Tuesday, July 12, 2011

ದೂರವಿಡೆ ಸಖಿ

ದೂರವಿಡೆ ಸಖಿ
ದೂರವಿಡೆ |
ಕೈಯವೀಣೆಯನು ದೂರವಿಡೆ ||

ವೀಣೆಯ ನಾದವ ಕೇಳಿ ಚಂದ್ರಮನ
ರಥದ ಜಿಂಕೆಗಳು ಓಡದಿವೆ |
ನೆರಳು ಹೊರಳುತಿದೆ ; ಇರುಳು ಕೆರಳುತಿದೆ
ಬೆಳದಿಂಗಳ ಮಳೆ ಬಾರದಿದೆ ||

ನೋವಿನ ಪರಿಯನು ನೊಂದವರರಿವರು
ನೋಯದೆ ನೋಯುವ ಬಗೆಯುಂಟೆ ?
ಚಂದಿರನಾದನು ಬೆಂಕಿಯ ಗೂಡು
ನೊಂದ ಬಳಿಕ ನೀನದ ನೋಡು ||

ಮರುಳುಗೊಳ್ಳುವುವು ಚುಕ್ಕಿಯ ಜಿಂಕೆ
ವೀಣೆಯ ಮುಚ್ಚಿಡೆ ಜೀವಸಖೀ |
ಚಂದ್ರ ಮಹೋತ್ಸವ ಮುಂದಕೆ ಸಾಗಲಿ
ವಿರಹಿಗಳಿಗೆ ಕಾರಿರುಳೆ ಸಖೀ ||

- ಹೆಚ್. ಎಸ್. ವೆಂಕಟೇಶಮೂರ್ತಿ

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...