Thursday, March 24, 2011

ನಾ ನಿನ್ನ ಧ್ಯಾನದೊಳಿರಲು ಮಿಕ್ಕ

ನಾ ನಿನ್ನ ಧ್ಯಾನದೊಳಿರಲು ಮಿಕ್ಕ
ಹೀನ ಮಾನವರೇನು ಮಾಡಬಲ್ಲರೊ ರಂಗ

ಮತ್ಸರಿಸುವರೆಲ್ಲ ಕೂಡಿ ಮಾಡುವರೇನು
ಅಚ್ಯುತ ನಿನ್ನ ದಯೆಯೆನ್ನೊಳಿರಲು
ವಾತ್ಸಲ್ಯ ಬಿಡದಿರು ನಿನ್ನ ನಂಬಿದೆ ದೇವ
ಕಿಚ್ಚಿಗೆ ಇರುವೆ ಮುತ್ತುವುದೆ ಕೇಳೆಲೊ ರಂಗ

ಧಾಳಲಿ ಕುದುರೆ ವೈಯಾರದಿ ಕುಣಿಯಲು
ಧೂಳು ರವಿಯ ತಾ ಮುತ್ತುವುದೆ
ತಾಳಿದವರ ವಿರುದ್ಧ ಲೋಕದೊಳಗುಂಟೆ
ಗಾಳಿಗೆ ಗಿರಿಯು ಅಲ್ಲಾಡಬಲ್ಲದೆ

ಕನ್ನಡಿಯೊಳಗಣ ಗಂಟು ಕಂಡು ಕಳ್ಳ
ಕನ್ನವಿಕ್ಕಲವನ ವಶವಹುದೆ
ನಿನ್ನ ನಂಬಲು ಮುದ್ದು ಪುರಂದರ ವಿಠ್ಠಲ
ಚಿನ್ನಕ್ಕೆ ಪುಟವನಿಟ್ಟಂತೆ ಅಹುದೋ ರಂಗ

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...