Monday, May 16, 2011

ಅತ್ತ ಇತ್ತ ಹರಿದಾಡುವ ಮನಸಿಗೆ.


ಅತ್ತ ಇತ್ತ ಹರಿದಾಡುವ ಮನಸಿಗೆ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ.
ಕಡುವಿಷಯದಿ ಸಂಸಾರಕೆ ಮರುಗುತ
ಪೊಡವಿ ತಳದಿ ಮಿಡಿಕ್ಯಾಡುವ ಮನಸಿಗೆ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ.


ಸಿರಿ ಸಂಪದ ಸೌಭಾಗ್ಯ ತನಗೆ ಬಲು
ಹಿರಿದಾಗಲಿಬೇಕೆಂಬುವ ಮನಸಿಗೆ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ.



ವಸುಧೆಯೊಳಗೆ ಶಿಶುನಾಳಾಧೀಶನ
ಹೆಸರು ಮರೆತು ಕೊಸರ್‍ಯಾಡುವ ಮನಸಿಗೆ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ.




.

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...