Wednesday, June 8, 2011

ಎದೆ ತುಂಬಿ ಹಾಡಿದೆನು

ಎದೆ ತುಂಬಿ ಹಾಡಿದೆನು ಅಂದು ನಾನು
ಮನವಿಟ್ಟು ಕೇಳಿದಿರಿ ಅಲ್ಲಿ ನೀವು
ಇಂದು ನಾ ಹಾಡಿದರೂ ಅಂದಿನಂತೆಯೆ ಕುಳಿತು
ಕೇಳುವಿರಿ ಸಾಕೆನಗೆ ಅದುವೆ ಬಹುಮಾನ
ಹಾಡು ಹಕ್ಕಿಗೆ ಬೇಕೆ ಬಿರುದು ಸನ್ಮಾನ
ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ
ಹಾಡುವುದು ಅನಿವಾರ್ಯ ಕರ್ಮ ನನಗೆ
ಕೇಳುವವರಿಹರೆಂದು ನಾ ಬಲ್ಲೆ ಅದರಿಂದ
ಹಾಡುವೆನು ಮೈ ದುಂಬಿ ಎಂದಿನಂತೆ
ಯಾರು ಕಿವಿ ಮುಚ್ಚಿದರು ಎನಗಿಲ್ಲ ಚಿಂತೆ
-- ಜಿ.ಎಸ್.ಶಿವರುದ್ರಪ್ಪ

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...