Thursday, April 28, 2011

ಅಂತರಂಗದ ಮೃದಂಗ

ಅಂತರಂಗದ ಮೃದಂಗ ಅಂತು ತೋಮ್-ತನಾನ
ಚಿತ್ತ ತಾಳ ಬಾರಿಸುತಲಿತ್ತು ಝಣ್-ಝಣಣಣಾಣ
ನೆನಹು ತಂತಿ ಮೀಟುತಿತ್ತು ತಮ್-ತನನತಾನ
ಹಲವು ಜನುಮದಿಂದ ಬಂದ ಯಾವುದೋನೋ ಧ್ಯಾನ
ಏಕ ನಾದದಂದನೊಂದು ತಾನದ ವಿತಾನ
ತನಗೆ ತಾನೇ ಸೋಲುತಿಹುದು ನೂಲುತಿಹುದು ಗಾನ
ಕಲ್ಪದಾದಿಯಲ್ಲೇ ನನ್ನ ನಿನ್ನ ವಿರಹವಾಗಿ
ಎಲ್ಲೋ ಏನೋ ನಿನ್ನ ಹುಡುಕಿ ಕಾಂಬ ಕಣ್ಣೇ ಹೋಗಿ
ಮರೆವೆಗೊಂಡು ಬಿದ್ದೆ ನಾನು ನೆಲದ ಮಣ್ಣು ತಾಗಿ
ಕತ್ತಲಲ್ಲೇ ಬೆಳಕು ಮಿಂಚಿ ಪಡೆದಿತೇಳು ಬಣ್ಣ
ಮೂಕ ಮೌನ ತೂಕ ಮೀರಿ ದನಿಯು ಹುಟ್ಟಿತಣ್ಣ
ಕಣ್ಣ ಮಣ್ಣ ಕೂಡಲಲ್ಲಿ ಹಾಡು ಕಟ್ಟಿತಣ್ಣ

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...