Thursday, March 31, 2011

ಶರಣು ಸಿದ್ಧಿವಿನಾಯಕ ಶರಣು ವಿದ್ಯಾಪ್ರದಾಯಕ

ಶರಣು ಸಿದ್ಧಿವಿನಾಯಕ ಶರಣು ವಿದ್ಯಾಪ್ರದಾಯಕ
ಶರಣು ಪಾರ್ವತಿ ತನಯ ಮೂರುತಿ ಶರಣು ಮೂಷಿಕ ವಾಹನ || ಪ ||
ಶರಣು ಶರಣು ಶರಣು ಶರಣು ಶರಣು ಸಿದ್ಧಿವಿನಾಯಕ

ನಿಟಿಲ ನೇತ್ರನೆ ದೇವಿ ಸುತನೆ ನಾಗಭೂಷಣ ಪ್ರಿಯನೆ
ತಟಿಲತಾಂಕಿತ ಕೋಮಲಾಂಗನೆ ಕರ್ಣಕುಂಡಲಧಾರನೆ || ಶರಣು ಶರಣು ||

ಬಟ್ಟ ಮುತ್ತಿನ ಪದಕಹಾರನೆ ಬಾಹುಹಸ್ತಚತುಷ್ಟನೆ
ಇಟ್ಟ ತೊಡುಗೆಯ ಹೇಮ ಕಂಕಣ ಪಾಶ ಅಂಕುಶಧಾರನೆ || ಶರಣು ಶರಣು ||

ಕುಕ್ಷಿಮಹಾಲಂಬೋದರನೆ ಇಕ್ಷುಛಾಪನ ಗೆಲಿದನೆ
ಪಕ್ಷಿವಾಹನ ಸಿರಿ ಪುರಂದರ ವಿಠ್ಠಲನ ನಿಜ ದಾಸನೆ || ಶರಣು ಶರಣು ||

1 comment:

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...