Sunday, May 29, 2011

ಮನಸೇ ಮನಸಿನ ಮನಸ ನಿಲ್ಲಿಸುವುದು

ಮನಸೇ ಮನಸಿನ ಮನಸ ನಿಲ್ಲಿಸುವುದು
ಮನಸಿನ ಮನ ತಿಳೀಯುವ ಮನ ಬ್ಯಾರೆಲೊ ಮನಸೇ.
ತನುತ್ರಯದೊಳು ಸುಳಿದಾಡುವ ಜೀವದ
ಗುಣವರಿತರೆ ನಿಜ ಬ್ಯಾರೆಲೊ ಮನಸೇ.

ದಶದಿಕ್ಕಿಗೆ ಹಾರಾಡುವ ಹಕ್ಕಿಯು
ವಶವಾಗಲಾಪರಿ ಬ್ಯಾರೆಲೊ ಮನಸೇ.
ಗೋವಿಂದ ಗುರುವಿನ ಚರಣ ಕಮಲದವಳು
ಗಾನಗೈಯೆಲೊ ಭ್ರಮರಾಳೀಯ ಮನಸೇ.

ವಿಷಯಗಳಲಿ ಸುಖಬಯಕೆ ಬಯಸಿ ಬಲು
ಕಸಿವಿಸಿಗೊಂಬುವುದೇತಕೊ ಮನಸೇ.
ಇಳೆಯೊಳು ಶಿಶುನಾಳಾಧೀಶ ನಿರ್ಮಲನ
ತಿಳಿದರೆ ಒಳಹೊರಗೊಂದೆಲೊ ಮನಸೇ.

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...