Thursday, June 23, 2011

ಮಬ್ಬು ಕವಿದರೇನು

ಮಬ್ಬು ಕವಿದರೇನು
ನಿನ್ನ ಹಬ್ಬಿದಿರುಳ ದಾರಿಗೆ
ನಡೆ ಮುಂದಕೆ ಧೈರ್ಯದಿಂದ
ಅರುಣೋದಯ ತೀರಕೆ

ಹಳೆ ನೆನಪುಗಳುದುರಲಿ ಬಿಡು
ಬೀಸುವ ಚಳಿ ಗಾಳಿಗೆ
ತರಗೆಲೆಗಳ ಚಿತೆಯುರಿಯಲಿ
ಚೈತ್ರೋದಯ ಜ್ವಾಲೆಗೆ

ಹೊಸ ಭರವಸೆ ಚಿಗುರುತಲಿವೆ
ಎಲೆ ಉದುರಿದ ಕೊಂಬೆಗೆ
ಅರಳಿ ನಗುವ ಹೂಗಳಲ್ಲಿ
ಪುಟಿಯುತಲಿವೆ ನಂಬಿಕೆ

ಹಗಲಿರುಳಿನ ಕುದುರೆಗಳನು
ಹೂಡಿದ ರಥ ಸಾಗಿದೆ
ಯುಗ ಯುಗಗಳ ಹಾದಿಯಲ್ಲಿ
ಋತು ಚಕ್ರಗಳುರುಳಿವೆ

No comments:

Post a Comment

ಒಂದು ಸಂಕೀರ್ಣ ವಿಷಯದ ಬಗ್ಗೆ ಸರಳವಾಗಿ ತಿಳಿದುಕೊಳ್ಳೋಣ ಬನ್ನಿ! -ರೋಹಿತ್ ಚಕ್ರತೀರ್ಥ

ಇಂದು ಪ್ರಧಾನಿ ಮೋದಿಯವರು ಮಾನ್ಯ ಜನರಿಗೆ ಸಾಮಾನ್ಯವಾಗಿ ಅರ್ಥವಾಗದ ಅಥವಾ ತಲೆಯ ಮೇಲಿಂದ ಹಾರಿಹೋಗುವ ಒಂದು ವಿಷಯದ ಬಗ್ಗೆ ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಮೂರು ಸಂಗತಿಗಳು...