Thursday, July 14, 2011

ಇರುಳ ಸಮಯ

ಇರುಳ ಸಮಯ ಸುರಿಮಳೆಯೊಳಗೆ
ದೋಣಿಗಳಿಳಿದಿವೆ ಹೊಳೆಯೊಳಗೆ

ಶ್ಯಾಮಲ ಸಾಗರವೇ ಗುರಿಯೆನ್ನುತ
ಸಾಗಿವೆ ಸಾವಿರ ದೋಣಿಗಳು |
ಸೆರಗೇ ಹಾಯಿ ! ಹೃದಯವೆ ಹುಟ್ಟು !
ದೋಣಿ ಹಿಂದೆ ಜಲವೇಣಿಗಳು ||

ಏರಿಳಿಯುವ ಅಲೆ! ಮುಂದೆ ಇದಿರು ಹೊಳೆ !
ಜಗ್ಗುವುವೇ ಈ ಹಾಯಿಗಳು ?
ಎದೆಯನೆ ಸೀಳುವ ಹೋಳು ಬಂಡೆಗಳು
ಆ ಎನ್ನುವ ಸುಳಿಬಾಯಿಗಳು ||

ಮುಳುಗಿಸೊ ಅಥವಾ ತೇಲಿಸೊ ರಥವ
ಧೃತಿಯೊಂದೇ ಗತಿ ಹಾಡುತಿವೆ |
ಮುಳುಗುವ ಹೊರತೂ ತೇಲದು ದೋಣಿ
ಹಾಯಿ ವಿದಾಯವ ಹೇಳುತಿವೆ ||

-ಹೆಚ್. ಎಸ್. ವೆಂಕವೇಶಮೂರ್ತಿ

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...