ಹೇಳಿ ಹೋಗು ಕಾರಣ ಹೋಗುವ ಮೊದಲು
ನನ್ನ ಬಾಳಿನಿಂದ ದೂರಾಗುವ ಮೊದಲು
ಒಲವೆಂಬ ಹಣತೆ ಎದೆಯಲ್ಲಿ ಬೆಳಗಿ
ಬೆಳಕಾದೆ ಬಾಳಿಗೆ
ಇಂದೇಕೆ ಹೀಗೆ ಬೆಳಕನ್ನು ತೊರೆದು
ನೀ ಸರಿದೆ ನೆರಳಿಗೆ ?
ಇಂದ್ಯಾವ ಬಂಧ ತೊಡರಿದೆ
ನಿನ್ನ ಕಾಲಿಗೆ ?
ಸುಡುಬೆಂಕಿ ಬೆಳಕು ಉಳಿಯಿತೆ
ನನ್ನ ಪಾಲಿಗೆ ?
ಸವಿಭಾವಗಳಿಗೆ ನೀ ನಾದ ನೀಡಿ
ಜೊತೆಗೂಡಿ ಹಾಡಿದೆ
ಇಂದ್ಯಾವ ಅಳಲು ? ಸೆರೆಯುಬ್ಬಿ ಕೊರಳು
ನೀ ಮೌನ ತಾಳಿದೆ
ನೀ ನೆಟ್ಟು ಬೆಳೆಸಿದ ಈ ಮರ
ಫಲ ತೊಟ್ಟ ವೇಳೆಗೆ
ಹೀಗೇಕೆ ಮುರಿದು ಉರುಳಿದೆ
ಯಾವ ದಾಳಿಗೆ ?
-- ಬಿ.ಆರ್. ಲಕ್ಷ್ಮಣರಾವ್
ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Subscribe to:
Post Comments (Atom)
“ಇಗೋ, ಬೆಂಗಳೂರು ಹೀಗಿತ್ತು”ಜಿ. ವೆಂಕಟಸುಬ್ಬಯ್ಯ -
“ ಇಗೋ , ಬೆಂಗಳೂರು ಹೀಗಿತ್ತು ” ಜಿ . ವೆಂಕಟಸುಬ್ಬಯ್ಯ ಅರವತ್ತು ವರ್ಷಗಳ ಹಿಂದೆ ಬೆಂಗಳೂರು ಇಷ್ಟು ದೊಡ್ಡದಾಗಿರಲಿಲ್ಲ . ಆಗ ಎರಡು ಬೆಂಗಳೂರು ಇತ್ತು ...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ಮುಂಗೋಳಿ ಕೂಗ್ಯಾವು ಮೂಡು ಕೆಂಪೇರ್ಯಾವು ಸ್ವಾಮೀ ನನ್ನಯ್ಯ ರಥವೇರಿ ಬರುವಾಗ ನಾವೆದ್ದು ಕೈಯ್ಯ ಮುಗುದೇವು ಮಕ್ಕಳಾಟವು ಚಂದ ಮತ್ತೆ ಯೌವನ ಚಂದ ಮುಪ್ಪಿನಲಿ ಚಂದ ನರೆಗಡ...
-
Krupe : http://azsmarane.blogspot.in/2012/01/blog-post_21.html ಕನ್ನಡ ಪುಸ್ತಕ ಪ್ರೀತಿಯುಳ್ಳ ಮಿತ್ರರೆಲ್ಲರಿಗೂ... ಇಲ್ಲಿದೆ ಕನ್ನಡ ಕಾದಂಬರಿ ಹಾ...
No comments:
Post a Comment