Monday, May 23, 2011

ಎಂಥಿಂಥಾದೆಲ್ಲಾನು ಬರಲಿ

ಎಂಥಿಂಥಾದೆಲ್ಲಾನು ಬರಲಿ
ಚಿಂತೆಯಂಬೋದು ನಿಜವಾಗಿರಲಿ ||ಪಲ್ಲ||
ಪರಾತ್ಪರನಾದ ಗುರುವಿನ
ಅಂತಃಕರಣ ಒಂದು ಬಿಡದಿರಲಿ ||ಅನುಪಲ್ಲ||

ಬಡತನೆಂಬುದು ಕಡೆತನಕಿರಲಿ
ವಡವಿ ವಸ್ತ ಹಾಳಾಗಿ ಹೋಗಲಿ
ನಡುವಂಥ ದಾರಿಯು ತಪ್ಪಿ
ಅಡವಿ ಸೇರಿದಂತಾಗಿ ಹೋಗಲಿ ||೧||

ಗಂಡಸ್ತಾನ ಇಲ್ಲದಂತಾಗಲಿ
ಹೆಂಡರು ಮಕ್ಕಳು ಬಿಟಗೊಟ್ಟು ಹೋಗಲಿ
ಕುಂಡಿ ಕುಂಡಿ ಸಾಲ್ದವರೊದೆಯಲಿ
ಬಂಡು ಮಾಡಿ ಜನರು ನಗಲಿ ||೨||

ನಂಬಿಗೆ ಎಳ್ಳಷ್ಟಿಲ್ಲದಂತಾಗಲಿ
ಅಂಬಲಿ ಎನಗೆ ಸಿಗದೆ ಹೋಗಲಿ
ಹುಂಬಸುಳೇಮಗನೆಂದು ಬೈಯಲಿ
ಕಂಬಾ ಮುರಕೊಂಡು ಎನ್ನ ಮ್ಯಾಲೆ ಬೀಳಲಿ ||೩||

ವ್ಯಾಪಾರುದ್ಯೋಗ ಇಲ್ಲದಾಂಗಾಗಲಿ
ಬುದ್ಧಿಯೆಂಬುದು ಮಸಣಿಸಿ ಹೋಗಲಿ
ಮದ್ದು ಹಾಕಿ ಎನ್ನನು ಕೊಲ್ಲಲಿ
ಹದ್ದು ಕಾಗಿ ಹರಕೊಂಡು ತಿನ್ನಲಿ ||೪||

ಭಾಷೆ ಪಂಥ ನಡಿದ್ಹಾಂಗಾಗಲಿ
ಹಾಸ್ಯ ಮಾಡಿ ಜನರೆಲ್ಲರು ನಗಲಿ
ಈ ಶಿಶುನಾಳಧೀಶ ಸದ್ಗುರುವಿನ
ಲೇಸಾದ ದಯವೊಂದು ಕಡೆತನಕಿರಲಿ ||೫||


No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...