Monday, March 21, 2011

ಕಲ್ಲು ಸಕ್ಕರೆ ಕೊಳ್ಳಿರೊ ನೀವೆಲ್ಲರು

ಕಲ್ಲು ಸಕ್ಕರೆ ಕೊಳ್ಳಿರೊ ನೀವೆಲ್ಲರು
ಕಲ್ಲು ಸಕ್ಕರೆ ಕೊಳ್ಳಿರೊ

ಕಲ್ಲು ಸಕ್ಕರೆ ಸವಿ ಬಲ್ಲವರೆ ಬಲ್ಲರು
ಪುಲ್ಲಲೋಚನ ಶ್ರೀ ಕೃಷ್ಣ ನಾಮವೆಂಬ

ಎತ್ತು ಹೇರುಗಳಿಂದ ಹೊತ್ತು ಮಾರುವುದಲ್ಲ
ಒತ್ತೊತ್ತಿ ಗೋಣಿಯೊಳ್ ತುಂಬುವುದಲ್ಲ
ಎತ್ತ ಹೋದರೂ ಬಾಡಿಗೆ ಸುಂಕವಿದಕಿಲ್ಲ
ಉತ್ತಮ ಸರಕಿದು ಅತಿ ಲಾಭ ತರುವಂಥ

ಸಂತೆ ಕಂತೆಗೆ ಹೋಗಿ ಶ್ರಮ ಪಡಿಸುವುದಲ್ಲ
ಸಂತೆಯೊಳಗೆ ಇದು ಮಾರುವುದಲ್ಲ
ಸಂತತ ಭಕ್ತರ ನಾಲಿಗೆ ಸವಿಗೊಂಬ
ಕಾಂತ ಪುರಂದರ ವಿಠ್ಠಲ ನಾಮವೆಂಬ

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...