Thursday, June 2, 2011

ಇಷ್ಟು ಕಾಲ....

ಇಷ್ಟು ಕಾಲ ಒಟ್ಟಿಗಿದ್ದು..ಎಷ್ಟು ಬೆರೆತರೂ.....
ಅರಿತೆವೇನು ನಾವು ನಮ್ಮ ಅಂತರಾಳವ....?

ಸದಾ ಕಾಲ ತಬ್ಬುವಂತೆ ಮೇಲೆ ಬಾಗಿಯೂ.....
ಮಣ್ಣ ಮುದ್ದು ದೊರಕಿತೇನು.. ನೀಲಿ ಬಾನಿಗೆ...?

ಕಡಲ ಮೇಲೆ ಸಾವಿರಾರು ಮೈಲಿ ಸಾಗಿಯೂ.....
ನೀರಿನಾಳ ತಿಳಿಯಿತೇನು ಹಾಯಿ ದೋಣಿಗೆ....?

ಸಾವಿರಾರು ಮುಖದ ಚೆಲುವ ಹಿಡಿದು ತೋರಿಯೂ....
ಒಂದಾದರು ಉಳಿಯಿತೇ..ಕನ್ನಡಿಯ ಪಾಲಿಗೆ....???

1 comment:

ಒಂದು ಸಂಕೀರ್ಣ ವಿಷಯದ ಬಗ್ಗೆ ಸರಳವಾಗಿ ತಿಳಿದುಕೊಳ್ಳೋಣ ಬನ್ನಿ! -ರೋಹಿತ್ ಚಕ್ರತೀರ್ಥ

ಇಂದು ಪ್ರಧಾನಿ ಮೋದಿಯವರು ಮಾನ್ಯ ಜನರಿಗೆ ಸಾಮಾನ್ಯವಾಗಿ ಅರ್ಥವಾಗದ ಅಥವಾ ತಲೆಯ ಮೇಲಿಂದ ಹಾರಿಹೋಗುವ ಒಂದು ವಿಷಯದ ಬಗ್ಗೆ ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಮೂರು ಸಂಗತಿಗಳು...