Sunday, March 27, 2011

ರಾಮ ನಾಮ ಪಾಯಸಕ್ಕೆ

ರಾಮ ನಾಮ ಪಾಯಸಕ್ಕೆ
ಕೃಷ್ಣ ನಾಮ ಸಕ್ಕರೆ
ವಿಠ್ಠಲ ನಾಮ ತುಪ್ಪವ ಸೇರಿಸಿ
ಬಾಯ ಚಪ್ಪರಿಸಿರೋ

ಒಮ್ಮಾನ ಗೋಧಿಯ ತಂದು
ವೈರಾಗ್ಯ ಕಲ್ಲಲಿ ಬೀಸಿ
ಸುಮ್ಮಾನೆ ಸಜ್ಜಿಗೆ ತೆಗೆದು
ಗಮ್ಮಾನೆ ಶಾವಿಗೆ ಹೊಸೆದು

ಹೃದಯವೆಂಬೊ ಮಡಕೆಯಲಿ
ಭಾವವೆಂಬೊ ಎಸರಲಿ
ಬುದ್ಧಿಯಿಂದ ಪಾಕ ಮಾಡಿ
ಹರಿವಾಣಕೆ ಬಡಿಸಿಕೊಂಡು

ಆನಂದ ಆನಂದವೆಂಬೊ ತೇಗು
ಬಂದಿತು ಕಾಣಿರೊ
ಆನಂದ ಮೂರುತಿ ನಮ್ಮ
ಪುರಂದರ ವಿಠ್ಠಲನ ನೆನೆಯಿರೊ

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...