Sunday, March 27, 2011

ರಾಮ ನಾಮ ಪಾಯಸಕ್ಕೆ

ರಾಮ ನಾಮ ಪಾಯಸಕ್ಕೆ
ಕೃಷ್ಣ ನಾಮ ಸಕ್ಕರೆ
ವಿಠ್ಠಲ ನಾಮ ತುಪ್ಪವ ಸೇರಿಸಿ
ಬಾಯ ಚಪ್ಪರಿಸಿರೋ

ಒಮ್ಮಾನ ಗೋಧಿಯ ತಂದು
ವೈರಾಗ್ಯ ಕಲ್ಲಲಿ ಬೀಸಿ
ಸುಮ್ಮಾನೆ ಸಜ್ಜಿಗೆ ತೆಗೆದು
ಗಮ್ಮಾನೆ ಶಾವಿಗೆ ಹೊಸೆದು

ಹೃದಯವೆಂಬೊ ಮಡಕೆಯಲಿ
ಭಾವವೆಂಬೊ ಎಸರಲಿ
ಬುದ್ಧಿಯಿಂದ ಪಾಕ ಮಾಡಿ
ಹರಿವಾಣಕೆ ಬಡಿಸಿಕೊಂಡು

ಆನಂದ ಆನಂದವೆಂಬೊ ತೇಗು
ಬಂದಿತು ಕಾಣಿರೊ
ಆನಂದ ಮೂರುತಿ ನಮ್ಮ
ಪುರಂದರ ವಿಠ್ಠಲನ ನೆನೆಯಿರೊ

No comments:

Post a Comment

ಶ್ರೀ ರಾಮ ನವಮಿಯ ಶುಭಾಶಯಗಳು

 ಪ್ರಜಾಪ್ರಭುತ್ವದಲ್ಲಿ ಪ್ರಜೆಗಳಿಗೆ ಪ್ರಭುವಾಗದೆ ಪ್ರತಿನಿಧಿಯಾಗಿ ಸಾಮಾನ್ಯರಿಗೂ ಬೆಲೆ ಕೊಟ್ಟು , ಸ್ವಂತದ್ದಾಗಲಿ, ಸಂಸಾರದ್ದಾಗಲಿ, ಸಮಾಜದ್ದಾಗಲಿ, ಹೆಣ್ಣಾಗಲಿ, ಗಂಡಾಗ...