Tuesday, June 7, 2011

ಒಂದು ಮರಿಮೀನಿಗೆ!

ಕಾರ್ಮುಗಿಲು ಆಗಸದ ತುಂಬ ಗೇರಾಯಿಸಿ
ಬೇಸಿಗೆಯ ತುದಿಗೆ ಮತ್ತೊಂದು ಉರುಬು!
ಒಣ ಧಗೆ-ಗಮ್ಮು-ಜೂಬರಿಕೆ-ಎಂಥದೊ ಜಡ್ಡು.
ತೂಗು ನಾಲಗೆ ಬಿದ್ದ ಗಂಟೆ ಕೊರಳು!

ಫಳ್ಳೆನುವ ಮಿಂಚು! ನಡು ನಡುವೆ ಸಿಡಿಮಿಡಿ ಗುಡುಗು
ಒಮ್ಮೆಗೇ ಆಹಾ! ತಂಗಾಳಿ ನುಗ್ಗು!
ಮೊದಲು ಹನಿ ಹನಿ ಚುಮುಕು. ಕೊನೆಗೆ ತಡಬಡವಿರದ
ಸುರಿತ. ಹೂವಾಗುವುದು ಎದೆಯ ಮೊಗ್ಗು!

ಅಂತರಾಳದ ತುಂಬ ನೆಲದ ಮಾದಕ ಗಂಧ
ನೆನೆಮಳೆಗೆ ಕಾದ ಮೈತುಂಬ ಝಳಕ
ಮಳೆಗಾಲ ಕಳೆಯಿತೋ ಮತ್ತದೇ ಒಣ ಬಾನು
ಇನ್ನೊಂದು ಮಳೆಗಾಲ ಬರುವ ತನಕ.

ಒಂದು ಮರಿಮೀನಿಗೆಷ್ಟಗಲ ಆಕಾಶ ಬಲೆ!
ಚುಕ್ಕಿ ಹುಳ ಚುಚ್ಚಿರುವ ಚಂದ್ರಗಾಳ!


No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...