Saturday, March 19, 2011

ಅನುಗಾಲವು ಚಿಂತೆ

ಅನುಗಾಲವು ಚಿಂತೆ ಜೀವಕೆ ಮನವು
ಶ್ರೀರಂಗನೋಳ್ ಮೆಚ್ಚುವ ತನಕ

ಸತಿಯಿದ್ದರು ಚಿಂತೆ, ಸತಿಯಿಲ್ಲದ ಚಿಂತೆ
ಮತಿಹೀನ ಸತಿಯು ಆದರು ಚಿಂತೆ
ಪೃಥ್ವಿಯೊಳಗೆ ಸತಿ ಕಡು ಚೆಲ್ವೆಯಾದರೆ
ಮಿತಿ ಮೊದಲಿಲ್ಲದ ಮೋಹದ ಚಿಂತೆ

ಬಡವನಾದರು ಚಿಂತೆ, ಬಲ್ಲಿದನಾಗೆ ಚಿಂತೆ
ಹಿಡಿ ಹೊನ್ನು ಕೈಯೊಳು ಇದ್ದರು ಚಿಂತೆ
ಪೊಡವಿಯೊಳಗೆ ನಮ್ಮ ಪುರಂದರ ವಿಠ್ಠಲನ
ಬಿಡದೆ ಧ್ಯಾನಿಸು, ಚಿಂತೆ ನಿಶ್ಚಿಂತೆ

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...