Tuesday, March 22, 2011

ಗುರುವಿನ ಗುಲಾಮನಾಗುವ ತನಕ

ಗುರುವಿನ ಗುಲಾಮನಾಗುವ ತನಕ
ದೊರೆಯದಣ್ಣ ಮುಕುತಿ
ಪರಿ ಪರಿ ಶಾಸ್ತ್ರವನೋದಿದರೇನು
ವ್ಯರ್ಥವಾಯ್ತು ಭಕುತಿ

ಆರು ಶಾಸ್ತ್ರವ ಓದಿದರಿಲ್ಲ
ಮೂರು ಪುರಾಣವ ಮುಗಿಸಿದರಿಲ್ಲ
ಸಾರ ನ್ಯಾಯ ಕಥೆಗಳ ಕೇಳಿದರಿಲ್ಲ
ಧೀರನಾಗಿ ತಾ ಪೇಳಿದರಿಲ್ಲ

ಕೊರಳೊಳು ಮಾಲೆ ಧರಿಸಿದರಿಲ್ಲ,
ಬೆರಳೊಳು ಜಪಮಣಿ ಜಪಿಸಿದರಿಲ್ಲ
ಮರುಳನಾಗಿ ಶರೀರಕೆ ಬೂದಿ
ಒರೆಸಿಕೊಂಡು ತಾ ತಿರುಗಿದರಿಲ್ಲ

ನಾರಿಯ ಭೋಗ ಅಳಿಸಿದರಿಲ್ಲ
ಶಾರೀರಿಕ ಸುಖವ ಬಿಡಿಸಿದರಿಲ್ಲ
ನಾರದವರದ ಪುರಂದರ ವಿಠ್ಠಲನ
ಸೇರಿಕೊಂಡು ತಾ ಪಡೆಯುವ ತನಕ

5 comments:

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...