Monday, March 21, 2011

ಕಲ್ಲು ಸಕ್ಕರೆ ಕೊಳ್ಳಿರೊ ನೀವೆಲ್ಲರು

ಕಲ್ಲು ಸಕ್ಕರೆ ಕೊಳ್ಳಿರೊ ನೀವೆಲ್ಲರು
ಕಲ್ಲು ಸಕ್ಕರೆ ಕೊಳ್ಳಿರೊ

ಕಲ್ಲು ಸಕ್ಕರೆ ಸವಿ ಬಲ್ಲವರೆ ಬಲ್ಲರು
ಪುಲ್ಲಲೋಚನ ಶ್ರೀ ಕೃಷ್ಣ ನಾಮವೆಂಬ

ಎತ್ತು ಹೇರುಗಳಿಂದ ಹೊತ್ತು ಮಾರುವುದಲ್ಲ
ಒತ್ತೊತ್ತಿ ಗೋಣಿಯೊಳ್ ತುಂಬುವುದಲ್ಲ
ಎತ್ತ ಹೋದರೂ ಬಾಡಿಗೆ ಸುಂಕವಿದಕಿಲ್ಲ
ಉತ್ತಮ ಸರಕಿದು ಅತಿ ಲಾಭ ತರುವಂಥ

ಸಂತೆ ಕಂತೆಗೆ ಹೋಗಿ ಶ್ರಮ ಪಡಿಸುವುದಲ್ಲ
ಸಂತೆಯೊಳಗೆ ಇದು ಮಾರುವುದಲ್ಲ
ಸಂತತ ಭಕ್ತರ ನಾಲಿಗೆ ಸವಿಗೊಂಬ
ಕಾಂತ ಪುರಂದರ ವಿಠ್ಠಲ ನಾಮವೆಂಬ

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...