Tuesday, March 22, 2011

ಗುರುವಿನ ಗುಲಾಮನಾಗುವ ತನಕ

ಗುರುವಿನ ಗುಲಾಮನಾಗುವ ತನಕ
ದೊರೆಯದಣ್ಣ ಮುಕುತಿ
ಪರಿ ಪರಿ ಶಾಸ್ತ್ರವನೋದಿದರೇನು
ವ್ಯರ್ಥವಾಯ್ತು ಭಕುತಿ

ಆರು ಶಾಸ್ತ್ರವ ಓದಿದರಿಲ್ಲ
ಮೂರು ಪುರಾಣವ ಮುಗಿಸಿದರಿಲ್ಲ
ಸಾರ ನ್ಯಾಯ ಕಥೆಗಳ ಕೇಳಿದರಿಲ್ಲ
ಧೀರನಾಗಿ ತಾ ಪೇಳಿದರಿಲ್ಲ

ಕೊರಳೊಳು ಮಾಲೆ ಧರಿಸಿದರಿಲ್ಲ,
ಬೆರಳೊಳು ಜಪಮಣಿ ಜಪಿಸಿದರಿಲ್ಲ
ಮರುಳನಾಗಿ ಶರೀರಕೆ ಬೂದಿ
ಒರೆಸಿಕೊಂಡು ತಾ ತಿರುಗಿದರಿಲ್ಲ

ನಾರಿಯ ಭೋಗ ಅಳಿಸಿದರಿಲ್ಲ
ಶಾರೀರಿಕ ಸುಖವ ಬಿಡಿಸಿದರಿಲ್ಲ
ನಾರದವರದ ಪುರಂದರ ವಿಠ್ಠಲನ
ಸೇರಿಕೊಂಡು ತಾ ಪಡೆಯುವ ತನಕ

5 comments:

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...