ಬಂದದೆಲ್ಲ ಬರಲಿ
ಗೋವಿಂದನ ದಯ ನಮಗಿರಲಿ
ಅರಗಿನ ಮನೆಯೊಳಗಂದು
ಪಾಂಡವರನು ಕೊಲಬೇಕೆಂದು
ದುರುಳ ಕೌರವ ಬಂದು ಅತಿ
ಹರುಷದಲಿರುತರಿಲಂದು
ಹರಿ ಕೃಪೆ ಅವರಲ್ಲಿದ್ದ ಕಾರಣ
ಘೋರ ದುರಿತ ಬಯಲಾದುದಲ್ಲವೆ
ಆರು ಒಲಿಯದರಿಲೆನ್ನ
ಮುರಾರಿ ಎನಗೆ ಪ್ರಸನ್ನ
ಹೋರುವ ದುರಿತ ಬನ್ನ
ಅದ ನಿವಾರಿಪ ಕರುಣ ಸಂಪನ್ನ
ಸಿರಿ ರಮಣನ ಸಿರಿಚರಣ ಶರಣರಿಗೆ
ಕ್ರೂರ ಯಮನು ಶರಣಾಗತನಲ್ಲವೆ
ಸಿಂಗನ ಪೆಗಲೇರಿದವಗೆ
ಕರಿ ಭಂಗವೇಕೆ ಮತ್ತವಗೆ
ರಂಗನ ದಯೆವುಳ್ಳವಗೆ
ಭವ ಭಂಗಗಳೇತಕ್ಕವಗೆ
ಮಂಗಳಮಹಿಮ ಪುರಂದರ ವಿಠ್ಠಲ
ಶುಭಾಂಗನ ದಯವೊಂದಿದ್ದರೆ ಸಾಲದೆ
ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Subscribe to:
Post Comments (Atom)
“ಇಗೋ, ಬೆಂಗಳೂರು ಹೀಗಿತ್ತು”ಜಿ. ವೆಂಕಟಸುಬ್ಬಯ್ಯ -
“ ಇಗೋ , ಬೆಂಗಳೂರು ಹೀಗಿತ್ತು ” ಜಿ . ವೆಂಕಟಸುಬ್ಬಯ್ಯ ಅರವತ್ತು ವರ್ಷಗಳ ಹಿಂದೆ ಬೆಂಗಳೂರು ಇಷ್ಟು ದೊಡ್ಡದಾಗಿರಲಿಲ್ಲ . ಆಗ ಎರಡು ಬೆಂಗಳೂರು ಇತ್ತು ...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ಮುಂಗೋಳಿ ಕೂಗ್ಯಾವು ಮೂಡು ಕೆಂಪೇರ್ಯಾವು ಸ್ವಾಮೀ ನನ್ನಯ್ಯ ರಥವೇರಿ ಬರುವಾಗ ನಾವೆದ್ದು ಕೈಯ್ಯ ಮುಗುದೇವು ಮಕ್ಕಳಾಟವು ಚಂದ ಮತ್ತೆ ಯೌವನ ಚಂದ ಮುಪ್ಪಿನಲಿ ಚಂದ ನರೆಗಡ...
-
Krupe : http://azsmarane.blogspot.in/2012/01/blog-post_21.html ಕನ್ನಡ ಪುಸ್ತಕ ಪ್ರೀತಿಯುಳ್ಳ ಮಿತ್ರರೆಲ್ಲರಿಗೂ... ಇಲ್ಲಿದೆ ಕನ್ನಡ ಕಾದಂಬರಿ ಹಾ...
No comments:
Post a Comment