಾಗಲಿ, ಸಂಸಾರದ್ದಾಗಲಿ, ಸಮಾಜದ್ದಾಗಲಿ, ಹೆಣ್ಣಾಗಲಿ, ಗಂಡಾಗ...