Monday, March 21, 2011

ಕಲ್ಲು ಸಕ್ಕರೆ ಕೊಳ್ಳಿರೊ ನೀವೆಲ್ಲರು

ಕಲ್ಲು ಸಕ್ಕರೆ ಕೊಳ್ಳಿರೊ ನೀವೆಲ್ಲರು
ಕಲ್ಲು ಸಕ್ಕರೆ ಕೊಳ್ಳಿರೊ

ಕಲ್ಲು ಸಕ್ಕರೆ ಸವಿ ಬಲ್ಲವರೆ ಬಲ್ಲರು
ಪುಲ್ಲಲೋಚನ ಶ್ರೀ ಕೃಷ್ಣ ನಾಮವೆಂಬ

ಎತ್ತು ಹೇರುಗಳಿಂದ ಹೊತ್ತು ಮಾರುವುದಲ್ಲ
ಒತ್ತೊತ್ತಿ ಗೋಣಿಯೊಳ್ ತುಂಬುವುದಲ್ಲ
ಎತ್ತ ಹೋದರೂ ಬಾಡಿಗೆ ಸುಂಕವಿದಕಿಲ್ಲ
ಉತ್ತಮ ಸರಕಿದು ಅತಿ ಲಾಭ ತರುವಂಥ

ಸಂತೆ ಕಂತೆಗೆ ಹೋಗಿ ಶ್ರಮ ಪಡಿಸುವುದಲ್ಲ
ಸಂತೆಯೊಳಗೆ ಇದು ಮಾರುವುದಲ್ಲ
ಸಂತತ ಭಕ್ತರ ನಾಲಿಗೆ ಸವಿಗೊಂಬ
ಕಾಂತ ಪುರಂದರ ವಿಠ್ಠಲ ನಾಮವೆಂಬ

No comments:

Post a Comment

ಶ್ರೀ ರಾಮ ನವಮಿಯ ಶುಭಾಶಯಗಳು

 ಪ್ರಜಾಪ್ರಭುತ್ವದಲ್ಲಿ ಪ್ರಜೆಗಳಿಗೆ ಪ್ರಭುವಾಗದೆ ಪ್ರತಿನಿಧಿಯಾಗಿ ಸಾಮಾನ್ಯರಿಗೂ ಬೆಲೆ ಕೊಟ್ಟು , ಸ್ವಂತದ್ದಾಗಲಿ, ಸಂಸಾರದ್ದಾಗಲಿ, ಸಮಾಜದ್ದಾಗಲಿ, ಹೆಣ್ಣಾಗಲಿ, ಗಂಡಾಗ...