Sunday, March 27, 2011

ರಾಮ ನಾಮ ಪಾಯಸಕ್ಕೆ

ರಾಮ ನಾಮ ಪಾಯಸಕ್ಕೆ
ಕೃಷ್ಣ ನಾಮ ಸಕ್ಕರೆ
ವಿಠ್ಠಲ ನಾಮ ತುಪ್ಪವ ಸೇರಿಸಿ
ಬಾಯ ಚಪ್ಪರಿಸಿರೋ

ಒಮ್ಮಾನ ಗೋಧಿಯ ತಂದು
ವೈರಾಗ್ಯ ಕಲ್ಲಲಿ ಬೀಸಿ
ಸುಮ್ಮಾನೆ ಸಜ್ಜಿಗೆ ತೆಗೆದು
ಗಮ್ಮಾನೆ ಶಾವಿಗೆ ಹೊಸೆದು

ಹೃದಯವೆಂಬೊ ಮಡಕೆಯಲಿ
ಭಾವವೆಂಬೊ ಎಸರಲಿ
ಬುದ್ಧಿಯಿಂದ ಪಾಕ ಮಾಡಿ
ಹರಿವಾಣಕೆ ಬಡಿಸಿಕೊಂಡು

ಆನಂದ ಆನಂದವೆಂಬೊ ತೇಗು
ಬಂದಿತು ಕಾಣಿರೊ
ಆನಂದ ಮೂರುತಿ ನಮ್ಮ
ಪುರಂದರ ವಿಠ್ಠಲನ ನೆನೆಯಿರೊ

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...