Sunday, May 22, 2011

ಸದ್ಗುರು ನಿನ್ನ ಮಾಯಕ್ಕೆ ಮರುಳಾದೆನೋ

ಸದ್ಗುರು ನಿನ್ನ ಮಾಯಕ್ಕೆ ಮರುಳಾದೆನೋ ||ಪಲ್ಲ||

ಕರ ಪಿಡಿದು ಎನ್ನ ಕರಣದೊಳಗೆ ಮೊದಲು
ವರಮಂತ್ರ ಬೋಧಿಸಿ ಕರವಿಟ್ಟು ಶಿರದೊಳು ||೧||

ಮಸ್ತಕ ಪಿಡಿದೆತ್ತಿ ಹಸ್ತದಿ ತರ್ಕೈಸಿ
ದುಸ್ತರ ಭವಬಾಧೆ ಕಸ್ತು ಬಿಸಾಕಿದಿ ||೨||

ಗುರುವರ ಗೋವಿಂದ ಪರಮಗಾರುಡಿಗ ನೀ—
ನಿರುತಿಹೆ ತಿಳಿಯದು ನರರಿಗೆ ಪರಿಯಿದು ||೩||

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...