Tuesday, July 12, 2011

ದೂರವಿಡೆ ಸಖಿ

ದೂರವಿಡೆ ಸಖಿ
ದೂರವಿಡೆ |
ಕೈಯವೀಣೆಯನು ದೂರವಿಡೆ ||

ವೀಣೆಯ ನಾದವ ಕೇಳಿ ಚಂದ್ರಮನ
ರಥದ ಜಿಂಕೆಗಳು ಓಡದಿವೆ |
ನೆರಳು ಹೊರಳುತಿದೆ ; ಇರುಳು ಕೆರಳುತಿದೆ
ಬೆಳದಿಂಗಳ ಮಳೆ ಬಾರದಿದೆ ||

ನೋವಿನ ಪರಿಯನು ನೊಂದವರರಿವರು
ನೋಯದೆ ನೋಯುವ ಬಗೆಯುಂಟೆ ?
ಚಂದಿರನಾದನು ಬೆಂಕಿಯ ಗೂಡು
ನೊಂದ ಬಳಿಕ ನೀನದ ನೋಡು ||

ಮರುಳುಗೊಳ್ಳುವುವು ಚುಕ್ಕಿಯ ಜಿಂಕೆ
ವೀಣೆಯ ಮುಚ್ಚಿಡೆ ಜೀವಸಖೀ |
ಚಂದ್ರ ಮಹೋತ್ಸವ ಮುಂದಕೆ ಸಾಗಲಿ
ವಿರಹಿಗಳಿಗೆ ಕಾರಿರುಳೆ ಸಖೀ ||

- ಹೆಚ್. ಎಸ್. ವೆಂಕಟೇಶಮೂರ್ತಿ

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...